Homeಮುಖಪುಟಯಾವ ಬಲೆಗೂ ಬೀಳದ ಸಿಂಹ; ರಾಸ್ ಬಿಹಾರಿ ಬೋಸ್ - ಎಲ್ದೋ ಹೊನ್ನೇಕುಡಿಗೆ ಬರಹ

ಯಾವ ಬಲೆಗೂ ಬೀಳದ ಸಿಂಹ; ರಾಸ್ ಬಿಹಾರಿ ಬೋಸ್ – ಎಲ್ದೋ ಹೊನ್ನೇಕುಡಿಗೆ ಬರಹ

- Advertisement -
- Advertisement -

ಅದೊಂದು ಸಂಜೆ ಗುರುಗಳಾದ ಚಾರುಚಂದರಾಯ್ ತಮ್ಮ ಮೂವರು ವಿದ್ಯಾರ್ಥಿಗಳೊಂದಿಗೆ ಭಾರತ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಮಾತನಾಡಿದ ನಂತರ “ನಿನ್ನ ಬಳಿ ಒಂದೇ ಗುಂಡು ಇದ್ದಾಗ ನೀನು ಬ್ರಿಟಿಷರ ಕೈಗೆ ಸಿಕ್ಕಿ ಬಿದ್ದರೆ ಏನು ಮಾಡುವೆ”? ಎಂಬ ಪ್ರಶ್ನೆಯನ್ನು ಶಿಷ್ಯರ ಮುಂದಿಟ್ಟರು.
ಮೊದಲನೆಯ ಶಿಷ್ಯ: ಬ್ರಿಟಿಷರ ಕೈಗೆ ಸಿಕ್ಕಿ ಹಾಕಿಕೊಳ್ಳುವದಕ್ಕಿಂತ ನಾನೇ ಆ ಗುಂಡಿನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದ.
ಎರಡನೆಯ ಶಿಷ್ಯ: ನಾನು ಆ ಗುಂಡಿನಿಂದ ದೇಶದ್ರೋಹಿಯನ್ನು ಮುಗಿಸುತ್ತೇನೆಂದ.
ಮೂರನೆಯ ಶಿಷ್ಯ: ಏನೂ ಉತ್ತರ ನೀಡದೆ ಸುಮ್ಮನಿದ್ದ.

ಮರುದಿನ ಶಿಷ್ಯನನ್ನು ಭೇಟಿ ಮಾಡಿ ಗುರುಗಳು “ನನ್ನ ಪ್ರಶ್ನೆಗೆ ನೀನೇಕೆ ಉತ್ತರ ನೀಡಲಿಲ್ಲ”? ಎಂದು ಕೇಳಿದರು. ಅದಕ್ಕುತ್ತರಿಸಿದ ಶಿಷ್ಯ ”ನಾನು ಬ್ರಿಟಿಷ್ ಸೈನ್ಯ ಸೇರಿ ಅವರಿಂದ ತರಬೇತಿ ಪಡೆದು ಭಾರತೀಯರ ಸೈನ್ಯವನ್ನು ಕಟ್ಟುತ್ತೇನೆ, ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ಕಟ್ಟುತ್ತೇನೆ” ಎಂದ!. ತಮ್ಮ ಗುರುಗಳಿಗೆ ನೀಡಿದ ಮಾತಿನಂತೆ ಈ ಮೂರು ಶಿಷ್ಯರು ನುಡಿದಂತೆ ನಡೆದರು. ಮೊದಲ ಶಿಷ್ಯ ಪ್ರಪುಲ್ಲ ಚಾಕಿ, ಎರಡನೇ ಶಿಷ್ಯ ಕನೈಲಾಲ್, ಹಾಗೂ ಮೂರನೆಯ ಶಿಷ್ಯನೇ ರಾಸ್ ಬಿಹಾರಿ ಬೋಸ್!

