Homeಮುಖಪುಟಯಾವ ಬಲೆಗೂ ಬೀಳದ ಸಿಂಹ; ರಾಸ್ ಬಿಹಾರಿ ಬೋಸ್ - ಎಲ್ದೋ ಹೊನ್ನೇಕುಡಿಗೆ ಬರಹ

ಯಾವ ಬಲೆಗೂ ಬೀಳದ ಸಿಂಹ; ರಾಸ್ ಬಿಹಾರಿ ಬೋಸ್ – ಎಲ್ದೋ ಹೊನ್ನೇಕುಡಿಗೆ ಬರಹ

- Advertisement -
- Advertisement -

ಅದೊಂದು ಸಂಜೆ ಗುರುಗಳಾದ ಚಾರುಚಂದರಾಯ್ ತಮ್ಮ ಮೂವರು ವಿದ್ಯಾರ್ಥಿಗಳೊಂದಿಗೆ ಭಾರತ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಮಾತನಾಡಿದ ನಂತರ “ನಿನ್ನ ಬಳಿ ಒಂದೇ ಗುಂಡು ಇದ್ದಾಗ ನೀನು ಬ್ರಿಟಿಷರ ಕೈಗೆ ಸಿಕ್ಕಿ ಬಿದ್ದರೆ ಏನು ಮಾಡುವೆ”? ಎಂಬ ಪ್ರಶ್ನೆಯನ್ನು ಶಿಷ್ಯರ ಮುಂದಿಟ್ಟರು.
ಮೊದಲನೆಯ ಶಿಷ್ಯ: ಬ್ರಿಟಿಷರ ಕೈಗೆ ಸಿಕ್ಕಿ ಹಾಕಿಕೊಳ್ಳುವದಕ್ಕಿಂತ ನಾನೇ ಆ ಗುಂಡಿನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದ.
ಎರಡನೆಯ ಶಿಷ್ಯ: ನಾನು ಆ ಗುಂಡಿನಿಂದ ದೇಶದ್ರೋಹಿಯನ್ನು ಮುಗಿಸುತ್ತೇನೆಂದ.
ಮೂರನೆಯ ಶಿಷ್ಯ: ಏನೂ ಉತ್ತರ ನೀಡದೆ ಸುಮ್ಮನಿದ್ದ.

ಮರುದಿನ ಶಿಷ್ಯನನ್ನು ಭೇಟಿ ಮಾಡಿ ಗುರುಗಳು “ನನ್ನ ಪ್ರಶ್ನೆಗೆ ನೀನೇಕೆ ಉತ್ತರ ನೀಡಲಿಲ್ಲ”? ಎಂದು ಕೇಳಿದರು. ಅದಕ್ಕುತ್ತರಿಸಿದ ಶಿಷ್ಯ ”ನಾನು ಬ್ರಿಟಿಷ್ ಸೈನ್ಯ ಸೇರಿ ಅವರಿಂದ ತರಬೇತಿ ಪಡೆದು ಭಾರತೀಯರ ಸೈನ್ಯವನ್ನು ಕಟ್ಟುತ್ತೇನೆ, ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ಕಟ್ಟುತ್ತೇನೆ” ಎಂದ!. ತಮ್ಮ ಗುರುಗಳಿಗೆ ನೀಡಿದ ಮಾತಿನಂತೆ ಈ ಮೂರು ಶಿಷ್ಯರು ನುಡಿದಂತೆ ನಡೆದರು. ಮೊದಲ ಶಿಷ್ಯ ಪ್ರಪುಲ್ಲ ಚಾಕಿ, ಎರಡನೇ ಶಿಷ್ಯ ಕನೈಲಾಲ್, ಹಾಗೂ ಮೂರನೆಯ ಶಿಷ್ಯನೇ ರಾಸ್ ಬಿಹಾರಿ ಬೋಸ್!

