Homeಮುಖಪುಟಯಾವ ಬಲೆಗೂ ಬೀಳದ ಸಿಂಹ; ರಾಸ್ ಬಿಹಾರಿ ಬೋಸ್ - ಎಲ್ದೋ ಹೊನ್ನೇಕುಡಿಗೆ ಬರಹ

ಯಾವ ಬಲೆಗೂ ಬೀಳದ ಸಿಂಹ; ರಾಸ್ ಬಿಹಾರಿ ಬೋಸ್ – ಎಲ್ದೋ ಹೊನ್ನೇಕುಡಿಗೆ ಬರಹ

- Advertisement -
- Advertisement -

ಅದೊಂದು ಸಂಜೆ ಗುರುಗಳಾದ ಚಾರುಚಂದರಾಯ್ ತಮ್ಮ ಮೂವರು ವಿದ್ಯಾರ್ಥಿಗಳೊಂದಿಗೆ ಭಾರತ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಮಾತನಾಡಿದ ನಂತರ “ನಿನ್ನ ಬಳಿ ಒಂದೇ ಗುಂಡು ಇದ್ದಾಗ ನೀನು ಬ್ರಿಟಿಷರ ಕೈಗೆ ಸಿಕ್ಕಿ ಬಿದ್ದರೆ ಏನು ಮಾಡುವೆ”? ಎಂಬ ಪ್ರಶ್ನೆಯನ್ನು ಶಿಷ್ಯರ ಮುಂದಿಟ್ಟರು.
ಮೊದಲನೆಯ ಶಿಷ್ಯ: ಬ್ರಿಟಿಷರ ಕೈಗೆ ಸಿಕ್ಕಿ ಹಾಕಿಕೊಳ್ಳುವದಕ್ಕಿಂತ ನಾನೇ ಆ ಗುಂಡಿನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದ.
ಎರಡನೆಯ ಶಿಷ್ಯ: ನಾನು ಆ ಗುಂಡಿನಿಂದ ದೇಶದ್ರೋಹಿಯನ್ನು ಮುಗಿಸುತ್ತೇನೆಂದ.
ಮೂರನೆಯ ಶಿಷ್ಯ: ಏನೂ ಉತ್ತರ ನೀಡದೆ ಸುಮ್ಮನಿದ್ದ.

ಮರುದಿನ ಶಿಷ್ಯನನ್ನು ಭೇಟಿ ಮಾಡಿ ಗುರುಗಳು “ನನ್ನ ಪ್ರಶ್ನೆಗೆ ನೀನೇಕೆ ಉತ್ತರ ನೀಡಲಿಲ್ಲ”? ಎಂದು ಕೇಳಿದರು. ಅದಕ್ಕುತ್ತರಿಸಿದ ಶಿಷ್ಯ ”ನಾನು ಬ್ರಿಟಿಷ್ ಸೈನ್ಯ ಸೇರಿ ಅವರಿಂದ ತರಬೇತಿ ಪಡೆದು ಭಾರತೀಯರ ಸೈನ್ಯವನ್ನು ಕಟ್ಟುತ್ತೇನೆ, ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ಕಟ್ಟುತ್ತೇನೆ” ಎಂದ!. ತಮ್ಮ ಗುರುಗಳಿಗೆ ನೀಡಿದ ಮಾತಿನಂತೆ ಈ ಮೂರು ಶಿಷ್ಯರು ನುಡಿದಂತೆ ನಡೆದರು. ಮೊದಲ ಶಿಷ್ಯ ಪ್ರಪುಲ್ಲ ಚಾಕಿ, ಎರಡನೇ ಶಿಷ್ಯ ಕನೈಲಾಲ್, ಹಾಗೂ ಮೂರನೆಯ ಶಿಷ್ಯನೇ ರಾಸ್ ಬಿಹಾರಿ ಬೋಸ್!