ರಾಸ್‌ ಬಿಹಾರಿ ಬೋಸ್‌

ಈ ಮೂರನೆ ಶಿಷ್ಯ1886 ಮೇ 25ರಂದು ಪಶ್ಚಿಮಬಂಗಾಳದ ಹೂಗ್ಲಿ ಜಿಲ್ಲೆಯ ಪಲರಾಬಿಘಾಟಿ ಎಂಬ ಹಳ್ಳಿಯಲ್ಲಿ ಬಿನೋದ್ ಬಿಹಾರಿ ಬೋಸ್ ಮತ್ತು ಭುವನೇಶ್ವರಿ ದಂಪತಿಗಳ ಮಗನಾಗಿ ಜನಿಸಿದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ಒಮ್ಮೆ ರಾಸ್ ಬಿಹಾರಿ ಬೋಸ್ ತಮ್ಮ ಸಹ ಕ್ರಾಂತಿಕಾರಿಗಳೊಂದಿಗೆ ಸಭೆ ಸೇರಿದ್ದ ಮನೆಯನ್ನು ಶಸ್ತ್ರಸಜ್ಜಿತ ಬ್ರಿಟಿಷ್ ಪೊಲೀಸ್ ಪಡೆ ಸುತ್ತುವರಿಯಿತು. ಕೆಲವು ಕ್ಷಣಗಳ ಹಿಂದೆ ಪ್ರಶಾಂತವಾಗಿದ್ದ ವಾತಾವರಣ ಒಮ್ಮೆಲೆ ಆತಂಕ ಗಾಬರಿಗಳಿಂದ ತುಂಬಿ ಹೋಯಿತು. ಕಾರಣ ಅವರು ಹಿಡಿಯ ಹೊರಟಿದ್ದು ಬ್ರಿಟಿಷರಿಗೆ ಸಿಂಹಸ್ವಪ್ನನಾದ ಕ್ರಾಂತಿಕಾರಿಯನ್ನು.

ಈ ಮಧ್ಯೆ ಮಲ ಹೊರುವವನೊಬ್ಬ ತಲೆಯ ಮೇಲೆ ಗೊಬ್ಬರದ ಮಂಕರಿಯನ್ನು ಹೊತ್ತು ಆ ಮನೆಯಿಂದ ಹೊರಬಂದ. ಪೊಲೀಸರು ಮೂಗು ಮುಚ್ಚಿಕೊಂಡು ಪಕ್ಕಕ್ಕೆ ಸರಿದರು. ನಂತರ ಪೊಲೀಸರು ಆ ಮನೆಯ ಕೋಣೆ ಕೋಣೆಗೂ ನುಗ್ಗಿ ಅಲ್ಲಿದ್ದವರನ್ನೆಲ್ಲಾ ಹೊರಗೆಳೆದು ತಂದರು. ಆದರೆ ಅವರಲ್ಲಿ ರಾಸ್ ಬಿಹಾರಿ ಇರಲಿಲ್ಲ. ನಂಬಿಗಸ್ತ ಮಾಹಿತಿದಾರ ರವಾನಿಸಿದ್ದ ಸುದ್ದಿ ತಪ್ಪಂದೆಣಿಸಿ ಪೊಲೀಸರು ಬರಿಗೈಯಲ್ಲಿ ಹಿಂತಿರುಗಿದರು. ಕೆಲವು ದಿನಗಳ ನಂತರ ಪೊಲೀಸರಿಗೆ ಸುದ್ದಿ ಮುಟ್ಟಿತು ಮಲಹೊರುವವನ ವೇಷಧರಿಸಿ ಹೊರಬಂದ ವ್ಯಕ್ತಿಯೇ ರಾಸ್ ಬಿಹಾರಿ ಬೋಸ್ ಎಂದು!

ತಮ್ಮ ಮಾತೃಭಾಷೆ ಬಂಗಾಳಿಯೊಂದಿಗೆ ಹಿಂದಿ, ಪಂಜಾಬಿ, ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳ ಮೇಲೆ ರಾಸ್ ಬಿಹಾರಿಯವರು ಸಾಧಿಸಿದ್ದ ಹಿಡಿತ ಪೊಲೀಸರಿಂದ ತಪ್ಪಿಸಿಕೊಳ್ಳಲು ನೆರವಾಗುತ್ತಿದ್ದವು. ಒಂದರ ಮೇಲೊಂದರಂತೆ ಕ್ರಾಂತಿಕಾರಿ ಚಟುವಟಿಕೆಯನ್ನು ಸಂಘಟಿಸಿ ಕಾರ್ಯರೂಪಕ್ಕೆ ತರುತ್ತಿದ್ದ ರಾಸ್ ಬಿಹಾರಿಯವರು ಬ್ರಿಟಿಷರ ವಾಂಟೆಡ್ ಪಟ್ಟಿಯ ಬಹುಮುಖ್ಯ ಕ್ರಾಂತಿಕಾರಿಯಾಗಿದ್ದರು.

