Homeಮುಖಪುಟರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ ಹೇಳಿದ್ದರು.

- Advertisement -
- Advertisement -

ಕನ್ನಡ ಸಿನಿಮಾರಂಗದಿಂದ ನಟಿ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವುದು ಸುಳ್ಳು. ನಿಜ ಏನೆಂದರೆ ರಶ್ಮಿಕಾ ಮಂದಣ್ಣನವರು ಕೇಳುವಷ್ಟು ಸಂಭಾವನೆ ಕೊಡಲು ಕನ್ನಡ ನಿರ್ಮಾಪಕರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ ಅಷ್ಟೆ ಎನ್ನುತ್ತಾರೆ ಕನ್ನಡ ನಿರ್ದೇಶಕ ಬಿ.ಎಂ ಗಿರಿರಾಜ್‌ರವರು.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಬ್ಯಾನ್ ಎಂದು ಗಾಳಿ ಸುದ್ದಿ ಹರಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ತೆಲುಗು ಮತ್ತು ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಮೇಲೆ ಹೆಚ್ಚು ಸಂಭಾವನೆ ಸಿಗುತ್ತಿರುವ ಕಾರಣಕ್ಕೆ ಅಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ. ಅಷ್ಟು ಸಂಭಾವನೆ ಕೊಟ್ಟು ಕನ್ನಡಕ್ಕೆ ಕರೆತಂದರೆ ತಮಗೆ ಗಿಟ್ಟುವುದಿಲ್ಲ ಎಂಬುದು ನಿರ್ಮಾಪಕರ ಅಭಿಪ್ರಾಯ. ಒಂದು ವೇಳೆ ಅವರು ಕಡಿಮೆ ಸಂಭಾವನೆಗೆ ಕನ್ನಡ ಚಿತ್ರಗಳಲ್ಲಿ ನಟಿಸಬೇಕು ಎಂದರೆ ಪಾತ್ರ ದೊಡ್ಡದಿರಬೇಕು ಅಥವಾ ಅವರಿಗೆ ಇಷ್ಟವಾದ ಪಾತ್ರವಿರಬೇಕು. ಅದು ಸಾಧ್ಯವಾಗದ ಕಾರಣ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಇಷ್ಟೆ ವಿಷಯ” ಎಂದರು.

ನಿರ್ದೇಶಕ ಬಿ.ಎಂ.ಗಿರಿರಾಜ್‌

ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ರವರು ಹೇಳಿದ್ದರು. “ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಸಂವಿಧಾನದ ಪ್ರಕಾರ ಅತಿ ದೊಡ್ಡ ಅಪರಾಧವೆನಿಸದ ಹೊರತು ಯಾರನ್ನು ಬ್ಯಾನ್ ಮಾಡುವ ಅಧಿಕಾರ ಯಾರಿಗೂ ಇಲ್ಲ” ಎಂದು ಅಪ್ಪುರವರು ಹೇಳಿದ್ದರು. ಆದರೂ ಕೆಲವು ಟ್ರೋಲ್‌ ಮಾಡುವವರು ಬ್ಯಾನ್ ಮಾಡಬೇಕೆಂದು ಹೇಳುತ್ತಾರೆ. ಆದರೆ ಅದನ್ನು ಅಧಿಕೃತ ಎಂದು ಪ್ರಸಾರ ಮಾಡುವುದು ಮಾಧ್ಯಮಗಳ ಬೇಜವಬ್ದಾರಿತನವಾಗಿದೆ. ಯಾವುದಕ್ಕೆ ಮಹತ್ವ ಕೊಡಬೇಕು, ಯಾವುದಕ್ಕೆ ಕೊಡಬಾರದು ಎನ್ನುವ ಕನಿಷ್ಟ ತಿಳಿವಳಿಕೆ ಮಾಧ್ಯಮಗಳಿಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ- ಮಂಸೋರೆ

“ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ. ರಶ್ಮಿಕಾ ಅವರು ವಾಣಿಜ್ಯ ಮಂಡಳಿಗೆ ಸಂಬಂಧಪಟ್ಟವರೂ ಅಲ್ಲ, ಕಲಾವಿದರ ಸಂಘದ ಸದಸ್ಯರೂ ಅಲ್ಲ. ವಾಣಿಜ್ಯ ಮಂಡಳಿಗೆ ಬ್ಯಾನ್ ಮಾಡಲು ಅಧಿಕಾರವಿಲ್ಲ. ಯಾವುದೇ ಹೆಣ್ಣುಮಗಳ ವೈಯಕ್ತಿಕ ವಿಚಾರಗಳನ್ನು ಮುಂದೆ ತಂದು ಅವಹೇಳನ ಮಾಡುವುದು ತಪ್ಪು” ಎನ್ನುತ್ತಾರೆ ಕನ್ನಡ ನಿರ್ದೇಶಕ ಮಂಸೋರೆಯವರು.

“ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರರಂಗದಲ್ಲಿ ಕೊಡುತ್ತಿರುವಷ್ಟು ಸಂಭಾವನೆಯನ್ನು ನಮ್ಮಲ್ಲಿ ನಟಿಯರಿಗೆ ಕೊಡುತ್ತಿಲ್ಲ. ಕನ್ನಡ ಚಿತ್ರರಂಗದಲ್ಲಿ ರಮ್ಯಾ ಅವರಷ್ಟು ಸಂಭಾವನೆ ಪಡೆದ ಮತ್ತೊಬ್ಬ ನಟಿ  ಸಿಗುವುದಿಲ್ಲ. ರಶ್ಮಿಕಾ ಅವರು ಈಗ ಬೇರೆ ಬೇರೆ ಚಿತ್ರರಂಗದಲ್ಲಿ ಒಂದು ಕೋಟಿ, ಎರಡು ಕೋಟಿಯಷ್ಟು ಸಂಭಾವನೆಯನ್ನು ಪಡೆಯುತ್ತಿದ್ದಾರೆ. ಇಷ್ಟು ಹಣವನ್ನು ಕೊಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ. ಇದು ವಾಸ್ತವ. ಎರಡು ವರ್ಷ ಬ್ಯುಸಿಯಾಗುವಷ್ಟು ಸಿನಿಮಾಗಳಿಗೆ ರಶ್ಮಿಕಾ ಈಗಾಗಲೇ ಸಹಿ ಹಾಕಿದ್ದಾರೆ” ಎಂದರು.

ನಿರ್ದೇಶಕ ಮಂಸೋರೆ

“ಬ್ಯಾನ್‌ ವಿಚಾರ ಮುನ್ನೆಲೆಗೆ ಬಂದಿರುವುದರಿಂದ ಕನ್ನಡ ಚಿತ್ರರಂಗ ರಶ್ಮಿಕಾ ಅವರನ್ನು ದೂರವಿಟ್ಟಿದೆ ಎಂಬ ಚರ್ಚೆಗಳೆಲ್ಲ ನಡೆಯುತ್ತಿರುವುದನ್ನು ನೋಡಿದೆ. ಅದ್ಯಾವುದಕ್ಕೂ ಆಧಾರವಿಲ್ಲ. ರಶ್ಮಿಕಾ ಅವರು ಕೇಳುವಷ್ಟು ಸಂಭಾವನೆಯನ್ನು ನೀಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ ಎಂಬುದಷ್ಟೆ ಸತ್ಯ” ಎಂದರು.

ಇತ್ತೀಚಿಗೆ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿದ್ದ ರಶ್ಮಿಕಾ ತಾವು ಸಿನಿಮಾ ಪ್ರಪಂಚಕ್ಕೆ ಕಾಲಿಟ್ಟಿದುದರ ಬಗೆಗೆ ಮಾತನಾಡಿದ್ದರು. ಕಾಲೇಜು ಓದುತ್ತಿದ್ದಾಗಲೇ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದುದು, ತನ್ನ ಫೋಟೊ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಮುಖಪುಟದಲ್ಲಿ ಪ್ರಕಟವಾಗಿದ್ದು, ಸಿನಿಮಾದಲ್ಲಿ ನಟನೆಗೆ ಆಫರ್ ಬಂದಿದ್ದನ್ನು ನಂಬಲಾಗಲಿಲ್ಲ ಎಂದೆಲ್ಲಾ ಮಾತನಾಡಿದ್ದ ಅವರು ಆ ಸಂದರ್ಭದಲ್ಲಿ ತನ್ನ ಮೊದಲ ಚಿತ್ರದ ಹೆಸರು ಹೇಳುವ ಬದಲಿಗೆ ಎರಡೂ ಕೈಗಳಿಂದ ಕೋಟ್‌ ರೀತಿಯ ಸನ್ನೆ ಮಾಡಿದ್ದರು.

ಅಷ್ಟಕ್ಕೆ ಹಲವರು ರಶ್ಮಿಕಾ ವಿರುದ್ಧ ಮುಗಿಬಿದ್ದಿದ್ದಾರೆ. ತನ್ನ ಮೊದಲ ಚಿತ್ರ ಕಿರಿಕ್ ಪಾರ್ಟಿ ಎಂದೂ ಅದರ ನಿರ್ದೇಶಕ ರಿಷಬ್ ಶೆಟ್ಟಿ, ನಟ ರಕ್ಷಿತ್ ಶೆಟ್ಟಿ ಎಂದು ಪ್ರೊಡಕ್ಷನ್ ಹೌಸ್‌ ಅನ್ನು ರಶ್ಮಿಕಾ ಉಲ್ಲೇಖಿಸದೆ ಸನ್ನೆ ಮಾಡುವ ಮೂಲಕ ಅವಮಾನ ಮಾಡಿದ್ದಾರೆ ಎಂಬುದು ಟ್ರೋಲಿಗರ ಆರೋಪವಾಗಿದೆ. ಅದಕ್ಕಾಗಿ ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿ ಪೋಸ್ಟರ್ ಮಾಡಿ ಹಂಚುತ್ತಿದ್ದಾರೆ. ಅದನ್ನೆ ಕನ್ನಡ ಮಾಧ್ಯಮಗಳು ಸಹ ಬ್ಯಾನ್ ಎಂದು ಸುದ್ದಿ ಮಾಡುತ್ತಿವೆ.

ಆದರೆ ರಶ್ಮಿಕಾ ಮಂದಣ್ಣ ಕೈ ಸನ್ನೆ ಮಾಡಿದ್ದಕ್ಕೆ ಮಾತ್ರವೇ ಅವರೆ ಮೇಲೆ ಟ್ರೋಲ್ ಗಳಾಗುತ್ತಿವೆ ಎಂಬುದು ಸುಳ್ಳು. ಬದಲಿಗೆ ಅವರು ಮಹಿಳೆ ಎಂಬ ಕಾರಣಕ್ಕೆ, ಅದರಲ್ಲಿಯೂ ಯಶಸ್ವಿ ನಟಿ ಎಂಬ ಕಾರಣಕ್ಕೆ ಅವರ ಮೇಲೆ ನಿರಂತರ ದಾಳಿ ನಡೆಯುತ್ತಿವೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಟ್ರೋಲ್ ಏಕೆ?: ಪ್ರಜ್ಞಾವಂತರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...