ರಾಸ್‌ ಬಿಹಾರಿ ಬೋಸ್‌

ಈ ಮೂರನೆ ಶಿಷ್ಯ1886 ಮೇ 25ರಂದು ಪಶ್ಚಿಮಬಂಗಾಳದ ಹೂಗ್ಲಿ ಜಿಲ್ಲೆಯ ಪಲರಾಬಿಘಾಟಿ ಎಂಬ ಹಳ್ಳಿಯಲ್ಲಿ ಬಿನೋದ್ ಬಿಹಾರಿ ಬೋಸ್ ಮತ್ತು ಭುವನೇಶ್ವರಿ ದಂಪತಿಗಳ ಮಗನಾಗಿ ಜನಿಸಿದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ಒಮ್ಮೆ ರಾಸ್ ಬಿಹಾರಿ ಬೋಸ್ ತಮ್ಮ ಸಹ ಕ್ರಾಂತಿಕಾರಿಗಳೊಂದಿಗೆ ಸಭೆ ಸೇರಿದ್ದ ಮನೆಯನ್ನು ಶಸ್ತ್ರಸಜ್ಜಿತ ಬ್ರಿಟಿಷ್ ಪೊಲೀಸ್ ಪಡೆ ಸುತ್ತುವರಿಯಿತು. ಕೆಲವು ಕ್ಷಣಗಳ ಹಿಂದೆ ಪ್ರಶಾಂತವಾಗಿದ್ದ ವಾತಾವರಣ ಒಮ್ಮೆಲೆ ಆತಂಕ ಗಾಬರಿಗಳಿಂದ ತುಂಬಿ ಹೋಯಿತು. ಕಾರಣ ಅವರು ಹಿಡಿಯ ಹೊರಟಿದ್ದು ಬ್ರಿಟಿಷರಿಗೆ ಸಿಂಹಸ್ವಪ್ನನಾದ ಕ್ರಾಂತಿಕಾರಿಯನ್ನು.

ಈ ಮಧ್ಯೆ ಮಲ ಹೊರುವವನೊಬ್ಬ ತಲೆಯ ಮೇಲೆ ಗೊಬ್ಬರದ ಮಂಕರಿಯನ್ನು ಹೊತ್ತು ಆ ಮನೆಯಿಂದ ಹೊರಬಂದ. ಪೊಲೀಸರು ಮೂಗು ಮುಚ್ಚಿಕೊಂಡು ಪಕ್ಕಕ್ಕೆ ಸರಿದರು. ನಂತರ ಪೊಲೀಸರು ಆ ಮನೆಯ ಕೋಣೆ ಕೋಣೆಗೂ ನುಗ್ಗಿ ಅಲ್ಲಿದ್ದವರನ್ನೆಲ್ಲಾ ಹೊರಗೆಳೆದು ತಂದರು. ಆದರೆ ಅವರಲ್ಲಿ ರಾಸ್ ಬಿಹಾರಿ ಇರಲಿಲ್ಲ. ನಂಬಿಗಸ್ತ ಮಾಹಿತಿದಾರ ರವಾನಿಸಿದ್ದ ಸುದ್ದಿ ತಪ್ಪಂದೆಣಿಸಿ ಪೊಲೀಸರು ಬರಿಗೈಯಲ್ಲಿ ಹಿಂತಿರುಗಿದರು. ಕೆಲವು ದಿನಗಳ ನಂತರ ಪೊಲೀಸರಿಗೆ ಸುದ್ದಿ ಮುಟ್ಟಿತು ಮಲಹೊರುವವನ ವೇಷಧರಿಸಿ ಹೊರಬಂದ ವ್ಯಕ್ತಿಯೇ ರಾಸ್ ಬಿಹಾರಿ ಬೋಸ್ ಎಂದು!

ತಮ್ಮ ಮಾತೃಭಾಷೆ ಬಂಗಾಳಿಯೊಂದಿಗೆ ಹಿಂದಿ, ಪಂಜಾಬಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳ ಮೇಲೆ ರಾಸ್ ಬಿಹಾರಿಯವರು ಸಾಧಿಸಿದ್ದ ಹಿಡಿತ ಪೊಲೀಸರಿಂದ ತಪ್ಪಿಸಿಕೊಳ್ಳಲು ನೆರವಾಗುತ್ತಿದ್ದವು. ಒಂದರ ಮೇಲೊಂದರಂತೆ ಕ್ರಾಂತಿಕಾರಿ ಚಟುವಟಿಕೆಯನ್ನು ಸಂಘಟಿಸಿ ಕಾರ್ಯರೂಪಕ್ಕೆ ತರುತ್ತಿದ್ದ ರಾಸ್ ಬಿಹಾರಿಯವರು ಬ್ರಿಟಿಷರ ವಾಂಟೆಡ್ ಪಟ್ಟಿಯ ಬಹುಮುಖ್ಯ ಕ್ರಾಂತಿಕಾರಿಯಾಗಿದ್ದರು.

