Homeಕರ್ನಾಟಕಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

- Advertisement -
- Advertisement -

“ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ” ಎಂದು ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌ ಆತಂಕ ವ್ಯಕ್ತಪಡಿಸಿದರು.

‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ ವೇದಿಕೆ ವತಿಯಿಂದ ಶನಿವಾರ ಬೆಂಗಳೂರಿನ ಸೇಂಟ್ ಜೋಸೆಫ್ ಸಭಾಂಗಣದಲ್ಲಿ ನಡೆದ ‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದು ಮಹಿಳೆಯನ್ನು ಆಯುಧವನ್ನಾಗಿಸಿ ಒಂದು ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಅತ್ಯಾಚಾರಿ ಒಂದು ಸಮುದಾಯದವನಿದ್ದರೆ ಮರಣದಂಡನೆಯನ್ನು ಕೊಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ಅವರನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ನ್ಯಾಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಯಾವ ಕೇಸಿನಲ್ಲೂ ಮಹಿಳೆಗೆ ನ್ಯಾಯ ಸಿಕ್ಕಿತಾ ಗೊತ್ತಾಗುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌

“ಮಹಿಳೆ ಕೇಳುವ ನ್ಯಾಯ ಇದಲ್ಲ. ಅವಳ ಮೇಲೆ ದೌರ್ಜನ್ಯ ಆಗಿದೆ ಎಂಬುದನ್ನು ಸಮಾಜ ಒಪ್ಪಿಕೊಂಡರೆ ಸಾಕು. ಲಿಂಚಿಂಗ್ ಕೇಸುಗಳಲ್ಲಿ ಒಂದು ಕೇಸನ್ನೂ ಕೂಡ ದಾಖಲು ಮಾಡದಂತಹ ಒಂದು ಸರಕಾರ ಮುಸ್ಲಿಂ ಮಹಿಳೆಯ ಮೇಲೆ ಆಗುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಬಲ್ಲದೇ?” ಎಂದು ಪ್ರಶ್ನಿಸಿದರು.

“ಬಾಲ್ಯವಿವಾಹಗಳ ಸಂಖ್ಯೆ ಇಂದು ಕಡಿಮೆಯಾಗಿದ್ದರೆ ಅದಕ್ಕೆ ಕಾರಣ ಸಂಘಟನೆಗಳು ಸಮಾಜದಲ್ಲಿ ಮೂಡಿಸಿರುವ ಜಾಗೃತಿ, ಹೆಣ್ಣುಮಕ್ಕಳಿಗೆ ಸಿಕ್ಕಿರುವ ಶಿಕ್ಷಣ, ಬೀದಿಯಲ್ಲಿ ನಿಂತು ಮಾಡಿದ ಹೋರಾಟಗಳು ಮತ್ತು ಜೀವನೋಪಾಯದ ಅವಕಾಶಗಳು ಕಾರಣವೇ ಹೊರತು, ನ್ಯಾಯಾಲಯ ಅಥವಾ ಕಾನೂನು ಅಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪಗಳ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಮೌನವಾಗಿದ್ದರೆ” ಎಂದು ಟೀಕಿಸಿದರು.

“ನಾವು ಆರಂಭದಲ್ಲಿ ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದಾಗ, ನಮಗೆ ರಾಜಕೀಯ ನಾಯಕರಿಂದ ಬೆಂಬಲ ಸಿಗಲಿಲ್ಲ. ವಾಸ್ತವವಾಗಿ, ಅನೇಕರು ಈ ಆರೋಪಗಳು ನಿಜವಲ್ಲ ಎಂದಿದ್ದರು” ಎಂದು ಹೇಳಿದರು.

“ಮುರುಘಾ ಶರಣರ ವಿರುದ್ಧ ಆರೋಪ ಮಾಡಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿಸಿಕೊಡಲು ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅಪರಾಧಿಗಳನ್ನು ಪ್ರಶ್ನಿಸಬೇಕೇ ಹೊರತು ಅನ್ಯಾಯವನ್ನು ಎತ್ತಿ ಹಿಡಿಯುವವರನ್ನಲ್ಲ. ಕೊಡಗು ಜಿಲ್ಲೆಯಲ್ಲಿ ಸ್ವಾಮೀಜಿಗೆ ಎಕರೆಗಟ್ಟಲೆ ಜಮೀನಿದೆ, ಹೆಲಿಕಾಪ್ಟರ್‌ನಲ್ಲಿ ಚಿತ್ರದುರ್ಗ-ಕೊಡಗು ನಡುವೆ ಸಂಚರಿಸುತ್ತಿದ್ದರು. ಈ ಪ್ರಜಾಪ್ರಭುತ್ವದಲ್ಲಿ ಧರ್ಮ ಮತ್ತು ರಾಜಕೀಯ ಜೊತೆಜೊತೆಯಲ್ಲಿ ಸಾಗುತ್ತಿವೆ” ಎಂದು ವಿಷಾದಿಸಿದರು.

