Homeಅಂತರಾಷ್ಟ್ರೀಯಕ್ಯೂಬಾ ಕಮ್ಯುನಿಷ್ಟ್‌ ಪಕ್ಷದ ನಾಯಕತ್ವ ಬದಲಾವಣೆಗೆ ರೌಲ್‌ ಕ್ಯಾಸ್ಟ್ರೊ ಒಲವು

ಕ್ಯೂಬಾ ಕಮ್ಯುನಿಷ್ಟ್‌ ಪಕ್ಷದ ನಾಯಕತ್ವ ಬದಲಾವಣೆಗೆ ರೌಲ್‌ ಕ್ಯಾಸ್ಟ್ರೊ ಒಲವು

- Advertisement -
- Advertisement -

ಕ್ಯೂಬಾ ಕಮ್ಯುನಿಸ್ಟ್ ಪಕ್ಷದ ನಾಯಕತ್ವವನ್ನು ಉತ್ಸಾಹಭರಿತ ಮತ್ತು ಸಾಮ್ರಾಜ್ಯಶಾಹಿ ವಿರೋಧಿ ಮನೋಭಾವ ತುಂಬಿದ ಯುವ ಪೀಳಿಗೆಗೆ ವಹಿಸುವ ಇಂಗಿತವನ್ನು ಪಕ್ಷದ ಅಧ್ಯಕ್ಷ ರೌಲ್‌ ಕ್ಯಾಸ್ಟ್ರೊ ಶುಕ್ರವಾರ ವ್ಯಕ್ತಪಡಿಸಿದ್ದಾರೆ. ಜೂನ್‌ನಲ್ಲಿ 90 ನೇ ವರ್ಷಕ್ಕೆ ಕಾಲಿಡುತ್ತಿರುವ ರೌಲ್‌ ಕ್ಯಾಸ್ಟ್ರೊ, ಶುಕ್ರವಾರ ಕಮ್ಯುನಿಸ್ಟ್ ಪಕ್ಷದ ಸಭೆಯಲ್ಲಿ ತಾನು ನಾಯಕತ್ವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ.

ಸೋಮವಾರ ಸಮಾವೇಶ ಮುಗಿಯುವ ಮೊದಲು ಅವರು ಔಪಚಾರಿಕವಾಗಿ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದು ಮತ್ತು ಅವರ ಬದಲಿಯನ್ನು ಘೋಷಿಸುವ ನಿರೀಕ್ಷೆಯಿದೆ.

ರೌಲ್‌ ಕ್ಟ್ಯಾಸ್ಟ್ರೊ

ಕ್ಯೂಬಾದ ಅಧ್ಯಕ್ಷರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದ ರೌಲ್‌ ಕ್ಯಾಸ್ಟ್ರೋ 2018 ರಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. ಅವರ ಉತ್ತರಾಧಿಕಾರಿಯಾಗಿ ಮಿಗುಯೆಲ್ ಡಿಯಾಜ್-ಕ್ಯಾನೆಲ್ ಬರ್ಮಡೆಜ್ ಅವರನ್ನು ನೇಮಿಸಲಾಗಿತ್ತು.

ಇದನ್ನೂ ಓದಿ: ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?

ಯುವ ಪೀಳಿಗೆಗೆ ಅಧಿಕಾರವನ್ನು ಹಸ್ತಾಂತರಿಸುವ ಸಲುವಾಗಿ, ಈ ವರ್ಷ ನಡೆಯುವ ಪಕ್ಷದ ಸಮಾವೇಶದಲ್ಲಿ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತ್ಯಜಿಸುವುದಾಗಿ ರೌಲ್‌ ಕ್ಯಾಸ್ಟ್ರೊ 2016 ರಲ್ಲಿ ಘೋಷಿಸಿದ್ದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನವು ಕ್ಯೂಬಾದ ಅತ್ಯಂತ ದೊಡ್ಡ ಸ್ಥಾನವಾಗಿದ್ದು, ಇದು ಅಧ್ಯಕ್ಷ ಸ್ಥಾನಕ್ಕಿಂತ ಹೆಚ್ಚು ಅಧಿಕಾರವಿರುವ ಸ್ಥಾನವಾಗಿದೆ. ಅಧ್ಯಕ್ಷ ಸ್ಥಾನವು ಪ್ರಧಾನ ಕಾರ್ಯದರ್ಶಿಗಿಂತ ನಂತರದ ಸ್ಥಾನವಾಗಿದೆ.

ವಾರಾಂತ್ಯದಲ್ಲಿ ಕಮ್ಯುನಿಸ್ಟ್ ಪಕ್ಷದ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಡಿಯಾಜ್-ಕ್ಯಾನೆಲ್ ಆಯ್ಕೆಯಾಗುತ್ತಾರೆ ಎನ್ನಲಾಗಿದೆ. ದೇಶದ ಅಧ್ಯಕ್ಷರಾಗಿ ಮತ್ತು ಪಕ್ಷದ ಕಾರ್ಯದರ್ಶಿಯಾಗಿ ಎರಡೂ ಹುದ್ದೆಗಳನ್ನು ಅವರು ನಿರ್ವಹಿಸಲಿದ್ದಾರೆ. ಕ್ರಾಂತಿಕಾರಿ ಹೋರಾಟಗಾರ ಫಿಡೆಲ್ ಕ್ಯಾಸ್ಟ್ರೊ ಕೂಡಾ ಸುಮಾರು 30 ವರ್ಷಗಳ ಕಾಲ ಎರಡೂ ಹುದ್ದೆಗಳನ್ನು ನಿರ್ವಹಿಸಿದ್ದರು.

ಇದನ್ನೂ ಓದಿ: ಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...