Homeಕರ್ನಾಟಕಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

- Advertisement -
- Advertisement -

“ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ” ಎಂದು ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌ ಆತಂಕ ವ್ಯಕ್ತಪಡಿಸಿದರು.

‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ ವೇದಿಕೆ ವತಿಯಿಂದ ಶನಿವಾರ ಬೆಂಗಳೂರಿನ ಸೇಂಟ್ ಜೋಸೆಫ್ ಸಭಾಂಗಣದಲ್ಲಿ ನಡೆದ ‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದು ಮಹಿಳೆಯನ್ನು ಆಯುಧವನ್ನಾಗಿಸಿ ಒಂದು ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಅತ್ಯಾಚಾರಿ ಒಂದು ಸಮುದಾಯದವನಿದ್ದರೆ ಮರಣದಂಡನೆಯನ್ನು ಕೊಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ಅವರನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ನ್ಯಾಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಯಾವ ಕೇಸಿನಲ್ಲೂ ಮಹಿಳೆಗೆ ನ್ಯಾಯ ಸಿಕ್ಕಿತಾ ಗೊತ್ತಾಗುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌

“ಮಹಿಳೆ ಕೇಳುವ ನ್ಯಾಯ ಇದಲ್ಲ. ಅವಳ ಮೇಲೆ ದೌರ್ಜನ್ಯ ಆಗಿದೆ ಎಂಬುದನ್ನು ಸಮಾಜ ಒಪ್ಪಿಕೊಂಡರೆ ಸಾಕು. ಲಿಂಚಿಂಗ್ ಕೇಸುಗಳಲ್ಲಿ ಒಂದು ಕೇಸನ್ನೂ ಕೂಡ ದಾಖಲು ಮಾಡದಂತಹ ಒಂದು ಸರಕಾರ ಮುಸ್ಲಿಂ ಮಹಿಳೆಯ ಮೇಲೆ ಆಗುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಬಲ್ಲದೇ?” ಎಂದು ಪ್ರಶ್ನಿಸಿದರು.

“ಬಾಲ್ಯವಿವಾಹಗಳ ಸಂಖ್ಯೆ ಇಂದು ಕಡಿಮೆಯಾಗಿದ್ದರೆ ಅದಕ್ಕೆ ಕಾರಣ ಸಂಘಟನೆಗಳು ಸಮಾಜದಲ್ಲಿ ಮೂಡಿಸಿರುವ ಜಾಗೃತಿ, ಹೆಣ್ಣುಮಕ್ಕಳಿಗೆ ಸಿಕ್ಕಿರುವ ಶಿಕ್ಷಣ, ಬೀದಿಯಲ್ಲಿ ನಿಂತು ಮಾಡಿದ ಹೋರಾಟಗಳು ಮತ್ತು ಜೀವನೋಪಾಯದ ಅವಕಾಶಗಳು ಕಾರಣವೇ ಹೊರತು, ನ್ಯಾಯಾಲಯ ಅಥವಾ ಕಾನೂನು ಅಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪಗಳ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಮೌನವಾಗಿದ್ದರೆ” ಎಂದು ಟೀಕಿಸಿದರು.

“ನಾವು ಆರಂಭದಲ್ಲಿ ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದಾಗ, ನಮಗೆ ರಾಜಕೀಯ ನಾಯಕರಿಂದ ಬೆಂಬಲ ಸಿಗಲಿಲ್ಲ. ವಾಸ್ತವವಾಗಿ, ಅನೇಕರು ಈ ಆರೋಪಗಳು ನಿಜವಲ್ಲ ಎಂದಿದ್ದರು” ಎಂದು ಹೇಳಿದರು.

“ಮುರುಘಾ ಶರಣರ ವಿರುದ್ಧ ಆರೋಪ ಮಾಡಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿಸಿಕೊಡಲು ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅಪರಾಧಿಗಳನ್ನು ಪ್ರಶ್ನಿಸಬೇಕೇ ಹೊರತು ಅನ್ಯಾಯವನ್ನು ಎತ್ತಿ ಹಿಡಿಯುವವರನ್ನಲ್ಲ. ಕೊಡಗು ಜಿಲ್ಲೆಯಲ್ಲಿ ಸ್ವಾಮೀಜಿಗೆ ಎಕರೆಗಟ್ಟಲೆ ಜಮೀನಿದೆ, ಹೆಲಿಕಾಪ್ಟರ್‌ನಲ್ಲಿ ಚಿತ್ರದುರ್ಗ-ಕೊಡಗು ನಡುವೆ ಸಂಚರಿಸುತ್ತಿದ್ದರು. ಈ ಪ್ರಜಾಪ್ರಭುತ್ವದಲ್ಲಿ ಧರ್ಮ ಮತ್ತು ರಾಜಕೀಯ ಜೊತೆಜೊತೆಯಲ್ಲಿ ಸಾಗುತ್ತಿವೆ” ಎಂದು ವಿಷಾದಿಸಿದರು.

