Homeಕರ್ನಾಟಕಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

- Advertisement -
- Advertisement -

“ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ” ಎಂದು ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌ ಆತಂಕ ವ್ಯಕ್ತಪಡಿಸಿದರು.

‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ ವೇದಿಕೆ ವತಿಯಿಂದ ಶನಿವಾರ ಬೆಂಗಳೂರಿನ ಸೇಂಟ್ ಜೋಸೆಫ್ ಸಭಾಂಗಣದಲ್ಲಿ ನಡೆದ ‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದು ಮಹಿಳೆಯನ್ನು ಆಯುಧವನ್ನಾಗಿಸಿ ಒಂದು ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಅತ್ಯಾಚಾರಿ ಒಂದು ಸಮುದಾಯದವನಿದ್ದರೆ ಮರಣದಂಡನೆಯನ್ನು ಕೊಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ಅವರನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ನ್ಯಾಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಯಾವ ಕೇಸಿನಲ್ಲೂ ಮಹಿಳೆಗೆ ನ್ಯಾಯ ಸಿಕ್ಕಿತಾ ಗೊತ್ತಾಗುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌

“ಮಹಿಳೆ ಕೇಳುವ ನ್ಯಾಯ ಇದಲ್ಲ. ಅವಳ ಮೇಲೆ ದೌರ್ಜನ್ಯ ಆಗಿದೆ ಎಂಬುದನ್ನು ಸಮಾಜ ಒಪ್ಪಿಕೊಂಡರೆ ಸಾಕು. ಲಿಂಚಿಂಗ್ ಕೇಸುಗಳಲ್ಲಿ ಒಂದು ಕೇಸನ್ನೂ ಕೂಡ ದಾಖಲು ಮಾಡದಂತಹ ಒಂದು ಸರಕಾರ ಮುಸ್ಲಿಂ ಮಹಿಳೆಯ ಮೇಲೆ ಆಗುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಬಲ್ಲದೇ?” ಎಂದು ಪ್ರಶ್ನಿಸಿದರು.

“ಬಾಲ್ಯವಿವಾಹಗಳ ಸಂಖ್ಯೆ ಇಂದು ಕಡಿಮೆಯಾಗಿದ್ದರೆ ಅದಕ್ಕೆ ಕಾರಣ ಸಂಘಟನೆಗಳು ಸಮಾಜದಲ್ಲಿ ಮೂಡಿಸಿರುವ ಜಾಗೃತಿ, ಹೆಣ್ಣುಮಕ್ಕಳಿಗೆ ಸಿಕ್ಕಿರುವ ಶಿಕ್ಷಣ, ಬೀದಿಯಲ್ಲಿ ನಿಂತು ಮಾಡಿದ ಹೋರಾಟಗಳು ಮತ್ತು ಜೀವನೋಪಾಯದ ಅವಕಾಶಗಳು ಕಾರಣವೇ ಹೊರತು, ನ್ಯಾಯಾಲಯ ಅಥವಾ ಕಾನೂನು ಅಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪಗಳ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಮೌನವಾಗಿದ್ದರೆ” ಎಂದು ಟೀಕಿಸಿದರು.

“ನಾವು ಆರಂಭದಲ್ಲಿ ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದಾಗ, ನಮಗೆ ರಾಜಕೀಯ ನಾಯಕರಿಂದ ಬೆಂಬಲ ಸಿಗಲಿಲ್ಲ. ವಾಸ್ತವವಾಗಿ, ಅನೇಕರು ಈ ಆರೋಪಗಳು ನಿಜವಲ್ಲ ಎಂದಿದ್ದರು” ಎಂದು ಹೇಳಿದರು.

“ಮುರುಘಾ ಶರಣರ ವಿರುದ್ಧ ಆರೋಪ ಮಾಡಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿಸಿಕೊಡಲು ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅಪರಾಧಿಗಳನ್ನು ಪ್ರಶ್ನಿಸಬೇಕೇ ಹೊರತು ಅನ್ಯಾಯವನ್ನು ಎತ್ತಿ ಹಿಡಿಯುವವರನ್ನಲ್ಲ. ಕೊಡಗು ಜಿಲ್ಲೆಯಲ್ಲಿ ಸ್ವಾಮೀಜಿಗೆ ಎಕರೆಗಟ್ಟಲೆ ಜಮೀನಿದೆ, ಹೆಲಿಕಾಪ್ಟರ್‌ನಲ್ಲಿ ಚಿತ್ರದುರ್ಗ-ಕೊಡಗು ನಡುವೆ ಸಂಚರಿಸುತ್ತಿದ್ದರು. ಈ ಪ್ರಜಾಪ್ರಭುತ್ವದಲ್ಲಿ ಧರ್ಮ ಮತ್ತು ರಾಜಕೀಯ ಜೊತೆಜೊತೆಯಲ್ಲಿ ಸಾಗುತ್ತಿವೆ” ಎಂದು ವಿಷಾದಿಸಿದರು.

