Homeಕರ್ನಾಟಕಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿಯವರು ಸಂಘವನ್ನು ಉದ್ಘಾಟಿಸಲಿದ್ದಾರೆ

- Advertisement -
- Advertisement -

ಹೋರಾಟಗಾರ ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ಜನವರಿ 12ರಂದು ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಮಹಾರಾಣಿ ಕಾಲೇಜು ಪಕ್ಕದ ಭಾರತ್ ಸ್ಕೌಟ್‌ ಮತ್ತು ಗೈಡ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್, ಚಿತ್ರ ಸಾಹಿತಿ ಕವಿರಾಜ್‌, ಕ್ರಿಕೆಟ್‌ ಪಟು ವೇದ ಕೃಷ್ಣಮೂರ್ತಿ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಾಡಿನಲ್ಲಿ ಹಿಂದಿ ಹೇರಿಕೆ, ಆರ್ಯ ಸಂಸ್ಕೃತಿಯ ಪ್ರಭಾವ ಹೆಚ್ಚಾಗಿದೆ. ಇದರಿಂದ ಕನ್ನಡ ಭಾಷೆಯ ಜೊತೆಗೆ ಈ ನೆಲದ ಸಂಸ್ಕೃತಿಯು ಅಳಿದುಹೋಗುತ್ತಿದೆ ಎನ್ನುವ ಕಾರಣಕ್ಕೆ ಸಂಘವನ್ನು ತೆರೆಯಲಾಗುತ್ತಿದೆ” ಎಂದು ಸಂಘಟಕರು ತಿಳಿಸಿದ್ದಾರೆ.

“ಇಂದು ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ದೇಶ ಸಾಗುತ್ತಿರುವ ಹಾದಿ ಯಾರಲ್ಲೂ ಭರವಸೆ ಮೂಡಿಸಿಲ್ಲ. ಆರ್‌ಎಸ್ಎಸ್ ಎನ್ನುವ ರಾಷ್ಟ್ರೀಯ ಸನಾತನ ಸಂಘ ನಮ್ಮನ್ನೆಲ್ಲಾ ಶಾಶ್ವತವಾಗಿ ಗುಲಾಮಗಿರಿಗೆ ದೂಡುತ್ತಿದೆ. ಈ ನೆಲದ ಜನರ ಜೀವನ ಶೈಲಿಯನ್ನೇ ಬದಲಾಯಿಸುತ್ತಿದೆ. ಧರ್ಮದ ಹೆಸರಿನಲ್ಲಿ ಜಾತೀಯತೆಯನ್ನು ಜೀವಂತವಾಗಿಡುವ ಪ್ರಯತ್ನ ನಡೆಸುತ್ತಿದೆ. ದ್ರಾವಿಡರ ಆಹಾರ ಸಂಸ್ಕೃತಿಯನ್ನು ಹಾಳುಗೆಡವಲು ಮೇಲು-ಕೀಳು ಎನ್ನುವ ವಿಚಾರವನ್ನು ಜನರ ಮನಸ್ಸಿನಲ್ಲಿ ತುಂಬಲಾಗುತ್ತಿದೆ” ಎಂದಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆಯವರು, “ಸರ್ಕಾರ ಕೂಡ ಆರ್‌ಎಸ್‌ಎಸ್‌ನ ಅಣತಿಯಂತೆ ಕೆಲಸ ಮಾಡುತ್ತಿದೆ. ಶಾಲಾ ಗೋಡೆಗೆ ಕೇಸರಿ ಬಣ್ಣ ಬಳಿಯುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ವಿಚಾರದಲ್ಲೂ ಕೇವಲ ಸಸ್ಯಾಹಾರವನ್ನೇ ನೀಡಬೇಕು ಎನ್ನುವ ನೀತಿ ತರಲಾಗುತ್ತಿದೆ. ಇವೆಲ್ಲಾ ನಮ್ಮ ದ್ರಾವಿಡ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರವಾಗಿದೆ” ಎಂದು ಕಿಡಿಕಾರಿದರು.

No photo description available.
‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆ

ಇದನ್ನೂ ಓದಿರಿ: ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

“ಈ ಸಂಘಟನೆಯ ಮುಖ್ಯ ಉದ್ದೇಶ ಯಾರನ್ನೋ ವಿರೋಧಿಸುವುದಲ್ಲ. ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸುವುದು ಹಾಗೂ ಬೆಳೆಸುವುದಾಗಿದೆ. ಎಲ್ಲರೂ ಸಮಾನವಾಗಿ ಬದುಕಬೇಕು ಎನ್ನುವುದು ದ್ರಾವಿಡ ತತ್ವ ಸಿದ್ಧಾಂತವಾಗಿದೆ. ಈ ಸಿದ್ದಾಂತದಲ್ಲಿ ಮೇಲು-ಕೀಳುಗಳಿಲ್ಲ, ರಾಜಸೇವಕನಿಲ್ಲ, ಎಲ್ಲರೂ ಪ್ರಜೆಗಳೇ ಆಗಿದ್ದು, ಎಲ್ಲರಿಗೂ ಮಾನ್ಯತೆ ನೀಡಬೇಕು. ಧರ್ಮ-ಜಾತಿ ಹೆಸರಿನಲ್ಲಿ ನಮ್ಮನ್ನು ಮಾನಸಿಕವಾಗಿ ದಿಕ್ಕು ತಪ್ಪಿಸಿ, ನಮ್ಮೊಳಗೆ ಅಸೂಯೆ, ದ್ವೇಷ ಬಿತ್ತಲಾಗುತ್ತಿದೆ. ನಾವು ಅದನ್ನು ತಡೆಯಬೇಕಿದೆ. ಹಾಗಾಗಿ ದ್ರಾವಿಡ ಸಂಘ ಹುಟ್ಟುಹಾಕುತ್ತಿದ್ದೇವೆ” ಎಂದು ವಿವರಿಸಿದರು.

“ಈ ದ್ರಾವಿಡ ಸಂಘ ಕುರುಡು ಭಕ್ತರಿಗಲ್ಲ; ತೆರೆದ ಮನಸ್ಸಿನವರಿಗೆ, ಪ್ರಬುದ್ಧರಿಗೆ, ಅಬಲೆಯರಿಗಾಗಿ ಸಂಘಟಿಸಲಾಗುತ್ತಿದೆ. ದ್ರಾವಿಡ ಸಂಸ್ಕೃತಿ ಒಂದು ಮಹಾ ಸಮುದ್ರ. ಅದಕ್ಕೆ ಅಂಟಿಕೊಂಡು ಬಂದಿರುವ ಒಂದು ಉಪ ನದಿ, ಹಿನ್ನೀರು ಈ ಆರ್ಯ ಧರ್ಮ. ದುರಂತವೆಂದರೆ ಈ ಆರ್ಯ ಧರ್ಮ ಇಡೀ ಕಡಲನ್ನೇ ವಿಷಮಗೊಳಿಸುತ್ತಿದೆ. ಇಂದು ನಾವೆಲ್ಲರೂ ಸೇರಿ ಆ ಕಡಲನ್ನು ವಿಷಮುಕ್ತ ಮಾಡಬೇಕಿದೆ. ನಮ್ಮ ದ್ರಾವಿಡ ಸಂಸ್ಕೃತಿಯನ್ನು ಮುನ್ನೆಲೆಗೆ ತರಬೇಕಿದೆ. ಹಾಗಾಗಿ ಈ ದ್ರಾವಿಡ ಸಂಘದ ಜೊತೆ ಕೈ ಜೋಡಿಸಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...