Homeಮುಖಪುಟರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ ಹೇಳಿದ್ದರು.

- Advertisement -
- Advertisement -

ಕನ್ನಡ ಸಿನಿಮಾರಂಗದಿಂದ ನಟಿ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವುದು ಸುಳ್ಳು. ನಿಜ ಏನೆಂದರೆ ರಶ್ಮಿಕಾ ಮಂದಣ್ಣನವರು ಕೇಳುವಷ್ಟು ಸಂಭಾವನೆ ಕೊಡಲು ಕನ್ನಡ ನಿರ್ಮಾಪಕರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ ಅಷ್ಟೆ ಎನ್ನುತ್ತಾರೆ ಕನ್ನಡ ನಿರ್ದೇಶಕ ಬಿ.ಎಂ ಗಿರಿರಾಜ್‌ರವರು.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಬ್ಯಾನ್ ಎಂದು ಗಾಳಿ ಸುದ್ದಿ ಹರಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ತೆಲುಗು ಮತ್ತು ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಮೇಲೆ ಹೆಚ್ಚು ಸಂಭಾವನೆ ಸಿಗುತ್ತಿರುವ ಕಾರಣಕ್ಕೆ ಅಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ. ಅಷ್ಟು ಸಂಭಾವನೆ ಕೊಟ್ಟು ಕನ್ನಡಕ್ಕೆ ಕರೆತಂದರೆ ತಮಗೆ ಗಿಟ್ಟುವುದಿಲ್ಲ ಎಂಬುದು ನಿರ್ಮಾಪಕರ ಅಭಿಪ್ರಾಯ. ಒಂದು ವೇಳೆ ಅವರು ಕಡಿಮೆ ಸಂಭಾವನೆಗೆ ಕನ್ನಡ ಚಿತ್ರಗಳಲ್ಲಿ ನಟಿಸಬೇಕು ಎಂದರೆ ಪಾತ್ರ ದೊಡ್ಡದಿರಬೇಕು ಅಥವಾ ಅವರಿಗೆ ಇಷ್ಟವಾದ ಪಾತ್ರವಿರಬೇಕು. ಅದು ಸಾಧ್ಯವಾಗದ ಕಾರಣ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಇಷ್ಟೆ ವಿಷಯ” ಎಂದರು.

ನಿರ್ದೇಶಕ ಬಿ.ಎಂ.ಗಿರಿರಾಜ್‌

ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ರವರು ಹೇಳಿದ್ದರು. “ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಸಂವಿಧಾನದ ಪ್ರಕಾರ ಅತಿ ದೊಡ್ಡ ಅಪರಾಧವೆನಿಸದ ಹೊರತು ಯಾರನ್ನು ಬ್ಯಾನ್ ಮಾಡುವ ಅಧಿಕಾರ ಯಾರಿಗೂ ಇಲ್ಲ” ಎಂದು ಅಪ್ಪುರವರು ಹೇಳಿದ್ದರು. ಆದರೂ ಕೆಲವು ಟ್ರೋಲ್‌ ಮಾಡುವವರು ಬ್ಯಾನ್ ಮಾಡಬೇಕೆಂದು ಹೇಳುತ್ತಾರೆ. ಆದರೆ ಅದನ್ನು ಅಧಿಕೃತ ಎಂದು ಪ್ರಸಾರ ಮಾಡುವುದು ಮಾಧ್ಯಮಗಳ ಬೇಜವಬ್ದಾರಿತನವಾಗಿದೆ. ಯಾವುದಕ್ಕೆ ಮಹತ್ವ ಕೊಡಬೇಕು, ಯಾವುದಕ್ಕೆ ಕೊಡಬಾರದು ಎನ್ನುವ ಕನಿಷ್ಟ ತಿಳಿವಳಿಕೆ ಮಾಧ್ಯಮಗಳಿಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ- ಮಂಸೋರೆ

“ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ. ರಶ್ಮಿಕಾ ಅವರು ವಾಣಿಜ್ಯ ಮಂಡಳಿಗೆ ಸಂಬಂಧಪಟ್ಟವರೂ ಅಲ್ಲ, ಕಲಾವಿದರ ಸಂಘದ ಸದಸ್ಯರೂ ಅಲ್ಲ. ವಾಣಿಜ್ಯ ಮಂಡಳಿಗೆ ಬ್ಯಾನ್ ಮಾಡಲು ಅಧಿಕಾರವಿಲ್ಲ. ಯಾವುದೇ ಹೆಣ್ಣುಮಗಳ ವೈಯಕ್ತಿಕ ವಿಚಾರಗಳನ್ನು ಮುಂದೆ ತಂದು ಅವಹೇಳನ ಮಾಡುವುದು ತಪ್ಪು” ಎನ್ನುತ್ತಾರೆ ಕನ್ನಡ ನಿರ್ದೇಶಕ ಮಂಸೋರೆಯವರು.

“ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರರಂಗದಲ್ಲಿ ಕೊಡುತ್ತಿರುವಷ್ಟು ಸಂಭಾವನೆಯನ್ನು ನಮ್ಮಲ್ಲಿ ನಟಿಯರಿಗೆ ಕೊಡುತ್ತಿಲ್ಲ. ಕನ್ನಡ ಚಿತ್ರರಂಗದಲ್ಲಿ ರಮ್ಯಾ ಅವರಷ್ಟು ಸಂಭಾವನೆ ಪಡೆದ ಮತ್ತೊಬ್ಬ ನಟಿ  ಸಿಗುವುದಿಲ್ಲ. ರಶ್ಮಿಕಾ ಅವರು ಈಗ ಬೇರೆ ಬೇರೆ ಚಿತ್ರರಂಗದಲ್ಲಿ ಒಂದು ಕೋಟಿ, ಎರಡು ಕೋಟಿಯಷ್ಟು ಸಂಭಾವನೆಯನ್ನು ಪಡೆಯುತ್ತಿದ್ದಾರೆ. ಇಷ್ಟು ಹಣವನ್ನು ಕೊಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ. ಇದು ವಾಸ್ತವ. ಎರಡು ವರ್ಷ ಬ್ಯುಸಿಯಾಗುವಷ್ಟು ಸಿನಿಮಾಗಳಿಗೆ ರಶ್ಮಿಕಾ ಈಗಾಗಲೇ ಸಹಿ ಹಾಕಿದ್ದಾರೆ” ಎಂದರು.

ನಿರ್ದೇಶಕ ಮಂಸೋರೆ

“ಬ್ಯಾನ್‌ ವಿಚಾರ ಮುನ್ನೆಲೆಗೆ ಬಂದಿರುವುದರಿಂದ ಕನ್ನಡ ಚಿತ್ರರಂಗ ರಶ್ಮಿಕಾ ಅವರನ್ನು ದೂರವಿಟ್ಟಿದೆ ಎಂಬ ಚರ್ಚೆಗಳೆಲ್ಲ ನಡೆಯುತ್ತಿರುವುದನ್ನು ನೋಡಿದೆ. ಅದ್ಯಾವುದಕ್ಕೂ ಆಧಾರವಿಲ್ಲ. ರಶ್ಮಿಕಾ ಅವರು ಕೇಳುವಷ್ಟು ಸಂಭಾವನೆಯನ್ನು ನೀಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ ಎಂಬುದಷ್ಟೆ ಸತ್ಯ” ಎಂದರು.

ಇತ್ತೀಚಿಗೆ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿದ್ದ ರಶ್ಮಿಕಾ ತಾವು ಸಿನಿಮಾ ಪ್ರಪಂಚಕ್ಕೆ ಕಾಲಿಟ್ಟಿದುದರ ಬಗೆಗೆ ಮಾತನಾಡಿದ್ದರು. ಕಾಲೇಜು ಓದುತ್ತಿದ್ದಾಗಲೇ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದುದು, ತನ್ನ ಫೋಟೊ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಮುಖಪುಟದಲ್ಲಿ ಪ್ರಕಟವಾಗಿದ್ದು, ಸಿನಿಮಾದಲ್ಲಿ ನಟನೆಗೆ ಆಫರ್ ಬಂದಿದ್ದನ್ನು ನಂಬಲಾಗಲಿಲ್ಲ ಎಂದೆಲ್ಲಾ ಮಾತನಾಡಿದ್ದ ಅವರು ಆ ಸಂದರ್ಭದಲ್ಲಿ ತನ್ನ ಮೊದಲ ಚಿತ್ರದ ಹೆಸರು ಹೇಳುವ ಬದಲಿಗೆ ಎರಡೂ ಕೈಗಳಿಂದ ಕೋಟ್‌ ರೀತಿಯ ಸನ್ನೆ ಮಾಡಿದ್ದರು.

ಅಷ್ಟಕ್ಕೆ ಹಲವರು ರಶ್ಮಿಕಾ ವಿರುದ್ಧ ಮುಗಿಬಿದ್ದಿದ್ದಾರೆ. ತನ್ನ ಮೊದಲ ಚಿತ್ರ ಕಿರಿಕ್ ಪಾರ್ಟಿ ಎಂದೂ ಅದರ ನಿರ್ದೇಶಕ ರಿಷಬ್ ಶೆಟ್ಟಿ, ನಟ ರಕ್ಷಿತ್ ಶೆಟ್ಟಿ ಎಂದು ಪ್ರೊಡಕ್ಷನ್ ಹೌಸ್‌ ಅನ್ನು ರಶ್ಮಿಕಾ ಉಲ್ಲೇಖಿಸದೆ ಸನ್ನೆ ಮಾಡುವ ಮೂಲಕ ಅವಮಾನ ಮಾಡಿದ್ದಾರೆ ಎಂಬುದು ಟ್ರೋಲಿಗರ ಆರೋಪವಾಗಿದೆ. ಅದಕ್ಕಾಗಿ ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿ ಪೋಸ್ಟರ್ ಮಾಡಿ ಹಂಚುತ್ತಿದ್ದಾರೆ. ಅದನ್ನೆ ಕನ್ನಡ ಮಾಧ್ಯಮಗಳು ಸಹ ಬ್ಯಾನ್ ಎಂದು ಸುದ್ದಿ ಮಾಡುತ್ತಿವೆ.

ಆದರೆ ರಶ್ಮಿಕಾ ಮಂದಣ್ಣ ಕೈ ಸನ್ನೆ ಮಾಡಿದ್ದಕ್ಕೆ ಮಾತ್ರವೇ ಅವರೆ ಮೇಲೆ ಟ್ರೋಲ್ ಗಳಾಗುತ್ತಿವೆ ಎಂಬುದು ಸುಳ್ಳು. ಬದಲಿಗೆ ಅವರು ಮಹಿಳೆ ಎಂಬ ಕಾರಣಕ್ಕೆ, ಅದರಲ್ಲಿಯೂ ಯಶಸ್ವಿ ನಟಿ ಎಂಬ ಕಾರಣಕ್ಕೆ ಅವರ ಮೇಲೆ ನಿರಂತರ ದಾಳಿ ನಡೆಯುತ್ತಿವೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಟ್ರೋಲ್ ಏಕೆ?: ಪ್ರಜ್ಞಾವಂತರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...