Homeಮುಖಪುಟರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವೈರಲ್: ನೋವು ಹಂಚಿಕೊಂಡ ನಟಿ

ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವೈರಲ್: ನೋವು ಹಂಚಿಕೊಂಡ ನಟಿ

- Advertisement -
- Advertisement -

ನಟಿ ರಶ್ಮಿಕಾ ಮಂದಣ್ಣ ಅವರ ಒಂದು ಡೀಪ್‌ಫೇಕ್ ವಿಡಿಯೋ ವೈರಲ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಬೇರೆ ಯುವತಿಯ ದೇಹಕ್ಕೆ ರಶ್ಮಿಕಾ ಅವರ ಮುಖವನ್ನು ಎಡಿಟ್​ ಮಾಡಿ ಹಾಕಲಾಗಿದೆ. ಈ ಸಂಗತಿ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ವಿಡಿಯೋ ನೋಡಿದ ಎಷ್ಟೋ ಜನರು ಇದು ನಿಜವಾಗಿಯೂ ರಶ್ಮಿಕಾ ಮಂದಣ್ಣ ಅವರದ್ದೇ ವಿಡಿಯೋ ಎಂದು ನಂಬಿಕೊಂಡಿದ್ದಾರೆ. ಆದರೆ ಈ ಫೇಕ್​ ವಿಡಿಯೋ ವಿರುದ್ಧ ಅನೇಕರು ಕಿಡಿಕಾರಿದ್ದಾರೆ. ತಂತ್ರಜ್ಞಾನದ ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮತ್ತು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಇಬ್ಬರೂ ಅಪರಾಧಿಗಳ ವಿರುದ್ಧ ಕಾನೂನು ಕ್ರಮಕ್ಕೆ ಕರೆ ನೀಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ರಶ್ಮಿಕಾ, ”ಆನ್​ಲೈನ್​ನಲ್ಲಿ ನನ್ನ ಬಗ್ಗೆ ಡೀಪ್‌ಫೇಕ್​ ವಿಡಿಯೋ ಹರಿದಾಡಿದ ಬಗ್ಗೆ ಮಾತನಾಡಲು ನನಗೆ ನಿಜಕ್ಕೂ ನೋವಾಗುತ್ತಿದೆ. ತಂತ್ರಜ್ಞಾನದ ದುರ್ಬಳಕೆಯಿಂದಾಗಿ ನನಗೆ ಮಾತ್ರವಲ್ಲದೇ ಎಲ್ಲರಿಗೂ ಭಯವಾಗುತ್ತಿದೆ” ಎಂದು ರಶ್ಮಿಕಾ ಮಂದಣ್ಣ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

”ಇಂದು ನನಗೆ ಬೆಂಬಲ ಮತ್ತು ರಕ್ಷಣೆ ನೀಡಿರುವ ನನ್ನ ಕುಟುಂಬ ಮತ್ತು ಸ್ನೇಹಿತರಿಗೆ ಓರ್ವ ಮಹಿಳೆಯಾಗಿ, ನಟಿಯಾಗಿ ನಾನು ಋಣಿ ಆಗಿದ್ದೇನೆ. ಆದರೆ ಇದು ಶಾಲೆ ಅಥವಾ ಕಾಲೇಜಿನಲ್ಲಿ ಇದ್ದಾಗ ಆಗಿದ್ದರೆ ಇದನ್ನು ನಾನು ಹೇಗೆ ಸರಿಪಡಿಸುತ್ತಿದ್ದೆನೋ ಗೊತ್ತಿಲ್ಲ. ಇಂಥ ಘಟನೆಗಳಿಂದ ನಮ್ಮಂತಹ ಹೆಚ್ಚಿನ ಜನರು ತೊಂದರೆಗೆ ಒಳಗಾಗುವುದಕ್ಕೂ ಮುನ್ನವೇ ಈ ಸಮಸ್ಯೆಯ ಬಗ್ಗೆ ನಾವು ಗಮನ ಹರಿಸಬೇಕಿದೆ” ಎಂದು ರಶ್ಮಿಕಾ ಮಂದಣ್ಣ ಅವರು ಬರೆದುಕೊಂಡಿದ್ದಾರೆ.

ಈ ಡೀಪ್‌ಫೇಕ್ ವೀಡಿಯೊವನ್ನು ನಟರು ಮತ್ತು ರಾಜಕಾರಣಿಗಳು ಟೀಕಿಸಿದ್ದಾರೆ, ಅವರು ಕಾನೂನು ಕ್ರಮಕ್ಕೆ ಕರೆ ನೀಡಿದರು.

ರಶ್ಮಿಕಾ ಅವರ ಈ ಡೀಪ್‌ಫೇಕ್ ವೀಡಿಯೊದ ಸತ್ಯಾಸತ್ಯತೆಯ ಕುರಿತು ಅಭಿಷೇಕ್ ಎಂಬುವವರು Xನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು, ಈ ಡೀಪ್‌ಫೇಕ್ ವಿಡಿಯೋ ರಚಿಸಲು ಬಳಸಿದ ಮೂಲ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ”ಭಾರತದಲ್ಲಿ ಡೀಪ್‌ಫೇಕ್ ವಿಡಿಯೋಗಳ ತೊಂದರೆ ಎದುರಿಸಲು ಕಾನೂನು ಮತ್ತು ನಿಯಂತ್ರಕ ಚೌಕಟ್ಟಿನ ತುರ್ತು ಅವಶ್ಯಕತೆಯಿದೆ. ನಟಿ ರಶ್ಮಿಕಾ ಮಂದಣ್ಣ ಅವರ ಈ ವೈರಲ್ ವೀಡಿಯೊವನ್ನು ನೀವು Instagram ನಲ್ಲಿ ನೋಡಿರಬಹುದು. ಆದರೆ ನಿರೀಕ್ಷಿಸಿ, ಇದು ಜರಾ ಪಟೇಲ್ (sic) ಅವರ ಡೀಪ್‌ಫೇಕ್ ವೀಡಿಯೊ” ಎಂದು ಅಭಿಷೇಕ್ ತಿಳಿಸಿದ್ದಾರೆ.

ರಶ್ಮಿಕಾ ಅವರ ಮುಖ ಕಾಣಿಸಿಕೊಳ್ಳುವ ಮೊದಲು ಡೀಪ್‌ಫೇಕ್ ವೀಡಿಯೊದಲ್ಲಿ ಜರಾ ಅವರ ಮುಖವು ಒಂದು ಸೆಕೆಂಡ್ ಗೋಚರಿಸುತ್ತದೆ ಎಂದು ಅಭಿಷೇಕ್ ಗಮನಸೆಳೆದಿದ್ದಾರೆ. ”ಇದು ಡೀಪ್‌ಫೇಕ್ ವಿಡಿಯೋ ಎನ್ನುವುದು ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ತಿಳಿಯುವಷ್ಟು ಸ್ಪಷ್ಟವಾಗಿದೆ. ನೀವು ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದರೆ, ಮೊದಲ 0:01ಸೆಕೆಂಡ್ ನಲ್ಲಿ ಜರಾ ಅವರ ಮುಖ ಕಾಣಿಸಿ ನಂತರ ರಶ್ಮಿಕಾ ಮುಖ ಕಾಣಿಸಿಕೊಳ್ಳುತ್ತದೆ” ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮೋದಿ ಭಾಷಣಕ್ಕೂ ಮುನ್ನ BJP ಪರ ED, CBI ಪ್ರಚಾರ ಮಾಡುತ್ತವೆ: ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...