Homeಮುಖಪುಟಯಾವ ಬಲೆಗೂ ಬೀಳದ ಸಿಂಹ; ರಾಸ್ ಬಿಹಾರಿ ಬೋಸ್ - ಎಲ್ದೋ ಹೊನ್ನೇಕುಡಿಗೆ ಬರಹ

ಯಾವ ಬಲೆಗೂ ಬೀಳದ ಸಿಂಹ; ರಾಸ್ ಬಿಹಾರಿ ಬೋಸ್ – ಎಲ್ದೋ ಹೊನ್ನೇಕುಡಿಗೆ ಬರಹ

- Advertisement -
- Advertisement -

ಅದೊಂದು ಸಂಜೆ ಗುರುಗಳಾದ ಚಾರುಚಂದರಾಯ್ ತಮ್ಮ ಮೂವರು ವಿದ್ಯಾರ್ಥಿಗಳೊಂದಿಗೆ ಭಾರತ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಮಾತನಾಡಿದ ನಂತರ “ನಿನ್ನ ಬಳಿ ಒಂದೇ ಗುಂಡು ಇದ್ದಾಗ ನೀನು ಬ್ರಿಟಿಷರ ಕೈಗೆ ಸಿಕ್ಕಿ ಬಿದ್ದರೆ ಏನು ಮಾಡುವೆ”? ಎಂಬ ಪ್ರಶ್ನೆಯನ್ನು ಶಿಷ್ಯರ ಮುಂದಿಟ್ಟರು.
ಮೊದಲನೆಯ ಶಿಷ್ಯ: ಬ್ರಿಟಿಷರ ಕೈಗೆ ಸಿಕ್ಕಿ ಹಾಕಿಕೊಳ್ಳುವದಕ್ಕಿಂತ ನಾನೇ ಆ ಗುಂಡಿನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದ.
ಎರಡನೆಯ ಶಿಷ್ಯ: ನಾನು ಆ ಗುಂಡಿನಿಂದ ದೇಶದ್ರೋಹಿಯನ್ನು ಮುಗಿಸುತ್ತೇನೆಂದ.
ಮೂರನೆಯ ಶಿಷ್ಯ: ಏನೂ ಉತ್ತರ ನೀಡದೆ ಸುಮ್ಮನಿದ್ದ.

ಮರುದಿನ ಶಿಷ್ಯನನ್ನು ಭೇಟಿ ಮಾಡಿ ಗುರುಗಳು “ನನ್ನ ಪ್ರಶ್ನೆಗೆ ನೀನೇಕೆ ಉತ್ತರ ನೀಡಲಿಲ್ಲ”? ಎಂದು ಕೇಳಿದರು. ಅದಕ್ಕುತ್ತರಿಸಿದ ಶಿಷ್ಯ ”ನಾನು ಬ್ರಿಟಿಷ್ ಸೈನ್ಯ ಸೇರಿ ಅವರಿಂದ ತರಬೇತಿ ಪಡೆದು ಭಾರತೀಯರ ಸೈನ್ಯವನ್ನು ಕಟ್ಟುತ್ತೇನೆ, ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ಕಟ್ಟುತ್ತೇನೆ” ಎಂದ!. ತಮ್ಮ ಗುರುಗಳಿಗೆ ನೀಡಿದ ಮಾತಿನಂತೆ ಈ ಮೂರು ಶಿಷ್ಯರು ನುಡಿದಂತೆ ನಡೆದರು. ಮೊದಲ ಶಿಷ್ಯ ಪ್ರಪುಲ್ಲ ಚಾಕಿ, ಎರಡನೇ ಶಿಷ್ಯ ಕನೈಲಾಲ್, ಹಾಗೂ ಮೂರನೆಯ ಶಿಷ್ಯನೇ ರಾಸ್ ಬಿಹಾರಿ ಬೋಸ್!