ಇದಕ್ಕಾಗಿಯೆ ಬ್ರಿಟಿಷರು ಅವರನ್ನು ಜೀವಂತವಾಗಿ ಅಥವಾ ಮೃತವಾಗಿಯಾದರು ಹಿಡಿಯಬೇಕೆಂದು ಅತ್ಯಂತ ಪ್ರಬಲವಾದ ಬಲೆಯನ್ನು ಹಣೆದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿಯುತ್ತಿದ್ದಂತೆಯೇ ಅವರ ಸ್ನೇಹಿತರು ರಾಸ್ ಬಿಹಾರಿಯವರನ್ನು ಭಾರತ ಬಿಟ್ಟುಹೋಗುವುದು ಕ್ಷೇಮವೆಂದು ಒತ್ತಾಯಿಸಿದರು. ಹಾಗಾಗಿ ಅವರು 1915 ಮೇ 12ರಂದು ದೇಶ ಬಿಟ್ಟು ಹೊರಟು ಹೋದರು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ದೇಶದ ಒಳಗಿದ್ದರೇನು ಹೊರಗಿದ್ದರೇನು ಹೋರಾಟ ಮಾತ್ರ ನಿರಂತರ! ಮೊದಲು ಸಿಂಗಾಪುರ ತಲುಪಿದ ರಾಸ್ ಬಿಹಾರಿಯವರು ಅಲ್ಲಿಂದ ಜಪಾನಿಗೆ ಪ್ರಯಾಣಿಸುತ್ತಾರೆ. ಜಪಾನಿನಲ್ಲೂ ಹಲವಾರು ಸಭೆಗಳನ್ನು ಸಂಘಟಿಸಿ ತಾಯ್ನಾಡನ್ನು ಸ್ವತಂತ್ರಗೊಳಿಸುವ ಕಾಯಕದಲ್ಲಿ ನಿರತರಾಗುತ್ತಾರೆ. ಇವರು ಬ್ರಿಟಿಷರಿಂದ ತಲೆಮರೆಸಿಕೊಂಡು ಬಂದಿರುವ ಕ್ರಾಂತಿಕಾರಿಯೆಂದು ತಿಳಿಯುತ್ತಿದ್ದಂತೆ ಜಪಾನಿನ ಸರ್ಕಾರವು ಇವರನ್ನು ಜಪಾನ್ ಬಿಟ್ಟು ತೊಲಗುವಂತೆ ಬಹಿಷ್ಕಾರ ಆದೇಶವನ್ನು ಹೊರಡಿಸುತ್ತದೆ. ಆಗ ಅಲ್ಲಿನ  ಟೊಯಮ ಎಂಬ ರಾಜಕಾರಣಿಯೊಬ್ಬರು ಅವರ ಸ್ನೇಹಿತ ಅಯ್ಜೊಸೊಮ ಎಂಬುವರ ಮನೆಯಲ್ಲಿ ರಾಸ್ ಬಿಹಾರಿಯವರಿಗೆ  ಆಶ್ರಯ ಒದಗಿಸುತ್ತಾರೆ.

ತದನಂತರ ಕೇವಲ ನಾಲ್ಕು ತಿಂಗಳಲ್ಲಿ ಜಪಾನಿ ಭಾಷೆಯನ್ನು ಕಲಿತು ಅಯ್ಜೊಸೊಮ  ಅವರ ಪುತ್ರಿ ಟೊಶಿಕೊ ಅವರನ್ನು ವರಿಸುತ್ತಾರೆ. ಅವರಿಗೆ ಇಬ್ಬರು ಮಕ್ಕಳು ಜನಿಸುತ್ತಾರೆ. ಮುಂದಿನ ಕೆಲವೇ ವರ್ಷಗಳಲ್ಲಿ ಅವರ ಪತ್ನಿ ಮೃತರಾಗುತ್ತಾರೆ. ಆ ನೋವೂ ಅವರನ್ನು ತಮ್ಮ ಗುರಿಯಿಂದ  ಎಳ್ಳಷ್ಟೂ ವಿಚಲಿತಗೊಳಿಸಲಿಲ್ಲ.

