Homeಕರ್ನಾಟಕಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿಯವರು ಸಂಘವನ್ನು ಉದ್ಘಾಟಿಸಲಿದ್ದಾರೆ

- Advertisement -
- Advertisement -

ಹೋರಾಟಗಾರ ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ಜನವರಿ 12ರಂದು ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಮಹಾರಾಣಿ ಕಾಲೇಜು ಪಕ್ಕದ ಭಾರತ್ ಸ್ಕೌಟ್‌ ಮತ್ತು ಗೈಡ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್, ಚಿತ್ರ ಸಾಹಿತಿ ಕವಿರಾಜ್‌, ಕ್ರಿಕೆಟ್‌ ಪಟು ವೇದ ಕೃಷ್ಣಮೂರ್ತಿ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಾಡಿನಲ್ಲಿ ಹಿಂದಿ ಹೇರಿಕೆ, ಆರ್ಯ ಸಂಸ್ಕೃತಿಯ ಪ್ರಭಾವ ಹೆಚ್ಚಾಗಿದೆ. ಇದರಿಂದ ಕನ್ನಡ ಭಾಷೆಯ ಜೊತೆಗೆ ಈ ನೆಲದ ಸಂಸ್ಕೃತಿಯು ಅಳಿದುಹೋಗುತ್ತಿದೆ ಎನ್ನುವ ಕಾರಣಕ್ಕೆ ಸಂಘವನ್ನು ತೆರೆಯಲಾಗುತ್ತಿದೆ” ಎಂದು ಸಂಘಟಕರು ತಿಳಿಸಿದ್ದಾರೆ.

“ಇಂದು ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ದೇಶ ಸಾಗುತ್ತಿರುವ ಹಾದಿ ಯಾರಲ್ಲೂ ಭರವಸೆ ಮೂಡಿಸಿಲ್ಲ. ಆರ್‌ಎಸ್ಎಸ್ ಎನ್ನುವ ರಾಷ್ಟ್ರೀಯ ಸನಾತನ ಸಂಘ ನಮ್ಮನ್ನೆಲ್ಲಾ ಶಾಶ್ವತವಾಗಿ ಗುಲಾಮಗಿರಿಗೆ ದೂಡುತ್ತಿದೆ. ಈ ನೆಲದ ಜನರ ಜೀವನ ಶೈಲಿಯನ್ನೇ ಬದಲಾಯಿಸುತ್ತಿದೆ. ಧರ್ಮದ ಹೆಸರಿನಲ್ಲಿ ಜಾತೀಯತೆಯನ್ನು ಜೀವಂತವಾಗಿಡುವ ಪ್ರಯತ್ನ ನಡೆಸುತ್ತಿದೆ. ದ್ರಾವಿಡರ ಆಹಾರ ಸಂಸ್ಕೃತಿಯನ್ನು ಹಾಳುಗೆಡವಲು ಮೇಲು-ಕೀಳು ಎನ್ನುವ ವಿಚಾರವನ್ನು ಜನರ ಮನಸ್ಸಿನಲ್ಲಿ ತುಂಬಲಾಗುತ್ತಿದೆ” ಎಂದಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆಯವರು, “ಸರ್ಕಾರ ಕೂಡ ಆರ್‌ಎಸ್‌ಎಸ್‌ನ ಅಣತಿಯಂತೆ ಕೆಲಸ ಮಾಡುತ್ತಿದೆ. ಶಾಲಾ ಗೋಡೆಗೆ ಕೇಸರಿ ಬಣ್ಣ ಬಳಿಯುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ವಿಚಾರದಲ್ಲೂ ಕೇವಲ ಸಸ್ಯಾಹಾರವನ್ನೇ ನೀಡಬೇಕು ಎನ್ನುವ ನೀತಿ ತರಲಾಗುತ್ತಿದೆ. ಇವೆಲ್ಲಾ ನಮ್ಮ ದ್ರಾವಿಡ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರವಾಗಿದೆ” ಎಂದು ಕಿಡಿಕಾರಿದರು.

No photo description available.
‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆ

ಇದನ್ನೂ ಓದಿರಿ: ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

“ಈ ಸಂಘಟನೆಯ ಮುಖ್ಯ ಉದ್ದೇಶ ಯಾರನ್ನೋ ವಿರೋಧಿಸುವುದಲ್ಲ. ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸುವುದು ಹಾಗೂ ಬೆಳೆಸುವುದಾಗಿದೆ. ಎಲ್ಲರೂ ಸಮಾನವಾಗಿ ಬದುಕಬೇಕು ಎನ್ನುವುದು ದ್ರಾವಿಡ ತತ್ವ ಸಿದ್ಧಾಂತವಾಗಿದೆ. ಈ ಸಿದ್ದಾಂತದಲ್ಲಿ ಮೇಲು-ಕೀಳುಗಳಿಲ್ಲ, ರಾಜಸೇವಕನಿಲ್ಲ, ಎಲ್ಲರೂ ಪ್ರಜೆಗಳೇ ಆಗಿದ್ದು, ಎಲ್ಲರಿಗೂ ಮಾನ್ಯತೆ ನೀಡಬೇಕು. ಧರ್ಮ-ಜಾತಿ ಹೆಸರಿನಲ್ಲಿ ನಮ್ಮನ್ನು ಮಾನಸಿಕವಾಗಿ ದಿಕ್ಕು ತಪ್ಪಿಸಿ, ನಮ್ಮೊಳಗೆ ಅಸೂಯೆ, ದ್ವೇಷ ಬಿತ್ತಲಾಗುತ್ತಿದೆ. ನಾವು ಅದನ್ನು ತಡೆಯಬೇಕಿದೆ. ಹಾಗಾಗಿ ದ್ರಾವಿಡ ಸಂಘ ಹುಟ್ಟುಹಾಕುತ್ತಿದ್ದೇವೆ” ಎಂದು ವಿವರಿಸಿದರು.

“ಈ ದ್ರಾವಿಡ ಸಂಘ ಕುರುಡು ಭಕ್ತರಿಗಲ್ಲ; ತೆರೆದ ಮನಸ್ಸಿನವರಿಗೆ, ಪ್ರಬುದ್ಧರಿಗೆ, ಅಬಲೆಯರಿಗಾಗಿ ಸಂಘಟಿಸಲಾಗುತ್ತಿದೆ. ದ್ರಾವಿಡ ಸಂಸ್ಕೃತಿ ಒಂದು ಮಹಾ ಸಮುದ್ರ. ಅದಕ್ಕೆ ಅಂಟಿಕೊಂಡು ಬಂದಿರುವ ಒಂದು ಉಪ ನದಿ, ಹಿನ್ನೀರು ಈ ಆರ್ಯ ಧರ್ಮ. ದುರಂತವೆಂದರೆ ಈ ಆರ್ಯ ಧರ್ಮ ಇಡೀ ಕಡಲನ್ನೇ ವಿಷಮಗೊಳಿಸುತ್ತಿದೆ. ಇಂದು ನಾವೆಲ್ಲರೂ ಸೇರಿ ಆ ಕಡಲನ್ನು ವಿಷಮುಕ್ತ ಮಾಡಬೇಕಿದೆ. ನಮ್ಮ ದ್ರಾವಿಡ ಸಂಸ್ಕೃತಿಯನ್ನು ಮುನ್ನೆಲೆಗೆ ತರಬೇಕಿದೆ. ಹಾಗಾಗಿ ಈ ದ್ರಾವಿಡ ಸಂಘದ ಜೊತೆ ಕೈ ಜೋಡಿಸಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...