Homeಕರ್ನಾಟಕಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

- Advertisement -
- Advertisement -

“ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ” ಎಂದು ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌ ಆತಂಕ ವ್ಯಕ್ತಪಡಿಸಿದರು.

‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ ವೇದಿಕೆ ವತಿಯಿಂದ ಶನಿವಾರ ಬೆಂಗಳೂರಿನ ಸೇಂಟ್ ಜೋಸೆಫ್ ಸಭಾಂಗಣದಲ್ಲಿ ನಡೆದ ‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದು ಮಹಿಳೆಯನ್ನು ಆಯುಧವನ್ನಾಗಿಸಿ ಒಂದು ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಅತ್ಯಾಚಾರಿ ಒಂದು ಸಮುದಾಯದವನಿದ್ದರೆ ಮರಣದಂಡನೆಯನ್ನು ಕೊಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ಅವರನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ನ್ಯಾಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಯಾವ ಕೇಸಿನಲ್ಲೂ ಮಹಿಳೆಗೆ ನ್ಯಾಯ ಸಿಕ್ಕಿತಾ ಗೊತ್ತಾಗುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌

“ಮಹಿಳೆ ಕೇಳುವ ನ್ಯಾಯ ಇದಲ್ಲ. ಅವಳ ಮೇಲೆ ದೌರ್ಜನ್ಯ ಆಗಿದೆ ಎಂಬುದನ್ನು ಸಮಾಜ ಒಪ್ಪಿಕೊಂಡರೆ ಸಾಕು. ಲಿಂಚಿಂಗ್ ಕೇಸುಗಳಲ್ಲಿ ಒಂದು ಕೇಸನ್ನೂ ಕೂಡ ದಾಖಲು ಮಾಡದಂತಹ ಒಂದು ಸರಕಾರ ಮುಸ್ಲಿಂ ಮಹಿಳೆಯ ಮೇಲೆ ಆಗುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಬಲ್ಲದೇ?” ಎಂದು ಪ್ರಶ್ನಿಸಿದರು.

“ಬಾಲ್ಯವಿವಾಹಗಳ ಸಂಖ್ಯೆ ಇಂದು ಕಡಿಮೆಯಾಗಿದ್ದರೆ ಅದಕ್ಕೆ ಕಾರಣ ಸಂಘಟನೆಗಳು ಸಮಾಜದಲ್ಲಿ ಮೂಡಿಸಿರುವ ಜಾಗೃತಿ, ಹೆಣ್ಣುಮಕ್ಕಳಿಗೆ ಸಿಕ್ಕಿರುವ ಶಿಕ್ಷಣ, ಬೀದಿಯಲ್ಲಿ ನಿಂತು ಮಾಡಿದ ಹೋರಾಟಗಳು ಮತ್ತು ಜೀವನೋಪಾಯದ ಅವಕಾಶಗಳು ಕಾರಣವೇ ಹೊರತು, ನ್ಯಾಯಾಲಯ ಅಥವಾ ಕಾನೂನು ಅಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪಗಳ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಮೌನವಾಗಿದ್ದರೆ” ಎಂದು ಟೀಕಿಸಿದರು.

“ನಾವು ಆರಂಭದಲ್ಲಿ ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದಾಗ, ನಮಗೆ ರಾಜಕೀಯ ನಾಯಕರಿಂದ ಬೆಂಬಲ ಸಿಗಲಿಲ್ಲ. ವಾಸ್ತವವಾಗಿ, ಅನೇಕರು ಈ ಆರೋಪಗಳು ನಿಜವಲ್ಲ ಎಂದಿದ್ದರು” ಎಂದು ಹೇಳಿದರು.

“ಮುರುಘಾ ಶರಣರ ವಿರುದ್ಧ ಆರೋಪ ಮಾಡಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿಸಿಕೊಡಲು ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅಪರಾಧಿಗಳನ್ನು ಪ್ರಶ್ನಿಸಬೇಕೇ ಹೊರತು ಅನ್ಯಾಯವನ್ನು ಎತ್ತಿ ಹಿಡಿಯುವವರನ್ನಲ್ಲ. ಕೊಡಗು ಜಿಲ್ಲೆಯಲ್ಲಿ ಸ್ವಾಮೀಜಿಗೆ ಎಕರೆಗಟ್ಟಲೆ ಜಮೀನಿದೆ, ಹೆಲಿಕಾಪ್ಟರ್‌ನಲ್ಲಿ ಚಿತ್ರದುರ್ಗ-ಕೊಡಗು ನಡುವೆ ಸಂಚರಿಸುತ್ತಿದ್ದರು. ಈ ಪ್ರಜಾಪ್ರಭುತ್ವದಲ್ಲಿ ಧರ್ಮ ಮತ್ತು ರಾಜಕೀಯ ಜೊತೆಜೊತೆಯಲ್ಲಿ ಸಾಗುತ್ತಿವೆ” ಎಂದು ವಿಷಾದಿಸಿದರು.