ರಾಸ್‌ ಬಿಹಾರಿ ಬೋಸ್‌

ಈ ಮೂರನೆ ಶಿಷ್ಯ1886 ಮೇ 25ರಂದು ಪಶ್ಚಿಮಬಂಗಾಳದ ಹೂಗ್ಲಿ ಜಿಲ್ಲೆಯ ಪಲರಾಬಿಘಾಟಿ ಎಂಬ ಹಳ್ಳಿಯಲ್ಲಿ ಬಿನೋದ್ ಬಿಹಾರಿ ಬೋಸ್ ಮತ್ತು ಭುವನೇಶ್ವರಿ ದಂಪತಿಗಳ ಮಗನಾಗಿ ಜನಿಸಿದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ಒಮ್ಮೆ ರಾಸ್ ಬಿಹಾರಿ ಬೋಸ್ ತಮ್ಮ ಸಹ ಕ್ರಾಂತಿಕಾರಿಗಳೊಂದಿಗೆ ಸಭೆ ಸೇರಿದ್ದ ಮನೆಯನ್ನು ಶಸ್ತ್ರಸಜ್ಜಿತ ಬ್ರಿಟಿಷ್ ಪೊಲೀಸ್ ಪಡೆ ಸುತ್ತುವರಿಯಿತು. ಕೆಲವು ಕ್ಷಣಗಳ ಹಿಂದೆ ಪ್ರಶಾಂತವಾಗಿದ್ದ ವಾತಾವರಣ ಒಮ್ಮೆಲೆ ಆತಂಕ ಗಾಬರಿಗಳಿಂದ ತುಂಬಿ ಹೋಯಿತು. ಕಾರಣ ಅವರು ಹಿಡಿಯ ಹೊರಟಿದ್ದು ಬ್ರಿಟಿಷರಿಗೆ ಸಿಂಹಸ್ವಪ್ನನಾದ ಕ್ರಾಂತಿಕಾರಿಯನ್ನು.

ಈ ಮಧ್ಯೆ ಮಲ ಹೊರುವವನೊಬ್ಬ ತಲೆಯ ಮೇಲೆ ಗೊಬ್ಬರದ ಮಂಕರಿಯನ್ನು ಹೊತ್ತು ಆ ಮನೆಯಿಂದ ಹೊರಬಂದ. ಪೊಲೀಸರು ಮೂಗು ಮುಚ್ಚಿಕೊಂಡು ಪಕ್ಕಕ್ಕೆ ಸರಿದರು. ನಂತರ ಪೊಲೀಸರು ಆ ಮನೆಯ ಕೋಣೆ ಕೋಣೆಗೂ ನುಗ್ಗಿ ಅಲ್ಲಿದ್ದವರನ್ನೆಲ್ಲಾ ಹೊರಗೆಳೆದು ತಂದರು. ಆದರೆ ಅವರಲ್ಲಿ ರಾಸ್ ಬಿಹಾರಿ ಇರಲಿಲ್ಲ. ನಂಬಿಗಸ್ತ ಮಾಹಿತಿದಾರ ರವಾನಿಸಿದ್ದ ಸುದ್ದಿ ತಪ್ಪಂದೆಣಿಸಿ ಪೊಲೀಸರು ಬರಿಗೈಯಲ್ಲಿ ಹಿಂತಿರುಗಿದರು. ಕೆಲವು ದಿನಗಳ ನಂತರ ಪೊಲೀಸರಿಗೆ ಸುದ್ದಿ ಮುಟ್ಟಿತು ಮಲಹೊರುವವನ ವೇಷಧರಿಸಿ ಹೊರಬಂದ ವ್ಯಕ್ತಿಯೇ ರಾಸ್ ಬಿಹಾರಿ ಬೋಸ್ ಎಂದು!

ತಮ್ಮ ಮಾತೃಭಾಷೆ ಬಂಗಾಳಿಯೊಂದಿಗೆ ಹಿಂದಿ, ಪಂಜಾಬಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳ ಮೇಲೆ ರಾಸ್ ಬಿಹಾರಿಯವರು ಸಾಧಿಸಿದ್ದ ಹಿಡಿತ ಪೊಲೀಸರಿಂದ ತಪ್ಪಿಸಿಕೊಳ್ಳಲು ನೆರವಾಗುತ್ತಿದ್ದವು. ಒಂದರ ಮೇಲೊಂದರಂತೆ ಕ್ರಾಂತಿಕಾರಿ ಚಟುವಟಿಕೆಯನ್ನು ಸಂಘಟಿಸಿ ಕಾರ್ಯರೂಪಕ್ಕೆ ತರುತ್ತಿದ್ದ ರಾಸ್ ಬಿಹಾರಿಯವರು ಬ್ರಿಟಿಷರ ವಾಂಟೆಡ್ ಪಟ್ಟಿಯ ಬಹುಮುಖ್ಯ ಕ್ರಾಂತಿಕಾರಿಯಾಗಿದ್ದರು.

