Homeಕರ್ನಾಟಕಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

ಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

“ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ?”

- Advertisement -
- Advertisement -

ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ? ಸಿಎಂ ಕಚೇರಿ ಬಸವರಾಜ ಬೊಮ್ಮಾಯಿಯವರ ಹಿಡಿತದಲ್ಲಿ ಇಲ್ಲವೇ? ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ?” ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಟ್ವೀಟ್‌ಗಳನ್ನು ಮಾಡುತ್ತಿರುವ ಕಾಂಗ್ರೆಸ್, “ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ ಬೊಮ್ಮಾಯಿಯವರೇ? ಇಲಿ ಕಚ್ಚಿಕೊಂಡು ಹೋಯಿತೇ? ಹೆಗ್ಗಣ ಹೊತ್ತುಕೊಂಡು ಹೋಯಿತೇ? ಗಾಳಿಯಲ್ಲಿ ಹಾರಿ ಹೋಯಿತೇ? ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ” ಎಂದು ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಐಎಎಸ್‌ನಂತಹ ಉನ್ನತ ಮಟ್ಟದ ಅಧಿಕಾರಿಗಳು ಬಾಗಿಯಾಗಿರುವಂತಹ ಚಿಲುಮೆ ಪ್ರಕರಣಕ್ಕೆ ಪೊಲೀಸ್ ತನಿಖೆ ಮಾತ್ರ ಸಾಕೇ ಬೊಮ್ಮಾಯಿಯವರೇ? ನ್ಯಾಯಾಂಗ ತನಿಖೆಗೆ ವಹಿಸಲು ಹಿಂದೇಟು ಹಾಕುತ್ತಿರುವುದೇಕೆ? ಚಿಲುಮೆ ಸಂಸ್ಥೆಯ ಹಣದ ಮೂಲ ಹುಡುಕಲು ಐಟಿ, ಇಡಿಗಳಿಗೆ ಇಷ್ಟವಿಲ್ಲವೇಕೆ? ಸಚಿವರ ಲೆಟರ್ ಹೆಡ್, ಚೆಕ್‌ಗಳ ಬಗ್ಗೆ ಮಾತಾಡುತ್ತಿಲ್ಲವೇಕೆ?” ಎಂದು ಕೇಳಿದೆ.

“ಹಗರಣಗಳ ಬಗ್ಗೆ ಬಿಜೆಪಿ ವರಸೆಗಳು ಹೀಗಿರುತ್ತದೆ. ಮೊದಲು – ಅಕ್ರಮವೇ ನಡೆದಿಲ್ಲ ಎಂದು ನಿರಾಕರಿಸುವುದು, ಹಗರಣ ಹೊರಬಂದ ನಂತರ – ಸಣ್ಣ ಲೋಪ ಎಂಬಂತೆ ಮಾತಾಡುವುದು, ಹಗರಣದ ತೀವ್ರತೆ ಹೊರಬಂದಾಗ – ಪ್ರಭಾವಿಗಳ ರಕ್ಷಣೆಗೆ ತಂತ್ರ ಹೂಡುವುದು. ಪಿಎಸ್‌ಐ ಅಕ್ರಮದಿಂದ ಹಿಡಿದು ಚಿಲುಮೆ ಹಗರಣದವರೆಗೂ ಬಿಜೆಪಿ ನಡೆದುಕೊಂಡ ರೀತಿ ಇದು” ಎಂದು ಮತ್ತೊಂದು ಟ್ವೀಟ್ ಮಾಡಿದೆ.

ಶಾಸಕರ ಕಳ್ಳತನ, ಕಮಿಷನ್ ಕಳ್ಳತನ, ಸರ್ಕಾರಿ ಹುದ್ದೆಗಳ ಕಳ್ಳತನ, ಮತದಾರರ ಮಾಹಿತಿ ಕಳ್ಳತನ- ಬಿಜೆಪಿಯ ಪ್ರಮುಖ ಕಳ್ಳತನಗಳು. ಬಿಜೆಪಿ ಒಮ್ಮೆಯೂ ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಳ್ಳ ಮಾರ್ಗದಲ್ಲಿ ಹೈಜಾಕ್ ಮಾಡಿ ಅಧಿಕಾರ ಹಿಡಿಯುವ ಬಿಜೆಪಿ ಬಗ್ಗೆ ಜನತೆ ಜಾಗ್ರತೆ ವಹಿಸಬೇಕು” ಎಂದು ಮನವಿ ಮಾಡಿದೆ.

“ಅಕ್ರಮ ನಡೆದೇ ಇಲ್ಲ ಎಂಬಂತೆ ಮಾತನಾಡುತ್ತಿದ್ದ ಬೊಮ್ಮಾಯಿಯವರೇ, ಮತದಾರರ ಮಾಹಿತಿ ಕಳ್ಳತನದ ಅಕ್ರಮದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತಾಗಿದ್ದು ಏಕೆ? ಸರ್ಕಾರದ ಹಸ್ತಕ್ಷೇಪ, ಬಿಜೆಪಿಯ ಹಿತಾಸಕ್ತಿ, ಮುಖ್ಯಮಂತ್ರಿಗಳ ಸಹಕಾರ ಇಲ್ಲದೆ ಐಎಎಸ್ ಮಟ್ಟದ ಅಧಿಕಾರಿಗಳು ಚಿಲುಮೆಗೆ ಸಹಕರಿಸಲು ಸಾಧ್ಯವೇ? ದಮ್ಮು ತಾಕತ್ತು ಇದ್ದರೆ ಉತ್ತರಿಸಿ” ಎಂದು ಸವಾಲು ಹಾಕಿದೆ.

ಈ ಕುರಿತು ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, “ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ! ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, “ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾನಿ ಮಾಡುತ್ತಿದೆ. ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಈ ಅಕ್ರಮ ಎಸಗಲಾಗಿದೆ. ಚುನಾವಣಾ ಆಯೋಗ ರಾಜ್ಯದ ಎಲ್ಲಾ ಮತದಾರರ ಪಟ್ಟಿಯನ್ನು ಮರುಪರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

“ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ, ಅಂಕಪಟ್ಟಿ ಅಕ್ರಮದಂತೆ ಈಗ ಮತಪಟ್ಟಿಯಲ್ಲೂ ಅಕ್ರಮ ಎಸಗಲು ಪ್ರಯತ್ನಿಸಿದ್ದಾರೆ. ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ರಾಜ್ಯವಾಗಿ ಪರಿವರ್ತನೆಯಾಗಿದೆ. ಈಗಲೇ ಜಾಗೃತರಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...