ಮುರಘಾ ಮಠದಲ್ಲಿ ಅತ್ಯಾಚಾರಗಳು ನಡೆಯುತ್ತಿರುವ ಬಗ್ಗೆ 2006ರಿಂದಲೇ ನಮಗೆ ವಿಷಯ ಗೊತ್ತಾಗಿದ್ದರೂ ಸಾಕ್ಷಿಗಳು ಸಿಕ್ಕಿರಲಿಲ್ಲ. ಸುಮಾರು 200ಕ್ಕೂ ಹೆಚ್ಚು ಹೆಣ್ಣುಮಕ್ಕಳು ಅಲ್ಲಿ ಅತ್ಯಾಚಾರ ಸಂತ್ರಸ್ತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಒಡನಾಡಿಯ ಸ್ಟ್ಯಾನ್ಲಿಯವರು ಮಾತನಾಡಿದರು.

ಅಖಿಲ ಭಾರತೀಯ ಮಹಿಳಾ ಜನವಾದಿ ಸಂಘಟನೆಯ ಮೀನಾಕ್ಷಿ ಬಾಳಿ ಮಾತನಾಡಿ, “ಮುರುಘಾ ಮಠದ ಸ್ವಾಮೀಜಿಯ ಪ್ರಕರಣದಲ್ಲಿನ ಬೆಳವಣಿಗೆಗಳು ಧಾರ್ಮಿಕ ಮುಖಂಡರ ವಿರುದ್ಧದ ಪ್ರಕರಣಗಳ ಹೋರಾಟದ ರೀತಿಗೆ ಒಂದು ಉದಾಹರಣೆಯಾಗಿದೆ” ಎಂದು ಬಣ್ಣಿಸಿದರು.

ರಾಮಚಂದ್ರಾಪುರ ಮಠದ ಅತ್ಯಾಚಾರ ಪ್ರಕರಣದ ಉದಾಹರಣೆ ಕೊಡುತ್ತ “ಧರ್ಮ, ಜಾತಿಯ ಮೇಲರಿಮೆಯು ಅತ್ಯಾಚಾರವನ್ನು ಮಾಡಿಯೂ ಗೆಲ್ಲುತ್ತದೆ. ಹವ್ಯಕ ಬ್ರಾಹ್ಮಣರ ಪ್ರಬಲ ಸಮುದಾಯವು 10 ನ್ಯಾಯಾಧೀಶರನ್ನು ಕೇಸಿನಿಂದ ಹಿಂದೆ ಸರಿಯುವಂತೆ ಮಾಡಿತು. ಕಡೆಗೆ ಸಿ.ಐ.ಡಿ.ಗಳು ದೂರು ದಾಖಲಿಸುವಂತಿಲ್ಲ ಎಂದು ಹೇಳಿ ಕೇಸನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಅತ್ಯಾಚಾರ ಸಂತ್ರಸ್ತರೊಬ್ಬರು ತಮ್ಮ ನೋವನ್ನು ಹಂಚಿಕೊಂಡು ನಾನು ನಿಮ್ಮೆಲ್ಲರ ಬೆಂಬಲದಿಂದ ಹೋರಾಟವನ್ನು ಮುಂದುವರೆಸುತ್ತೇನೆ ತಮ್ಮ ನಿರ್ಧಾರ ಪ್ರಕಟಿಸಿದರು.

ಓಪನ್ ಸ್ಪೇಸಸ್‌ನ ಅನಿತಾ ಚೆರಿಯಾ ಮಾತನಾಡಿ, “ಕ್ರಿಶ್ಚಿಯನ್ ಸಮುದಾಯದ ಹೆಣ್ಣುಮಕ್ಕಳಿಗೆ ಸುಮ್ಮನಿರುವುದನ್ನು ಸತತವಾಗಿ ಕಲಿಸಲಾಗುತ್ತಿದೆ. ಅವರು ತಮ್ಮ ಸಮುದಾಯದ ಒಳಗಡೆ ಆಗುವ ದೌರ್ಜನ್ಯವನ್ನೂ ಹೇಳಿಕೊಳ್ಳುವಂತಿಲ್ಲ, ಸಮುದಾಯದ ಮೇಲೆ ನಡೆಯುವ ದೌರ್ಜನ್ಯವನ್ನೂ ಬಾಯಿ ಬಿಚ್ಚಲಾಗುತ್ತಿಲ್ಲ” ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಂಬೈನ ಬೇಬಾಕ್ ಸಂಘಟನೆಯ ಹಸೀನಾ ಖಾನ್, “ಮುಸ್ಲಿಮ್ ಸಮುದಾಯದ ಮಹಿಳೆಯರು ಮತ್ತು ಇಡೀ ಸಮುದಾಯವೇ ಚೀರಿ ಚೀರಿ ಹೇಳುತ್ತಿದ್ದರೂ ಸರಕಾರವು ಕೇಳಿಸಿಕೊಳ್ಳದಂತೆ ಕುಳಿತಿದೆ” ಎಂದು ತಮ್ಮ ಸಮುದಾಯದ ಮೇಲೆ ಆಗುತ್ತಿರುವ ಅನ್ಯಾಯವನ್ನು ವಿವರಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ಸಮಾವೇಶದ ಹಕ್ಕೊತ್ತಾಯಕ್ಕೆ ಸ್ಪಂದಿಸಲು ಪೊಲೀಸ್ ಅಧಿಕಾರಿಗಳಾದ ಎಸಿಪಿ ನಾರಾಯಣ್ ಅವರು ಆಗಮಿಸಿದ್ದರು. ಹಕ್ಕೊತ್ತಾಯಗಳನ್ನು ಅವರು ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...