Homeಮುಖಪುಟವೈಚಾರಿಕ ಶಿಕ್ಷಣ ಮಾನವತೆಗೆ ದಾರಿ ದೀವಿಗೆ: ಹ.ಮಾ.ರಾಮಚಂದ್ರ

ವೈಚಾರಿಕ ಶಿಕ್ಷಣ ಮಾನವತೆಗೆ ದಾರಿ ದೀವಿಗೆ: ಹ.ಮಾ.ರಾಮಚಂದ್ರ

- Advertisement -
- Advertisement -

ಸಂವಿಧಾನದ ಪ್ರಸ್ತಾವನೆಯಲ್ಲಿ ಸ್ಪಷ್ಟಪಡಿಸಿರುವಂತೆ ನಮ್ಮದು ಸರ್ವಸ್ವತಂತ್ರ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯ. ನಾವು ಈಗಾಗಲೇ ಅಂತಹ ಜಾತ್ಯಾತೀತ ಗಣರಾಜ್ಯ ಸ್ಥಾಪಿಸಿದ್ದೇವೆ ಎಂದಲ್ಲ, ಸ್ಥಾಪಿಸಬೇಕಿದೆ ಎಂದು ಅದರ ಅರ್ಥ. ಅದೊಂದು ಆದರ್ಶ, ಅಂತಹ ಆದರ್ಶ ಸ್ಥಾಪನೆಯ ಪ್ರಕ್ರಿಯೆಗೆ ಮುಂದಿನ ಜನಾಂಗವನ್ನು ಸಿದ್ಧಪಡಿಸುವಲ್ಲಿ ಶಿಕ್ಷಣ ಮಹತ್ತರ ಪಾತ್ರವನ್ನು ವಹಿಸಬೇಕಾಗಿದೆ.

ಆದರೆ ನಾವು ಪಡೆದ ಇದುವರೆಗಿನ ಎಲ್ಲಾ ರೀತಿಯ (ಔಪಚಾರಿಕ -ಅನೌಪಚಾರಿಕ) ಶಿಕ್ಷಣದಲ್ಲಿಯೂ ದೇವರು, ಧರ್ಮ, ಪುನರ್ಜನ್ಮ, ಕರ್ಮಸಿದ್ದಾಂತ, ಅದೃಷ್ಟ, ಸ್ವರ್ಗ-ನರಕಗಳ ಮೌಢ್ಯಗಳ ಒಳನುಸುಳುವಿಕೆಯಿಂದ ಮೌಢ್ಯಗಳ ಮನಸ್ಥಿತಿಯನ್ನು ಸೃಷ್ಟಿಸಿದೆ. ಇದು ಸಾಮಾಜಿಕ ಪೂರ್ವಾಗ್ರಹಗಳನ್ನು ಕಲಿಸುತ್ತಿದ್ದು, ಸಾಮಾಜಿಕ ಪೂರ್ವಾಗ್ರಹಗಳಿಂದ ಬಿಡುಗಡೆಗೊಳಿಸುವಂತಹ, ಸಮಾನತೆಗಾಗಿ ಸಮಾನ ಶಿಕ್ಷಣ ಅನುಷ್ಟಾನದ ಬಗ್ಗೆ ಗಂಭೀರವಾಗಿ ಚಿಂತನ-ಮಂಥನ ನಡೆಯಬೇಕು.

ಶಬ್ದ ಮತ್ತು ಪ್ರಜ್ಞೆಗೆ ಇರುವ ಸಂಬಂಧ ಕಳೆದುಹೋದಾಗ ವೈಚಾರಿಕತೆ ಮತ್ತು ಚಿಂತನೆ ಕೇವಲ ಹತಾಶೆಯ ತತ್ವಜ್ಞಾನಗಳಾಗುತ್ತವೆ. ಬಹುಶಃ ಇಂದಿನ ಎಲ್ಲಾ ಚಿಂತನೆ ವೈಚಾರಿಕತೆಗಳು ಕೂಡ, ಬದುಕಿನ ವಾಸ್ತವ ಸ್ಥಿತಿಯಿಂದ ಸಂಬಂಧ ಕಳೆದುಕೊಳ್ಳುವುದಕ್ಕೆ ಇದೇ ಕಾರಣವಾಗಿದೆ.