ಇದಕ್ಕಾಗಿಯೆ ಬ್ರಿಟಿಷರು ಅವರನ್ನು ಜೀವಂತವಾಗಿ ಅಥವಾ ಮೃತವಾಗಿಯಾದರು ಹಿಡಿಯಬೇಕೆಂದು ಅತ್ಯಂತ ಪ್ರಬಲವಾದ ಬಲೆಯನ್ನು ಹಣೆದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿಯುತ್ತಿದ್ದಂತೆಯೇ ಅವರ ಸ್ನೇಹಿತರು ರಾಸ್ ಬಿಹಾರಿಯವರನ್ನು ಭಾರತ ಬಿಟ್ಟುಹೋಗುವುದು ಕ್ಷೇಮವೆಂದು ಒತ್ತಾಯಿಸಿದರು. ಹಾಗಾಗಿ ಅವರು 1915 ಮೇ 12ರಂದು ದೇಶ ಬಿಟ್ಟು ಹೊರಟು ಹೋದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ದೇಶದ ಒಳಗಿದ್ದರೇನು ಹೊರಗಿದ್ದರೇನು ಹೋರಾಟ ಮಾತ್ರ ನಿರಂತರ! ಮೊದಲು ಸಿಂಗಾಪುರ ತಲುಪಿದ ರಾಸ್ ಬಿಹಾರಿಯವರು ಅಲ್ಲಿಂದ ಜಪಾನಿಗೆ ಪ್ರಯಾಣಿಸುತ್ತಾರೆ. ಜಪಾನಿನಲ್ಲೂ ಹಲವಾರು ಸಭೆಗಳನ್ನು ಸಂಘಟಿಸಿ ತಾಯ್ನಾಡನ್ನು ಸ್ವತಂತ್ರಗೊಳಿಸುವ ಕಾಯಕದಲ್ಲಿ ನಿರತರಾಗುತ್ತಾರೆ. ಇವರು ಬ್ರಿಟಿಷರಿಂದ ತಲೆಮರೆಸಿಕೊಂಡು ಬಂದಿರುವ ಕ್ರಾಂತಿಕಾರಿಯೆಂದು ತಿಳಿಯುತ್ತಿದ್ದಂತೆ ಜಪಾನಿನ ಸರ್ಕಾರವು ಇವರನ್ನು ಜಪಾನ್ ಬಿಟ್ಟು ತೊಲಗುವಂತೆ ಬಹಿಷ್ಕಾರ ಆದೇಶವನ್ನು ಹೊರಡಿಸುತ್ತದೆ. ಆಗ ಅಲ್ಲಿನ  ಟೊಯಮ ಎಂಬ ರಾಜಕಾರಣಿಯೊಬ್ಬರು ಅವರ ಸ್ನೇಹಿತ ಅಯ್ಜೊಸೊಮ ಎಂಬುವರ ಮನೆಯಲ್ಲಿ ರಾಸ್ ಬಿಹಾರಿಯವರಿಗೆ  ಆಶ್ರಯ ಒದಗಿಸುತ್ತಾರೆ.

ತದನಂತರ ಕೇವಲ ನಾಲ್ಕು ತಿಂಗಳಲ್ಲಿ ಜಪಾನಿ ಭಾಷೆಯನ್ನು ಕಲಿತು ಅಯ್ಜೊಸೊಮ  ಅವರ ಪುತ್ರಿ ಟೊಶಿಕೊ ಅವರನ್ನು ವರಿಸುತ್ತಾರೆ. ಅವರಿಗೆ ಇಬ್ಬರು ಮಕ್ಕಳು ಜನಿಸುತ್ತಾರೆ. ಮುಂದಿನ ಕೆಲವೇ ವರ್ಷಗಳಲ್ಲಿ ಅವರ ಪತ್ನಿ ಮೃತರಾಗುತ್ತಾರೆ. ಆ ನೋವೂ ಅವರನ್ನು ತಮ್ಮ ಗುರಿಯಿಂದ  ಎಳ್ಳಷ್ಟೂ ವಿಚಲಿತಗೊಳಿಸಲಿಲ್ಲ.

