Homeಕರ್ನಾಟಕಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿಯವರು ಸಂಘವನ್ನು ಉದ್ಘಾಟಿಸಲಿದ್ದಾರೆ

- Advertisement -
- Advertisement -

ಹೋರಾಟಗಾರ ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ಜನವರಿ 12ರಂದು ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಮಹಾರಾಣಿ ಕಾಲೇಜು ಪಕ್ಕದ ಭಾರತ್ ಸ್ಕೌಟ್‌ ಮತ್ತು ಗೈಡ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್, ಚಿತ್ರ ಸಾಹಿತಿ ಕವಿರಾಜ್‌, ಕ್ರಿಕೆಟ್‌ ಪಟು ವೇದ ಕೃಷ್ಣಮೂರ್ತಿ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಾಡಿನಲ್ಲಿ ಹಿಂದಿ ಹೇರಿಕೆ, ಆರ್ಯ ಸಂಸ್ಕೃತಿಯ ಪ್ರಭಾವ ಹೆಚ್ಚಾಗಿದೆ. ಇದರಿಂದ ಕನ್ನಡ ಭಾಷೆಯ ಜೊತೆಗೆ ಈ ನೆಲದ ಸಂಸ್ಕೃತಿಯು ಅಳಿದುಹೋಗುತ್ತಿದೆ ಎನ್ನುವ ಕಾರಣಕ್ಕೆ ಸಂಘವನ್ನು ತೆರೆಯಲಾಗುತ್ತಿದೆ” ಎಂದು ಸಂಘಟಕರು ತಿಳಿಸಿದ್ದಾರೆ.

“ಇಂದು ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ದೇಶ ಸಾಗುತ್ತಿರುವ ಹಾದಿ ಯಾರಲ್ಲೂ ಭರವಸೆ ಮೂಡಿಸಿಲ್ಲ. ಆರ್‌ಎಸ್ಎಸ್ ಎನ್ನುವ ರಾಷ್ಟ್ರೀಯ ಸನಾತನ ಸಂಘ ನಮ್ಮನ್ನೆಲ್ಲಾ ಶಾಶ್ವತವಾಗಿ ಗುಲಾಮಗಿರಿಗೆ ದೂಡುತ್ತಿದೆ. ಈ ನೆಲದ ಜನರ ಜೀವನ ಶೈಲಿಯನ್ನೇ ಬದಲಾಯಿಸುತ್ತಿದೆ. ಧರ್ಮದ ಹೆಸರಿನಲ್ಲಿ ಜಾತೀಯತೆಯನ್ನು ಜೀವಂತವಾಗಿಡುವ ಪ್ರಯತ್ನ ನಡೆಸುತ್ತಿದೆ. ದ್ರಾವಿಡರ ಆಹಾರ ಸಂಸ್ಕೃತಿಯನ್ನು ಹಾಳುಗೆಡವಲು ಮೇಲು-ಕೀಳು ಎನ್ನುವ ವಿಚಾರವನ್ನು ಜನರ ಮನಸ್ಸಿನಲ್ಲಿ ತುಂಬಲಾಗುತ್ತಿದೆ” ಎಂದಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆಯವರು, “ಸರ್ಕಾರ ಕೂಡ ಆರ್‌ಎಸ್‌ಎಸ್‌ನ ಅಣತಿಯಂತೆ ಕೆಲಸ ಮಾಡುತ್ತಿದೆ. ಶಾಲಾ ಗೋಡೆಗೆ ಕೇಸರಿ ಬಣ್ಣ ಬಳಿಯುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ವಿಚಾರದಲ್ಲೂ ಕೇವಲ ಸಸ್ಯಾಹಾರವನ್ನೇ ನೀಡಬೇಕು ಎನ್ನುವ ನೀತಿ ತರಲಾಗುತ್ತಿದೆ. ಇವೆಲ್ಲಾ ನಮ್ಮ ದ್ರಾವಿಡ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರವಾಗಿದೆ” ಎಂದು ಕಿಡಿಕಾರಿದರು.

No photo description available.
‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆ

ಇದನ್ನೂ ಓದಿರಿ: ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

“ಈ ಸಂಘಟನೆಯ ಮುಖ್ಯ ಉದ್ದೇಶ ಯಾರನ್ನೋ ವಿರೋಧಿಸುವುದಲ್ಲ. ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸುವುದು ಹಾಗೂ ಬೆಳೆಸುವುದಾಗಿದೆ. ಎಲ್ಲರೂ ಸಮಾನವಾಗಿ ಬದುಕಬೇಕು ಎನ್ನುವುದು ದ್ರಾವಿಡ ತತ್ವ ಸಿದ್ಧಾಂತವಾಗಿದೆ. ಈ ಸಿದ್ದಾಂತದಲ್ಲಿ ಮೇಲು-ಕೀಳುಗಳಿಲ್ಲ, ರಾಜಸೇವಕನಿಲ್ಲ, ಎಲ್ಲರೂ ಪ್ರಜೆಗಳೇ ಆಗಿದ್ದು, ಎಲ್ಲರಿಗೂ ಮಾನ್ಯತೆ ನೀಡಬೇಕು. ಧರ್ಮ-ಜಾತಿ ಹೆಸರಿನಲ್ಲಿ ನಮ್ಮನ್ನು ಮಾನಸಿಕವಾಗಿ ದಿಕ್ಕು ತಪ್ಪಿಸಿ, ನಮ್ಮೊಳಗೆ ಅಸೂಯೆ, ದ್ವೇಷ ಬಿತ್ತಲಾಗುತ್ತಿದೆ. ನಾವು ಅದನ್ನು ತಡೆಯಬೇಕಿದೆ. ಹಾಗಾಗಿ ದ್ರಾವಿಡ ಸಂಘ ಹುಟ್ಟುಹಾಕುತ್ತಿದ್ದೇವೆ” ಎಂದು ವಿವರಿಸಿದರು.

“ಈ ದ್ರಾವಿಡ ಸಂಘ ಕುರುಡು ಭಕ್ತರಿಗಲ್ಲ; ತೆರೆದ ಮನಸ್ಸಿನವರಿಗೆ, ಪ್ರಬುದ್ಧರಿಗೆ, ಅಬಲೆಯರಿಗಾಗಿ ಸಂಘಟಿಸಲಾಗುತ್ತಿದೆ. ದ್ರಾವಿಡ ಸಂಸ್ಕೃತಿ ಒಂದು ಮಹಾ ಸಮುದ್ರ. ಅದಕ್ಕೆ ಅಂಟಿಕೊಂಡು ಬಂದಿರುವ ಒಂದು ಉಪ ನದಿ, ಹಿನ್ನೀರು ಈ ಆರ್ಯ ಧರ್ಮ. ದುರಂತವೆಂದರೆ ಈ ಆರ್ಯ ಧರ್ಮ ಇಡೀ ಕಡಲನ್ನೇ ವಿಷಮಗೊಳಿಸುತ್ತಿದೆ. ಇಂದು ನಾವೆಲ್ಲರೂ ಸೇರಿ ಆ ಕಡಲನ್ನು ವಿಷಮುಕ್ತ ಮಾಡಬೇಕಿದೆ. ನಮ್ಮ ದ್ರಾವಿಡ ಸಂಸ್ಕೃತಿಯನ್ನು ಮುನ್ನೆಲೆಗೆ ತರಬೇಕಿದೆ. ಹಾಗಾಗಿ ಈ ದ್ರಾವಿಡ ಸಂಘದ ಜೊತೆ ಕೈ ಜೋಡಿಸಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...