Homeಕರ್ನಾಟಕಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

ಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

“ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ?”

- Advertisement -
- Advertisement -

ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ? ಸಿಎಂ ಕಚೇರಿ ಬಸವರಾಜ ಬೊಮ್ಮಾಯಿಯವರ ಹಿಡಿತದಲ್ಲಿ ಇಲ್ಲವೇ? ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ?” ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಟ್ವೀಟ್‌ಗಳನ್ನು ಮಾಡುತ್ತಿರುವ ಕಾಂಗ್ರೆಸ್, “ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ ಬೊಮ್ಮಾಯಿಯವರೇ? ಇಲಿ ಕಚ್ಚಿಕೊಂಡು ಹೋಯಿತೇ? ಹೆಗ್ಗಣ ಹೊತ್ತುಕೊಂಡು ಹೋಯಿತೇ? ಗಾಳಿಯಲ್ಲಿ ಹಾರಿ ಹೋಯಿತೇ? ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ” ಎಂದು ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಐಎಎಸ್‌ನಂತಹ ಉನ್ನತ ಮಟ್ಟದ ಅಧಿಕಾರಿಗಳು ಬಾಗಿಯಾಗಿರುವಂತಹ ಚಿಲುಮೆ ಪ್ರಕರಣಕ್ಕೆ ಪೊಲೀಸ್ ತನಿಖೆ ಮಾತ್ರ ಸಾಕೇ ಬೊಮ್ಮಾಯಿಯವರೇ? ನ್ಯಾಯಾಂಗ ತನಿಖೆಗೆ ವಹಿಸಲು ಹಿಂದೇಟು ಹಾಕುತ್ತಿರುವುದೇಕೆ? ಚಿಲುಮೆ ಸಂಸ್ಥೆಯ ಹಣದ ಮೂಲ ಹುಡುಕಲು ಐಟಿ, ಇಡಿಗಳಿಗೆ ಇಷ್ಟವಿಲ್ಲವೇಕೆ? ಸಚಿವರ ಲೆಟರ್ ಹೆಡ್, ಚೆಕ್‌ಗಳ ಬಗ್ಗೆ ಮಾತಾಡುತ್ತಿಲ್ಲವೇಕೆ?” ಎಂದು ಕೇಳಿದೆ.

“ಹಗರಣಗಳ ಬಗ್ಗೆ ಬಿಜೆಪಿ ವರಸೆಗಳು ಹೀಗಿರುತ್ತದೆ. ಮೊದಲು – ಅಕ್ರಮವೇ ನಡೆದಿಲ್ಲ ಎಂದು ನಿರಾಕರಿಸುವುದು, ಹಗರಣ ಹೊರಬಂದ ನಂತರ – ಸಣ್ಣ ಲೋಪ ಎಂಬಂತೆ ಮಾತಾಡುವುದು, ಹಗರಣದ ತೀವ್ರತೆ ಹೊರಬಂದಾಗ – ಪ್ರಭಾವಿಗಳ ರಕ್ಷಣೆಗೆ ತಂತ್ರ ಹೂಡುವುದು. ಪಿಎಸ್‌ಐ ಅಕ್ರಮದಿಂದ ಹಿಡಿದು ಚಿಲುಮೆ ಹಗರಣದವರೆಗೂ ಬಿಜೆಪಿ ನಡೆದುಕೊಂಡ ರೀತಿ ಇದು” ಎಂದು ಮತ್ತೊಂದು ಟ್ವೀಟ್ ಮಾಡಿದೆ.

ಶಾಸಕರ ಕಳ್ಳತನ, ಕಮಿಷನ್ ಕಳ್ಳತನ, ಸರ್ಕಾರಿ ಹುದ್ದೆಗಳ ಕಳ್ಳತನ, ಮತದಾರರ ಮಾಹಿತಿ ಕಳ್ಳತನ- ಬಿಜೆಪಿಯ ಪ್ರಮುಖ ಕಳ್ಳತನಗಳು. ಬಿಜೆಪಿ ಒಮ್ಮೆಯೂ ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಳ್ಳ ಮಾರ್ಗದಲ್ಲಿ ಹೈಜಾಕ್ ಮಾಡಿ ಅಧಿಕಾರ ಹಿಡಿಯುವ ಬಿಜೆಪಿ ಬಗ್ಗೆ ಜನತೆ ಜಾಗ್ರತೆ ವಹಿಸಬೇಕು” ಎಂದು ಮನವಿ ಮಾಡಿದೆ.

“ಅಕ್ರಮ ನಡೆದೇ ಇಲ್ಲ ಎಂಬಂತೆ ಮಾತನಾಡುತ್ತಿದ್ದ ಬೊಮ್ಮಾಯಿಯವರೇ, ಮತದಾರರ ಮಾಹಿತಿ ಕಳ್ಳತನದ ಅಕ್ರಮದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತಾಗಿದ್ದು ಏಕೆ? ಸರ್ಕಾರದ ಹಸ್ತಕ್ಷೇಪ, ಬಿಜೆಪಿಯ ಹಿತಾಸಕ್ತಿ, ಮುಖ್ಯಮಂತ್ರಿಗಳ ಸಹಕಾರ ಇಲ್ಲದೆ ಐಎಎಸ್ ಮಟ್ಟದ ಅಧಿಕಾರಿಗಳು ಚಿಲುಮೆಗೆ ಸಹಕರಿಸಲು ಸಾಧ್ಯವೇ? ದಮ್ಮು ತಾಕತ್ತು ಇದ್ದರೆ ಉತ್ತರಿಸಿ” ಎಂದು ಸವಾಲು ಹಾಕಿದೆ.

ಈ ಕುರಿತು ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, “ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ! ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, “ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾನಿ ಮಾಡುತ್ತಿದೆ. ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಈ ಅಕ್ರಮ ಎಸಗಲಾಗಿದೆ. ಚುನಾವಣಾ ಆಯೋಗ ರಾಜ್ಯದ ಎಲ್ಲಾ ಮತದಾರರ ಪಟ್ಟಿಯನ್ನು ಮರುಪರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

“ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ, ಅಂಕಪಟ್ಟಿ ಅಕ್ರಮದಂತೆ ಈಗ ಮತಪಟ್ಟಿಯಲ್ಲೂ ಅಕ್ರಮ ಎಸಗಲು ಪ್ರಯತ್ನಿಸಿದ್ದಾರೆ. ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ರಾಜ್ಯವಾಗಿ ಪರಿವರ್ತನೆಯಾಗಿದೆ. ಈಗಲೇ ಜಾಗೃತರಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...