ಮುರಘಾ ಮಠದಲ್ಲಿ ಅತ್ಯಾಚಾರಗಳು ನಡೆಯುತ್ತಿರುವ ಬಗ್ಗೆ 2006ರಿಂದಲೇ ನಮಗೆ ವಿಷಯ ಗೊತ್ತಾಗಿದ್ದರೂ ಸಾಕ್ಷಿಗಳು ಸಿಕ್ಕಿರಲಿಲ್ಲ. ಸುಮಾರು 200ಕ್ಕೂ ಹೆಚ್ಚು ಹೆಣ್ಣುಮಕ್ಕಳು ಅಲ್ಲಿ ಅತ್ಯಾಚಾರ ಸಂತ್ರಸ್ತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಒಡನಾಡಿಯ ಸ್ಟ್ಯಾನ್ಲಿಯವರು ಮಾತನಾಡಿದರು.

ಅಖಿಲ ಭಾರತೀಯ ಮಹಿಳಾ ಜನವಾದಿ ಸಂಘಟನೆಯ ಮೀನಾಕ್ಷಿ ಬಾಳಿ ಮಾತನಾಡಿ, “ಮುರುಘಾ ಮಠದ ಸ್ವಾಮೀಜಿಯ ಪ್ರಕರಣದಲ್ಲಿನ ಬೆಳವಣಿಗೆಗಳು ಧಾರ್ಮಿಕ ಮುಖಂಡರ ವಿರುದ್ಧದ ಪ್ರಕರಣಗಳ ಹೋರಾಟದ ರೀತಿಗೆ ಒಂದು ಉದಾಹರಣೆಯಾಗಿದೆ” ಎಂದು ಬಣ್ಣಿಸಿದರು.

ರಾಮಚಂದ್ರಾಪುರ ಮಠದ ಅತ್ಯಾಚಾರ ಪ್ರಕರಣದ ಉದಾಹರಣೆ ಕೊಡುತ್ತ “ಧರ್ಮ, ಜಾತಿಯ ಮೇಲರಿಮೆಯು ಅತ್ಯಾಚಾರವನ್ನು ಮಾಡಿಯೂ ಗೆಲ್ಲುತ್ತದೆ. ಹವ್ಯಕ ಬ್ರಾಹ್ಮಣರ ಪ್ರಬಲ ಸಮುದಾಯವು 10 ನ್ಯಾಯಾಧೀಶರನ್ನು ಕೇಸಿನಿಂದ ಹಿಂದೆ ಸರಿಯುವಂತೆ ಮಾಡಿತು. ಕಡೆಗೆ ಸಿ.ಐ.ಡಿ.ಗಳು ದೂರು ದಾಖಲಿಸುವಂತಿಲ್ಲ ಎಂದು ಹೇಳಿ ಕೇಸನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಅತ್ಯಾಚಾರ ಸಂತ್ರಸ್ತರೊಬ್ಬರು ತಮ್ಮ ನೋವನ್ನು ಹಂಚಿಕೊಂಡು ನಾನು ನಿಮ್ಮೆಲ್ಲರ ಬೆಂಬಲದಿಂದ ಹೋರಾಟವನ್ನು ಮುಂದುವರೆಸುತ್ತೇನೆ ತಮ್ಮ ನಿರ್ಧಾರ ಪ್ರಕಟಿಸಿದರು.

ಓಪನ್ ಸ್ಪೇಸಸ್‌ನ ಅನಿತಾ ಚೆರಿಯಾ ಮಾತನಾಡಿ, “ಕ್ರಿಶ್ಚಿಯನ್ ಸಮುದಾಯದ ಹೆಣ್ಣುಮಕ್ಕಳಿಗೆ ಸುಮ್ಮನಿರುವುದನ್ನು ಸತತವಾಗಿ ಕಲಿಸಲಾಗುತ್ತಿದೆ. ಅವರು ತಮ್ಮ ಸಮುದಾಯದ ಒಳಗಡೆ ಆಗುವ ದೌರ್ಜನ್ಯವನ್ನೂ ಹೇಳಿಕೊಳ್ಳುವಂತಿಲ್ಲ, ಸಮುದಾಯದ ಮೇಲೆ ನಡೆಯುವ ದೌರ್ಜನ್ಯವನ್ನೂ ಬಾಯಿ ಬಿಚ್ಚಲಾಗುತ್ತಿಲ್ಲ” ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಂಬೈನ ಬೇಬಾಕ್ ಸಂಘಟನೆಯ ಹಸೀನಾ ಖಾನ್, “ಮುಸ್ಲಿಮ್ ಸಮುದಾಯದ ಮಹಿಳೆಯರು ಮತ್ತು ಇಡೀ ಸಮುದಾಯವೇ ಚೀರಿ ಚೀರಿ ಹೇಳುತ್ತಿದ್ದರೂ ಸರಕಾರವು ಕೇಳಿಸಿಕೊಳ್ಳದಂತೆ ಕುಳಿತಿದೆ” ಎಂದು ತಮ್ಮ ಸಮುದಾಯದ ಮೇಲೆ ಆಗುತ್ತಿರುವ ಅನ್ಯಾಯವನ್ನು ವಿವರಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ಸಮಾವೇಶದ ಹಕ್ಕೊತ್ತಾಯಕ್ಕೆ ಸ್ಪಂದಿಸಲು ಪೊಲೀಸ್ ಅಧಿಕಾರಿಗಳಾದ ಎಸಿಪಿ ನಾರಾಯಣ್ ಅವರು ಆಗಮಿಸಿದ್ದರು. ಹಕ್ಕೊತ್ತಾಯಗಳನ್ನು ಅವರು ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...