Homeಮುಖಪುಟರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ ಹೇಳಿದ್ದರು.

- Advertisement -
- Advertisement -

ಕನ್ನಡ ಸಿನಿಮಾರಂಗದಿಂದ ನಟಿ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವುದು ಸುಳ್ಳು. ನಿಜ ಏನೆಂದರೆ ರಶ್ಮಿಕಾ ಮಂದಣ್ಣನವರು ಕೇಳುವಷ್ಟು ಸಂಭಾವನೆ ಕೊಡಲು ಕನ್ನಡ ನಿರ್ಮಾಪಕರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ ಅಷ್ಟೆ ಎನ್ನುತ್ತಾರೆ ಕನ್ನಡ ನಿರ್ದೇಶಕ ಬಿ.ಎಂ ಗಿರಿರಾಜ್‌ರವರು.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಬ್ಯಾನ್ ಎಂದು ಗಾಳಿ ಸುದ್ದಿ ಹರಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ತೆಲುಗು ಮತ್ತು ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಮೇಲೆ ಹೆಚ್ಚು ಸಂಭಾವನೆ ಸಿಗುತ್ತಿರುವ ಕಾರಣಕ್ಕೆ ಅಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ. ಅಷ್ಟು ಸಂಭಾವನೆ ಕೊಟ್ಟು ಕನ್ನಡಕ್ಕೆ ಕರೆತಂದರೆ ತಮಗೆ ಗಿಟ್ಟುವುದಿಲ್ಲ ಎಂಬುದು ನಿರ್ಮಾಪಕರ ಅಭಿಪ್ರಾಯ. ಒಂದು ವೇಳೆ ಅವರು ಕಡಿಮೆ ಸಂಭಾವನೆಗೆ ಕನ್ನಡ ಚಿತ್ರಗಳಲ್ಲಿ ನಟಿಸಬೇಕು ಎಂದರೆ ಪಾತ್ರ ದೊಡ್ಡದಿರಬೇಕು ಅಥವಾ ಅವರಿಗೆ ಇಷ್ಟವಾದ ಪಾತ್ರವಿರಬೇಕು. ಅದು ಸಾಧ್ಯವಾಗದ ಕಾರಣ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಇಷ್ಟೆ ವಿಷಯ” ಎಂದರು.

ನಿರ್ದೇಶಕ ಬಿ.ಎಂ.ಗಿರಿರಾಜ್‌

ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ರವರು ಹೇಳಿದ್ದರು. “ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಸಂವಿಧಾನದ ಪ್ರಕಾರ ಅತಿ ದೊಡ್ಡ ಅಪರಾಧವೆನಿಸದ ಹೊರತು ಯಾರನ್ನು ಬ್ಯಾನ್ ಮಾಡುವ ಅಧಿಕಾರ ಯಾರಿಗೂ ಇಲ್ಲ” ಎಂದು ಅಪ್ಪುರವರು ಹೇಳಿದ್ದರು. ಆದರೂ ಕೆಲವು ಟ್ರೋಲ್‌ ಮಾಡುವವರು ಬ್ಯಾನ್ ಮಾಡಬೇಕೆಂದು ಹೇಳುತ್ತಾರೆ. ಆದರೆ ಅದನ್ನು ಅಧಿಕೃತ ಎಂದು ಪ್ರಸಾರ ಮಾಡುವುದು ಮಾಧ್ಯಮಗಳ ಬೇಜವಬ್ದಾರಿತನವಾಗಿದೆ. ಯಾವುದಕ್ಕೆ ಮಹತ್ವ ಕೊಡಬೇಕು, ಯಾವುದಕ್ಕೆ ಕೊಡಬಾರದು ಎನ್ನುವ ಕನಿಷ್ಟ ತಿಳಿವಳಿಕೆ ಮಾಧ್ಯಮಗಳಿಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ- ಮಂಸೋರೆ

“ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ. ರಶ್ಮಿಕಾ ಅವರು ವಾಣಿಜ್ಯ ಮಂಡಳಿಗೆ ಸಂಬಂಧಪಟ್ಟವರೂ ಅಲ್ಲ, ಕಲಾವಿದರ ಸಂಘದ ಸದಸ್ಯರೂ ಅಲ್ಲ. ವಾಣಿಜ್ಯ ಮಂಡಳಿಗೆ ಬ್ಯಾನ್ ಮಾಡಲು ಅಧಿಕಾರವಿಲ್ಲ. ಯಾವುದೇ ಹೆಣ್ಣುಮಗಳ ವೈಯಕ್ತಿಕ ವಿಚಾರಗಳನ್ನು ಮುಂದೆ ತಂದು ಅವಹೇಳನ ಮಾಡುವುದು ತಪ್ಪು” ಎನ್ನುತ್ತಾರೆ ಕನ್ನಡ ನಿರ್ದೇಶಕ ಮಂಸೋರೆಯವರು.

“ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರರಂಗದಲ್ಲಿ ಕೊಡುತ್ತಿರುವಷ್ಟು ಸಂಭಾವನೆಯನ್ನು ನಮ್ಮಲ್ಲಿ ನಟಿಯರಿಗೆ ಕೊಡುತ್ತಿಲ್ಲ. ಕನ್ನಡ ಚಿತ್ರರಂಗದಲ್ಲಿ ರಮ್ಯಾ ಅವರಷ್ಟು ಸಂಭಾವನೆ ಪಡೆದ ಮತ್ತೊಬ್ಬ ನಟಿ  ಸಿಗುವುದಿಲ್ಲ. ರಶ್ಮಿಕಾ ಅವರು ಈಗ ಬೇರೆ ಬೇರೆ ಚಿತ್ರರಂಗದಲ್ಲಿ ಒಂದು ಕೋಟಿ, ಎರಡು ಕೋಟಿಯಷ್ಟು ಸಂಭಾವನೆಯನ್ನು ಪಡೆಯುತ್ತಿದ್ದಾರೆ. ಇಷ್ಟು ಹಣವನ್ನು ಕೊಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ. ಇದು ವಾಸ್ತವ. ಎರಡು ವರ್ಷ ಬ್ಯುಸಿಯಾಗುವಷ್ಟು ಸಿನಿಮಾಗಳಿಗೆ ರಶ್ಮಿಕಾ ಈಗಾಗಲೇ ಸಹಿ ಹಾಕಿದ್ದಾರೆ” ಎಂದರು.

ನಿರ್ದೇಶಕ ಮಂಸೋರೆ

“ಬ್ಯಾನ್‌ ವಿಚಾರ ಮುನ್ನೆಲೆಗೆ ಬಂದಿರುವುದರಿಂದ ಕನ್ನಡ ಚಿತ್ರರಂಗ ರಶ್ಮಿಕಾ ಅವರನ್ನು ದೂರವಿಟ್ಟಿದೆ ಎಂಬ ಚರ್ಚೆಗಳೆಲ್ಲ ನಡೆಯುತ್ತಿರುವುದನ್ನು ನೋಡಿದೆ. ಅದ್ಯಾವುದಕ್ಕೂ ಆಧಾರವಿಲ್ಲ. ರಶ್ಮಿಕಾ ಅವರು ಕೇಳುವಷ್ಟು ಸಂಭಾವನೆಯನ್ನು ನೀಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ ಎಂಬುದಷ್ಟೆ ಸತ್ಯ” ಎಂದರು.

ಇತ್ತೀಚಿಗೆ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿದ್ದ ರಶ್ಮಿಕಾ ತಾವು ಸಿನಿಮಾ ಪ್ರಪಂಚಕ್ಕೆ ಕಾಲಿಟ್ಟಿದುದರ ಬಗೆಗೆ ಮಾತನಾಡಿದ್ದರು. ಕಾಲೇಜು ಓದುತ್ತಿದ್ದಾಗಲೇ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದುದು, ತನ್ನ ಫೋಟೊ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಮುಖಪುಟದಲ್ಲಿ ಪ್ರಕಟವಾಗಿದ್ದು, ಸಿನಿಮಾದಲ್ಲಿ ನಟನೆಗೆ ಆಫರ್ ಬಂದಿದ್ದನ್ನು ನಂಬಲಾಗಲಿಲ್ಲ ಎಂದೆಲ್ಲಾ ಮಾತನಾಡಿದ್ದ ಅವರು ಆ ಸಂದರ್ಭದಲ್ಲಿ ತನ್ನ ಮೊದಲ ಚಿತ್ರದ ಹೆಸರು ಹೇಳುವ ಬದಲಿಗೆ ಎರಡೂ ಕೈಗಳಿಂದ ಕೋಟ್‌ ರೀತಿಯ ಸನ್ನೆ ಮಾಡಿದ್ದರು.

ಅಷ್ಟಕ್ಕೆ ಹಲವರು ರಶ್ಮಿಕಾ ವಿರುದ್ಧ ಮುಗಿಬಿದ್ದಿದ್ದಾರೆ. ತನ್ನ ಮೊದಲ ಚಿತ್ರ ಕಿರಿಕ್ ಪಾರ್ಟಿ ಎಂದೂ ಅದರ ನಿರ್ದೇಶಕ ರಿಷಬ್ ಶೆಟ್ಟಿ, ನಟ ರಕ್ಷಿತ್ ಶೆಟ್ಟಿ ಎಂದು ಪ್ರೊಡಕ್ಷನ್ ಹೌಸ್‌ ಅನ್ನು ರಶ್ಮಿಕಾ ಉಲ್ಲೇಖಿಸದೆ ಸನ್ನೆ ಮಾಡುವ ಮೂಲಕ ಅವಮಾನ ಮಾಡಿದ್ದಾರೆ ಎಂಬುದು ಟ್ರೋಲಿಗರ ಆರೋಪವಾಗಿದೆ. ಅದಕ್ಕಾಗಿ ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿ ಪೋಸ್ಟರ್ ಮಾಡಿ ಹಂಚುತ್ತಿದ್ದಾರೆ. ಅದನ್ನೆ ಕನ್ನಡ ಮಾಧ್ಯಮಗಳು ಸಹ ಬ್ಯಾನ್ ಎಂದು ಸುದ್ದಿ ಮಾಡುತ್ತಿವೆ.

ಆದರೆ ರಶ್ಮಿಕಾ ಮಂದಣ್ಣ ಕೈ ಸನ್ನೆ ಮಾಡಿದ್ದಕ್ಕೆ ಮಾತ್ರವೇ ಅವರೆ ಮೇಲೆ ಟ್ರೋಲ್ ಗಳಾಗುತ್ತಿವೆ ಎಂಬುದು ಸುಳ್ಳು. ಬದಲಿಗೆ ಅವರು ಮಹಿಳೆ ಎಂಬ ಕಾರಣಕ್ಕೆ, ಅದರಲ್ಲಿಯೂ ಯಶಸ್ವಿ ನಟಿ ಎಂಬ ಕಾರಣಕ್ಕೆ ಅವರ ಮೇಲೆ ನಿರಂತರ ದಾಳಿ ನಡೆಯುತ್ತಿವೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಟ್ರೋಲ್ ಏಕೆ?: ಪ್ರಜ್ಞಾವಂತರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...