Homeರಾಷ್ಟ್ರೀಯ‘500 KG ಗಾಂಜಾ ಇಲಿ ತಿಂದಿದೆ!’: ಕೋರ್ಟ್‌ನಲ್ಲಿ ವಿಚಿತ್ರ ಹೇಳಿಕೆ ನೀಡಿದ ಯುಪಿ ಪೊಲೀಸರು

‘500 KG ಗಾಂಜಾ ಇಲಿ ತಿಂದಿದೆ!’: ಕೋರ್ಟ್‌ನಲ್ಲಿ ವಿಚಿತ್ರ ಹೇಳಿಕೆ ನೀಡಿದ ಯುಪಿ ಪೊಲೀಸರು

- Advertisement -
- Advertisement -

ಶೇರ್‌ಗಡ್‌ ಮತ್ತು ಹೈವೇ ಪೊಲೀಸ್ ಠಾಣೆಯ ಗೋದಾಮುಗಳಲ್ಲಿ ವಶಕ್ಕೆ ಪಡೆದು ಇರಿಸಿದ್ದ 500 ಕೆಜಿಗೂ ಹೆಚ್ಚು ಗಾಂಜಾವನ್ನು ಇಲಿಗಳು ತಿಂದಿವೆ ಎಂದು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್-1985 (ಎನ್‌ಡಿಪಿಎಸ್) ಅಡಿಯಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಉತ್ತರ ಪ್ರದೇಶದ ಮಥುರಾ ಪೊಲೀಸರು ವರದಿ ಸಲ್ಲಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಿಸಲಾದ ಪ್ರಕರಣದಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಒದಗಿಸುವಂತೆ ಮಥುರಾ ಪೊಲೀಸರಿಗೆ ನ್ಯಾಯಾಲಯ ಆದೇಶಿಸಿತ್ತು. ಈ ವೇಳೆ ಪೊಲೀಸರು ನ್ಯಾಯಾಲಯದಲ್ಲಿ ವಿಚಿತ್ರವಾದ ಪ್ರತಿಪಾದನೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಥುರಾ ಪೊಲೀಸರು ನ್ಯಾಯಾಲಯಕ್ಕೆ ನೀಡಿದ ಸ್ಪಷ್ಟನೆಯಲ್ಲಿ, “ಇಲಿಗಳು ಗಾತ್ರದಲ್ಲಿ ಸಣ್ಣದಾಗಿದ್ದರೂ, ಅವುಗಳಿಗೆ ಪೊಲೀಸರ ಭಯ ಇಲ್ಲ. ಠಾಣೆಯ ಪೊಲೀಸರಿಗೆ ಈ ಸಮಸ್ಯೆ ಪರಿಹರಿಸುವಲ್ಲಿ ಪರಿಣಿತರಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಗಾಯಗೊಂಡು ಆಸ್ಪತ್ರೆಯ ನೆಲದಲ್ಲಿ ಬಿದ್ದಿರುವ ರೋಗಿ; ಚೆಲ್ಲಿರುವ ರಕ್ತವನ್ನು ನೆಕ್ಕುತ್ತಿರುವ ನಾಯಿ’ – ಉತ್ತರ ಪ್ರದೇಶ!

“ಸಂಗ್ರಹಿಸಿದ ವಸ್ತುಗಳನ್ನು ಇಲಿಗಳಿಂದ ರಕ್ಷಿಸಲು ಪೊಲೀಸ್ ಠಾಣೆಯಲ್ಲಿ ಯಾವುದೇ ಸ್ಥಳವಿಲ್ಲ” ಎಂದು ಪ್ರಾಸಿಕ್ಯೂಟರ್‌ಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಶೇಖರಣಾ ಪ್ರದೇಶಗಳಲ್ಲಿ ಇರಿಸಲಾಗಿರುವ ವಸ್ತುಗಳನ್ನು ರಕ್ಷಿಸಲು ಪೊಲೀಸರು ಸಾಧ್ಯವಿಲ್ಲ ಎಂದು ಕಂಡುಕೊಂಡಿದ್ದಾರೆ. ದಾವೆಗೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ಒದಗಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಆದೇಶಿಸಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 26 ಎಂದು ನಿಗದಿಪಡಿಸಿದೆ ” ಎಂದು ವಿಶೇಷ ಪ್ರಾಸಿಕ್ಯೂಟರ್ ರಣವೀರ್ ಸಿಂಗ್ ಹೇಳಿದ್ದಾರೆ.

ಮೇ ತಿಂಗಳ ವೇಳೆ ಮಥುರಾದಲ್ಲಿ ಟ್ರಕ್‌ ಮೂಲಕ ಕಳ್ಳಸಾಗಣೆ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿತ್ತು. ಆರೋಪಿಗಳು ರಾಗಿ ಮೂಟೆಗಳಲ್ಲಿ 386 ಕೆಜಿ ಗಾಂಜಾವನ್ನು ಬಚ್ಚಿಟ್ಟು ಸಾಗಿಸುತ್ತಿದ್ದರು. ಈ ಟ್ರಕ್ ಅನ್ನು ಶೇರ್ಗಢ್ ಪ್ರದೇಶದ ಜಟ್ವಾರಿ ಗ್ರಾಮದಲ್ಲಿ ಪೊಲೀಸರು ತಡೆದ್ದು,  ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ವಶಪಡಿಸಿಕೊಂಡ ಗಾಂಜಾವನ್ನು ಒಪ್ಪಿಸುವಂತೆ ನ್ಯಾಯಾಲಯವು ಪೊಲೀಸರಿಗೆ ತಿಳಿಸಿತ್ತು. ಈ ವೇಳೆ ಶೇರ್‌‌ಗಡ್‌ ಪೊಲೀಸರು ಗಾಂಜಾವನ್ನು ಇಲಿಗಳು ತಿಂದಿವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...