Homeಕರ್ನಾಟಕಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

ಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

“ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ?”

- Advertisement -
- Advertisement -

ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ? ಸಿಎಂ ಕಚೇರಿ ಬಸವರಾಜ ಬೊಮ್ಮಾಯಿಯವರ ಹಿಡಿತದಲ್ಲಿ ಇಲ್ಲವೇ? ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ?” ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಟ್ವೀಟ್‌ಗಳನ್ನು ಮಾಡುತ್ತಿರುವ ಕಾಂಗ್ರೆಸ್, “ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ ಬೊಮ್ಮಾಯಿಯವರೇ? ಇಲಿ ಕಚ್ಚಿಕೊಂಡು ಹೋಯಿತೇ? ಹೆಗ್ಗಣ ಹೊತ್ತುಕೊಂಡು ಹೋಯಿತೇ? ಗಾಳಿಯಲ್ಲಿ ಹಾರಿ ಹೋಯಿತೇ? ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ” ಎಂದು ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಐಎಎಸ್‌ನಂತಹ ಉನ್ನತ ಮಟ್ಟದ ಅಧಿಕಾರಿಗಳು ಬಾಗಿಯಾಗಿರುವಂತಹ ಚಿಲುಮೆ ಪ್ರಕರಣಕ್ಕೆ ಪೊಲೀಸ್ ತನಿಖೆ ಮಾತ್ರ ಸಾಕೇ ಬೊಮ್ಮಾಯಿಯವರೇ? ನ್ಯಾಯಾಂಗ ತನಿಖೆಗೆ ವಹಿಸಲು ಹಿಂದೇಟು ಹಾಕುತ್ತಿರುವುದೇಕೆ? ಚಿಲುಮೆ ಸಂಸ್ಥೆಯ ಹಣದ ಮೂಲ ಹುಡುಕಲು ಐಟಿ, ಇಡಿಗಳಿಗೆ ಇಷ್ಟವಿಲ್ಲವೇಕೆ? ಸಚಿವರ ಲೆಟರ್ ಹೆಡ್, ಚೆಕ್‌ಗಳ ಬಗ್ಗೆ ಮಾತಾಡುತ್ತಿಲ್ಲವೇಕೆ?” ಎಂದು ಕೇಳಿದೆ.

“ಹಗರಣಗಳ ಬಗ್ಗೆ ಬಿಜೆಪಿ ವರಸೆಗಳು ಹೀಗಿರುತ್ತದೆ. ಮೊದಲು – ಅಕ್ರಮವೇ ನಡೆದಿಲ್ಲ ಎಂದು ನಿರಾಕರಿಸುವುದು, ಹಗರಣ ಹೊರಬಂದ ನಂತರ – ಸಣ್ಣ ಲೋಪ ಎಂಬಂತೆ ಮಾತಾಡುವುದು, ಹಗರಣದ ತೀವ್ರತೆ ಹೊರಬಂದಾಗ – ಪ್ರಭಾವಿಗಳ ರಕ್ಷಣೆಗೆ ತಂತ್ರ ಹೂಡುವುದು. ಪಿಎಸ್‌ಐ ಅಕ್ರಮದಿಂದ ಹಿಡಿದು ಚಿಲುಮೆ ಹಗರಣದವರೆಗೂ ಬಿಜೆಪಿ ನಡೆದುಕೊಂಡ ರೀತಿ ಇದು” ಎಂದು ಮತ್ತೊಂದು ಟ್ವೀಟ್ ಮಾಡಿದೆ.

ಶಾಸಕರ ಕಳ್ಳತನ, ಕಮಿಷನ್ ಕಳ್ಳತನ, ಸರ್ಕಾರಿ ಹುದ್ದೆಗಳ ಕಳ್ಳತನ, ಮತದಾರರ ಮಾಹಿತಿ ಕಳ್ಳತನ- ಬಿಜೆಪಿಯ ಪ್ರಮುಖ ಕಳ್ಳತನಗಳು. ಬಿಜೆಪಿ ಒಮ್ಮೆಯೂ ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಳ್ಳ ಮಾರ್ಗದಲ್ಲಿ ಹೈಜಾಕ್ ಮಾಡಿ ಅಧಿಕಾರ ಹಿಡಿಯುವ ಬಿಜೆಪಿ ಬಗ್ಗೆ ಜನತೆ ಜಾಗ್ರತೆ ವಹಿಸಬೇಕು” ಎಂದು ಮನವಿ ಮಾಡಿದೆ.

“ಅಕ್ರಮ ನಡೆದೇ ಇಲ್ಲ ಎಂಬಂತೆ ಮಾತನಾಡುತ್ತಿದ್ದ ಬೊಮ್ಮಾಯಿಯವರೇ, ಮತದಾರರ ಮಾಹಿತಿ ಕಳ್ಳತನದ ಅಕ್ರಮದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತಾಗಿದ್ದು ಏಕೆ? ಸರ್ಕಾರದ ಹಸ್ತಕ್ಷೇಪ, ಬಿಜೆಪಿಯ ಹಿತಾಸಕ್ತಿ, ಮುಖ್ಯಮಂತ್ರಿಗಳ ಸಹಕಾರ ಇಲ್ಲದೆ ಐಎಎಸ್ ಮಟ್ಟದ ಅಧಿಕಾರಿಗಳು ಚಿಲುಮೆಗೆ ಸಹಕರಿಸಲು ಸಾಧ್ಯವೇ? ದಮ್ಮು ತಾಕತ್ತು ಇದ್ದರೆ ಉತ್ತರಿಸಿ” ಎಂದು ಸವಾಲು ಹಾಕಿದೆ.

ಈ ಕುರಿತು ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, “ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ! ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, “ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾನಿ ಮಾಡುತ್ತಿದೆ. ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಈ ಅಕ್ರಮ ಎಸಗಲಾಗಿದೆ. ಚುನಾವಣಾ ಆಯೋಗ ರಾಜ್ಯದ ಎಲ್ಲಾ ಮತದಾರರ ಪಟ್ಟಿಯನ್ನು ಮರುಪರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

“ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ, ಅಂಕಪಟ್ಟಿ ಅಕ್ರಮದಂತೆ ಈಗ ಮತಪಟ್ಟಿಯಲ್ಲೂ ಅಕ್ರಮ ಎಸಗಲು ಪ್ರಯತ್ನಿಸಿದ್ದಾರೆ. ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ರಾಜ್ಯವಾಗಿ ಪರಿವರ್ತನೆಯಾಗಿದೆ. ಈಗಲೇ ಜಾಗೃತರಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...