1942ರ  ಸೆಪ್ಟೆಂಬರ್‌‌ನಲ್ಲಿ ಐತಿಹಾಸಿಕ ಇಂಡಿಯನ್ ನ್ಯಾಷನಲ್ ಆರ್ಮಿ(INA)ಯನ್ನು ಅಧಿಕೃತವಾಗಿ ಸ್ಥಾಪಿಸಿದ ರಾಸ್ ಬಿಹಾರಿ ಬೋಸ್‌‌ರು ನೇತಾಜಿ ಸುಭಾಷ್ಚಂದ್ರ ಬೋಸ್‌ರವರನ್ನು ಪೂರ್ವ ಏಷ್ಯಾಕ್ಕೆ ಬಂದು INA ಯ ನೇತೃತ್ವ ವಹಿಸಬೇಕೆಂದು ಆಮಂತ್ರಿಸಿದರು. ನೇತಾಜಿಯವರು ಹರ್ಷದಿಂದ ಇದನ್ನು ಸ್ವೀಕರಿಸಿದರು.

1943 ಜುಲೈ 4 ರಂದು ಸಿಂಗಾಪುರದಲ್ಲಿ ನಡೆದ ಐತಿಹಾಸಿಕ ಅಧಿವೇಶನದಲ್ಲಿ ರಾಸ್ ಬಿಹಾರಿ ಬೋಸ್ ಮತ್ತು  ಸುಭಾಷ್ ಚಂದ್ರ ಬೋಸರು ಅಕ್ಕ ಪಕ್ಕದಲ್ಲಿ ನಿಂತು ನೆರೆದಿದ್ದ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದರು. ರಾಸ್ ಬಿಹಾರಿಯವರು “ಸ್ನೇಹಿತರೆ ಮತ್ತು ಸಹಯೋಧ ಕಾಮ್ರೇಡರೆ, ಇಂದು ನಾನು ನಿಮ್ಮೆಲ್ಲರ  ಉಪಸ್ಥಿತಿಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ ಮತ್ತು  ಸುಭಾಷ್ಚಂದ್ರ ಬೋಸ್‌ರನ್ನು ಪೂರ್ವ ಏಷ್ಯಾದಲ್ಲಿ  ಇಂಡಿಯನ್ ಇಂಡಿಪೆಂಡೆನ್ಸ್‌ ಲೀಗ್‌ನ ಅಧ್ಯಕ್ಷರಾಗಿ ನೇಮಿಸುತ್ತಿದ್ದೇನೆ” ಎಂದು ಘೋಷಿಸಿಸುತ್ತಾರೆ. ನೇತಾಜಿಯವರು ಆ ದೊಡ್ಡ ಜವಾಬ್ದಾರಿಯನ್ನು ಎಲ್ಲ ಗೌರವಾದರಗಳಿಂದ, ನಮ್ರತೆಯಿಂದ ಸ್ವೀಕರಿಸುತ್ತಾರೆ.

ಸಕ್ಕರೆ ಕಾಯಿಲೆ ಮತ್ತಿತರ ತೊಂದರೆಗಳಿಂದಾಗಿ ಹಾಸಿಗೆ ಹಿಡಿದಿದ್ದ ರಾಸ್ ಬಿಹಾರಿಯವರು 1945 ಜನವರಿ 21ರಂದು ಕೊನೆಯುಸಿರೆಳೆದರು.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ರಾಸ್ ಬಿಹಾರಿಯವರ ದೇಹಕ್ಕೆ ಹೂಗುಚ್ಚವಿರಿಸಿ ಅತಿ ಭಾವುಕತೆಯಿಂದ ನೇತಾಜಿಯವರು ಹೀಗೆಂದಿದ್ದರು, “ಭಾರತದಲ್ಲಿ ರಾಸ್ ಬಿಹಾರಿಯವರು ಬ್ರಿಟಿಷರ ವಿರುದ್ಧ ಎಸಗುತ್ತಿದ್ದ ಸಾಹಸಮಯ ಕೃತ್ಯಗಳನ್ನು ಕೇಳಿ ನಾ ಪುಳಕಿತಗೊಳ್ಳುತ್ತಿದ್ದೆ. ಈಗ ಮೂವತ್ತು ವರ್ಷಗಳ ನಂತರ ಪೂರ್ವ ಏಷ್ಯಾದಲ್ಲಿ ಅವರ ನಿಕಟ  ಸಂಪರ್ಕಕ್ಕೆ ಬಂದಾಗ ಅವರ ಅದಮ್ಯ ಉತ್ಸಾಹ ಮತ್ತು ಅಪಾರ ಆಶಾವಾದದಿಂದ ನಾನು ಪ್ರಭಾವಿತನಾದೆ. ಅವರ ಇಳಿ ವಯಸ್ಸಾಗಲಿ ಅಥವಾ ಅನಾರೋಗ್ಯವಾಗಲಿ ಅವರ ಹೋರಾಟದ ಕೆಚ್ಚನ್ನು ಕುಗ್ಗಿಸಲಿಲ್ಲ!”

ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಕ್ರಾಂತಿಕಾರಿಗಳಲ್ಲಿ ಭಾರತದ ಒಳಗಾಗಲಿ, ಭಾರತದ ಹೊರಗಾಗಲಿ, ಬ್ರಿಟಿಷ್ ಸಾಮ್ರಾಜ್ಯದ ದಕ್ಷ ಪೊಲೀಸ್ ಪಡೆಗೆ ಸೆರೆಯಳಾಗದೆ ಒಂದು ದಿನವೂ ಲಾಕಪ್‌ನಲ್ಲಿ ಕಳೆಯದೆ ಕಾರ್ಯನಿರ್ವಹಿಸಿದ ಅದ್ವಿತೀಯ ಹೆಗ್ಗಳಿಕೆ ರಾಸ್ ಬಿಹಾರಿಯವರಿಗೆ ಸಲ್ಲುತ್ತದೆ. ಸಚೀಂದ್ರನಾಥ್ ಸನ್ಯಾಲ್, ಕರ್ತಾರ್ ಸಿಂಗ್ ಸರಬ, ವಿಷ್ಣುಗಣೇಶ್ ಪಿಂಗ್ಲೆ,  ಅಮೀರ್ ಚಾಂದ್, ವಿನಾಯಕ್ ರಾವ್ ಕಾಪ್ಲೆ, ಅಬಾದ್ ಬಿಹಾರಿ, ಬಲ್ಮೊಕಂಡ್, ಬಸಂತ್ ಕುಮಾರ್ ಬಿಶ್ವಾಸ್, ಕುನ್ವರ್ ಪ್ರತಾಪ್ ಸಿಂಗ್ ಹೀಗೆ ರಾಸ್ ಬಿಹಾರಿಯವರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಿಳಿದವರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ನಯವಂಚನೆ, ಶೋಷಣೆಗೊಳಗಾದ ಜನರ ಬಗ್ಗೆ ಅವರಿಗಿದ್ದ ಪ್ರೀತಿ-ಅನುಕಂಪ ಹಾಗೂ ಆಳುವ ವರ್ಗ ನಡೆಸುವ ಅನ್ಯಾಯ-ಅಕ್ರಮಗಳ ವಿರುದ್ಧ ಅವರಿಗಿದ್ದ ಆಕ್ರೋಶ, ಅಸಹನೆಗಳು ಅವರಲ್ಲಿ ಆ ಅಪ್ರತಿಮ ಕೆಚ್ಚನ್ನು ಎದೆಗಾರಿಕೆಯನ್ನೂ ಬೆಳೆಸಿತ್ತು.  ಪರಕೀಯರ ಆಳ್ವಿಕೆ ಕಾಲದಲ್ಲಿ ರಾಜಿರಹಿತವಾಗಿ ಅಂದಿನ ಕ್ರಾಂತಿಕಾರಿಗಳು ಹೋರಾಡಿದಂತೆ ಇಂದಿನ ಸಮಾಜದಲ್ಲಿರುವ ಸಮಸ್ಯೆಗಳ ವಿರುದ್ಧ ಜಾತಿ, ಧರ್ಮ, ಪ್ರಾದೇಶಿಕತೆಯ ಭೇದಕ್ಕೊಳಗಾದೇ ಯುವಕರು ಸಂಘಟಿತರಾಗಿ ಹೋರಾಡುವುದೇ ನಾವು ರಾಸ್ ಬಿಹಾರಿ ಬೋಸ್ ರವರಿಗೆ  ಸಲ್ಲಿಸಬಹುದಾದ ನೈಜ ಗೌರವ!

ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...