Homeಮುಖಪುಟರಶ್ಮಿಕಾ ಮಂದಣ್ಣರ ಡೀಪ್‌ಫೇಕ್ ವಿಡಿಯೋ: ಅಸಲಿ ಯುವತಿಯ ಪ್ರತಿಕ್ರಿಯೆ ಇಲ್ಲಿದೆ..

ರಶ್ಮಿಕಾ ಮಂದಣ್ಣರ ಡೀಪ್‌ಫೇಕ್ ವಿಡಿಯೋ: ಅಸಲಿ ಯುವತಿಯ ಪ್ರತಿಕ್ರಿಯೆ ಇಲ್ಲಿದೆ..

- Advertisement -
- Advertisement -

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸೋಮವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋಗೆ ಸಂಬಂಧಪಟ್ಟಂತೆ ವಿಡಿಯೊದಲ್ಲಿರುವ ನಿಜವಾದ ಯುವತಿ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.

ಝಾರಾ ಪಟೇಲ್ ಎಂಬ ಯುವತಿ ಲಿಫ್ಟ್‌ನಲ್ಲಿ ಪ್ರವೇಶ ಮಾಡುತ್ತಿರುವ ವಿಡಿಯೊ ಇಟ್ಟುಕೊಂಡು ಯಾರೊ ಕಿಡಿಗೇಡಿಗಳು, ರಶ್ಮಿಕಾ ಮಂದಣ್ಣ ಮುಖ ಜೋಡಿಸಿ ವಿಡಿಯೊ ಮಾಡಿ ಹರಿಬಿಟ್ಟಿದ್ದರು. ಈ ವಿಡಿಯೋ ನೋಡಿದ ಎಷ್ಟೋ ಜನರು ಇದು ನಿಜವಾಗಿಯೂ ರಶ್ಮಿಕಾ ಮಂದಣ್ಣ ಅವರದ್ದೇ ವಿಡಿಯೋ ಎಂದು ನಂಬಿಕೊಂಡಿದ್ದರು. ಆದರೆ ಈ ಫೇಕ್​ ವಿಡಿಯೋ ವಿರುದ್ಧ ಅನೇಕರು ಕಿಡಿಕಾರಿದ್ದಾರೆ.

ತಂತ್ರಜ್ಞಾನದ ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮತ್ತು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಇಬ್ಬರೂ ಅಪರಾಧಿಗಳ ವಿರುದ್ಧ ಕಾನೂನು ಕ್ರಮಕ್ಕೆ ಕರೆ ನೀಡಿದ್ದರು.

ಇದೊಂದು ಡೀಪ್‌ಫೇಕ್ ವಿಡಿಯೊ ಆಗಿದ್ದು ಹೊರದೇಶದಲ್ಲಿರುವ ಭಾರತೀಯ ಮೂಲದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೇನ್ಸರ್‌ ಝಾರಾ ಪಟೇಲ್ ಎನ್ನುವ ಯುವತಿಗೆ ಸಂಬಂಧಿಸಿದ್ದು ಎಂದು ಬಹಿರಂಗವಾಗಿದೆ.

ಝಾರಾ ಪಟೇಲ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೊ ಬಗ್ಗೆ ಆಘಾತ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡಿದ್ದು, ”ವಿಡಿಯೊ ನೋಡಿ ನನ್ನ ಮನಸ್ಸು ತೀವ್ರ ಆಘಾತಗೊಂಡಿದೆ” ಎಂದು ಹೇಳಿದ್ದಾರೆ.

”ಸಾಮಾಜಿಕ ಮಾಧ್ಯಮಗಳಲ್ಲಿ ಮಹಿಳೆಯರು ಮತ್ತು ಯುವತಿಯರ ಭವಿಷ್ಯದ ಬಗೆಗಿನ ಚಿಂತೆಯನ್ನು ಈ ವಿಡಿಯೊ ಹುಟ್ಟುಹಾಕಿದೆ. ಭವಿಷ್ಯ ನೋಡಿದರೆ ತುಂಬಾ ಭಯವಾಗುತ್ತಿದೆ” ಎಂದಿದ್ದಾರೆ.

”ನನ್ನ ವಿಡಿಯೋಗೆ ಭಾರತದ ಜನಪ್ರಿಯ ನಟಿಯೊಬ್ಬರ ಮುಖವನ್ನು ಡೀಪ್‌ಫೇಕ್ ಮಾಡಿ ವಿಡಿಯೊ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಡೀಪ್‌ಫೇಕ್‌ ಮಾಡಿರುವುದರಲ್ಲಿ ನನ್ನ ಪಾತ್ರವಿಲ್ಲ. ಇಂಟರ್‌ನೆಟ್‌ನಲ್ಲಿರುವುದೆಲ್ಲ ನಿಜವಲ್ಲ. ಅನುಮಾನ ಬರುವ ವಿಷಯಗಳನ್ನು ದಯವಿಟ್ಟು ಫ್ಯಾಕ್ಟ್ ಚೆಕ್‌ಗೆ ಒಳಪಡಿಸಿ” ಎಂದು ಮನವಿ ಮಾಡಿದ್ದಾರೆ.

ಝಾರಾ ಪಟೇಲ್ ಅವರು ಲಂಡನ್‌ನಲ್ಲಿ ಇರುವ ಒಬ್ಬ ಬ್ರಿಟಿಷ್ ಇಂಡಿಯನ್ ಇನ್‌ಫ್ಲುಯೆನ್ಸರ್ ಆಗಿದ್ದು ಇವರಿಗೆ ಇನ್‌ಸ್ಟಾಗ್ರಾಂನಲ್ಲಿ 4.5 ಲಕ್ಷಕ್ಕೂ ಅಧಿಕ ಫಾಲೋವರ್‌ಗಳು ಇದ್ದಾರೆ.

ಇದನ್ನೂ ಓದಿ: ‘ರಶ್ಮಿಕಾ ಮಂದಣ್ಣ’ರ ಡೀಪ್‌ಫೇಕ್‌ ವಿಡಿಯೋ ಡಿಲೀಟ್ ಮಾಡಲು ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರದ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...