ಶಬ್ಧ ಮತ್ತು ಪ್ರಜ್ಞೆಗೆ ಇರುವ ಸಂಬಂಧ ಎಂದರೆ ಏನು? ಇದನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು, ಸಂಪುಟ 3ರಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. “ಕ್ರಾಂತಿಯು ಎಲ್ಲಾ ತತ್ವಜ್ಞಾನಗಳ ಜನನಿ, ಅದು ಬೆಳಕನ್ನು ಬೀರುವ ಜ್ಯೋತಿ”, ಒಂದು ಬದಲಾವಣೆಯು ಅತ್ಯಮೂಲ್ಯವಾದ ತತ್ವಜ್ಞಾನವನ್ನು ಸೃಷ್ಟಿಸುತ್ತದೆಯೇ ವಿನಃ ತತ್ವಜ್ಞಾನ ಇಟ್ಟುಕೊಂಡು ಬದಲಾವಣೆಗೆ ಕಾಯವುದು, ಪರಿವರ್ತನೆಯನ್ನು ಮುಂದೂಡುತ್ತಲೇ ಇರುತ್ತದೆ.

ಆದ್ದರಿಂದ ಇಲ್ಲಿಯವರೆಗಿನ ಎಲ್ಲಾ ಚಿಂತನೆ ಮತ್ತು ವೈಚಾರಿಕತೆಯನ್ನು ಬದಿಗಿರಿಸಿ, ನಾವು ಯಾವ ವಿಚಾರದಲ್ಲಿ ಬದಲಾಗಬೇಕೆಂಬುದನ್ನು ಗುರುತಿಸಿಕೊಳ್ಳದಿದ್ದರೆ ಎಲ್ಲಾರೂ ಬೋಧಗುರುಗಳಾಗುತ್ತವೆ.

ಇದಕ್ಕೆ ಸಂತ ಕೈವಾರ ನಾರಾಯಣತಾತ ಒಂದೆಡೆ,

“ಬೋದೆ ಗುರುಗಳ ಮಾತು,
ಬದುಕು ಚಪಲವಾಯಿತು
ಇದ್ದ ಮತಿ ನೆಗೆದೋಯಿತು
ಪಾಮರನಾದೆ” ಎಂದೆನ್ನುತ್ತಾರೆ.

ನೈಜ ಬದುಕಿನ ವಸ್ತುಸ್ಥಿತಿ ಮತ್ತು ಅದರ ಸಂಕೀರ್ಣಗಳು ಪ್ರತಿಕ್ರಿಯೆಯಲ್ಲಿರುತ್ತವೆಯೇ ವಿನಃ ಪರಿವರ್ತನೆಯಾಗಲು ಬಳಕೆಯಾಗಿದ್ದು ತೀರ ಕಡಿಮೆಯೆನ್ನಬಹುದು. ಅಂಬೇಡ್ಕರ್ ಚಿಂತನೆಯನ್ನು ಸವಕಲು ಮಾತಿನಲ್ಲಿ ಮಂಡಿಸುವವರು ಅದರ ಮಹತ್ವವನ್ನು ಕಡಿಮೆಯಾಗಿಸುತ್ತಿರುತ್ತಾರೆ. ದಲಿತ ಮೂಲಭೂತವಾದ ಕೂಡ ಅಂಬೇಡ್ಕರ್ ವಿಚಾರಗಳನ್ನು ಅವುಗಳ ಪರಿಣಾಮವನ್ನು ಮಂಕಾಗಿಸುತ್ತಿರುತ್ತದೆ. ಯಥಾವತ್ತಾಗಿ ಅನುಷ್ಠಾನಗೊಳ್ಳದ ಸಂವಿಧಾನ ಲಿಖಿತರೂಪದಲ್ಲಿ ಜಾರಿಯಲ್ಲಿದೆಯೆಂದು ಹೇಳುವ ನಮಗೆ ಮನುಧರ್ಮಶಾಸ್ತ್ರದ ಗುಲಾಮ ಮನಸ್ಸಿನ ಗುಣಗಳು, ಮನ-ಮನೆಯಲ್ಲಿ ನಿರಂತರವಾಗಿ ಮುಂದುವರೆದಿರುವುದು ಸೋಜಿಗದ ಸಂಗತಿಯೇ ಸರಿ.