ಮುರಘಾ ಮಠದಲ್ಲಿ ಅತ್ಯಾಚಾರಗಳು ನಡೆಯುತ್ತಿರುವ ಬಗ್ಗೆ 2006ರಿಂದಲೇ ನಮಗೆ ವಿಷಯ ಗೊತ್ತಾಗಿದ್ದರೂ ಸಾಕ್ಷಿಗಳು ಸಿಕ್ಕಿರಲಿಲ್ಲ. ಸುಮಾರು 200ಕ್ಕೂ ಹೆಚ್ಚು ಹೆಣ್ಣುಮಕ್ಕಳು ಅಲ್ಲಿ ಅತ್ಯಾಚಾರ ಸಂತ್ರಸ್ತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಒಡನಾಡಿಯ ಸ್ಟ್ಯಾನ್ಲಿಯವರು ಮಾತನಾಡಿದರು.

ಅಖಿಲ ಭಾರತೀಯ ಮಹಿಳಾ ಜನವಾದಿ ಸಂಘಟನೆಯ ಮೀನಾಕ್ಷಿ ಬಾಳಿ ಮಾತನಾಡಿ, “ಮುರುಘಾ ಮಠದ ಸ್ವಾಮೀಜಿಯ ಪ್ರಕರಣದಲ್ಲಿನ ಬೆಳವಣಿಗೆಗಳು ಧಾರ್ಮಿಕ ಮುಖಂಡರ ವಿರುದ್ಧದ ಪ್ರಕರಣಗಳ ಹೋರಾಟದ ರೀತಿಗೆ ಒಂದು ಉದಾಹರಣೆಯಾಗಿದೆ” ಎಂದು ಬಣ್ಣಿಸಿದರು.

ರಾಮಚಂದ್ರಾಪುರ ಮಠದ ಅತ್ಯಾಚಾರ ಪ್ರಕರಣದ ಉದಾಹರಣೆ ಕೊಡುತ್ತ “ಧರ್ಮ, ಜಾತಿಯ ಮೇಲರಿಮೆಯು ಅತ್ಯಾಚಾರವನ್ನು ಮಾಡಿಯೂ ಗೆಲ್ಲುತ್ತದೆ. ಹವ್ಯಕ ಬ್ರಾಹ್ಮಣರ ಪ್ರಬಲ ಸಮುದಾಯವು 10 ನ್ಯಾಯಾಧೀಶರನ್ನು ಕೇಸಿನಿಂದ ಹಿಂದೆ ಸರಿಯುವಂತೆ ಮಾಡಿತು. ಕಡೆಗೆ ಸಿ.ಐ.ಡಿ.ಗಳು ದೂರು ದಾಖಲಿಸುವಂತಿಲ್ಲ ಎಂದು ಹೇಳಿ ಕೇಸನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಅತ್ಯಾಚಾರ ಸಂತ್ರಸ್ತರೊಬ್ಬರು ತಮ್ಮ ನೋವನ್ನು ಹಂಚಿಕೊಂಡು ನಾನು ನಿಮ್ಮೆಲ್ಲರ ಬೆಂಬಲದಿಂದ ಹೋರಾಟವನ್ನು ಮುಂದುವರೆಸುತ್ತೇನೆ ತಮ್ಮ ನಿರ್ಧಾರ ಪ್ರಕಟಿಸಿದರು.

ಓಪನ್ ಸ್ಪೇಸಸ್‌ನ ಅನಿತಾ ಚೆರಿಯಾ ಮಾತನಾಡಿ, “ಕ್ರಿಶ್ಚಿಯನ್ ಸಮುದಾಯದ ಹೆಣ್ಣುಮಕ್ಕಳಿಗೆ ಸುಮ್ಮನಿರುವುದನ್ನು ಸತತವಾಗಿ ಕಲಿಸಲಾಗುತ್ತಿದೆ. ಅವರು ತಮ್ಮ ಸಮುದಾಯದ ಒಳಗಡೆ ಆಗುವ ದೌರ್ಜನ್ಯವನ್ನೂ ಹೇಳಿಕೊಳ್ಳುವಂತಿಲ್ಲ, ಸಮುದಾಯದ ಮೇಲೆ ನಡೆಯುವ ದೌರ್ಜನ್ಯವನ್ನೂ ಬಾಯಿ ಬಿಚ್ಚಲಾಗುತ್ತಿಲ್ಲ” ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಂಬೈನ ಬೇಬಾಕ್ ಸಂಘಟನೆಯ ಹಸೀನಾ ಖಾನ್, “ಮುಸ್ಲಿಮ್ ಸಮುದಾಯದ ಮಹಿಳೆಯರು ಮತ್ತು ಇಡೀ ಸಮುದಾಯವೇ ಚೀರಿ ಚೀರಿ ಹೇಳುತ್ತಿದ್ದರೂ ಸರಕಾರವು ಕೇಳಿಸಿಕೊಳ್ಳದಂತೆ ಕುಳಿತಿದೆ” ಎಂದು ತಮ್ಮ ಸಮುದಾಯದ ಮೇಲೆ ಆಗುತ್ತಿರುವ ಅನ್ಯಾಯವನ್ನು ವಿವರಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ಸಮಾವೇಶದ ಹಕ್ಕೊತ್ತಾಯಕ್ಕೆ ಸ್ಪಂದಿಸಲು ಪೊಲೀಸ್ ಅಧಿಕಾರಿಗಳಾದ ಎಸಿಪಿ ನಾರಾಯಣ್ ಅವರು ಆಗಮಿಸಿದ್ದರು. ಹಕ್ಕೊತ್ತಾಯಗಳನ್ನು ಅವರು ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...