ರಾಸ್‌ ಬಿಹಾರಿ ಬೋಸ್‌

ಈ ಮೂರನೆ ಶಿಷ್ಯ1886 ಮೇ 25ರಂದು ಪಶ್ಚಿಮಬಂಗಾಳದ ಹೂಗ್ಲಿ ಜಿಲ್ಲೆಯ ಪಲರಾಬಿಘಾಟಿ ಎಂಬ ಹಳ್ಳಿಯಲ್ಲಿ ಬಿನೋದ್ ಬಿಹಾರಿ ಬೋಸ್ ಮತ್ತು ಭುವನೇಶ್ವರಿ ದಂಪತಿಗಳ ಮಗನಾಗಿ ಜನಿಸಿದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ಒಮ್ಮೆ ರಾಸ್ ಬಿಹಾರಿ ಬೋಸ್ ತಮ್ಮ ಸಹ ಕ್ರಾಂತಿಕಾರಿಗಳೊಂದಿಗೆ ಸಭೆ ಸೇರಿದ್ದ ಮನೆಯನ್ನು ಶಸ್ತ್ರಸಜ್ಜಿತ ಬ್ರಿಟಿಷ್ ಪೊಲೀಸ್ ಪಡೆ ಸುತ್ತುವರಿಯಿತು. ಕೆಲವು ಕ್ಷಣಗಳ ಹಿಂದೆ ಪ್ರಶಾಂತವಾಗಿದ್ದ ವಾತಾವರಣ ಒಮ್ಮೆಲೆ ಆತಂಕ ಗಾಬರಿಗಳಿಂದ ತುಂಬಿ ಹೋಯಿತು. ಕಾರಣ ಅವರು ಹಿಡಿಯ ಹೊರಟಿದ್ದು ಬ್ರಿಟಿಷರಿಗೆ ಸಿಂಹಸ್ವಪ್ನನಾದ ಕ್ರಾಂತಿಕಾರಿಯನ್ನು.

ಈ ಮಧ್ಯೆ ಮಲ ಹೊರುವವನೊಬ್ಬ ತಲೆಯ ಮೇಲೆ ಗೊಬ್ಬರದ ಮಂಕರಿಯನ್ನು ಹೊತ್ತು ಆ ಮನೆಯಿಂದ ಹೊರಬಂದ. ಪೊಲೀಸರು ಮೂಗು ಮುಚ್ಚಿಕೊಂಡು ಪಕ್ಕಕ್ಕೆ ಸರಿದರು. ನಂತರ ಪೊಲೀಸರು ಆ ಮನೆಯ ಕೋಣೆ ಕೋಣೆಗೂ ನುಗ್ಗಿ ಅಲ್ಲಿದ್ದವರನ್ನೆಲ್ಲಾ ಹೊರಗೆಳೆದು ತಂದರು. ಆದರೆ ಅವರಲ್ಲಿ ರಾಸ್ ಬಿಹಾರಿ ಇರಲಿಲ್ಲ. ನಂಬಿಗಸ್ತ ಮಾಹಿತಿದಾರ ರವಾನಿಸಿದ್ದ ಸುದ್ದಿ ತಪ್ಪಂದೆಣಿಸಿ ಪೊಲೀಸರು ಬರಿಗೈಯಲ್ಲಿ ಹಿಂತಿರುಗಿದರು. ಕೆಲವು ದಿನಗಳ ನಂತರ ಪೊಲೀಸರಿಗೆ ಸುದ್ದಿ ಮುಟ್ಟಿತು ಮಲಹೊರುವವನ ವೇಷಧರಿಸಿ ಹೊರಬಂದ ವ್ಯಕ್ತಿಯೇ ರಾಸ್ ಬಿಹಾರಿ ಬೋಸ್ ಎಂದು!

ತಮ್ಮ ಮಾತೃಭಾಷೆ ಬಂಗಾಳಿಯೊಂದಿಗೆ ಹಿಂದಿ, ಪಂಜಾಬಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳ ಮೇಲೆ ರಾಸ್ ಬಿಹಾರಿಯವರು ಸಾಧಿಸಿದ್ದ ಹಿಡಿತ ಪೊಲೀಸರಿಂದ ತಪ್ಪಿಸಿಕೊಳ್ಳಲು ನೆರವಾಗುತ್ತಿದ್ದವು. ಒಂದರ ಮೇಲೊಂದರಂತೆ ಕ್ರಾಂತಿಕಾರಿ ಚಟುವಟಿಕೆಯನ್ನು ಸಂಘಟಿಸಿ ಕಾರ್ಯರೂಪಕ್ಕೆ ತರುತ್ತಿದ್ದ ರಾಸ್ ಬಿಹಾರಿಯವರು ಬ್ರಿಟಿಷರ ವಾಂಟೆಡ್ ಪಟ್ಟಿಯ ಬಹುಮುಖ್ಯ ಕ್ರಾಂತಿಕಾರಿಯಾಗಿದ್ದರು.

