Homeಅಂತರಾಷ್ಟ್ರೀಯಕ್ಯೂಬಾ ಕಮ್ಯುನಿಷ್ಟ್‌ ಪಕ್ಷದ ನಾಯಕತ್ವ ಬದಲಾವಣೆಗೆ ರೌಲ್‌ ಕ್ಯಾಸ್ಟ್ರೊ ಒಲವು

ಕ್ಯೂಬಾ ಕಮ್ಯುನಿಷ್ಟ್‌ ಪಕ್ಷದ ನಾಯಕತ್ವ ಬದಲಾವಣೆಗೆ ರೌಲ್‌ ಕ್ಯಾಸ್ಟ್ರೊ ಒಲವು

- Advertisement -
- Advertisement -

ಕ್ಯೂಬಾ ಕಮ್ಯುನಿಸ್ಟ್ ಪಕ್ಷದ ನಾಯಕತ್ವವನ್ನು ಉತ್ಸಾಹಭರಿತ ಮತ್ತು ಸಾಮ್ರಾಜ್ಯಶಾಹಿ ವಿರೋಧಿ ಮನೋಭಾವ ತುಂಬಿದ ಯುವ ಪೀಳಿಗೆಗೆ ವಹಿಸುವ ಇಂಗಿತವನ್ನು ಪಕ್ಷದ ಅಧ್ಯಕ್ಷ ರೌಲ್‌ ಕ್ಯಾಸ್ಟ್ರೊ ಶುಕ್ರವಾರ ವ್ಯಕ್ತಪಡಿಸಿದ್ದಾರೆ. ಜೂನ್‌ನಲ್ಲಿ 90 ನೇ ವರ್ಷಕ್ಕೆ ಕಾಲಿಡುತ್ತಿರುವ ರೌಲ್‌ ಕ್ಯಾಸ್ಟ್ರೊ, ಶುಕ್ರವಾರ ಕಮ್ಯುನಿಸ್ಟ್ ಪಕ್ಷದ ಸಭೆಯಲ್ಲಿ ತಾನು ನಾಯಕತ್ವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ.

ಸೋಮವಾರ ಸಮಾವೇಶ ಮುಗಿಯುವ ಮೊದಲು ಅವರು ಔಪಚಾರಿಕವಾಗಿ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದು ಮತ್ತು ಅವರ ಬದಲಿಯನ್ನು ಘೋಷಿಸುವ ನಿರೀಕ್ಷೆಯಿದೆ.

ರೌಲ್‌ ಕ್ಟ್ಯಾಸ್ಟ್ರೊ

ಕ್ಯೂಬಾದ ಅಧ್ಯಕ್ಷರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದ ರೌಲ್‌ ಕ್ಯಾಸ್ಟ್ರೋ 2018 ರಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. ಅವರ ಉತ್ತರಾಧಿಕಾರಿಯಾಗಿ ಮಿಗುಯೆಲ್ ಡಿಯಾಜ್-ಕ್ಯಾನೆಲ್ ಬರ್ಮಡೆಜ್ ಅವರನ್ನು ನೇಮಿಸಲಾಗಿತ್ತು.

ಇದನ್ನೂ ಓದಿ: ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?

ಯುವ ಪೀಳಿಗೆಗೆ ಅಧಿಕಾರವನ್ನು ಹಸ್ತಾಂತರಿಸುವ ಸಲುವಾಗಿ, ಈ ವರ್ಷ ನಡೆಯುವ ಪಕ್ಷದ ಸಮಾವೇಶದಲ್ಲಿ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತ್ಯಜಿಸುವುದಾಗಿ ರೌಲ್‌ ಕ್ಯಾಸ್ಟ್ರೊ 2016 ರಲ್ಲಿ ಘೋಷಿಸಿದ್ದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನವು ಕ್ಯೂಬಾದ ಅತ್ಯಂತ ದೊಡ್ಡ ಸ್ಥಾನವಾಗಿದ್ದು, ಇದು ಅಧ್ಯಕ್ಷ ಸ್ಥಾನಕ್ಕಿಂತ ಹೆಚ್ಚು ಅಧಿಕಾರವಿರುವ ಸ್ಥಾನವಾಗಿದೆ. ಅಧ್ಯಕ್ಷ ಸ್ಥಾನವು ಪ್ರಧಾನ ಕಾರ್ಯದರ್ಶಿಗಿಂತ ನಂತರದ ಸ್ಥಾನವಾಗಿದೆ.

ವಾರಾಂತ್ಯದಲ್ಲಿ ಕಮ್ಯುನಿಸ್ಟ್ ಪಕ್ಷದ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಡಿಯಾಜ್-ಕ್ಯಾನೆಲ್ ಆಯ್ಕೆಯಾಗುತ್ತಾರೆ ಎನ್ನಲಾಗಿದೆ. ದೇಶದ ಅಧ್ಯಕ್ಷರಾಗಿ ಮತ್ತು ಪಕ್ಷದ ಕಾರ್ಯದರ್ಶಿಯಾಗಿ ಎರಡೂ ಹುದ್ದೆಗಳನ್ನು ಅವರು ನಿರ್ವಹಿಸಲಿದ್ದಾರೆ. ಕ್ರಾಂತಿಕಾರಿ ಹೋರಾಟಗಾರ ಫಿಡೆಲ್ ಕ್ಯಾಸ್ಟ್ರೊ ಕೂಡಾ ಸುಮಾರು 30 ವರ್ಷಗಳ ಕಾಲ ಎರಡೂ ಹುದ್ದೆಗಳನ್ನು ನಿರ್ವಹಿಸಿದ್ದರು.

ಇದನ್ನೂ ಓದಿ: ಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...