Homeಮುಖಪುಟರಾಪರ್‌ ಸ್ಟಾನ್‌ ಸಂಗೀತ ಕಾರ್ಯಕ್ರಮಕ್ಕೆ ಬಜರಂಗದಳದಿಂದ ಅಡ್ಡಿ; ರದ್ದು

ರಾಪರ್‌ ಸ್ಟಾನ್‌ ಸಂಗೀತ ಕಾರ್ಯಕ್ರಮಕ್ಕೆ ಬಜರಂಗದಳದಿಂದ ಅಡ್ಡಿ; ರದ್ದು

- Advertisement -
- Advertisement -

ಜನಪ್ರಿಯ ರಾಪರ್‌, ರಿಯಾಲಿಟಿ ಶೋ ಬಿಗ್ ಬಾಸ್ 16ರ ಸೀಸನ್‌ನಲ್ಲಿ ಗೆಲುವು ಸಾಧಿಸಿರುವ ಎಂ.ಸಿ.ಸ್ಟಾನ್‌ ಅಕಾ ಅಲ್ತಾಫ್‌ ತಡವಿ ಅವರ ಸಂಗೀತ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ಕಾರ್ಯಕ್ರಮವನ್ನು ರದ್ದುಮಾಡಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆಸಿದೆ.

ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ಪ್ರಿಯಾಂಕಾ ಚಾಹರ್ ಚೌಧರಿ, ಶಿವ ಠಾಕರೆ, ಅರ್ಚನಾ ಗೌತಮ್ ಮತ್ತು ಶಾಲಿನ್ ಭಾನೋಟ್ ಅವರನ್ನು ಸೋಲಿಸಿದ ಬಳಿಕ ಸ್ಟಾನ್‌ ಮನೆಮಾತಾಗಿದ್ದಾರೆ.

ಈ ತಿಂಗಳ ಆರಂಭದಲ್ಲಿ ‘ಎಂಸಿ ಸ್ಟಾನ್ ಹಸ್ತಿ ಕಾ ಬಸ್ತಿ’ ಎಂಬ ಹೆಸರಿನಲ್ಲಿ ರಾಷ್ಟ್ರವ್ಯಾಪಿ ಪ್ರವಾಸವನ್ನು ಪ್ರಾರಂಭಿಸಿರುವ ಅವರು, ಪುಣೆ, ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

ಆದಾಗ್ಯೂ, ಮಾರ್ಚ್ 17ರ ಶುಕ್ರವಾರ ರಾತ್ರಿ ಇಂದೋರ್‌ನಲ್ಲಿ ಸಂಗೀತ ಕಚೇರಿಯನ್ನು ರದ್ದುಪಡಿಸಬೇಕಾಯಿತು. ವೇದಿಗೆ ನುಗ್ಗಿದ ಬಜರಂಗದಳದ ಕೆಲವು ಕಿಡಿಗೇಡಿಗಳು ಸ್ಥಳದಲ್ಲಿ ಗದ್ದಲ ಉಂಟು ಮಾಡಿದ್ದು ಇದಕ್ಕೆ ಕಾರಣವಾಗಿತ್ತು.

ಮಧ್ಯಪ್ರದೇಶದಲ್ಲಿ ನಡೆದ ಎಂಸಿ ಸ್ಟಾನ್ ಅವರ ಸಂಗೀತ ಕಚೇರಿ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಹಿಂದುತ್ವವಾದಿ ಗುಂಪಿನ ಕೆಲವು ಸದಸ್ಯರು ವೇದಿಕೆಗೆ ನುಗ್ಗಿದರು.

“ಈ ರಾಪರ್ ತನ್ನ ಹಾಡುಗಳಲ್ಲಿ ನಿಂದನೆ ತುಂಬಿದ ಪದಗಳನ್ನು ಬಳಸಿ ದೇಶದ ಯುವ ಮನಸ್ಸನ್ನು ಕಲುಷಿತಗೊಳಿಸುತ್ತಿದ್ದಾರೆ” ಎಂದು ಆರೋಪಿಸಿರುವ ಕಿಡಿಗೇಡಿಗಳು, ವೇದಿಕೆಯಲ್ಲಿ ನಿಂತು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದಾರೆ.

ಘಟನೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವ ಜನರು, ಬಜರಂಗದಳದ ವರ್ತನೆಯನ್ನು ಖಂಡಿಸಿದ್ದಾರೆ.

“ಯಾವುದೇ ಕಾರಣವಿಲ್ಲದೆ ಸ್ಟಾನ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂಬ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. “ದೇವರ ಹೆಸರಿನಲ್ಲಿ ಜನರನ್ನು ಭಯಭೀತರನ್ನಾಗಿಸುವ ಇಂತಹ ಗುಂಪುಗಳು ಸರ್ಕಾರದಿಂದ ಅನುಮೋದಿಸಲ್ಪಟ್ಟಿವೆ” ಎಂದು ಮತ್ತೊಬ್ಬರು ಟೀಕಿಸಿದ್ದಾರೆ.

“ಹಿಂದೂ ಆಗಿರುವ ನಾನು ಅವರ ಪರವಾಗಿ ಕ್ಷಮೆಯಾಚಿಸುತ್ತೇನೆ, ಈ ಜನರು ನಮ್ಮ ಹೆಸರಿಗೆ ಅವಮಾನ ಮಾಡಿದ್ದಾರೆ ನನ್ನನ್ನು ಕ್ಷಮಿಸಿ” ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಇದರ ನಡುವೆ ಎಂಸಿ ಸ್ಟಾನ್ ಅವರು ತಮ್ಮ ಮುಂದಿನ ಸಂಗೀತ ಕಚೇರಿಗಳನ್ನು ಇಂದು ನಾಗ್ಪುರದಲ್ಲಿ ನಡೆಸಲಿದ್ದಾರೆ. ನಂತರ ಅವರು ಏಪ್ರಿಲ್‌ನಲ್ಲಿ ತಮ್ಮ ಪ್ರವಾಸವನ್ನು ಪುನರಾರಂಭಿಸುವ ಮೊದಲು ವಿರಾಮ ತೆಗೆದುಕೊಳ್ಳಲಿದ್ದಾರೆ. ಅಹಮದಾಬಾದ್, ಜೈಪುರ, ಕೋಲ್ಕತ್ತಾ ಮತ್ತು ದೆಹಲಿಯಲ್ಲಿ ತಮ್ಮ ಹಸ್ತಿ ಕಾ ಬಸ್ತಿ ಪ್ರವಾಸವನ್ನು ಮೇ 7 ರಂದು ಕೊನೆಗೊಳಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...