ಇದಕ್ಕಾಗಿಯೆ ಬ್ರಿಟಿಷರು ಅವರನ್ನು ಜೀವಂತವಾಗಿ ಅಥವಾ ಮೃತವಾಗಿಯಾದರು ಹಿಡಿಯಬೇಕೆಂದು ಅತ್ಯಂತ ಪ್ರಬಲವಾದ ಬಲೆಯನ್ನು ಹಣೆದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿಯುತ್ತಿದ್ದಂತೆಯೇ ಅವರ ಸ್ನೇಹಿತರು ರಾಸ್ ಬಿಹಾರಿಯವರನ್ನು ಭಾರತ ಬಿಟ್ಟುಹೋಗುವುದು ಕ್ಷೇಮವೆಂದು ಒತ್ತಾಯಿಸಿದರು. ಹಾಗಾಗಿ ಅವರು 1915 ಮೇ 12ರಂದು ದೇಶ ಬಿಟ್ಟು ಹೊರಟು ಹೋದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ದೇಶದ ಒಳಗಿದ್ದರೇನು ಹೊರಗಿದ್ದರೇನು ಹೋರಾಟ ಮಾತ್ರ ನಿರಂತರ! ಮೊದಲು ಸಿಂಗಾಪುರ ತಲುಪಿದ ರಾಸ್ ಬಿಹಾರಿಯವರು ಅಲ್ಲಿಂದ ಜಪಾನಿಗೆ ಪ್ರಯಾಣಿಸುತ್ತಾರೆ. ಜಪಾನಿನಲ್ಲೂ ಹಲವಾರು ಸಭೆಗಳನ್ನು ಸಂಘಟಿಸಿ ತಾಯ್ನಾಡನ್ನು ಸ್ವತಂತ್ರಗೊಳಿಸುವ ಕಾಯಕದಲ್ಲಿ ನಿರತರಾಗುತ್ತಾರೆ. ಇವರು ಬ್ರಿಟಿಷರಿಂದ ತಲೆಮರೆಸಿಕೊಂಡು ಬಂದಿರುವ ಕ್ರಾಂತಿಕಾರಿಯೆಂದು ತಿಳಿಯುತ್ತಿದ್ದಂತೆ ಜಪಾನಿನ ಸರ್ಕಾರವು ಇವರನ್ನು ಜಪಾನ್ ಬಿಟ್ಟು ತೊಲಗುವಂತೆ ಬಹಿಷ್ಕಾರ ಆದೇಶವನ್ನು ಹೊರಡಿಸುತ್ತದೆ. ಆಗ ಅಲ್ಲಿನ  ಟೊಯಮ ಎಂಬ ರಾಜಕಾರಣಿಯೊಬ್ಬರು ಅವರ ಸ್ನೇಹಿತ ಅಯ್ಜೊಸೊಮ ಎಂಬುವರ ಮನೆಯಲ್ಲಿ ರಾಸ್ ಬಿಹಾರಿಯವರಿಗೆ  ಆಶ್ರಯ ಒದಗಿಸುತ್ತಾರೆ.

ತದನಂತರ ಕೇವಲ ನಾಲ್ಕು ತಿಂಗಳಲ್ಲಿ ಜಪಾನಿ ಭಾಷೆಯನ್ನು ಕಲಿತು ಅಯ್ಜೊಸೊಮ  ಅವರ ಪುತ್ರಿ ಟೊಶಿಕೊ ಅವರನ್ನು ವರಿಸುತ್ತಾರೆ. ಅವರಿಗೆ ಇಬ್ಬರು ಮಕ್ಕಳು ಜನಿಸುತ್ತಾರೆ. ಮುಂದಿನ ಕೆಲವೇ ವರ್ಷಗಳಲ್ಲಿ ಅವರ ಪತ್ನಿ ಮೃತರಾಗುತ್ತಾರೆ. ಆ ನೋವೂ ಅವರನ್ನು ತಮ್ಮ ಗುರಿಯಿಂದ  ಎಳ್ಳಷ್ಟೂ ವಿಚಲಿತಗೊಳಿಸಲಿಲ್ಲ.

