Homeಕರ್ನಾಟಕಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

- Advertisement -
- Advertisement -

“ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ” ಎಂದು ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌ ಆತಂಕ ವ್ಯಕ್ತಪಡಿಸಿದರು.

‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ ವೇದಿಕೆ ವತಿಯಿಂದ ಶನಿವಾರ ಬೆಂಗಳೂರಿನ ಸೇಂಟ್ ಜೋಸೆಫ್ ಸಭಾಂಗಣದಲ್ಲಿ ನಡೆದ ‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದು ಮಹಿಳೆಯನ್ನು ಆಯುಧವನ್ನಾಗಿಸಿ ಒಂದು ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಅತ್ಯಾಚಾರಿ ಒಂದು ಸಮುದಾಯದವನಿದ್ದರೆ ಮರಣದಂಡನೆಯನ್ನು ಕೊಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ಅವರನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ನ್ಯಾಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಯಾವ ಕೇಸಿನಲ್ಲೂ ಮಹಿಳೆಗೆ ನ್ಯಾಯ ಸಿಕ್ಕಿತಾ ಗೊತ್ತಾಗುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌

“ಮಹಿಳೆ ಕೇಳುವ ನ್ಯಾಯ ಇದಲ್ಲ. ಅವಳ ಮೇಲೆ ದೌರ್ಜನ್ಯ ಆಗಿದೆ ಎಂಬುದನ್ನು ಸಮಾಜ ಒಪ್ಪಿಕೊಂಡರೆ ಸಾಕು. ಲಿಂಚಿಂಗ್ ಕೇಸುಗಳಲ್ಲಿ ಒಂದು ಕೇಸನ್ನೂ ಕೂಡ ದಾಖಲು ಮಾಡದಂತಹ ಒಂದು ಸರಕಾರ ಮುಸ್ಲಿಂ ಮಹಿಳೆಯ ಮೇಲೆ ಆಗುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಬಲ್ಲದೇ?” ಎಂದು ಪ್ರಶ್ನಿಸಿದರು.

“ಬಾಲ್ಯವಿವಾಹಗಳ ಸಂಖ್ಯೆ ಇಂದು ಕಡಿಮೆಯಾಗಿದ್ದರೆ ಅದಕ್ಕೆ ಕಾರಣ ಸಂಘಟನೆಗಳು ಸಮಾಜದಲ್ಲಿ ಮೂಡಿಸಿರುವ ಜಾಗೃತಿ, ಹೆಣ್ಣುಮಕ್ಕಳಿಗೆ ಸಿಕ್ಕಿರುವ ಶಿಕ್ಷಣ, ಬೀದಿಯಲ್ಲಿ ನಿಂತು ಮಾಡಿದ ಹೋರಾಟಗಳು ಮತ್ತು ಜೀವನೋಪಾಯದ ಅವಕಾಶಗಳು ಕಾರಣವೇ ಹೊರತು, ನ್ಯಾಯಾಲಯ ಅಥವಾ ಕಾನೂನು ಅಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪಗಳ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಮೌನವಾಗಿದ್ದರೆ” ಎಂದು ಟೀಕಿಸಿದರು.

“ನಾವು ಆರಂಭದಲ್ಲಿ ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದಾಗ, ನಮಗೆ ರಾಜಕೀಯ ನಾಯಕರಿಂದ ಬೆಂಬಲ ಸಿಗಲಿಲ್ಲ. ವಾಸ್ತವವಾಗಿ, ಅನೇಕರು ಈ ಆರೋಪಗಳು ನಿಜವಲ್ಲ ಎಂದಿದ್ದರು” ಎಂದು ಹೇಳಿದರು.

“ಮುರುಘಾ ಶರಣರ ವಿರುದ್ಧ ಆರೋಪ ಮಾಡಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿಸಿಕೊಡಲು ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅಪರಾಧಿಗಳನ್ನು ಪ್ರಶ್ನಿಸಬೇಕೇ ಹೊರತು ಅನ್ಯಾಯವನ್ನು ಎತ್ತಿ ಹಿಡಿಯುವವರನ್ನಲ್ಲ. ಕೊಡಗು ಜಿಲ್ಲೆಯಲ್ಲಿ ಸ್ವಾಮೀಜಿಗೆ ಎಕರೆಗಟ್ಟಲೆ ಜಮೀನಿದೆ, ಹೆಲಿಕಾಪ್ಟರ್‌ನಲ್ಲಿ ಚಿತ್ರದುರ್ಗ-ಕೊಡಗು ನಡುವೆ ಸಂಚರಿಸುತ್ತಿದ್ದರು. ಈ ಪ್ರಜಾಪ್ರಭುತ್ವದಲ್ಲಿ ಧರ್ಮ ಮತ್ತು ರಾಜಕೀಯ ಜೊತೆಜೊತೆಯಲ್ಲಿ ಸಾಗುತ್ತಿವೆ” ಎಂದು ವಿಷಾದಿಸಿದರು.

