Homeಕರ್ನಾಟಕಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

ಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

“ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ?”

- Advertisement -
- Advertisement -

ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ? ಸಿಎಂ ಕಚೇರಿ ಬಸವರಾಜ ಬೊಮ್ಮಾಯಿಯವರ ಹಿಡಿತದಲ್ಲಿ ಇಲ್ಲವೇ? ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ?” ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಟ್ವೀಟ್‌ಗಳನ್ನು ಮಾಡುತ್ತಿರುವ ಕಾಂಗ್ರೆಸ್, “ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ ಬೊಮ್ಮಾಯಿಯವರೇ? ಇಲಿ ಕಚ್ಚಿಕೊಂಡು ಹೋಯಿತೇ? ಹೆಗ್ಗಣ ಹೊತ್ತುಕೊಂಡು ಹೋಯಿತೇ? ಗಾಳಿಯಲ್ಲಿ ಹಾರಿ ಹೋಯಿತೇ? ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು ‘ಯುಪಿ ಮಾಡೆಲ್’ ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ” ಎಂದು ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಐಎಎಸ್‌ನಂತಹ ಉನ್ನತ ಮಟ್ಟದ ಅಧಿಕಾರಿಗಳು ಬಾಗಿಯಾಗಿರುವಂತಹ ಚಿಲುಮೆ ಪ್ರಕರಣಕ್ಕೆ ಪೊಲೀಸ್ ತನಿಖೆ ಮಾತ್ರ ಸಾಕೇ ಬೊಮ್ಮಾಯಿಯವರೇ? ನ್ಯಾಯಾಂಗ ತನಿಖೆಗೆ ವಹಿಸಲು ಹಿಂದೇಟು ಹಾಕುತ್ತಿರುವುದೇಕೆ? ಚಿಲುಮೆ ಸಂಸ್ಥೆಯ ಹಣದ ಮೂಲ ಹುಡುಕಲು ಐಟಿ, ಇಡಿಗಳಿಗೆ ಇಷ್ಟವಿಲ್ಲವೇಕೆ? ಸಚಿವರ ಲೆಟರ್ ಹೆಡ್, ಚೆಕ್‌ಗಳ ಬಗ್ಗೆ ಮಾತಾಡುತ್ತಿಲ್ಲವೇಕೆ?” ಎಂದು ಕೇಳಿದೆ.

“ಹಗರಣಗಳ ಬಗ್ಗೆ ಬಿಜೆಪಿ ವರಸೆಗಳು ಹೀಗಿರುತ್ತದೆ. ಮೊದಲು – ಅಕ್ರಮವೇ ನಡೆದಿಲ್ಲ ಎಂದು ನಿರಾಕರಿಸುವುದು, ಹಗರಣ ಹೊರಬಂದ ನಂತರ – ಸಣ್ಣ ಲೋಪ ಎಂಬಂತೆ ಮಾತಾಡುವುದು, ಹಗರಣದ ತೀವ್ರತೆ ಹೊರಬಂದಾಗ – ಪ್ರಭಾವಿಗಳ ರಕ್ಷಣೆಗೆ ತಂತ್ರ ಹೂಡುವುದು. ಪಿಎಸ್‌ಐ ಅಕ್ರಮದಿಂದ ಹಿಡಿದು ಚಿಲುಮೆ ಹಗರಣದವರೆಗೂ ಬಿಜೆಪಿ ನಡೆದುಕೊಂಡ ರೀತಿ ಇದು” ಎಂದು ಮತ್ತೊಂದು ಟ್ವೀಟ್ ಮಾಡಿದೆ.

ಶಾಸಕರ ಕಳ್ಳತನ, ಕಮಿಷನ್ ಕಳ್ಳತನ, ಸರ್ಕಾರಿ ಹುದ್ದೆಗಳ ಕಳ್ಳತನ, ಮತದಾರರ ಮಾಹಿತಿ ಕಳ್ಳತನ- ಬಿಜೆಪಿಯ ಪ್ರಮುಖ ಕಳ್ಳತನಗಳು. ಬಿಜೆಪಿ ಒಮ್ಮೆಯೂ ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಳ್ಳ ಮಾರ್ಗದಲ್ಲಿ ಹೈಜಾಕ್ ಮಾಡಿ ಅಧಿಕಾರ ಹಿಡಿಯುವ ಬಿಜೆಪಿ ಬಗ್ಗೆ ಜನತೆ ಜಾಗ್ರತೆ ವಹಿಸಬೇಕು” ಎಂದು ಮನವಿ ಮಾಡಿದೆ.

“ಅಕ್ರಮ ನಡೆದೇ ಇಲ್ಲ ಎಂಬಂತೆ ಮಾತನಾಡುತ್ತಿದ್ದ ಬೊಮ್ಮಾಯಿಯವರೇ, ಮತದಾರರ ಮಾಹಿತಿ ಕಳ್ಳತನದ ಅಕ್ರಮದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತಾಗಿದ್ದು ಏಕೆ? ಸರ್ಕಾರದ ಹಸ್ತಕ್ಷೇಪ, ಬಿಜೆಪಿಯ ಹಿತಾಸಕ್ತಿ, ಮುಖ್ಯಮಂತ್ರಿಗಳ ಸಹಕಾರ ಇಲ್ಲದೆ ಐಎಎಸ್ ಮಟ್ಟದ ಅಧಿಕಾರಿಗಳು ಚಿಲುಮೆಗೆ ಸಹಕರಿಸಲು ಸಾಧ್ಯವೇ? ದಮ್ಮು ತಾಕತ್ತು ಇದ್ದರೆ ಉತ್ತರಿಸಿ” ಎಂದು ಸವಾಲು ಹಾಕಿದೆ.

ಈ ಕುರಿತು ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, “ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ! ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, “ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾನಿ ಮಾಡುತ್ತಿದೆ. ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಈ ಅಕ್ರಮ ಎಸಗಲಾಗಿದೆ. ಚುನಾವಣಾ ಆಯೋಗ ರಾಜ್ಯದ ಎಲ್ಲಾ ಮತದಾರರ ಪಟ್ಟಿಯನ್ನು ಮರುಪರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

“ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ, ಅಂಕಪಟ್ಟಿ ಅಕ್ರಮದಂತೆ ಈಗ ಮತಪಟ್ಟಿಯಲ್ಲೂ ಅಕ್ರಮ ಎಸಗಲು ಪ್ರಯತ್ನಿಸಿದ್ದಾರೆ. ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ರಾಜ್ಯವಾಗಿ ಪರಿವರ್ತನೆಯಾಗಿದೆ. ಈಗಲೇ ಜಾಗೃತರಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...