Homeಕರ್ನಾಟಕಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ; ವೃಂದಾ ಗ್ರೋವರ್‌ ಆತಂಕ

- Advertisement -
- Advertisement -

“ಅತ್ಯಾಚಾರಿಗಳನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತಿದೆ” ಎಂದು ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌ ಆತಂಕ ವ್ಯಕ್ತಪಡಿಸಿದರು.

‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ ವೇದಿಕೆ ವತಿಯಿಂದ ಶನಿವಾರ ಬೆಂಗಳೂರಿನ ಸೇಂಟ್ ಜೋಸೆಫ್ ಸಭಾಂಗಣದಲ್ಲಿ ನಡೆದ ‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದು ಮಹಿಳೆಯನ್ನು ಆಯುಧವನ್ನಾಗಿಸಿ ಒಂದು ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಅತ್ಯಾಚಾರಿ ಒಂದು ಸಮುದಾಯದವನಿದ್ದರೆ ಮರಣದಂಡನೆಯನ್ನು ಕೊಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ಅವರನ್ನು ಗೌರವದಿಂದ ಬಿಡುಗಡೆ ಮಾಡಲಾಗುತ್ತದೆ. ಇನ್ನೊಂದು ಕೇಸಿನಲ್ಲಿ ನ್ಯಾಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಯಾವ ಕೇಸಿನಲ್ಲೂ ಮಹಿಳೆಗೆ ನ್ಯಾಯ ಸಿಕ್ಕಿತಾ ಗೊತ್ತಾಗುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ವೃಂದಾ ಗ್ರೋವರ್‌

“ಮಹಿಳೆ ಕೇಳುವ ನ್ಯಾಯ ಇದಲ್ಲ. ಅವಳ ಮೇಲೆ ದೌರ್ಜನ್ಯ ಆಗಿದೆ ಎಂಬುದನ್ನು ಸಮಾಜ ಒಪ್ಪಿಕೊಂಡರೆ ಸಾಕು. ಲಿಂಚಿಂಗ್ ಕೇಸುಗಳಲ್ಲಿ ಒಂದು ಕೇಸನ್ನೂ ಕೂಡ ದಾಖಲು ಮಾಡದಂತಹ ಒಂದು ಸರಕಾರ ಮುಸ್ಲಿಂ ಮಹಿಳೆಯ ಮೇಲೆ ಆಗುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಬಲ್ಲದೇ?” ಎಂದು ಪ್ರಶ್ನಿಸಿದರು.

“ಬಾಲ್ಯವಿವಾಹಗಳ ಸಂಖ್ಯೆ ಇಂದು ಕಡಿಮೆಯಾಗಿದ್ದರೆ ಅದಕ್ಕೆ ಕಾರಣ ಸಂಘಟನೆಗಳು ಸಮಾಜದಲ್ಲಿ ಮೂಡಿಸಿರುವ ಜಾಗೃತಿ, ಹೆಣ್ಣುಮಕ್ಕಳಿಗೆ ಸಿಕ್ಕಿರುವ ಶಿಕ್ಷಣ, ಬೀದಿಯಲ್ಲಿ ನಿಂತು ಮಾಡಿದ ಹೋರಾಟಗಳು ಮತ್ತು ಜೀವನೋಪಾಯದ ಅವಕಾಶಗಳು ಕಾರಣವೇ ಹೊರತು, ನ್ಯಾಯಾಲಯ ಅಥವಾ ಕಾನೂನು ಅಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪಗಳ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಮೌನವಾಗಿದ್ದರೆ” ಎಂದು ಟೀಕಿಸಿದರು.

“ನಾವು ಆರಂಭದಲ್ಲಿ ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದಾಗ, ನಮಗೆ ರಾಜಕೀಯ ನಾಯಕರಿಂದ ಬೆಂಬಲ ಸಿಗಲಿಲ್ಲ. ವಾಸ್ತವವಾಗಿ, ಅನೇಕರು ಈ ಆರೋಪಗಳು ನಿಜವಲ್ಲ ಎಂದಿದ್ದರು” ಎಂದು ಹೇಳಿದರು.

“ಮುರುಘಾ ಶರಣರ ವಿರುದ್ಧ ಆರೋಪ ಮಾಡಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿಸಿಕೊಡಲು ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅಪರಾಧಿಗಳನ್ನು ಪ್ರಶ್ನಿಸಬೇಕೇ ಹೊರತು ಅನ್ಯಾಯವನ್ನು ಎತ್ತಿ ಹಿಡಿಯುವವರನ್ನಲ್ಲ. ಕೊಡಗು ಜಿಲ್ಲೆಯಲ್ಲಿ ಸ್ವಾಮೀಜಿಗೆ ಎಕರೆಗಟ್ಟಲೆ ಜಮೀನಿದೆ, ಹೆಲಿಕಾಪ್ಟರ್‌ನಲ್ಲಿ ಚಿತ್ರದುರ್ಗ-ಕೊಡಗು ನಡುವೆ ಸಂಚರಿಸುತ್ತಿದ್ದರು. ಈ ಪ್ರಜಾಪ್ರಭುತ್ವದಲ್ಲಿ ಧರ್ಮ ಮತ್ತು ರಾಜಕೀಯ ಜೊತೆಜೊತೆಯಲ್ಲಿ ಸಾಗುತ್ತಿವೆ” ಎಂದು ವಿಷಾದಿಸಿದರು.

