Homeಚಳವಳಿರವೀಶ್ ಕುಮಾರ್ ರವರಿಗೆ ನಾಳೆ ಗೌರಿ ಲಂಕೇಶ್ ಪ್ರಶಸ್ತಿ: ಪುಸ್ತಕ ಬಿಡುಗಡೆ ಮತ್ತು ಗೌರಿಲಂಕೇಶ್ ನ್ಯೂಸ್’...

ರವೀಶ್ ಕುಮಾರ್ ರವರಿಗೆ ನಾಳೆ ಗೌರಿ ಲಂಕೇಶ್ ಪ್ರಶಸ್ತಿ: ಪುಸ್ತಕ ಬಿಡುಗಡೆ ಮತ್ತು ಗೌರಿಲಂಕೇಶ್ ನ್ಯೂಸ್’ ವೆಬ್ ಸೈಟ್ ಲೋಕಾರ್ಪಣೆ..

- Advertisement -
- Advertisement -

Ndtv ಹಿಂದಿಯ ವ್ಯವಸ್ಥಾಪಕ ಸಂಪಾದಕ, ದಿಟ್ಟ ಪತ್ರಕರ್ತ ರವೀಶ್ ಕುಮಾರ್ ರವರು ನಾಳೆ ಬೆಂಗಳೂರಿನಲ್ಲಿ ‘ಗೌರಿ ಲಂಕೇಶ್ ರಾಷ್ಟ್ರೀಯ ಪತ್ರಿಕೋದ್ಯಮ ಪ್ರಶಸ್ತಿ’ಸ್ವೀಕರಿಸಲಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್ ನಿಂದ ಪ್ರಶಸ್ತಿ ನೀಡಲಾಗುತ್ತಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 22ರ ಭಾನುವಾರ ಸಂಜೆ 4 ಗಂಟೆಗೆ ನಗರದ ಸೇಂಟ್ ಜೋಸೆಫ್ ಕಾಲೇಜ್ ಆಡಿಟೋರಿಯಂ, ಲ್ಯಾಂಗ್‍ಫೋರ್ಡ್ ರಸ್ತೆ, ರಿಚ್‍ಮಂಡ್ ಸರ್ಕಲ್ ಹತ್ತಿರ, ನಡೆಯಲಿದೆ.

ಅಂದು ಟ್ರಸ್ಟಿನ ಗೌರವ ಕಾರ್ಯದರ್ಶಿಗಳೂ, ಹಿರಿಯ ಭಾಷಾ ಶಾಸ್ತ್ರಜ್ಞರೂ ಆಗಿರುವ ಪ್ರೊ. ಗಣೇಶ ದೇವಿಯವರು ಗೌರಿ ಲಂಕೇಶ್ ಸ್ಮಾರಕ ಉಪನ್ಯಾಸವನ್ನು ಮಾಡಲಿದ್ದಾರೆ. ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರ ‘ದೆಹಲಿ ನೋಟ’ ಮತ್ತು ವಿನಯಾ ಒಕ್ಕುಂದರವರ ‘ನೀರನಡೆ’ ಪುಸ್ತಕ ಬಿಡುಗಡೆಯೂ ನಡೆಯಲಿದೆ. ಜೊತೆಗೆ ‘ಗೌರಿ ಲಂಕೇಶ್ ನ್ಯೂಸ್’ gaurilankeshnews.com ವೆಬ್‍ಸೈಟ್ ಲೋಕಾರ್ಪಣೆ ಸಹ ನಡೆಯಲಿದೆ.

 

ರವೀಶ್ ಕುಮಾರ್ ಅವರು ತಮ್ಮ ಹರಿತವಾದ ಸುದ್ದಿ ವಿಶ್ಲೇಷಣೆಗೆ ಮತ್ತು ರಾಜಿ ಇಲ್ಲದ ಸೆಕ್ಯುಲರ್ ನಿಲುವಿಗೆ ಬದ್ಧರಾಗಿದ್ದಾರಷ್ಟೇ ಅಲ್ಲದೆ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ವೃತ್ತಿ ಘನತೆಯನ್ನು ಎತ್ತಿಹಿಡಿಯುತ್ತಾ, ಪ್ರಜಾತಾಂತ್ರಿಕ ನಿಲುವಿಗೆ ಅಚಲವಾದ ನಿಷ್ಠಯನ್ನು ತೋರುತ್ತಾ ಬಂದಿದ್ದಾರೆ. ಇಂಥವರು ಗೌರಿ ಪ್ರಶಸ್ತಿಯ ಮೊದಲ ಪುರಸ್ಕೃತರು ಎಂಬುದು ನಮಗೆಲ್ಲಾ ಹೆಮ್ಮೆಯ ವಿಷಯ ಎಂದು ಗೌರಿ ಸ್ಮಾರಕ ಟ್ರಸ್ಟಿನ ಅಧ್ಯಕ್ಷರಾದ ಎಚ್.ಎಸ್ ದೊರೆಸ್ವಾಮಿಯವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಕವಿತಾ ಲಂಕೇಶ್, ತೀಸ್ತಾ ಸೆಟ್ಲವಾದ್, ಕೆ.ಫಣಿರಾಜ್ ಮಂತಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪ್ರಶಸ್ತಿಯು ಗೌರವ ಫಲಕ ಮತ್ತು ಒಂದು ಲಕ್ಷ ರೂ.ಗಳ ಸನ್ಮಾನ ಧನವನ್ನು ಒಳಗೊಂಡಿರುತ್ತದೆ. ಕಾರ್ಯಕ್ರಮದ ಹೆಚ್ಚಿನ ವಿವರಗಳಿಗಾಗಿ 9448127571, 9448256216 ಈ ನಂಬರ್ ಗಳಿಗೆ ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...