Homeಕರ್ನಾಟಕಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

- Advertisement -
- Advertisement -

“ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ” ಎಂದು ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌ ಆತಂಕ ವ್ಯಕ್ತಪಡಿಸಿದರು.

‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ ವೇದಿಕೆ ವತಿಯಿಂದ ಶನಿವಾರ ಬೆಂಗಳೂರಿನ ಸೇಂಟ್ ಜೋಸೆಫ್ ಸಭಾಂಗಣದಲ್ಲಿ ನಡೆದ ‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದು ಮಹಿಳೆಯನ್ನು ಆಯುಧವನ್ನಾಗಿಸಿ ಒಂದು ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಅತ್ಯಾಚಾರಿ ಒಂದು ಸಮುದಾಯದವನಿದ್ದರೆ ಮರಣದಂಡನೆಯನ್ನು ಕೊಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ಅವರನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ನ್ಯಾಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಯಾವ ಕೇಸಿನಲ್ಲೂ ಮಹಿಳೆಗೆ ನ್ಯಾಯ ಸಿಕ್ಕಿತಾ ಗೊತ್ತಾಗುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌

“ಮಹಿಳೆ ಕೇಳುವ ನ್ಯಾಯ ಇದಲ್ಲ. ಅವಳ ಮೇಲೆ ದೌರ್ಜನ್ಯ ಆಗಿದೆ ಎಂಬುದನ್ನು ಸಮಾಜ ಒಪ್ಪಿಕೊಂಡರೆ ಸಾಕು. ಲಿಂಚಿಂಗ್ ಕೇಸುಗಳಲ್ಲಿ ಒಂದು ಕೇಸನ್ನೂ ಕೂಡ ದಾಖಲು ಮಾಡದಂತಹ ಒಂದು ಸರಕಾರ ಮುಸ್ಲಿಂ ಮಹಿಳೆಯ ಮೇಲೆ ಆಗುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಬಲ್ಲದೇ?” ಎಂದು ಪ್ರಶ್ನಿಸಿದರು.

“ಬಾಲ್ಯವಿವಾಹಗಳ ಸಂಖ್ಯೆ ಇಂದು ಕಡಿಮೆಯಾಗಿದ್ದರೆ ಅದಕ್ಕೆ ಕಾರಣ ಸಂಘಟನೆಗಳು ಸಮಾಜದಲ್ಲಿ ಮೂಡಿಸಿರುವ ಜಾಗೃತಿ, ಹೆಣ್ಣುಮಕ್ಕಳಿಗೆ ಸಿಕ್ಕಿರುವ ಶಿಕ್ಷಣ, ಬೀದಿಯಲ್ಲಿ ನಿಂತು ಮಾಡಿದ ಹೋರಾಟಗಳು ಮತ್ತು ಜೀವನೋಪಾಯದ ಅವಕಾಶಗಳು ಕಾರಣವೇ ಹೊರತು, ನ್ಯಾಯಾಲಯ ಅಥವಾ ಕಾನೂನು ಅಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪಗಳ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಮೌನವಾಗಿದ್ದರೆ” ಎಂದು ಟೀಕಿಸಿದರು.

“ನಾವು ಆರಂಭದಲ್ಲಿ ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದಾಗ, ನಮಗೆ ರಾಜಕೀಯ ನಾಯಕರಿಂದ ಬೆಂಬಲ ಸಿಗಲಿಲ್ಲ. ವಾಸ್ತವವಾಗಿ, ಅನೇಕರು ಈ ಆರೋಪಗಳು ನಿಜವಲ್ಲ ಎಂದಿದ್ದರು” ಎಂದು ಹೇಳಿದರು.

“ಮುರುಘಾ ಶರಣರ ವಿರುದ್ಧ ಆರೋಪ ಮಾಡಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿಸಿಕೊಡಲು ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅಪರಾಧಿಗಳನ್ನು ಪ್ರಶ್ನಿಸಬೇಕೇ ಹೊರತು ಅನ್ಯಾಯವನ್ನು ಎತ್ತಿ ಹಿಡಿಯುವವರನ್ನಲ್ಲ. ಕೊಡಗು ಜಿಲ್ಲೆಯಲ್ಲಿ ಸ್ವಾಮೀಜಿಗೆ ಎಕರೆಗಟ್ಟಲೆ ಜಮೀನಿದೆ, ಹೆಲಿಕಾಪ್ಟರ್‌ನಲ್ಲಿ ಚಿತ್ರದುರ್ಗ-ಕೊಡಗು ನಡುವೆ ಸಂಚರಿಸುತ್ತಿದ್ದರು. ಈ ಪ್ರಜಾಪ್ರಭುತ್ವದಲ್ಲಿ ಧರ್ಮ ಮತ್ತು ರಾಜಕೀಯ ಜೊತೆಜೊತೆಯಲ್ಲಿ ಸಾಗುತ್ತಿವೆ” ಎಂದು ವಿಷಾದಿಸಿದರು.