ಮುರಘಾ ಮಠದಲ್ಲಿ ಅತ್ಯಾಚಾರಗಳು ನಡೆಯುತ್ತಿರುವ ಬಗ್ಗೆ 2006ರಿಂದಲೇ ನಮಗೆ ವಿಷಯ ಗೊತ್ತಾಗಿದ್ದರೂ ಸಾಕ್ಷಿಗಳು ಸಿಕ್ಕಿರಲಿಲ್ಲ. ಸುಮಾರು 200ಕ್ಕೂ ಹೆಚ್ಚು ಹೆಣ್ಣುಮಕ್ಕಳು ಅಲ್ಲಿ ಅತ್ಯಾಚಾರ ಸಂತ್ರಸ್ತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಒಡನಾಡಿಯ ಸ್ಟ್ಯಾನ್ಲಿಯವರು ಮಾತನಾಡಿದರು.

ಅಖಿಲ ಭಾರತೀಯ ಮಹಿಳಾ ಜನವಾದಿ ಸಂಘಟನೆಯ ಮೀನಾಕ್ಷಿ ಬಾಳಿ ಮಾತನಾಡಿ, “ಮುರುಘಾ ಮಠದ ಸ್ವಾಮೀಜಿಯ ಪ್ರಕರಣದಲ್ಲಿನ ಬೆಳವಣಿಗೆಗಳು ಧಾರ್ಮಿಕ ಮುಖಂಡರ ವಿರುದ್ಧದ ಪ್ರಕರಣಗಳ ಹೋರಾಟದ ರೀತಿಗೆ ಒಂದು ಉದಾಹರಣೆಯಾಗಿದೆ” ಎಂದು ಬಣ್ಣಿಸಿದರು.

ರಾಮಚಂದ್ರಾಪುರ ಮಠದ ಅತ್ಯಾಚಾರ ಪ್ರಕರಣದ ಉದಾಹರಣೆ ಕೊಡುತ್ತ “ಧರ್ಮ, ಜಾತಿಯ ಮೇಲರಿಮೆಯು ಅತ್ಯಾಚಾರವನ್ನು ಮಾಡಿಯೂ ಗೆಲ್ಲುತ್ತದೆ. ಹವ್ಯಕ ಬ್ರಾಹ್ಮಣರ ಪ್ರಬಲ ಸಮುದಾಯವು 10 ನ್ಯಾಯಾಧೀಶರನ್ನು ಕೇಸಿನಿಂದ ಹಿಂದೆ ಸರಿಯುವಂತೆ ಮಾಡಿತು. ಕಡೆಗೆ ಸಿ.ಐ.ಡಿ.ಗಳು ದೂರು ದಾಖಲಿಸುವಂತಿಲ್ಲ ಎಂದು ಹೇಳಿ ಕೇಸನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಅತ್ಯಾಚಾರ ಸಂತ್ರಸ್ತರೊಬ್ಬರು ತಮ್ಮ ನೋವನ್ನು ಹಂಚಿಕೊಂಡು ನಾನು ನಿಮ್ಮೆಲ್ಲರ ಬೆಂಬಲದಿಂದ ಹೋರಾಟವನ್ನು ಮುಂದುವರೆಸುತ್ತೇನೆ ತಮ್ಮ ನಿರ್ಧಾರ ಪ್ರಕಟಿಸಿದರು.

ಓಪನ್ ಸ್ಪೇಸಸ್‌ನ ಅನಿತಾ ಚೆರಿಯಾ ಮಾತನಾಡಿ, “ಕ್ರಿಶ್ಚಿಯನ್ ಸಮುದಾಯದ ಹೆಣ್ಣುಮಕ್ಕಳಿಗೆ ಸುಮ್ಮನಿರುವುದನ್ನು ಸತತವಾಗಿ ಕಲಿಸಲಾಗುತ್ತಿದೆ. ಅವರು ತಮ್ಮ ಸಮುದಾಯದ ಒಳಗಡೆ ಆಗುವ ದೌರ್ಜನ್ಯವನ್ನೂ ಹೇಳಿಕೊಳ್ಳುವಂತಿಲ್ಲ, ಸಮುದಾಯದ ಮೇಲೆ ನಡೆಯುವ ದೌರ್ಜನ್ಯವನ್ನೂ ಬಾಯಿ ಬಿಚ್ಚಲಾಗುತ್ತಿಲ್ಲ” ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಂಬೈನ ಬೇಬಾಕ್ ಸಂಘಟನೆಯ ಹಸೀನಾ ಖಾನ್, “ಮುಸ್ಲಿಮ್ ಸಮುದಾಯದ ಮಹಿಳೆಯರು ಮತ್ತು ಇಡೀ ಸಮುದಾಯವೇ ಚೀರಿ ಚೀರಿ ಹೇಳುತ್ತಿದ್ದರೂ ಸರಕಾರವು ಕೇಳಿಸಿಕೊಳ್ಳದಂತೆ ಕುಳಿತಿದೆ” ಎಂದು ತಮ್ಮ ಸಮುದಾಯದ ಮೇಲೆ ಆಗುತ್ತಿರುವ ಅನ್ಯಾಯವನ್ನು ವಿವರಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ಸಮಾವೇಶದ ಹಕ್ಕೊತ್ತಾಯಕ್ಕೆ ಸ್ಪಂದಿಸಲು ಪೊಲೀಸ್ ಅಧಿಕಾರಿಗಳಾದ ಎಸಿಪಿ ನಾರಾಯಣ್ ಅವರು ಆಗಮಿಸಿದ್ದರು. ಹಕ್ಕೊತ್ತಾಯಗಳನ್ನು ಅವರು ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...