Homeಮುಖಪುಟರಾಪರ್‌ ಸ್ಟಾನ್‌ ಸಂಗೀತ ಕಾರ್ಯಕ್ರಮಕ್ಕೆ ಬಜರಂಗದಳದಿಂದ ಅಡ್ಡಿ; ರದ್ದು

ರಾಪರ್‌ ಸ್ಟಾನ್‌ ಸಂಗೀತ ಕಾರ್ಯಕ್ರಮಕ್ಕೆ ಬಜರಂಗದಳದಿಂದ ಅಡ್ಡಿ; ರದ್ದು

- Advertisement -
- Advertisement -

ಜನಪ್ರಿಯ ರಾಪರ್‌, ರಿಯಾಲಿಟಿ ಶೋ ಬಿಗ್ ಬಾಸ್ 16ರ ಸೀಸನ್‌ನಲ್ಲಿ ಗೆಲುವು ಸಾಧಿಸಿರುವ ಎಂ.ಸಿ.ಸ್ಟಾನ್‌ ಅಕಾ ಅಲ್ತಾಫ್‌ ತಡವಿ ಅವರ ಸಂಗೀತ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ಕಾರ್ಯಕ್ರಮವನ್ನು ರದ್ದುಮಾಡಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆಸಿದೆ.

ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ಪ್ರಿಯಾಂಕಾ ಚಾಹರ್ ಚೌಧರಿ, ಶಿವ ಠಾಕರೆ, ಅರ್ಚನಾ ಗೌತಮ್ ಮತ್ತು ಶಾಲಿನ್ ಭಾನೋಟ್ ಅವರನ್ನು ಸೋಲಿಸಿದ ಬಳಿಕ ಸ್ಟಾನ್‌ ಮನೆಮಾತಾಗಿದ್ದಾರೆ.

ಈ ತಿಂಗಳ ಆರಂಭದಲ್ಲಿ ‘ಎಂಸಿ ಸ್ಟಾನ್ ಹಸ್ತಿ ಕಾ ಬಸ್ತಿ’ ಎಂಬ ಹೆಸರಿನಲ್ಲಿ ರಾಷ್ಟ್ರವ್ಯಾಪಿ ಪ್ರವಾಸವನ್ನು ಪ್ರಾರಂಭಿಸಿರುವ ಅವರು, ಪುಣೆ, ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

ಆದಾಗ್ಯೂ, ಮಾರ್ಚ್ 17ರ ಶುಕ್ರವಾರ ರಾತ್ರಿ ಇಂದೋರ್‌ನಲ್ಲಿ ಸಂಗೀತ ಕಚೇರಿಯನ್ನು ರದ್ದುಪಡಿಸಬೇಕಾಯಿತು. ವೇದಿಗೆ ನುಗ್ಗಿದ ಬಜರಂಗದಳದ ಕೆಲವು ಕಿಡಿಗೇಡಿಗಳು ಸ್ಥಳದಲ್ಲಿ ಗದ್ದಲ ಉಂಟು ಮಾಡಿದ್ದು ಇದಕ್ಕೆ ಕಾರಣವಾಗಿತ್ತು.

ಮಧ್ಯಪ್ರದೇಶದಲ್ಲಿ ನಡೆದ ಎಂಸಿ ಸ್ಟಾನ್ ಅವರ ಸಂಗೀತ ಕಚೇರಿ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಹಿಂದುತ್ವವಾದಿ ಗುಂಪಿನ ಕೆಲವು ಸದಸ್ಯರು ವೇದಿಕೆಗೆ ನುಗ್ಗಿದರು.

“ಈ ರಾಪರ್ ತನ್ನ ಹಾಡುಗಳಲ್ಲಿ ನಿಂದನೆ ತುಂಬಿದ ಪದಗಳನ್ನು ಬಳಸಿ ದೇಶದ ಯುವ ಮನಸ್ಸನ್ನು ಕಲುಷಿತಗೊಳಿಸುತ್ತಿದ್ದಾರೆ” ಎಂದು ಆರೋಪಿಸಿರುವ ಕಿಡಿಗೇಡಿಗಳು, ವೇದಿಕೆಯಲ್ಲಿ ನಿಂತು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದಾರೆ.

ಘಟನೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವ ಜನರು, ಬಜರಂಗದಳದ ವರ್ತನೆಯನ್ನು ಖಂಡಿಸಿದ್ದಾರೆ.

“ಯಾವುದೇ ಕಾರಣವಿಲ್ಲದೆ ಸ್ಟಾನ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂಬ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. “ದೇವರ ಹೆಸರಿನಲ್ಲಿ ಜನರನ್ನು ಭಯಭೀತರನ್ನಾಗಿಸುವ ಇಂತಹ ಗುಂಪುಗಳು ಸರ್ಕಾರದಿಂದ ಅನುಮೋದಿಸಲ್ಪಟ್ಟಿವೆ” ಎಂದು ಮತ್ತೊಬ್ಬರು ಟೀಕಿಸಿದ್ದಾರೆ.

“ಹಿಂದೂ ಆಗಿರುವ ನಾನು ಅವರ ಪರವಾಗಿ ಕ್ಷಮೆಯಾಚಿಸುತ್ತೇನೆ, ಈ ಜನರು ನಮ್ಮ ಹೆಸರಿಗೆ ಅವಮಾನ ಮಾಡಿದ್ದಾರೆ ನನ್ನನ್ನು ಕ್ಷಮಿಸಿ” ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಇದರ ನಡುವೆ ಎಂಸಿ ಸ್ಟಾನ್ ಅವರು ತಮ್ಮ ಮುಂದಿನ ಸಂಗೀತ ಕಚೇರಿಗಳನ್ನು ಇಂದು ನಾಗ್ಪುರದಲ್ಲಿ ನಡೆಸಲಿದ್ದಾರೆ. ನಂತರ ಅವರು ಏಪ್ರಿಲ್‌ನಲ್ಲಿ ತಮ್ಮ ಪ್ರವಾಸವನ್ನು ಪುನರಾರಂಭಿಸುವ ಮೊದಲು ವಿರಾಮ ತೆಗೆದುಕೊಳ್ಳಲಿದ್ದಾರೆ. ಅಹಮದಾಬಾದ್, ಜೈಪುರ, ಕೋಲ್ಕತ್ತಾ ಮತ್ತು ದೆಹಲಿಯಲ್ಲಿ ತಮ್ಮ ಹಸ್ತಿ ಕಾ ಬಸ್ತಿ ಪ್ರವಾಸವನ್ನು ಮೇ 7 ರಂದು ಕೊನೆಗೊಳಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...