ಹೇಗೆಂದರೆ… ’ನಾವು ಬಾಗಿಲು ಕಿಟಕಿಗಳಲ್ಲಿ ಗೂಡುಕಟ್ಟುವ ಒಂದು ಬಗೆಯ ’ಕಣಜ’ದ ಕೀಟವನ್ನು ಎಲ್ಲರೂ ನೋಡಿರುತ್ತೀರಿ. ಕೀಟ ಮಣ್ಣಿನಿಂದ ಚಿಕ್ಕಗೂಡನ್ನು ಕಟ್ಟಿ ಅದರೊಳಗೆ ಮೊಟ್ಟೆಗಳನ್ನಿಟ್ಟು, ಅವು ಮರಿಗಳಾಗಿ ಬೆಳವಣಿಗೆಯಾಗುವವರೆಗೆ, ಮರಿಗಳಿಗೆ ಬೇಕಾಗುವಷ್ಟು ಆಹಾರವನ್ನು ಶೇಖರಿಸಿ ಮಣ್ಣಿನ ಬಾಗಿಲನ್ನು ಮುಚ್ಚಿಹೊರಟುಹೋಗುತ್ತದೆ. ಆ ಕೀಟವು ತನ್ನ ಕೋಟೆಯ ಹತ್ತಿರ ಎಂದಿಗೂ ಬರಲು ಸಾಧ್ಯವೇ ಇಲ್ಲ. ಏಕೆಂದರೆ ಅದರ ಜೀವಿತಾವಧಿ ಕೊನೆಯಾಗಿರುತ್ತದೆ. ಗೂಡಿನೊಳಗಿರುವ ಮೊಟ್ಟೆಗಳು ಒಡೆದು ಮರಿಗಳಾಗಿ ಅಮ್ಮನು ಕೂಡಿಟ್ಟ ಆಹಾರವನ್ನು ತಿಂದು ಬೆಳೆದು ಲಾರ್ವ ಹಂತ ಮುಟ್ಟಿ, ರೆಕ್ಕೆಪುಕ್ಕ ಬಂದು ಕಣಜ ಕೀಟಗಳಾಗಿ ಪರಿವರ್ತಿತವಾಗಿ ಕೋಟೆಯ ಬಾಗಿಲನ್ನು ಸೀಳಿಕೊಂಡು ಹೊಸ ಜಗತ್ತಿಗೆ ಬಂದ ಕೂಡಲೆ ಅವು ಎಂದೂ ನೋಡಿರದ ಬದುಕಿನ ವಿಧಾನಗಳಲ್ಲಿ ಅಮ್ಮನನ್ನು ಅನುಕರಿಸುತ್ತವೆ!’

ಇದು ಹೇಗೆ ಸಾಧ್ಯ?
ಇದರ ಶಾಲೆ ಯಾವುದು?
ವಂಶದಿಂದ ವಂಶಕ್ಕೆ ಹರಿದು ಬರುತ್ತಿರುವ ತಿಳಿವಿನ ರೀತಿ-ನೀತಿಯಾದರು ಎಂತಹುದು ?

ಅಂಬೇಡ್ಕರ್ ಮನುಧರ್ಮಶಾಸ್ತ್ರವನ್ನು ಭೌತಿಕವಾಗಿ ಸುಟ್ಟರೂ ಅದರ ಸಾರ ಅಳಿಯದೆ ಮಾನಸಿಕವಾಗಿ ಉಳಿದು ನಡವಳಿಕೆಯಲ್ಲಿ ಜೀವಂತಿಕೆಯಾಗಿರಲು ಸಾಧ್ಯವಾಗಿದ್ದಾದರೂ ಹೇಗೆ?

ಅಂಬೇಡ್ಕರ್‌ವಾದವೆಂದರೆ ಕೇವಲ ಒಬ್ಬ ವ್ಯಕ್ತಿಯ ವಾದವಲ್ಲ, ಅದು ಬುದ್ಧ ಬಸವಾದಿಯಾಗಿ ಎಲ್ಲ ಸಂತ, ಶರಣ, ದಾಸರ ಸಾಮಾಜಿಕ ಪರಿವರ್ತನೆಕಾರರ ಸಿದ್ಧಾಂತವಾಗಿದೆ.