1942ರ  ಸೆಪ್ಟೆಂಬರ್‌‌ನಲ್ಲಿ ಐತಿಹಾಸಿಕ ಇಂಡಿಯನ್ ನ್ಯಾಷನಲ್ ಆರ್ಮಿ(INA)ಯನ್ನು ಅಧಿಕೃತವಾಗಿ ಸ್ಥಾಪಿಸಿದ ರಾಸ್ ಬಿಹಾರಿ ಬೋಸ್‌‌ರು ನೇತಾಜಿ ಸುಭಾಷ್ಚಂದ್ರ ಬೋಸ್‌ರವರನ್ನು ಪೂರ್ವ ಏಷ್ಯಾಕ್ಕೆ ಬಂದು INA ಯ ನೇತೃತ್ವ ವಹಿಸಬೇಕೆಂದು ಆಮಂತ್ರಿಸಿದರು. ನೇತಾಜಿಯವರು ಹರ್ಷದಿಂದ ಇದನ್ನು ಸ್ವೀಕರಿಸಿದರು.

1943 ಜುಲೈ 4 ರಂದು ಸಿಂಗಾಪುರದಲ್ಲಿ ನಡೆದ ಐತಿಹಾಸಿಕ ಅಧಿವೇಶನದಲ್ಲಿ ರಾಸ್ ಬಿಹಾರಿ ಬೋಸ್ ಮತ್ತು  ಸುಭಾಷ್ ಚಂದ್ರ ಬೋಸರು ಅಕ್ಕ ಪಕ್ಕದಲ್ಲಿ ನಿಂತು ನೆರೆದಿದ್ದ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದರು. ರಾಸ್ ಬಿಹಾರಿಯವರು “ಸ್ನೇಹಿತರೆ ಮತ್ತು ಸಹಯೋಧ ಕಾಮ್ರೇಡರೆ, ಇಂದು ನಾನು ನಿಮ್ಮೆಲ್ಲರ  ಉಪಸ್ಥಿತಿಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ ಮತ್ತು  ಸುಭಾಷ್ಚಂದ್ರ ಬೋಸ್‌ರನ್ನು ಪೂರ್ವ ಏಷ್ಯಾದಲ್ಲಿ  ಇಂಡಿಯನ್ ಇಂಡಿಪೆಂಡೆನ್ಸ್‌ ಲೀಗ್‌ನ ಅಧ್ಯಕ್ಷರಾಗಿ ನೇಮಿಸುತ್ತಿದ್ದೇನೆ” ಎಂದು ಘೋಷಿಸಿಸುತ್ತಾರೆ. ನೇತಾಜಿಯವರು ಆ ದೊಡ್ಡ ಜವಾಬ್ದಾರಿಯನ್ನು ಎಲ್ಲ ಗೌರವಾದರಗಳಿಂದ, ನಮ್ರತೆಯಿಂದ ಸ್ವೀಕರಿಸುತ್ತಾರೆ.

ಸಕ್ಕರೆ ಕಾಯಿಲೆ ಮತ್ತಿತರ ತೊಂದರೆಗಳಿಂದಾಗಿ ಹಾಸಿಗೆ ಹಿಡಿದಿದ್ದ ರಾಸ್ ಬಿಹಾರಿಯವರು 1945 ಜನವರಿ 21ರಂದು ಕೊನೆಯುಸಿರೆಳೆದರು.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ರಾಸ್ ಬಿಹಾರಿಯವರ ದೇಹಕ್ಕೆ ಹೂಗುಚ್ಚವಿರಿಸಿ ಅತಿ ಭಾವುಕತೆಯಿಂದ ನೇತಾಜಿಯವರು ಹೀಗೆಂದಿದ್ದರು, “ಭಾರತದಲ್ಲಿ ರಾಸ್ ಬಿಹಾರಿಯವರು ಬ್ರಿಟಿಷರ ವಿರುದ್ಧ ಎಸಗುತ್ತಿದ್ದ ಸಾಹಸಮಯ ಕೃತ್ಯಗಳನ್ನು ಕೇಳಿ ನಾ ಪುಳಕಿತಗೊಳ್ಳುತ್ತಿದ್ದೆ. ಈಗ ಮೂವತ್ತು ವರ್ಷಗಳ ನಂತರ ಪೂರ್ವ ಏಷ್ಯಾದಲ್ಲಿ ಅವರ ನಿಕಟ  ಸಂಪರ್ಕಕ್ಕೆ ಬಂದಾಗ ಅವರ ಅದಮ್ಯ ಉತ್ಸಾಹ ಮತ್ತು ಅಪಾರ ಆಶಾವಾದದಿಂದ ನಾನು ಪ್ರಭಾವಿತನಾದೆ. ಅವರ ಇಳಿ ವಯಸ್ಸಾಗಲಿ ಅಥವಾ ಅನಾರೋಗ್ಯವಾಗಲಿ ಅವರ ಹೋರಾಟದ ಕೆಚ್ಚನ್ನು ಕುಗ್ಗಿಸಲಿಲ್ಲ!”

ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಕ್ರಾಂತಿಕಾರಿಗಳಲ್ಲಿ ಭಾರತದ ಒಳಗಾಗಲಿ, ಭಾರತದ ಹೊರಗಾಗಲಿ, ಬ್ರಿಟಿಷ್ ಸಾಮ್ರಾಜ್ಯದ ದಕ್ಷ ಪೊಲೀಸ್ ಪಡೆಗೆ ಸೆರೆಯಳಾಗದೆ ಒಂದು ದಿನವೂ ಲಾಕಪ್‌ನಲ್ಲಿ ಕಳೆಯದೆ ಕಾರ್ಯನಿರ್ವಹಿಸಿದ ಅದ್ವಿತೀಯ ಹೆಗ್ಗಳಿಕೆ ರಾಸ್ ಬಿಹಾರಿಯವರಿಗೆ ಸಲ್ಲುತ್ತದೆ. ಸಚೀಂದ್ರನಾಥ್ ಸನ್ಯಾಲ್, ಕರ್ತಾರ್ ಸಿಂಗ್ ಸರಬ, ವಿಷ್ಣುಗಣೇಶ್ ಪಿಂಗ್ಲೆ,  ಅಮೀರ್ ಚಾಂದ್, ವಿನಾಯಕ್ ರಾವ್ ಕಾಪ್ಲೆ, ಅಬಾದ್ ಬಿಹಾರಿ, ಬಲ್ಮೊಕಂಡ್, ಬಸಂತ್ ಕುಮಾರ್ ಬಿಶ್ವಾಸ್, ಕುನ್ವರ್ ಪ್ರತಾಪ್ ಸಿಂಗ್ ಹೀಗೆ ರಾಸ್ ಬಿಹಾರಿಯವರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಿಳಿದವರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ನಯವಂಚನೆ, ಶೋಷಣೆಗೊಳಗಾದ ಜನರ ಬಗ್ಗೆ ಅವರಿಗಿದ್ದ ಪ್ರೀತಿ-ಅನುಕಂಪ ಹಾಗೂ ಆಳುವ ವರ್ಗ ನಡೆಸುವ ಅನ್ಯಾಯ-ಅಕ್ರಮಗಳ ವಿರುದ್ಧ ಅವರಿಗಿದ್ದ ಆಕ್ರೋಶ, ಅಸಹನೆಗಳು ಅವರಲ್ಲಿ ಆ ಅಪ್ರತಿಮ ಕೆಚ್ಚನ್ನು ಎದೆಗಾರಿಕೆಯನ್ನೂ ಬೆಳೆಸಿತ್ತು.  ಪರಕೀಯರ ಆಳ್ವಿಕೆ ಕಾಲದಲ್ಲಿ ರಾಜಿರಹಿತವಾಗಿ ಅಂದಿನ ಕ್ರಾಂತಿಕಾರಿಗಳು ಹೋರಾಡಿದಂತೆ ಇಂದಿನ ಸಮಾಜದಲ್ಲಿರುವ ಸಮಸ್ಯೆಗಳ ವಿರುದ್ಧ ಜಾತಿ, ಧರ್ಮ, ಪ್ರಾದೇಶಿಕತೆಯ ಭೇದಕ್ಕೊಳಗಾದೇ ಯುವಕರು ಸಂಘಟಿತರಾಗಿ ಹೋರಾಡುವುದೇ ನಾವು ರಾಸ್ ಬಿಹಾರಿ ಬೋಸ್ ರವರಿಗೆ  ಸಲ್ಲಿಸಬಹುದಾದ ನೈಜ ಗೌರವ!

ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...