Homeಕರ್ನಾಟಕಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

ಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

“ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ?”

- Advertisement -
- Advertisement -

ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ? ಸಿಎಂ ಕಚೇರಿ ಬಸವರಾಜ ಬೊಮ್ಮಾಯಿಯವರ ಹಿಡಿತದಲ್ಲಿ ಇಲ್ಲವೇ? ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ?” ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಟ್ವೀಟ್‌ಗಳನ್ನು ಮಾಡುತ್ತಿರುವ ಕಾಂಗ್ರೆಸ್, “ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ ಬೊಮ್ಮಾಯಿಯವರೇ? ಇಲಿ ಕಚ್ಚಿಕೊಂಡು ಹೋಯಿತೇ? ಹೆಗ್ಗಣ ಹೊತ್ತುಕೊಂಡು ಹೋಯಿತೇ? ಗಾಳಿಯಲ್ಲಿ ಹಾರಿ ಹೋಯಿತೇ? ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ” ಎಂದು ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಐಎಎಸ್‌ನಂತಹ ಉನ್ನತ ಮಟ್ಟದ ಅಧಿಕಾರಿಗಳು ಬಾಗಿಯಾಗಿರುವಂತಹ ಚಿಲುಮೆ ಪ್ರಕರಣಕ್ಕೆ ಪೊಲೀಸ್ ತನಿಖೆ ಮಾತ್ರ ಸಾಕೇ ಬೊಮ್ಮಾಯಿಯವರೇ? ನ್ಯಾಯಾಂಗ ತನಿಖೆಗೆ ವಹಿಸಲು ಹಿಂದೇಟು ಹಾಕುತ್ತಿರುವುದೇಕೆ? ಚಿಲುಮೆ ಸಂಸ್ಥೆಯ ಹಣದ ಮೂಲ ಹುಡುಕಲು ಐಟಿ, ಇಡಿಗಳಿಗೆ ಇಷ್ಟವಿಲ್ಲವೇಕೆ? ಸಚಿವರ ಲೆಟರ್ ಹೆಡ್, ಚೆಕ್‌ಗಳ ಬಗ್ಗೆ ಮಾತಾಡುತ್ತಿಲ್ಲವೇಕೆ?” ಎಂದು ಕೇಳಿದೆ.

“ಹಗರಣಗಳ ಬಗ್ಗೆ ಬಿಜೆಪಿ ವರಸೆಗಳು ಹೀಗಿರುತ್ತದೆ. ಮೊದಲು – ಅಕ್ರಮವೇ ನಡೆದಿಲ್ಲ ಎಂದು ನಿರಾಕರಿಸುವುದು, ಹಗರಣ ಹೊರಬಂದ ನಂತರ – ಸಣ್ಣ ಲೋಪ ಎಂಬಂತೆ ಮಾತಾಡುವುದು, ಹಗರಣದ ತೀವ್ರತೆ ಹೊರಬಂದಾಗ – ಪ್ರಭಾವಿಗಳ ರಕ್ಷಣೆಗೆ ತಂತ್ರ ಹೂಡುವುದು. ಪಿಎಸ್‌ಐ ಅಕ್ರಮದಿಂದ ಹಿಡಿದು ಚಿಲುಮೆ ಹಗರಣದವರೆಗೂ ಬಿಜೆಪಿ ನಡೆದುಕೊಂಡ ರೀತಿ ಇದು” ಎಂದು ಮತ್ತೊಂದು ಟ್ವೀಟ್ ಮಾಡಿದೆ.

ಶಾಸಕರ ಕಳ್ಳತನ, ಕಮಿಷನ್ ಕಳ್ಳತನ, ಸರ್ಕಾರಿ ಹುದ್ದೆಗಳ ಕಳ್ಳತನ, ಮತದಾರರ ಮಾಹಿತಿ ಕಳ್ಳತನ- ಬಿಜೆಪಿಯ ಪ್ರಮುಖ ಕಳ್ಳತನಗಳು. ಬಿಜೆಪಿ ಒಮ್ಮೆಯೂ ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಳ್ಳ ಮಾರ್ಗದಲ್ಲಿ ಹೈಜಾಕ್ ಮಾಡಿ ಅಧಿಕಾರ ಹಿಡಿಯುವ ಬಿಜೆಪಿ ಬಗ್ಗೆ ಜನತೆ ಜಾಗ್ರತೆ ವಹಿಸಬೇಕು” ಎಂದು ಮನವಿ ಮಾಡಿದೆ.

“ಅಕ್ರಮ ನಡೆದೇ ಇಲ್ಲ ಎಂಬಂತೆ ಮಾತನಾಡುತ್ತಿದ್ದ ಬೊಮ್ಮಾಯಿಯವರೇ, ಮತದಾರರ ಮಾಹಿತಿ ಕಳ್ಳತನದ ಅಕ್ರಮದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತಾಗಿದ್ದು ಏಕೆ? ಸರ್ಕಾರದ ಹಸ್ತಕ್ಷೇಪ, ಬಿಜೆಪಿಯ ಹಿತಾಸಕ್ತಿ, ಮುಖ್ಯಮಂತ್ರಿಗಳ ಸಹಕಾರ ಇಲ್ಲದೆ ಐಎಎಸ್ ಮಟ್ಟದ ಅಧಿಕಾರಿಗಳು ಚಿಲುಮೆಗೆ ಸಹಕರಿಸಲು ಸಾಧ್ಯವೇ? ದಮ್ಮು ತಾಕತ್ತು ಇದ್ದರೆ ಉತ್ತರಿಸಿ” ಎಂದು ಸವಾಲು ಹಾಕಿದೆ.

ಈ ಕುರಿತು ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, “ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ! ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, “ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾನಿ ಮಾಡುತ್ತಿದೆ. ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಈ ಅಕ್ರಮ ಎಸಗಲಾಗಿದೆ. ಚುನಾವಣಾ ಆಯೋಗ ರಾಜ್ಯದ ಎಲ್ಲಾ ಮತದಾರರ ಪಟ್ಟಿಯನ್ನು ಮರುಪರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

“ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ, ಅಂಕಪಟ್ಟಿ ಅಕ್ರಮದಂತೆ ಈಗ ಮತಪಟ್ಟಿಯಲ್ಲೂ ಅಕ್ರಮ ಎಸಗಲು ಪ್ರಯತ್ನಿಸಿದ್ದಾರೆ. ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ರಾಜ್ಯವಾಗಿ ಪರಿವರ್ತನೆಯಾಗಿದೆ. ಈಗಲೇ ಜಾಗೃತರಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...