ಇಂದು ಅಂಬೇಡ್ಕರ್ ದಲಿತರಿಗೆ ಹುಚ್ಚು ಕುರುಡು ಪ್ರೀತಿಯಾಗಿದ್ದಾರೆಯೇ ವಿನಃ ಒಬ್ಬ ತತ್ವಜ್ಞಾನಿಯಾಗಿ, ಸೈದ್ಧಾಂತಿಕವಾದಿಯಾಗಿ ದಲಿತ ಸಮಾಜದ ವಿಮೋಚಕನಾಗಿ ಕಂಡಿಲ್ಲ. ಅಂಬೇಡ್ಕರ್ ಮೂರ್ತಿಗಳನ್ನು ಭಗ್ನಗೊಳಿಸಿದಾಗ, ಅವರನ್ನು ಯಾರಾದರೂ ಬೈದಾಗ ಮಾತ್ರ ದಲಿತರು ಸಿಡಿದು ಸಿಟ್ಟಾಗಿ ಭಾವುಕರಾಗುತ್ತಾರೆ. ಈ ಎಚ್ಚರ ಭಾವುಕತೆಯ ಪರಿಧಿ ಮೀರಿ ತಾತ್ವಿಕ ನೆಲೆಗಟ್ಟಿನಲ್ಲಿ ದಲಿತರ ಎದೆ-ಎದೆಗೆ ತಲುಪಬೇಕಿದೆ. ಬಾಬಾಸಾಹೇಬರನ್ನು ವಿಗ್ರಹ-ಅನುಗ್ರಹ ರೂಪಗಳಲ್ಲಿ, ಆವೇಶಭರಿತ (Emotional) ಸಂಭ್ರಮಗಳ ರೂಪದಲ್ಲಿಯೂ ಚಿಂತಿಸುವುದು ಒಂದು ಅಮಲಿನಂತೆ ಸರಿ. ಏಕೆಂದರೆ ಬಾಬಾಸಾಹೇಬ ಅವುಗಳಲ್ಲಿ ಇಲ್ಲ.

ನಾವು ಮಾಡುವ ಯಾವುದೇ ಕಾರ್ಯ-ಕಾರಣ-ಪರಿಣಾಮಗಳನ್ನು ವಿವೇಕಶೀಲರಾಗಿ ನೋಡುವ ಕಿಂಚಿತ್ತು ವ್ಯವಧಾನ ಇಲ್ಲದಾಗಿದ್ದು ಇಂದ್ರಿಯಗಳ ಪ್ರಲೋಭನೆಗೆ ಒಳಗಾಗಿ ಸುಖಸಂತೋಷ ತೃಪ್ತಿಗಳೆಂಬ ಇಲ್ಲದ ಭ್ರಮೆಗಳ ದಾಸರಾಗಿ ನಿಸರ್ಗಸಹಜ ಬದುಕು ಇಲ್ಲದಾಗಿದೆ.

ಎಸ್.ಕೆ.ಥೋರಟ್ ಎಂಬ ಸಮಾಜಶಾಸ್ತ್ರಜ್ಞರು ಅಭಿಪ್ರಾಯಪಡುವಂತೆ ‘Birth is nothing, environment is everything’. ಬೆಳೆಯುವ ಮಗುವಿನ ಮನಸ್ಸು, ಪೂರ್ಣಬದುಕನ್ನು ಪರಿಸರ ರೂಪಿಸುತ್ತದೆ ಎನ್ನುವ ಮಾತು ಸಾರ್ವಕಾಲಿಕ ಸತ್ಯ.

ಮನೆಯೆ ಮೊದಲ ಪಾಠಶಾಲೆ
ಜನನಿ ತಾನೆ ಮೊದಲ ಗುರುವು
ಜನನಿಯಿಂದ ಪಾಠ ಕಲಿತ
ಜನರು ಧನ್ಯರು!

ಸಾಮಾಜಿಕ ಪರಿಸರದಲ್ಲಿನ ತಮ್ಮ ಸಂಬಂಧಗಳನ್ನು ಗುರುತಿಸಿಕೊಳ್ಳಲು ಬಳಸುವ ಸಂಕೇತಗಳು, ಆಚರಣೆಗಳು, ಮೇಲು-ಕೀಳು, ಎಡ-ಬಲ, ಹೆಚ್ಚು-ಕಡಿಮೆ, ಸ್ಪೃಶ್ಯ-ಅಸ್ಪೃಶ್ಯ, ಸಹ್ಯ-ಅಸಹ್ಯ ಹೀಗೆ ಒಂದು ಬೇಧವು ಇಲ್ಲದ ಬೇಧಗಳನ್ನು ಉದ್ದೀಪಿಸಬಲ್ಲದಾಗಿರುತ್ತದೆ.