ಇದಕ್ಕಾಗಿಯೆ ಬ್ರಿಟಿಷರು ಅವರನ್ನು ಜೀವಂತವಾಗಿ ಅಥವಾ ಮೃತವಾಗಿಯಾದರು ಹಿಡಿಯಬೇಕೆಂದು ಅತ್ಯಂತ ಪ್ರಬಲವಾದ ಬಲೆಯನ್ನು ಹಣೆದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿಯುತ್ತಿದ್ದಂತೆಯೇ ಅವರ ಸ್ನೇಹಿತರು ರಾಸ್ ಬಿಹಾರಿಯವರನ್ನು ಭಾರತ ಬಿಟ್ಟುಹೋಗುವುದು ಕ್ಷೇಮವೆಂದು ಒತ್ತಾಯಿಸಿದರು. ಹಾಗಾಗಿ ಅವರು 1915 ಮೇ 12ರಂದು ದೇಶ ಬಿಟ್ಟು ಹೊರಟು ಹೋದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ದೇಶದ ಒಳಗಿದ್ದರೇನು ಹೊರಗಿದ್ದರೇನು ಹೋರಾಟ ಮಾತ್ರ ನಿರಂತರ! ಮೊದಲು ಸಿಂಗಾಪುರ ತಲುಪಿದ ರಾಸ್ ಬಿಹಾರಿಯವರು ಅಲ್ಲಿಂದ ಜಪಾನಿಗೆ ಪ್ರಯಾಣಿಸುತ್ತಾರೆ. ಜಪಾನಿನಲ್ಲೂ ಹಲವಾರು ಸಭೆಗಳನ್ನು ಸಂಘಟಿಸಿ ತಾಯ್ನಾಡನ್ನು ಸ್ವತಂತ್ರಗೊಳಿಸುವ ಕಾಯಕದಲ್ಲಿ ನಿರತರಾಗುತ್ತಾರೆ. ಇವರು ಬ್ರಿಟಿಷರಿಂದ ತಲೆಮರೆಸಿಕೊಂಡು ಬಂದಿರುವ ಕ್ರಾಂತಿಕಾರಿಯೆಂದು ತಿಳಿಯುತ್ತಿದ್ದಂತೆ ಜಪಾನಿನ ಸರ್ಕಾರವು ಇವರನ್ನು ಜಪಾನ್ ಬಿಟ್ಟು ತೊಲಗುವಂತೆ ಬಹಿಷ್ಕಾರ ಆದೇಶವನ್ನು ಹೊರಡಿಸುತ್ತದೆ. ಆಗ ಅಲ್ಲಿನ  ಟೊಯಮ ಎಂಬ ರಾಜಕಾರಣಿಯೊಬ್ಬರು ಅವರ ಸ್ನೇಹಿತ ಅಯ್ಜೊಸೊಮ ಎಂಬುವರ ಮನೆಯಲ್ಲಿ ರಾಸ್ ಬಿಹಾರಿಯವರಿಗೆ  ಆಶ್ರಯ ಒದಗಿಸುತ್ತಾರೆ.

ತದನಂತರ ಕೇವಲ ನಾಲ್ಕು ತಿಂಗಳಲ್ಲಿ ಜಪಾನಿ ಭಾಷೆಯನ್ನು ಕಲಿತು ಅಯ್ಜೊಸೊಮ  ಅವರ ಪುತ್ರಿ ಟೊಶಿಕೊ ಅವರನ್ನು ವರಿಸುತ್ತಾರೆ. ಅವರಿಗೆ ಇಬ್ಬರು ಮಕ್ಕಳು ಜನಿಸುತ್ತಾರೆ. ಮುಂದಿನ ಕೆಲವೇ ವರ್ಷಗಳಲ್ಲಿ ಅವರ ಪತ್ನಿ ಮೃತರಾಗುತ್ತಾರೆ. ಆ ನೋವೂ ಅವರನ್ನು ತಮ್ಮ ಗುರಿಯಿಂದ  ಎಳ್ಳಷ್ಟೂ ವಿಚಲಿತಗೊಳಿಸಲಿಲ್ಲ.

