Homeಕರ್ನಾಟಕಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿಯವರು ಸಂಘವನ್ನು ಉದ್ಘಾಟಿಸಲಿದ್ದಾರೆ

- Advertisement -
- Advertisement -

ಹೋರಾಟಗಾರ ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ಜನವರಿ 12ರಂದು ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಮಹಾರಾಣಿ ಕಾಲೇಜು ಪಕ್ಕದ ಭಾರತ್ ಸ್ಕೌಟ್‌ ಮತ್ತು ಗೈಡ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್, ಚಿತ್ರ ಸಾಹಿತಿ ಕವಿರಾಜ್‌, ಕ್ರಿಕೆಟ್‌ ಪಟು ವೇದ ಕೃಷ್ಣಮೂರ್ತಿ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಾಡಿನಲ್ಲಿ ಹಿಂದಿ ಹೇರಿಕೆ, ಆರ್ಯ ಸಂಸ್ಕೃತಿಯ ಪ್ರಭಾವ ಹೆಚ್ಚಾಗಿದೆ. ಇದರಿಂದ ಕನ್ನಡ ಭಾಷೆಯ ಜೊತೆಗೆ ಈ ನೆಲದ ಸಂಸ್ಕೃತಿಯು ಅಳಿದುಹೋಗುತ್ತಿದೆ ಎನ್ನುವ ಕಾರಣಕ್ಕೆ ಸಂಘವನ್ನು ತೆರೆಯಲಾಗುತ್ತಿದೆ” ಎಂದು ಸಂಘಟಕರು ತಿಳಿಸಿದ್ದಾರೆ.

“ಇಂದು ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ದೇಶ ಸಾಗುತ್ತಿರುವ ಹಾದಿ ಯಾರಲ್ಲೂ ಭರವಸೆ ಮೂಡಿಸಿಲ್ಲ. ಆರ್‌ಎಸ್ಎಸ್ ಎನ್ನುವ ರಾಷ್ಟ್ರೀಯ ಸನಾತನ ಸಂಘ ನಮ್ಮನ್ನೆಲ್ಲಾ ಶಾಶ್ವತವಾಗಿ ಗುಲಾಮಗಿರಿಗೆ ದೂಡುತ್ತಿದೆ. ಈ ನೆಲದ ಜನರ ಜೀವನ ಶೈಲಿಯನ್ನೇ ಬದಲಾಯಿಸುತ್ತಿದೆ. ಧರ್ಮದ ಹೆಸರಿನಲ್ಲಿ ಜಾತೀಯತೆಯನ್ನು ಜೀವಂತವಾಗಿಡುವ ಪ್ರಯತ್ನ ನಡೆಸುತ್ತಿದೆ. ದ್ರಾವಿಡರ ಆಹಾರ ಸಂಸ್ಕೃತಿಯನ್ನು ಹಾಳುಗೆಡವಲು ಮೇಲು-ಕೀಳು ಎನ್ನುವ ವಿಚಾರವನ್ನು ಜನರ ಮನಸ್ಸಿನಲ್ಲಿ ತುಂಬಲಾಗುತ್ತಿದೆ” ಎಂದಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆಯವರು, “ಸರ್ಕಾರ ಕೂಡ ಆರ್‌ಎಸ್‌ಎಸ್‌ನ ಅಣತಿಯಂತೆ ಕೆಲಸ ಮಾಡುತ್ತಿದೆ. ಶಾಲಾ ಗೋಡೆಗೆ ಕೇಸರಿ ಬಣ್ಣ ಬಳಿಯುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ವಿಚಾರದಲ್ಲೂ ಕೇವಲ ಸಸ್ಯಾಹಾರವನ್ನೇ ನೀಡಬೇಕು ಎನ್ನುವ ನೀತಿ ತರಲಾಗುತ್ತಿದೆ. ಇವೆಲ್ಲಾ ನಮ್ಮ ದ್ರಾವಿಡ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರವಾಗಿದೆ” ಎಂದು ಕಿಡಿಕಾರಿದರು.

No photo description available.
‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆ

ಇದನ್ನೂ ಓದಿರಿ: ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

“ಈ ಸಂಘಟನೆಯ ಮುಖ್ಯ ಉದ್ದೇಶ ಯಾರನ್ನೋ ವಿರೋಧಿಸುವುದಲ್ಲ. ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸುವುದು ಹಾಗೂ ಬೆಳೆಸುವುದಾಗಿದೆ. ಎಲ್ಲರೂ ಸಮಾನವಾಗಿ ಬದುಕಬೇಕು ಎನ್ನುವುದು ದ್ರಾವಿಡ ತತ್ವ ಸಿದ್ಧಾಂತವಾಗಿದೆ. ಈ ಸಿದ್ದಾಂತದಲ್ಲಿ ಮೇಲು-ಕೀಳುಗಳಿಲ್ಲ, ರಾಜಸೇವಕನಿಲ್ಲ, ಎಲ್ಲರೂ ಪ್ರಜೆಗಳೇ ಆಗಿದ್ದು, ಎಲ್ಲರಿಗೂ ಮಾನ್ಯತೆ ನೀಡಬೇಕು. ಧರ್ಮ-ಜಾತಿ ಹೆಸರಿನಲ್ಲಿ ನಮ್ಮನ್ನು ಮಾನಸಿಕವಾಗಿ ದಿಕ್ಕು ತಪ್ಪಿಸಿ, ನಮ್ಮೊಳಗೆ ಅಸೂಯೆ, ದ್ವೇಷ ಬಿತ್ತಲಾಗುತ್ತಿದೆ. ನಾವು ಅದನ್ನು ತಡೆಯಬೇಕಿದೆ. ಹಾಗಾಗಿ ದ್ರಾವಿಡ ಸಂಘ ಹುಟ್ಟುಹಾಕುತ್ತಿದ್ದೇವೆ” ಎಂದು ವಿವರಿಸಿದರು.

“ಈ ದ್ರಾವಿಡ ಸಂಘ ಕುರುಡು ಭಕ್ತರಿಗಲ್ಲ; ತೆರೆದ ಮನಸ್ಸಿನವರಿಗೆ, ಪ್ರಬುದ್ಧರಿಗೆ, ಅಬಲೆಯರಿಗಾಗಿ ಸಂಘಟಿಸಲಾಗುತ್ತಿದೆ. ದ್ರಾವಿಡ ಸಂಸ್ಕೃತಿ ಒಂದು ಮಹಾ ಸಮುದ್ರ. ಅದಕ್ಕೆ ಅಂಟಿಕೊಂಡು ಬಂದಿರುವ ಒಂದು ಉಪ ನದಿ, ಹಿನ್ನೀರು ಈ ಆರ್ಯ ಧರ್ಮ. ದುರಂತವೆಂದರೆ ಈ ಆರ್ಯ ಧರ್ಮ ಇಡೀ ಕಡಲನ್ನೇ ವಿಷಮಗೊಳಿಸುತ್ತಿದೆ. ಇಂದು ನಾವೆಲ್ಲರೂ ಸೇರಿ ಆ ಕಡಲನ್ನು ವಿಷಮುಕ್ತ ಮಾಡಬೇಕಿದೆ. ನಮ್ಮ ದ್ರಾವಿಡ ಸಂಸ್ಕೃತಿಯನ್ನು ಮುನ್ನೆಲೆಗೆ ತರಬೇಕಿದೆ. ಹಾಗಾಗಿ ಈ ದ್ರಾವಿಡ ಸಂಘದ ಜೊತೆ ಕೈ ಜೋಡಿಸಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...