1942ರ  ಸೆಪ್ಟೆಂಬರ್‌‌ನಲ್ಲಿ ಐತಿಹಾಸಿಕ ಇಂಡಿಯನ್ ನ್ಯಾಷನಲ್ ಆರ್ಮಿ(INA)ಯನ್ನು ಅಧಿಕೃತವಾಗಿ ಸ್ಥಾಪಿಸಿದ ರಾಸ್ ಬಿಹಾರಿ ಬೋಸ್‌‌ರು ನೇತಾಜಿ ಸುಭಾಷ್ಚಂದ್ರ ಬೋಸ್‌ರವರನ್ನು ಪೂರ್ವ ಏಷ್ಯಾಕ್ಕೆ ಬಂದು INA ಯ ನೇತೃತ್ವ ವಹಿಸಬೇಕೆಂದು ಆಮಂತ್ರಿಸಿದರು. ನೇತಾಜಿಯವರು ಹರ್ಷದಿಂದ ಇದನ್ನು ಸ್ವೀಕರಿಸಿದರು.

1943 ಜುಲೈ 4 ರಂದು ಸಿಂಗಾಪುರದಲ್ಲಿ ನಡೆದ ಐತಿಹಾಸಿಕ ಅಧಿವೇಶನದಲ್ಲಿ ರಾಸ್ ಬಿಹಾರಿ ಬೋಸ್ ಮತ್ತು  ಸುಭಾಷ್ ಚಂದ್ರ ಬೋಸರು ಅಕ್ಕ ಪಕ್ಕದಲ್ಲಿ ನಿಂತು ನೆರೆದಿದ್ದ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದರು. ರಾಸ್ ಬಿಹಾರಿಯವರು “ಸ್ನೇಹಿತರೆ ಮತ್ತು ಸಹಯೋಧ ಕಾಮ್ರೇಡರೆ, ಇಂದು ನಾನು ನಿಮ್ಮೆಲ್ಲರ  ಉಪಸ್ಥಿತಿಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ ಮತ್ತು  ಸುಭಾಷ್ಚಂದ್ರ ಬೋಸ್‌ರನ್ನು ಪೂರ್ವ ಏಷ್ಯಾದಲ್ಲಿ  ಇಂಡಿಯನ್ ಇಂಡಿಪೆಂಡೆನ್ಸ್‌ ಲೀಗ್‌ನ ಅಧ್ಯಕ್ಷರಾಗಿ ನೇಮಿಸುತ್ತಿದ್ದೇನೆ” ಎಂದು ಘೋಷಿಸಿಸುತ್ತಾರೆ. ನೇತಾಜಿಯವರು ಆ ದೊಡ್ಡ ಜವಾಬ್ದಾರಿಯನ್ನು ಎಲ್ಲ ಗೌರವಾದರಗಳಿಂದ, ನಮ್ರತೆಯಿಂದ ಸ್ವೀಕರಿಸುತ್ತಾರೆ.

ಸಕ್ಕರೆ ಕಾಯಿಲೆ ಮತ್ತಿತರ ತೊಂದರೆಗಳಿಂದಾಗಿ ಹಾಸಿಗೆ ಹಿಡಿದಿದ್ದ ರಾಸ್ ಬಿಹಾರಿಯವರು 1945 ಜನವರಿ 21ರಂದು ಕೊನೆಯುಸಿರೆಳೆದರು.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ರಾಸ್ ಬಿಹಾರಿಯವರ ದೇಹಕ್ಕೆ ಹೂಗುಚ್ಚವಿರಿಸಿ ಅತಿ ಭಾವುಕತೆಯಿಂದ ನೇತಾಜಿಯವರು ಹೀಗೆಂದಿದ್ದರು, “ಭಾರತದಲ್ಲಿ ರಾಸ್ ಬಿಹಾರಿಯವರು ಬ್ರಿಟಿಷರ ವಿರುದ್ಧ ಎಸಗುತ್ತಿದ್ದ ಸಾಹಸಮಯ ಕೃತ್ಯಗಳನ್ನು ಕೇಳಿ ನಾ ಪುಳಕಿತಗೊಳ್ಳುತ್ತಿದ್ದೆ. ಈಗ ಮೂವತ್ತು ವರ್ಷಗಳ ನಂತರ ಪೂರ್ವ ಏಷ್ಯಾದಲ್ಲಿ ಅವರ ನಿಕಟ  ಸಂಪರ್ಕಕ್ಕೆ ಬಂದಾಗ ಅವರ ಅದಮ್ಯ ಉತ್ಸಾಹ ಮತ್ತು ಅಪಾರ ಆಶಾವಾದದಿಂದ ನಾನು ಪ್ರಭಾವಿತನಾದೆ. ಅವರ ಇಳಿ ವಯಸ್ಸಾಗಲಿ ಅಥವಾ ಅನಾರೋಗ್ಯವಾಗಲಿ ಅವರ ಹೋರಾಟದ ಕೆಚ್ಚನ್ನು ಕುಗ್ಗಿಸಲಿಲ್ಲ!”

ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಕ್ರಾಂತಿಕಾರಿಗಳಲ್ಲಿ ಭಾರತದ ಒಳಗಾಗಲಿ, ಭಾರತದ ಹೊರಗಾಗಲಿ, ಬ್ರಿಟಿಷ್ ಸಾಮ್ರಾಜ್ಯದ ದಕ್ಷ ಪೊಲೀಸ್ ಪಡೆಗೆ ಸೆರೆಯಳಾಗದೆ ಒಂದು ದಿನವೂ ಲಾಕಪ್‌ನಲ್ಲಿ ಕಳೆಯದೆ ಕಾರ್ಯನಿರ್ವಹಿಸಿದ ಅದ್ವಿತೀಯ ಹೆಗ್ಗಳಿಕೆ ರಾಸ್ ಬಿಹಾರಿಯವರಿಗೆ ಸಲ್ಲುತ್ತದೆ. ಸಚೀಂದ್ರನಾಥ್ ಸನ್ಯಾಲ್, ಕರ್ತಾರ್ ಸಿಂಗ್ ಸರಬ, ವಿಷ್ಣುಗಣೇಶ್ ಪಿಂಗ್ಲೆ,  ಅಮೀರ್ ಚಾಂದ್, ವಿನಾಯಕ್ ರಾವ್ ಕಾಪ್ಲೆ, ಅಬಾದ್ ಬಿಹಾರಿ, ಬಲ್ಮೊಕಂಡ್, ಬಸಂತ್ ಕುಮಾರ್ ಬಿಶ್ವಾಸ್, ಕುನ್ವರ್ ಪ್ರತಾಪ್ ಸಿಂಗ್ ಹೀಗೆ ರಾಸ್ ಬಿಹಾರಿಯವರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಿಳಿದವರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ನಯವಂಚನೆ, ಶೋಷಣೆಗೊಳಗಾದ ಜನರ ಬಗ್ಗೆ ಅವರಿಗಿದ್ದ ಪ್ರೀತಿ-ಅನುಕಂಪ ಹಾಗೂ ಆಳುವ ವರ್ಗ ನಡೆಸುವ ಅನ್ಯಾಯ-ಅಕ್ರಮಗಳ ವಿರುದ್ಧ ಅವರಿಗಿದ್ದ ಆಕ್ರೋಶ, ಅಸಹನೆಗಳು ಅವರಲ್ಲಿ ಆ ಅಪ್ರತಿಮ ಕೆಚ್ಚನ್ನು ಎದೆಗಾರಿಕೆಯನ್ನೂ ಬೆಳೆಸಿತ್ತು.  ಪರಕೀಯರ ಆಳ್ವಿಕೆ ಕಾಲದಲ್ಲಿ ರಾಜಿರಹಿತವಾಗಿ ಅಂದಿನ ಕ್ರಾಂತಿಕಾರಿಗಳು ಹೋರಾಡಿದಂತೆ ಇಂದಿನ ಸಮಾಜದಲ್ಲಿರುವ ಸಮಸ್ಯೆಗಳ ವಿರುದ್ಧ ಜಾತಿ, ಧರ್ಮ, ಪ್ರಾದೇಶಿಕತೆಯ ಭೇದಕ್ಕೊಳಗಾದೇ ಯುವಕರು ಸಂಘಟಿತರಾಗಿ ಹೋರಾಡುವುದೇ ನಾವು ರಾಸ್ ಬಿಹಾರಿ ಬೋಸ್ ರವರಿಗೆ  ಸಲ್ಲಿಸಬಹುದಾದ ನೈಜ ಗೌರವ!

ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...