ಮುರಘಾ ಮಠದಲ್ಲಿ ಅತ್ಯಾಚಾರಗಳು ನಡೆಯುತ್ತಿರುವ ಬಗ್ಗೆ 2006ರಿಂದಲೇ ನಮಗೆ ವಿಷಯ ಗೊತ್ತಾಗಿದ್ದರೂ ಸಾಕ್ಷಿಗಳು ಸಿಕ್ಕಿರಲಿಲ್ಲ. ಸುಮಾರು 200ಕ್ಕೂ ಹೆಚ್ಚು ಹೆಣ್ಣುಮಕ್ಕಳು ಅಲ್ಲಿ ಅತ್ಯಾಚಾರ ಸಂತ್ರಸ್ತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಒಡನಾಡಿಯ ಸ್ಟ್ಯಾನ್ಲಿಯವರು ಮಾತನಾಡಿದರು.

ಅಖಿಲ ಭಾರತೀಯ ಮಹಿಳಾ ಜನವಾದಿ ಸಂಘಟನೆಯ ಮೀನಾಕ್ಷಿ ಬಾಳಿ ಮಾತನಾಡಿ, “ಮುರುಘಾ ಮಠದ ಸ್ವಾಮೀಜಿಯ ಪ್ರಕರಣದಲ್ಲಿನ ಬೆಳವಣಿಗೆಗಳು ಧಾರ್ಮಿಕ ಮುಖಂಡರ ವಿರುದ್ಧದ ಪ್ರಕರಣಗಳ ಹೋರಾಟದ ರೀತಿಗೆ ಒಂದು ಉದಾಹರಣೆಯಾಗಿದೆ” ಎಂದು ಬಣ್ಣಿಸಿದರು.

ರಾಮಚಂದ್ರಾಪುರ ಮಠದ ಅತ್ಯಾಚಾರ ಪ್ರಕರಣದ ಉದಾಹರಣೆ ಕೊಡುತ್ತ “ಧರ್ಮ, ಜಾತಿಯ ಮೇಲರಿಮೆಯು ಅತ್ಯಾಚಾರವನ್ನು ಮಾಡಿಯೂ ಗೆಲ್ಲುತ್ತದೆ. ಹವ್ಯಕ ಬ್ರಾಹ್ಮಣರ ಪ್ರಬಲ ಸಮುದಾಯವು 10 ನ್ಯಾಯಾಧೀಶರನ್ನು ಕೇಸಿನಿಂದ ಹಿಂದೆ ಸರಿಯುವಂತೆ ಮಾಡಿತು. ಕಡೆಗೆ ಸಿ.ಐ.ಡಿ.ಗಳು ದೂರು ದಾಖಲಿಸುವಂತಿಲ್ಲ ಎಂದು ಹೇಳಿ ಕೇಸನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಅತ್ಯಾಚಾರ ಸಂತ್ರಸ್ತರೊಬ್ಬರು ತಮ್ಮ ನೋವನ್ನು ಹಂಚಿಕೊಂಡು ನಾನು ನಿಮ್ಮೆಲ್ಲರ ಬೆಂಬಲದಿಂದ ಹೋರಾಟವನ್ನು ಮುಂದುವರೆಸುತ್ತೇನೆ ತಮ್ಮ ನಿರ್ಧಾರ ಪ್ರಕಟಿಸಿದರು.

ಓಪನ್ ಸ್ಪೇಸಸ್‌ನ ಅನಿತಾ ಚೆರಿಯಾ ಮಾತನಾಡಿ, “ಕ್ರಿಶ್ಚಿಯನ್ ಸಮುದಾಯದ ಹೆಣ್ಣುಮಕ್ಕಳಿಗೆ ಸುಮ್ಮನಿರುವುದನ್ನು ಸತತವಾಗಿ ಕಲಿಸಲಾಗುತ್ತಿದೆ. ಅವರು ತಮ್ಮ ಸಮುದಾಯದ ಒಳಗಡೆ ಆಗುವ ದೌರ್ಜನ್ಯವನ್ನೂ ಹೇಳಿಕೊಳ್ಳುವಂತಿಲ್ಲ, ಸಮುದಾಯದ ಮೇಲೆ ನಡೆಯುವ ದೌರ್ಜನ್ಯವನ್ನೂ ಬಾಯಿ ಬಿಚ್ಚಲಾಗುತ್ತಿಲ್ಲ” ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಂಬೈನ ಬೇಬಾಕ್ ಸಂಘಟನೆಯ ಹಸೀನಾ ಖಾನ್, “ಮುಸ್ಲಿಮ್ ಸಮುದಾಯದ ಮಹಿಳೆಯರು ಮತ್ತು ಇಡೀ ಸಮುದಾಯವೇ ಚೀರಿ ಚೀರಿ ಹೇಳುತ್ತಿದ್ದರೂ ಸರಕಾರವು ಕೇಳಿಸಿಕೊಳ್ಳದಂತೆ ಕುಳಿತಿದೆ” ಎಂದು ತಮ್ಮ ಸಮುದಾಯದ ಮೇಲೆ ಆಗುತ್ತಿರುವ ಅನ್ಯಾಯವನ್ನು ವಿವರಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ಸಮಾವೇಶದ ಹಕ್ಕೊತ್ತಾಯಕ್ಕೆ ಸ್ಪಂದಿಸಲು ಪೊಲೀಸ್ ಅಧಿಕಾರಿಗಳಾದ ಎಸಿಪಿ ನಾರಾಯಣ್ ಅವರು ಆಗಮಿಸಿದ್ದರು. ಹಕ್ಕೊತ್ತಾಯಗಳನ್ನು ಅವರು ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...