1942ರ  ಸೆಪ್ಟೆಂಬರ್‌‌ನಲ್ಲಿ ಐತಿಹಾಸಿಕ ಇಂಡಿಯನ್ ನ್ಯಾಷನಲ್ ಆರ್ಮಿ(INA)ಯನ್ನು ಅಧಿಕೃತವಾಗಿ ಸ್ಥಾಪಿಸಿದ ರಾಸ್ ಬಿಹಾರಿ ಬೋಸ್‌‌ರು ನೇತಾಜಿ ಸುಭಾಷ್ಚಂದ್ರ ಬೋಸ್‌ರವರನ್ನು ಪೂರ್ವ ಏಷ್ಯಾಕ್ಕೆ ಬಂದು INA ಯ ನೇತೃತ್ವ ವಹಿಸಬೇಕೆಂದು ಆಮಂತ್ರಿಸಿದರು. ನೇತಾಜಿಯವರು ಹರ್ಷದಿಂದ ಇದನ್ನು ಸ್ವೀಕರಿಸಿದರು.

1943 ಜುಲೈ 4 ರಂದು ಸಿಂಗಾಪುರದಲ್ಲಿ ನಡೆದ ಐತಿಹಾಸಿಕ ಅಧಿವೇಶನದಲ್ಲಿ ರಾಸ್ ಬಿಹಾರಿ ಬೋಸ್ ಮತ್ತು  ಸುಭಾಷ್ ಚಂದ್ರ ಬೋಸರು ಅಕ್ಕ ಪಕ್ಕದಲ್ಲಿ ನಿಂತು ನೆರೆದಿದ್ದ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದರು. ರಾಸ್ ಬಿಹಾರಿಯವರು “ಸ್ನೇಹಿತರೆ ಮತ್ತು ಸಹಯೋಧ ಕಾಮ್ರೇಡರೆ, ಇಂದು ನಾನು ನಿಮ್ಮೆಲ್ಲರ  ಉಪಸ್ಥಿತಿಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ ಮತ್ತು  ಸುಭಾಷ್ಚಂದ್ರ ಬೋಸ್‌ರನ್ನು ಪೂರ್ವ ಏಷ್ಯಾದಲ್ಲಿ  ಇಂಡಿಯನ್ ಇಂಡಿಪೆಂಡೆನ್ಸ್‌ ಲೀಗ್‌ನ ಅಧ್ಯಕ್ಷರಾಗಿ ನೇಮಿಸುತ್ತಿದ್ದೇನೆ” ಎಂದು ಘೋಷಿಸಿಸುತ್ತಾರೆ. ನೇತಾಜಿಯವರು ಆ ದೊಡ್ಡ ಜವಾಬ್ದಾರಿಯನ್ನು ಎಲ್ಲ ಗೌರವಾದರಗಳಿಂದ, ನಮ್ರತೆಯಿಂದ ಸ್ವೀಕರಿಸುತ್ತಾರೆ.

ಸಕ್ಕರೆ ಕಾಯಿಲೆ ಮತ್ತಿತರ ತೊಂದರೆಗಳಿಂದಾಗಿ ಹಾಸಿಗೆ ಹಿಡಿದಿದ್ದ ರಾಸ್ ಬಿಹಾರಿಯವರು 1945 ಜನವರಿ 21ರಂದು ಕೊನೆಯುಸಿರೆಳೆದರು.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ರಾಸ್ ಬಿಹಾರಿಯವರ ದೇಹಕ್ಕೆ ಹೂಗುಚ್ಚವಿರಿಸಿ ಅತಿ ಭಾವುಕತೆಯಿಂದ ನೇತಾಜಿಯವರು ಹೀಗೆಂದಿದ್ದರು, “ಭಾರತದಲ್ಲಿ ರಾಸ್ ಬಿಹಾರಿಯವರು ಬ್ರಿಟಿಷರ ವಿರುದ್ಧ ಎಸಗುತ್ತಿದ್ದ ಸಾಹಸಮಯ ಕೃತ್ಯಗಳನ್ನು ಕೇಳಿ ನಾ ಪುಳಕಿತಗೊಳ್ಳುತ್ತಿದ್ದೆ. ಈಗ ಮೂವತ್ತು ವರ್ಷಗಳ ನಂತರ ಪೂರ್ವ ಏಷ್ಯಾದಲ್ಲಿ ಅವರ ನಿಕಟ  ಸಂಪರ್ಕಕ್ಕೆ ಬಂದಾಗ ಅವರ ಅದಮ್ಯ ಉತ್ಸಾಹ ಮತ್ತು ಅಪಾರ ಆಶಾವಾದದಿಂದ ನಾನು ಪ್ರಭಾವಿತನಾದೆ. ಅವರ ಇಳಿ ವಯಸ್ಸಾಗಲಿ ಅಥವಾ ಅನಾರೋಗ್ಯವಾಗಲಿ ಅವರ ಹೋರಾಟದ ಕೆಚ್ಚನ್ನು ಕುಗ್ಗಿಸಲಿಲ್ಲ!”

ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಕ್ರಾಂತಿಕಾರಿಗಳಲ್ಲಿ ಭಾರತದ ಒಳಗಾಗಲಿ, ಭಾರತದ ಹೊರಗಾಗಲಿ, ಬ್ರಿಟಿಷ್ ಸಾಮ್ರಾಜ್ಯದ ದಕ್ಷ ಪೊಲೀಸ್ ಪಡೆಗೆ ಸೆರೆಯಳಾಗದೆ ಒಂದು ದಿನವೂ ಲಾಕಪ್‌ನಲ್ಲಿ ಕಳೆಯದೆ ಕಾರ್ಯನಿರ್ವಹಿಸಿದ ಅದ್ವಿತೀಯ ಹೆಗ್ಗಳಿಕೆ ರಾಸ್ ಬಿಹಾರಿಯವರಿಗೆ ಸಲ್ಲುತ್ತದೆ. ಸಚೀಂದ್ರನಾಥ್ ಸನ್ಯಾಲ್, ಕರ್ತಾರ್ ಸಿಂಗ್ ಸರಬ, ವಿಷ್ಣುಗಣೇಶ್ ಪಿಂಗ್ಲೆ,  ಅಮೀರ್ ಚಾಂದ್, ವಿನಾಯಕ್ ರಾವ್ ಕಾಪ್ಲೆ, ಅಬಾದ್ ಬಿಹಾರಿ, ಬಲ್ಮೊಕಂಡ್, ಬಸಂತ್ ಕುಮಾರ್ ಬಿಶ್ವಾಸ್, ಕುನ್ವರ್ ಪ್ರತಾಪ್ ಸಿಂಗ್ ಹೀಗೆ ರಾಸ್ ಬಿಹಾರಿಯವರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಿಳಿದವರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ನಯವಂಚನೆ, ಶೋಷಣೆಗೊಳಗಾದ ಜನರ ಬಗ್ಗೆ ಅವರಿಗಿದ್ದ ಪ್ರೀತಿ-ಅನುಕಂಪ ಹಾಗೂ ಆಳುವ ವರ್ಗ ನಡೆಸುವ ಅನ್ಯಾಯ-ಅಕ್ರಮಗಳ ವಿರುದ್ಧ ಅವರಿಗಿದ್ದ ಆಕ್ರೋಶ, ಅಸಹನೆಗಳು ಅವರಲ್ಲಿ ಆ ಅಪ್ರತಿಮ ಕೆಚ್ಚನ್ನು ಎದೆಗಾರಿಕೆಯನ್ನೂ ಬೆಳೆಸಿತ್ತು.  ಪರಕೀಯರ ಆಳ್ವಿಕೆ ಕಾಲದಲ್ಲಿ ರಾಜಿರಹಿತವಾಗಿ ಅಂದಿನ ಕ್ರಾಂತಿಕಾರಿಗಳು ಹೋರಾಡಿದಂತೆ ಇಂದಿನ ಸಮಾಜದಲ್ಲಿರುವ ಸಮಸ್ಯೆಗಳ ವಿರುದ್ಧ ಜಾತಿ, ಧರ್ಮ, ಪ್ರಾದೇಶಿಕತೆಯ ಭೇದಕ್ಕೊಳಗಾದೇ ಯುವಕರು ಸಂಘಟಿತರಾಗಿ ಹೋರಾಡುವುದೇ ನಾವು ರಾಸ್ ಬಿಹಾರಿ ಬೋಸ್ ರವರಿಗೆ  ಸಲ್ಲಿಸಬಹುದಾದ ನೈಜ ಗೌರವ!

ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...