ಮುರಘಾ ಮಠದಲ್ಲಿ ಅತ್ಯಾಚಾರಗಳು ನಡೆಯುತ್ತಿರುವ ಬಗ್ಗೆ 2006ರಿಂದಲೇ ನಮಗೆ ವಿಷಯ ಗೊತ್ತಾಗಿದ್ದರೂ ಸಾಕ್ಷಿಗಳು ಸಿಕ್ಕಿರಲಿಲ್ಲ. ಸುಮಾರು 200ಕ್ಕೂ ಹೆಚ್ಚು ಹೆಣ್ಣುಮಕ್ಕಳು ಅಲ್ಲಿ ಅತ್ಯಾಚಾರ ಸಂತ್ರಸ್ತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಒಡನಾಡಿಯ ಸ್ಟ್ಯಾನ್ಲಿಯವರು ಮಾತನಾಡಿದರು.

ಅಖಿಲ ಭಾರತೀಯ ಮಹಿಳಾ ಜನವಾದಿ ಸಂಘಟನೆಯ ಮೀನಾಕ್ಷಿ ಬಾಳಿ ಮಾತನಾಡಿ, “ಮುರುಘಾ ಮಠದ ಸ್ವಾಮೀಜಿಯ ಪ್ರಕರಣದಲ್ಲಿನ ಬೆಳವಣಿಗೆಗಳು ಧಾರ್ಮಿಕ ಮುಖಂಡರ ವಿರುದ್ಧದ ಪ್ರಕರಣಗಳ ಹೋರಾಟದ ರೀತಿಗೆ ಒಂದು ಉದಾಹರಣೆಯಾಗಿದೆ” ಎಂದು ಬಣ್ಣಿಸಿದರು.

ರಾಮಚಂದ್ರಾಪುರ ಮಠದ ಅತ್ಯಾಚಾರ ಪ್ರಕರಣದ ಉದಾಹರಣೆ ಕೊಡುತ್ತ “ಧರ್ಮ, ಜಾತಿಯ ಮೇಲರಿಮೆಯು ಅತ್ಯಾಚಾರವನ್ನು ಮಾಡಿಯೂ ಗೆಲ್ಲುತ್ತದೆ. ಹವ್ಯಕ ಬ್ರಾಹ್ಮಣರ ಪ್ರಬಲ ಸಮುದಾಯವು 10 ನ್ಯಾಯಾಧೀಶರನ್ನು ಕೇಸಿನಿಂದ ಹಿಂದೆ ಸರಿಯುವಂತೆ ಮಾಡಿತು. ಕಡೆಗೆ ಸಿ.ಐ.ಡಿ.ಗಳು ದೂರು ದಾಖಲಿಸುವಂತಿಲ್ಲ ಎಂದು ಹೇಳಿ ಕೇಸನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಅತ್ಯಾಚಾರ ಸಂತ್ರಸ್ತರೊಬ್ಬರು ತಮ್ಮ ನೋವನ್ನು ಹಂಚಿಕೊಂಡು ನಾನು ನಿಮ್ಮೆಲ್ಲರ ಬೆಂಬಲದಿಂದ ಹೋರಾಟವನ್ನು ಮುಂದುವರೆಸುತ್ತೇನೆ ತಮ್ಮ ನಿರ್ಧಾರ ಪ್ರಕಟಿಸಿದರು.

ಓಪನ್ ಸ್ಪೇಸಸ್‌ನ ಅನಿತಾ ಚೆರಿಯಾ ಮಾತನಾಡಿ, “ಕ್ರಿಶ್ಚಿಯನ್ ಸಮುದಾಯದ ಹೆಣ್ಣುಮಕ್ಕಳಿಗೆ ಸುಮ್ಮನಿರುವುದನ್ನು ಸತತವಾಗಿ ಕಲಿಸಲಾಗುತ್ತಿದೆ. ಅವರು ತಮ್ಮ ಸಮುದಾಯದ ಒಳಗಡೆ ಆಗುವ ದೌರ್ಜನ್ಯವನ್ನೂ ಹೇಳಿಕೊಳ್ಳುವಂತಿಲ್ಲ, ಸಮುದಾಯದ ಮೇಲೆ ನಡೆಯುವ ದೌರ್ಜನ್ಯವನ್ನೂ ಬಾಯಿ ಬಿಚ್ಚಲಾಗುತ್ತಿಲ್ಲ” ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಂಬೈನ ಬೇಬಾಕ್ ಸಂಘಟನೆಯ ಹಸೀನಾ ಖಾನ್, “ಮುಸ್ಲಿಮ್ ಸಮುದಾಯದ ಮಹಿಳೆಯರು ಮತ್ತು ಇಡೀ ಸಮುದಾಯವೇ ಚೀರಿ ಚೀರಿ ಹೇಳುತ್ತಿದ್ದರೂ ಸರಕಾರವು ಕೇಳಿಸಿಕೊಳ್ಳದಂತೆ ಕುಳಿತಿದೆ” ಎಂದು ತಮ್ಮ ಸಮುದಾಯದ ಮೇಲೆ ಆಗುತ್ತಿರುವ ಅನ್ಯಾಯವನ್ನು ವಿವರಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ಸಮಾವೇಶದ ಹಕ್ಕೊತ್ತಾಯಕ್ಕೆ ಸ್ಪಂದಿಸಲು ಪೊಲೀಸ್ ಅಧಿಕಾರಿಗಳಾದ ಎಸಿಪಿ ನಾರಾಯಣ್ ಅವರು ಆಗಮಿಸಿದ್ದರು. ಹಕ್ಕೊತ್ತಾಯಗಳನ್ನು ಅವರು ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...