Homeಕರ್ನಾಟಕಮಕ್ಕಳು ದೊಡ್ಡವರಾದ `ಗಿರ್ಮಿಟ್​' ಸಿನಿಮಾಕ್ಕೆ ಅಂಕವೆಷ್ಟು..?

ಮಕ್ಕಳು ದೊಡ್ಡವರಾದ `ಗಿರ್ಮಿಟ್​’ ಸಿನಿಮಾಕ್ಕೆ ಅಂಕವೆಷ್ಟು..?

- Advertisement -
- Advertisement -

ಮೊಟ್ಟ ಮೊದಲ ಪ್ರಯೋಗಾತ್ಮಕ ಮಕ್ಕಳ ಕಮರ್ಷಿಯಲ್ ಗಿರ್ಮಿಟ್ ಚಿತ್ರ ತೆರೆಗೆ ಅಪ್ಪಳಿಸಿದೆ. ದೊಡ್ಡವರ ಪಾತ್ರಗಳಿಗೆ ಮಕ್ಕಳು ಬಣ್ಣ ಹಚ್ಚುವ ಮೂಲಕ ಪಾತ್ರಗಳಿಗೆ ಜೀವ ತುಂಬಿದ್ದಾರೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪರಿಶ್ರಮ ಪ್ರೇಕ್ಷಕರ ಮನ ಗೆದ್ದಿದೆ.

ಗಿರ್ಮಿಟ್ ಚಿತ್ರ ಅಪ್ಪಟ ಮನರಂಜನಾತ್ಮಕ ಚಿತ್ರ. ದೊಡ್ಡವರ ಪಾತ್ರಗಳಲ್ಲಿ ನಟಿಸುವ ಮೂಲಕ ಮಕ್ಕಳು ಕಮಾಲ್ ಮಾಡಿದ್ದಾರೆ. ಪ್ರಯೋಗಾತ್ಮಕ ಚಿತ್ರಗಳಲ್ಲಿ ಮನರಂಜನೆ ಹೆಚ್ಚು ಪಾತ್ರವಹಿಸುವುದಿಲ್ಲ. ಆದರೆ ರವಿ ಬಸ್ರೂರು ಮಕ್ಕಳ ಮೂಲಕ ಮನರಂಜಿಸಿದ್ದಾರೆ.

ನಾಯಕ, ನಾಯಕಿ, ಅಪ್ಪ-ಅಮ್ಮ, ಸ್ನೇಹಿತ ಹೀಗೆ ವಿವಿಧ ಪಾತ್ರಗಳನ್ನು ಮಕ್ಕಳೇ ಮಾಡಿದ್ದಾರೆ. ಮೀಸೆ, ಸೀರೆಯುಟ್ಟಿರುವ ಮಕ್ಕಳ ಪಾತ್ರ ನೈಜವಾಗಿ ಮೂಡಿ ಬಂದಿದೆ. ಸಾಮಾನ್ಯ ಕಥೆಯನ್ನಿಟ್ಟುಕೊಂಡು ಉತ್ತಮವಾಗಿ ಕಟ್ಟಿ ಕೊಟ್ಟಿದ್ದಾರೆ ರವಿ ಬಸ್ರೂರು. ನಾಯಕ ರಾಜನಿಗೆ (ಆಶ್ಲೇಷ್​ ರಾಜ್​) ಮದುವೆಗೆ ಹುಡುಗಿ ಹುಡುಕುತ್ತಿರುತ್ತಾರೆ. ಇನ್ನೊಂದು ಕಡೆ ನಾಯಕಿ ರಶ್ಮಿ (ಶ್ಲಾಘಾ ಸಾಲಿಗ್ರಾಮಾ) ಅವರ ಇಬ್ಬರು ಅಕ್ಕಂದಿರಿಗೆ ಮದುವೆ ಮಾಡಬೇಕೆಂಬ ಹುಡುಕಾಟ ನಡೆಸಿರುತ್ತಾಳೆ. ತನ್ನನ್ನು ಇಷ್ಟಪಡುವ ನಾಯಕನಿಗೆ, ನಾಯಕಿ ತನ್ನ ಇಬ್ಬರು ಅಕ್ಕಂದಿರಿಗೆ ಮದುವೆ ಮಾಡಿಸಬೇಕು ಎಂದು ಷರತ್ತು ವಿಧಿಸುತ್ತಾಳೆ. ನಂತರದಲ್ಲಿ ನಾಯಕ ನಡೆಸುವ ಪ್ರಯತ್ನಗಳು, ನಾಯಕಿಯ ಅಕ್ಕಂದಿರ ಮದುವೆ ಮಾಡಿಸಿ, ತನ್ನ ಮದುವೆ ಹೇಗೆ ಮಾಡಿಕೊಳ್ಳುತ್ತಾನೆ ಎಂಬುದೇ ಚಿತ್ರದ ಕಥೆ.

ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆದಿದ್ದು, ಪ್ರಕೃತಿ ಸೌಂದರ್ಯವನ್ನು ಸೊಗಸಾಗಿ ಸೆರೆ ಹಿಡಿಯಲಾಗಿದೆ. ಚಿತ್ರದಲ್ಲಿ ಮಕ್ಕಳ ಸಂಭಾಷಣೆ ಗಮನ ಸೆಳೆಯುತ್ತದೆ. ಕುಂದಾಪುರ ಮತ್ತು ಉತ್ತರ ಕರ್ನಾಟಕ ಕನ್ನಡ ಭಾಷೆ ಮುದ ನೀಡುತ್ತದೆ. ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಸೇರಿದಂತೆ ಹಿರಿಯ ಕಲಾವಿದರು ಧ್ವನಿ ನೀಡಿದ್ದಾರೆ. ಚಿತ್ರದ ಗೀತೆಗಳು ಕೇಳಲು ಇಂಪಾಗಿವೆ. ಚಿತ್ರದಲ್ಲಿ ಸುಮಾರು 280 ಮಕ್ಕಳು ನಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...