Homeಕರ್ನಾಟಕಮಕ್ಕಳು ದೊಡ್ಡವರಾದ `ಗಿರ್ಮಿಟ್​' ಸಿನಿಮಾಕ್ಕೆ ಅಂಕವೆಷ್ಟು..?

ಮಕ್ಕಳು ದೊಡ್ಡವರಾದ `ಗಿರ್ಮಿಟ್​’ ಸಿನಿಮಾಕ್ಕೆ ಅಂಕವೆಷ್ಟು..?

- Advertisement -
- Advertisement -

ಮೊಟ್ಟ ಮೊದಲ ಪ್ರಯೋಗಾತ್ಮಕ ಮಕ್ಕಳ ಕಮರ್ಷಿಯಲ್ ಗಿರ್ಮಿಟ್ ಚಿತ್ರ ತೆರೆಗೆ ಅಪ್ಪಳಿಸಿದೆ. ದೊಡ್ಡವರ ಪಾತ್ರಗಳಿಗೆ ಮಕ್ಕಳು ಬಣ್ಣ ಹಚ್ಚುವ ಮೂಲಕ ಪಾತ್ರಗಳಿಗೆ ಜೀವ ತುಂಬಿದ್ದಾರೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪರಿಶ್ರಮ ಪ್ರೇಕ್ಷಕರ ಮನ ಗೆದ್ದಿದೆ.

ಗಿರ್ಮಿಟ್ ಚಿತ್ರ ಅಪ್ಪಟ ಮನರಂಜನಾತ್ಮಕ ಚಿತ್ರ. ದೊಡ್ಡವರ ಪಾತ್ರಗಳಲ್ಲಿ ನಟಿಸುವ ಮೂಲಕ ಮಕ್ಕಳು ಕಮಾಲ್ ಮಾಡಿದ್ದಾರೆ. ಪ್ರಯೋಗಾತ್ಮಕ ಚಿತ್ರಗಳಲ್ಲಿ ಮನರಂಜನೆ ಹೆಚ್ಚು ಪಾತ್ರವಹಿಸುವುದಿಲ್ಲ. ಆದರೆ ರವಿ ಬಸ್ರೂರು ಮಕ್ಕಳ ಮೂಲಕ ಮನರಂಜಿಸಿದ್ದಾರೆ.

ನಾಯಕ, ನಾಯಕಿ, ಅಪ್ಪ-ಅಮ್ಮ, ಸ್ನೇಹಿತ ಹೀಗೆ ವಿವಿಧ ಪಾತ್ರಗಳನ್ನು ಮಕ್ಕಳೇ ಮಾಡಿದ್ದಾರೆ. ಮೀಸೆ, ಸೀರೆಯುಟ್ಟಿರುವ ಮಕ್ಕಳ ಪಾತ್ರ ನೈಜವಾಗಿ ಮೂಡಿ ಬಂದಿದೆ. ಸಾಮಾನ್ಯ ಕಥೆಯನ್ನಿಟ್ಟುಕೊಂಡು ಉತ್ತಮವಾಗಿ ಕಟ್ಟಿ ಕೊಟ್ಟಿದ್ದಾರೆ ರವಿ ಬಸ್ರೂರು. ನಾಯಕ ರಾಜನಿಗೆ (ಆಶ್ಲೇಷ್​ ರಾಜ್​) ಮದುವೆಗೆ ಹುಡುಗಿ ಹುಡುಕುತ್ತಿರುತ್ತಾರೆ. ಇನ್ನೊಂದು ಕಡೆ ನಾಯಕಿ ರಶ್ಮಿ (ಶ್ಲಾಘಾ ಸಾಲಿಗ್ರಾಮಾ) ಅವರ ಇಬ್ಬರು ಅಕ್ಕಂದಿರಿಗೆ ಮದುವೆ ಮಾಡಬೇಕೆಂಬ ಹುಡುಕಾಟ ನಡೆಸಿರುತ್ತಾಳೆ. ತನ್ನನ್ನು ಇಷ್ಟಪಡುವ ನಾಯಕನಿಗೆ, ನಾಯಕಿ ತನ್ನ ಇಬ್ಬರು ಅಕ್ಕಂದಿರಿಗೆ ಮದುವೆ ಮಾಡಿಸಬೇಕು ಎಂದು ಷರತ್ತು ವಿಧಿಸುತ್ತಾಳೆ. ನಂತರದಲ್ಲಿ ನಾಯಕ ನಡೆಸುವ ಪ್ರಯತ್ನಗಳು, ನಾಯಕಿಯ ಅಕ್ಕಂದಿರ ಮದುವೆ ಮಾಡಿಸಿ, ತನ್ನ ಮದುವೆ ಹೇಗೆ ಮಾಡಿಕೊಳ್ಳುತ್ತಾನೆ ಎಂಬುದೇ ಚಿತ್ರದ ಕಥೆ.

ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆದಿದ್ದು, ಪ್ರಕೃತಿ ಸೌಂದರ್ಯವನ್ನು ಸೊಗಸಾಗಿ ಸೆರೆ ಹಿಡಿಯಲಾಗಿದೆ. ಚಿತ್ರದಲ್ಲಿ ಮಕ್ಕಳ ಸಂಭಾಷಣೆ ಗಮನ ಸೆಳೆಯುತ್ತದೆ. ಕುಂದಾಪುರ ಮತ್ತು ಉತ್ತರ ಕರ್ನಾಟಕ ಕನ್ನಡ ಭಾಷೆ ಮುದ ನೀಡುತ್ತದೆ. ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಸೇರಿದಂತೆ ಹಿರಿಯ ಕಲಾವಿದರು ಧ್ವನಿ ನೀಡಿದ್ದಾರೆ. ಚಿತ್ರದ ಗೀತೆಗಳು ಕೇಳಲು ಇಂಪಾಗಿವೆ. ಚಿತ್ರದಲ್ಲಿ ಸುಮಾರು 280 ಮಕ್ಕಳು ನಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...