ಮುರಘಾ ಮಠದಲ್ಲಿ ಅತ್ಯಾಚಾರಗಳು ನಡೆಯುತ್ತಿರುವ ಬಗ್ಗೆ 2006ರಿಂದಲೇ ನಮಗೆ ವಿಷಯ ಗೊತ್ತಾಗಿದ್ದರೂ ಸಾಕ್ಷಿಗಳು ಸಿಕ್ಕಿರಲಿಲ್ಲ. ಸುಮಾರು 200ಕ್ಕೂ ಹೆಚ್ಚು ಹೆಣ್ಣುಮಕ್ಕಳು ಅಲ್ಲಿ ಅತ್ಯಾಚಾರ ಸಂತ್ರಸ್ತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಒಡನಾಡಿಯ ಸ್ಟ್ಯಾನ್ಲಿಯವರು ಮಾತನಾಡಿದರು.

ಅಖಿಲ ಭಾರತೀಯ ಮಹಿಳಾ ಜನವಾದಿ ಸಂಘಟನೆಯ ಮೀನಾಕ್ಷಿ ಬಾಳಿ ಮಾತನಾಡಿ, “ಮುರುಘಾ ಮಠದ ಸ್ವಾಮೀಜಿಯ ಪ್ರಕರಣದಲ್ಲಿನ ಬೆಳವಣಿಗೆಗಳು ಧಾರ್ಮಿಕ ಮುಖಂಡರ ವಿರುದ್ಧದ ಪ್ರಕರಣಗಳ ಹೋರಾಟದ ರೀತಿಗೆ ಒಂದು ಉದಾಹರಣೆಯಾಗಿದೆ” ಎಂದು ಬಣ್ಣಿಸಿದರು.

ರಾಮಚಂದ್ರಾಪುರ ಮಠದ ಅತ್ಯಾಚಾರ ಪ್ರಕರಣದ ಉದಾಹರಣೆ ಕೊಡುತ್ತ “ಧರ್ಮ, ಜಾತಿಯ ಮೇಲರಿಮೆಯು ಅತ್ಯಾಚಾರವನ್ನು ಮಾಡಿಯೂ ಗೆಲ್ಲುತ್ತದೆ. ಹವ್ಯಕ ಬ್ರಾಹ್ಮಣರ ಪ್ರಬಲ ಸಮುದಾಯವು 10 ನ್ಯಾಯಾಧೀಶರನ್ನು ಕೇಸಿನಿಂದ ಹಿಂದೆ ಸರಿಯುವಂತೆ ಮಾಡಿತು. ಕಡೆಗೆ ಸಿ.ಐ.ಡಿ.ಗಳು ದೂರು ದಾಖಲಿಸುವಂತಿಲ್ಲ ಎಂದು ಹೇಳಿ ಕೇಸನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಅತ್ಯಾಚಾರ ಸಂತ್ರಸ್ತರೊಬ್ಬರು ತಮ್ಮ ನೋವನ್ನು ಹಂಚಿಕೊಂಡು ನಾನು ನಿಮ್ಮೆಲ್ಲರ ಬೆಂಬಲದಿಂದ ಹೋರಾಟವನ್ನು ಮುಂದುವರೆಸುತ್ತೇನೆ ತಮ್ಮ ನಿರ್ಧಾರ ಪ್ರಕಟಿಸಿದರು.

ಓಪನ್ ಸ್ಪೇಸಸ್‌ನ ಅನಿತಾ ಚೆರಿಯಾ ಮಾತನಾಡಿ, “ಕ್ರಿಶ್ಚಿಯನ್ ಸಮುದಾಯದ ಹೆಣ್ಣುಮಕ್ಕಳಿಗೆ ಸುಮ್ಮನಿರುವುದನ್ನು ಸತತವಾಗಿ ಕಲಿಸಲಾಗುತ್ತಿದೆ. ಅವರು ತಮ್ಮ ಸಮುದಾಯದ ಒಳಗಡೆ ಆಗುವ ದೌರ್ಜನ್ಯವನ್ನೂ ಹೇಳಿಕೊಳ್ಳುವಂತಿಲ್ಲ, ಸಮುದಾಯದ ಮೇಲೆ ನಡೆಯುವ ದೌರ್ಜನ್ಯವನ್ನೂ ಬಾಯಿ ಬಿಚ್ಚಲಾಗುತ್ತಿಲ್ಲ” ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಂಬೈನ ಬೇಬಾಕ್ ಸಂಘಟನೆಯ ಹಸೀನಾ ಖಾನ್, “ಮುಸ್ಲಿಮ್ ಸಮುದಾಯದ ಮಹಿಳೆಯರು ಮತ್ತು ಇಡೀ ಸಮುದಾಯವೇ ಚೀರಿ ಚೀರಿ ಹೇಳುತ್ತಿದ್ದರೂ ಸರಕಾರವು ಕೇಳಿಸಿಕೊಳ್ಳದಂತೆ ಕುಳಿತಿದೆ” ಎಂದು ತಮ್ಮ ಸಮುದಾಯದ ಮೇಲೆ ಆಗುತ್ತಿರುವ ಅನ್ಯಾಯವನ್ನು ವಿವರಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ಸಮಾವೇಶದ ಹಕ್ಕೊತ್ತಾಯಕ್ಕೆ ಸ್ಪಂದಿಸಲು ಪೊಲೀಸ್ ಅಧಿಕಾರಿಗಳಾದ ಎಸಿಪಿ ನಾರಾಯಣ್ ಅವರು ಆಗಮಿಸಿದ್ದರು. ಹಕ್ಕೊತ್ತಾಯಗಳನ್ನು ಅವರು ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...