ಇದು ಮಗುವಿನ ಆಲೋಚನಾಕ್ರಮದ ಮೇಲೆ ಸೂಕ್ಷ್ಮ ಹಾಗೂ ಪರೋಕ್ಷ ಪರಿಣಾಮ ಬೀರುತ್ತಿರುತ್ತದೆ. ಶಿಕ್ಷಣವು ಮಗವಿನ ಸರ್ವತೋಮುಖ ಅಭಿವೃದ್ಧಿಯ ಪರಮೋಚ್ಛಗುರಿಯಾಗಿದ್ದು, ಶೋಷಣೆಯ ಅಸ್ತ್ರಗಳನ್ನು ಗುರುತಿಸಿಕೊಳ್ಳವ, ಧಾರ್ಮಿಕ ಅಚರಣೆಯ ಮುಖವಾಡಗಳನ್ನು ಕಳಚಿ ಗುಲಾಮತನದಿಂದ ವಿಮುಕ್ತಿ ಪಡೆಯುವಂತಿರಬೇಕು. ಶಿಕ್ಷಣತಜ್ಞ ಯಶಪಾಲ್‌ರ ಪ್ರತಿಪಾದನೆಯಂತೆ ’ಜೀವನ ಮೌಲ್ಯಗಳು ಕಲಿಕೆಯ ಭಾಗವಾಗಬೇಕು; ಜ್ಞಾನಾರ್ಜನೆ ಜೀವನದ ಭಾಗವಾಗಬೇಕು’. ಶಿಕ್ಷಣಕ್ಷೇತ್ರವು ವೈಜ್ಞಾನಿಕದೃಷ್ಟಿ ಮತ್ತು ನೈತಿಕ ನೆಲಗಟ್ಟಿನ ಮೇಲೆ ರೂಪಿಸಲ್ಪಟ್ಟಾಗ ವೈಚಾರಿಕತೆ ಮನೋಭಾವ ಬೆಳೆಯಲು ಸಾದ್ಯವಾಗುತ್ತದೆ.

ಮೇಲ್ಜಾತಿ ಮನಸ್ಸುಗಳು ನಮ್ಮನ್ನು ಹೊರಗಿಟ್ಟು ನೋಡುತ್ತಿರುವಂತೆ, ನಾವು ಅಂಬೇಡ್ಕರ್‌ರ ಆಶಯಗಳನ್ನು ಹೊರಗಿಟ್ಟಿದ್ದೇವೆ. ಇದು ಕೇವಲ ಮೂರ್ತಿಪೂಜೆ, ದಿನಾಚರಣೆಗಳಿಗೆ, ಚರ್ಚೆಗಳಿಗೆ ಸೀಮಿತವಾಗಿದೆ. ಹೀಗಾಗಿ ಬಾಬಾಸಾಹೇಬರು ಹೇಳುವ ಶಿಕ್ಷಣ-ಸಂಘಟನೆ-ಹೋರಾಟ-ಕ್ರಾಂತಿ ಇವೆಲ್ಲವೂ ಕೂಡ ಬುದ್ಧಿಮತ್ತೆಯಿಂದ ಕೆಳಗಿಳಿದು ನಡೆಗಳಲ್ಲಿ ಬರಬೇಕಿದೆ.

ಹ.ಮಾ.ರಾಮಚಂದ್ರ

ಹ.ಮಾ.ರಾಮಚಂದ್ರ

ಅವಿಭಜಿತ ಕೋಲಾರ ಜಿಲ್ಲೆಯ ದಲಿತ ಚಳವಳಿಯ ಹಿರಿಯ ನಾಯಕರಲ್ಲೊಬ್ಬರು. ಪ್ರಸ್ತುತ ಕೋಲಾರದ ಆದಿಮದ ಜವಾಬ್ದಾರಿಯನ್ನು ಹೊತ್ತಿದ್ದಾರೆ.


ಇದನ್ನೂ ಓದಿ: ನಾಯಕತ್ವದ ಪ್ರಶ್ನೆ; ಡಾ. ಬಾಬಾಸಾಹೇಬರು ತೋರಿದ ದಾರಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....