Homeಕರ್ನಾಟಕಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿಯವರು ಸಂಘವನ್ನು ಉದ್ಘಾಟಿಸಲಿದ್ದಾರೆ

- Advertisement -
- Advertisement -

ಹೋರಾಟಗಾರ ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ಜನವರಿ 12ರಂದು ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಮಹಾರಾಣಿ ಕಾಲೇಜು ಪಕ್ಕದ ಭಾರತ್ ಸ್ಕೌಟ್‌ ಮತ್ತು ಗೈಡ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್, ಚಿತ್ರ ಸಾಹಿತಿ ಕವಿರಾಜ್‌, ಕ್ರಿಕೆಟ್‌ ಪಟು ವೇದ ಕೃಷ್ಣಮೂರ್ತಿ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಾಡಿನಲ್ಲಿ ಹಿಂದಿ ಹೇರಿಕೆ, ಆರ್ಯ ಸಂಸ್ಕೃತಿಯ ಪ್ರಭಾವ ಹೆಚ್ಚಾಗಿದೆ. ಇದರಿಂದ ಕನ್ನಡ ಭಾಷೆಯ ಜೊತೆಗೆ ಈ ನೆಲದ ಸಂಸ್ಕೃತಿಯು ಅಳಿದುಹೋಗುತ್ತಿದೆ ಎನ್ನುವ ಕಾರಣಕ್ಕೆ ಸಂಘವನ್ನು ತೆರೆಯಲಾಗುತ್ತಿದೆ” ಎಂದು ಸಂಘಟಕರು ತಿಳಿಸಿದ್ದಾರೆ.

“ಇಂದು ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ದೇಶ ಸಾಗುತ್ತಿರುವ ಹಾದಿ ಯಾರಲ್ಲೂ ಭರವಸೆ ಮೂಡಿಸಿಲ್ಲ. ಆರ್‌ಎಸ್ಎಸ್ ಎನ್ನುವ ರಾಷ್ಟ್ರೀಯ ಸನಾತನ ಸಂಘ ನಮ್ಮನ್ನೆಲ್ಲಾ ಶಾಶ್ವತವಾಗಿ ಗುಲಾಮಗಿರಿಗೆ ದೂಡುತ್ತಿದೆ. ಈ ನೆಲದ ಜನರ ಜೀವನ ಶೈಲಿಯನ್ನೇ ಬದಲಾಯಿಸುತ್ತಿದೆ. ಧರ್ಮದ ಹೆಸರಿನಲ್ಲಿ ಜಾತೀಯತೆಯನ್ನು ಜೀವಂತವಾಗಿಡುವ ಪ್ರಯತ್ನ ನಡೆಸುತ್ತಿದೆ. ದ್ರಾವಿಡರ ಆಹಾರ ಸಂಸ್ಕೃತಿಯನ್ನು ಹಾಳುಗೆಡವಲು ಮೇಲು-ಕೀಳು ಎನ್ನುವ ವಿಚಾರವನ್ನು ಜನರ ಮನಸ್ಸಿನಲ್ಲಿ ತುಂಬಲಾಗುತ್ತಿದೆ” ಎಂದಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆಯವರು, “ಸರ್ಕಾರ ಕೂಡ ಆರ್‌ಎಸ್‌ಎಸ್‌ನ ಅಣತಿಯಂತೆ ಕೆಲಸ ಮಾಡುತ್ತಿದೆ. ಶಾಲಾ ಗೋಡೆಗೆ ಕೇಸರಿ ಬಣ್ಣ ಬಳಿಯುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ವಿಚಾರದಲ್ಲೂ ಕೇವಲ ಸಸ್ಯಾಹಾರವನ್ನೇ ನೀಡಬೇಕು ಎನ್ನುವ ನೀತಿ ತರಲಾಗುತ್ತಿದೆ. ಇವೆಲ್ಲಾ ನಮ್ಮ ದ್ರಾವಿಡ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರವಾಗಿದೆ” ಎಂದು ಕಿಡಿಕಾರಿದರು.

No photo description available.
‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆ

ಇದನ್ನೂ ಓದಿರಿ: ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

“ಈ ಸಂಘಟನೆಯ ಮುಖ್ಯ ಉದ್ದೇಶ ಯಾರನ್ನೋ ವಿರೋಧಿಸುವುದಲ್ಲ. ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸುವುದು ಹಾಗೂ ಬೆಳೆಸುವುದಾಗಿದೆ. ಎಲ್ಲರೂ ಸಮಾನವಾಗಿ ಬದುಕಬೇಕು ಎನ್ನುವುದು ದ್ರಾವಿಡ ತತ್ವ ಸಿದ್ಧಾಂತವಾಗಿದೆ. ಈ ಸಿದ್ದಾಂತದಲ್ಲಿ ಮೇಲು-ಕೀಳುಗಳಿಲ್ಲ, ರಾಜಸೇವಕನಿಲ್ಲ, ಎಲ್ಲರೂ ಪ್ರಜೆಗಳೇ ಆಗಿದ್ದು, ಎಲ್ಲರಿಗೂ ಮಾನ್ಯತೆ ನೀಡಬೇಕು. ಧರ್ಮ-ಜಾತಿ ಹೆಸರಿನಲ್ಲಿ ನಮ್ಮನ್ನು ಮಾನಸಿಕವಾಗಿ ದಿಕ್ಕು ತಪ್ಪಿಸಿ, ನಮ್ಮೊಳಗೆ ಅಸೂಯೆ, ದ್ವೇಷ ಬಿತ್ತಲಾಗುತ್ತಿದೆ. ನಾವು ಅದನ್ನು ತಡೆಯಬೇಕಿದೆ. ಹಾಗಾಗಿ ದ್ರಾವಿಡ ಸಂಘ ಹುಟ್ಟುಹಾಕುತ್ತಿದ್ದೇವೆ” ಎಂದು ವಿವರಿಸಿದರು.

“ಈ ದ್ರಾವಿಡ ಸಂಘ ಕುರುಡು ಭಕ್ತರಿಗಲ್ಲ; ತೆರೆದ ಮನಸ್ಸಿನವರಿಗೆ, ಪ್ರಬುದ್ಧರಿಗೆ, ಅಬಲೆಯರಿಗಾಗಿ ಸಂಘಟಿಸಲಾಗುತ್ತಿದೆ. ದ್ರಾವಿಡ ಸಂಸ್ಕೃತಿ ಒಂದು ಮಹಾ ಸಮುದ್ರ. ಅದಕ್ಕೆ ಅಂಟಿಕೊಂಡು ಬಂದಿರುವ ಒಂದು ಉಪ ನದಿ, ಹಿನ್ನೀರು ಈ ಆರ್ಯ ಧರ್ಮ. ದುರಂತವೆಂದರೆ ಈ ಆರ್ಯ ಧರ್ಮ ಇಡೀ ಕಡಲನ್ನೇ ವಿಷಮಗೊಳಿಸುತ್ತಿದೆ. ಇಂದು ನಾವೆಲ್ಲರೂ ಸೇರಿ ಆ ಕಡಲನ್ನು ವಿಷಮುಕ್ತ ಮಾಡಬೇಕಿದೆ. ನಮ್ಮ ದ್ರಾವಿಡ ಸಂಸ್ಕೃತಿಯನ್ನು ಮುನ್ನೆಲೆಗೆ ತರಬೇಕಿದೆ. ಹಾಗಾಗಿ ಈ ದ್ರಾವಿಡ ಸಂಘದ ಜೊತೆ ಕೈ ಜೋಡಿಸಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...