Homeಮುಖಪುಟರಾಪರ್‌ ಸ್ಟಾನ್‌ ಸಂಗೀತ ಕಾರ್ಯಕ್ರಮಕ್ಕೆ ಬಜರಂಗದಳದಿಂದ ಅಡ್ಡಿ; ರದ್ದು

ರಾಪರ್‌ ಸ್ಟಾನ್‌ ಸಂಗೀತ ಕಾರ್ಯಕ್ರಮಕ್ಕೆ ಬಜರಂಗದಳದಿಂದ ಅಡ್ಡಿ; ರದ್ದು

- Advertisement -
- Advertisement -

ಜನಪ್ರಿಯ ರಾಪರ್‌, ರಿಯಾಲಿಟಿ ಶೋ ಬಿಗ್ ಬಾಸ್ 16ರ ಸೀಸನ್‌ನಲ್ಲಿ ಗೆಲುವು ಸಾಧಿಸಿರುವ ಎಂ.ಸಿ.ಸ್ಟಾನ್‌ ಅಕಾ ಅಲ್ತಾಫ್‌ ತಡವಿ ಅವರ ಸಂಗೀತ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ಕಾರ್ಯಕ್ರಮವನ್ನು ರದ್ದುಮಾಡಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆಸಿದೆ.

ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ಪ್ರಿಯಾಂಕಾ ಚಾಹರ್ ಚೌಧರಿ, ಶಿವ ಠಾಕರೆ, ಅರ್ಚನಾ ಗೌತಮ್ ಮತ್ತು ಶಾಲಿನ್ ಭಾನೋಟ್ ಅವರನ್ನು ಸೋಲಿಸಿದ ಬಳಿಕ ಸ್ಟಾನ್‌ ಮನೆಮಾತಾಗಿದ್ದಾರೆ.

ಈ ತಿಂಗಳ ಆರಂಭದಲ್ಲಿ ‘ಎಂಸಿ ಸ್ಟಾನ್ ಹಸ್ತಿ ಕಾ ಬಸ್ತಿ’ ಎಂಬ ಹೆಸರಿನಲ್ಲಿ ರಾಷ್ಟ್ರವ್ಯಾಪಿ ಪ್ರವಾಸವನ್ನು ಪ್ರಾರಂಭಿಸಿರುವ ಅವರು, ಪುಣೆ, ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

ಆದಾಗ್ಯೂ, ಮಾರ್ಚ್ 17ರ ಶುಕ್ರವಾರ ರಾತ್ರಿ ಇಂದೋರ್‌ನಲ್ಲಿ ಸಂಗೀತ ಕಚೇರಿಯನ್ನು ರದ್ದುಪಡಿಸಬೇಕಾಯಿತು. ವೇದಿಗೆ ನುಗ್ಗಿದ ಬಜರಂಗದಳದ ಕೆಲವು ಕಿಡಿಗೇಡಿಗಳು ಸ್ಥಳದಲ್ಲಿ ಗದ್ದಲ ಉಂಟು ಮಾಡಿದ್ದು ಇದಕ್ಕೆ ಕಾರಣವಾಗಿತ್ತು.

ಮಧ್ಯಪ್ರದೇಶದಲ್ಲಿ ನಡೆದ ಎಂಸಿ ಸ್ಟಾನ್ ಅವರ ಸಂಗೀತ ಕಚೇರಿ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಹಿಂದುತ್ವವಾದಿ ಗುಂಪಿನ ಕೆಲವು ಸದಸ್ಯರು ವೇದಿಕೆಗೆ ನುಗ್ಗಿದರು.

“ಈ ರಾಪರ್ ತನ್ನ ಹಾಡುಗಳಲ್ಲಿ ನಿಂದನೆ ತುಂಬಿದ ಪದಗಳನ್ನು ಬಳಸಿ ದೇಶದ ಯುವ ಮನಸ್ಸನ್ನು ಕಲುಷಿತಗೊಳಿಸುತ್ತಿದ್ದಾರೆ” ಎಂದು ಆರೋಪಿಸಿರುವ ಕಿಡಿಗೇಡಿಗಳು, ವೇದಿಕೆಯಲ್ಲಿ ನಿಂತು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದಾರೆ.

ಘಟನೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವ ಜನರು, ಬಜರಂಗದಳದ ವರ್ತನೆಯನ್ನು ಖಂಡಿಸಿದ್ದಾರೆ.

“ಯಾವುದೇ ಕಾರಣವಿಲ್ಲದೆ ಸ್ಟಾನ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂಬ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. “ದೇವರ ಹೆಸರಿನಲ್ಲಿ ಜನರನ್ನು ಭಯಭೀತರನ್ನಾಗಿಸುವ ಇಂತಹ ಗುಂಪುಗಳು ಸರ್ಕಾರದಿಂದ ಅನುಮೋದಿಸಲ್ಪಟ್ಟಿವೆ” ಎಂದು ಮತ್ತೊಬ್ಬರು ಟೀಕಿಸಿದ್ದಾರೆ.

“ಹಿಂದೂ ಆಗಿರುವ ನಾನು ಅವರ ಪರವಾಗಿ ಕ್ಷಮೆಯಾಚಿಸುತ್ತೇನೆ, ಈ ಜನರು ನಮ್ಮ ಹೆಸರಿಗೆ ಅವಮಾನ ಮಾಡಿದ್ದಾರೆ ನನ್ನನ್ನು ಕ್ಷಮಿಸಿ” ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಇದರ ನಡುವೆ ಎಂಸಿ ಸ್ಟಾನ್ ಅವರು ತಮ್ಮ ಮುಂದಿನ ಸಂಗೀತ ಕಚೇರಿಗಳನ್ನು ಇಂದು ನಾಗ್ಪುರದಲ್ಲಿ ನಡೆಸಲಿದ್ದಾರೆ. ನಂತರ ಅವರು ಏಪ್ರಿಲ್‌ನಲ್ಲಿ ತಮ್ಮ ಪ್ರವಾಸವನ್ನು ಪುನರಾರಂಭಿಸುವ ಮೊದಲು ವಿರಾಮ ತೆಗೆದುಕೊಳ್ಳಲಿದ್ದಾರೆ. ಅಹಮದಾಬಾದ್, ಜೈಪುರ, ಕೋಲ್ಕತ್ತಾ ಮತ್ತು ದೆಹಲಿಯಲ್ಲಿ ತಮ್ಮ ಹಸ್ತಿ ಕಾ ಬಸ್ತಿ ಪ್ರವಾಸವನ್ನು ಮೇ 7 ರಂದು ಕೊನೆಗೊಳಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...