Homeಕರ್ನಾಟಕಮಕ್ಕಳು ದೊಡ್ಡವರಾದ `ಗಿರ್ಮಿಟ್​' ಸಿನಿಮಾಕ್ಕೆ ಅಂಕವೆಷ್ಟು..?

ಮಕ್ಕಳು ದೊಡ್ಡವರಾದ `ಗಿರ್ಮಿಟ್​’ ಸಿನಿಮಾಕ್ಕೆ ಅಂಕವೆಷ್ಟು..?

- Advertisement -
- Advertisement -

ಮೊಟ್ಟ ಮೊದಲ ಪ್ರಯೋಗಾತ್ಮಕ ಮಕ್ಕಳ ಕಮರ್ಷಿಯಲ್ ಗಿರ್ಮಿಟ್ ಚಿತ್ರ ತೆರೆಗೆ ಅಪ್ಪಳಿಸಿದೆ. ದೊಡ್ಡವರ ಪಾತ್ರಗಳಿಗೆ ಮಕ್ಕಳು ಬಣ್ಣ ಹಚ್ಚುವ ಮೂಲಕ ಪಾತ್ರಗಳಿಗೆ ಜೀವ ತುಂಬಿದ್ದಾರೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪರಿಶ್ರಮ ಪ್ರೇಕ್ಷಕರ ಮನ ಗೆದ್ದಿದೆ.

ಗಿರ್ಮಿಟ್ ಚಿತ್ರ ಅಪ್ಪಟ ಮನರಂಜನಾತ್ಮಕ ಚಿತ್ರ. ದೊಡ್ಡವರ ಪಾತ್ರಗಳಲ್ಲಿ ನಟಿಸುವ ಮೂಲಕ ಮಕ್ಕಳು ಕಮಾಲ್ ಮಾಡಿದ್ದಾರೆ. ಪ್ರಯೋಗಾತ್ಮಕ ಚಿತ್ರಗಳಲ್ಲಿ ಮನರಂಜನೆ ಹೆಚ್ಚು ಪಾತ್ರವಹಿಸುವುದಿಲ್ಲ. ಆದರೆ ರವಿ ಬಸ್ರೂರು ಮಕ್ಕಳ ಮೂಲಕ ಮನರಂಜಿಸಿದ್ದಾರೆ.

ನಾಯಕ, ನಾಯಕಿ, ಅಪ್ಪ-ಅಮ್ಮ, ಸ್ನೇಹಿತ ಹೀಗೆ ವಿವಿಧ ಪಾತ್ರಗಳನ್ನು ಮಕ್ಕಳೇ ಮಾಡಿದ್ದಾರೆ. ಮೀಸೆ, ಸೀರೆಯುಟ್ಟಿರುವ ಮಕ್ಕಳ ಪಾತ್ರ ನೈಜವಾಗಿ ಮೂಡಿ ಬಂದಿದೆ. ಸಾಮಾನ್ಯ ಕಥೆಯನ್ನಿಟ್ಟುಕೊಂಡು ಉತ್ತಮವಾಗಿ ಕಟ್ಟಿ ಕೊಟ್ಟಿದ್ದಾರೆ ರವಿ ಬಸ್ರೂರು. ನಾಯಕ ರಾಜನಿಗೆ (ಆಶ್ಲೇಷ್​ ರಾಜ್​) ಮದುವೆಗೆ ಹುಡುಗಿ ಹುಡುಕುತ್ತಿರುತ್ತಾರೆ. ಇನ್ನೊಂದು ಕಡೆ ನಾಯಕಿ ರಶ್ಮಿ (ಶ್ಲಾಘಾ ಸಾಲಿಗ್ರಾಮಾ) ಅವರ ಇಬ್ಬರು ಅಕ್ಕಂದಿರಿಗೆ ಮದುವೆ ಮಾಡಬೇಕೆಂಬ ಹುಡುಕಾಟ ನಡೆಸಿರುತ್ತಾಳೆ. ತನ್ನನ್ನು ಇಷ್ಟಪಡುವ ನಾಯಕನಿಗೆ, ನಾಯಕಿ ತನ್ನ ಇಬ್ಬರು ಅಕ್ಕಂದಿರಿಗೆ ಮದುವೆ ಮಾಡಿಸಬೇಕು ಎಂದು ಷರತ್ತು ವಿಧಿಸುತ್ತಾಳೆ. ನಂತರದಲ್ಲಿ ನಾಯಕ ನಡೆಸುವ ಪ್ರಯತ್ನಗಳು, ನಾಯಕಿಯ ಅಕ್ಕಂದಿರ ಮದುವೆ ಮಾಡಿಸಿ, ತನ್ನ ಮದುವೆ ಹೇಗೆ ಮಾಡಿಕೊಳ್ಳುತ್ತಾನೆ ಎಂಬುದೇ ಚಿತ್ರದ ಕಥೆ.

ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆದಿದ್ದು, ಪ್ರಕೃತಿ ಸೌಂದರ್ಯವನ್ನು ಸೊಗಸಾಗಿ ಸೆರೆ ಹಿಡಿಯಲಾಗಿದೆ. ಚಿತ್ರದಲ್ಲಿ ಮಕ್ಕಳ ಸಂಭಾಷಣೆ ಗಮನ ಸೆಳೆಯುತ್ತದೆ. ಕುಂದಾಪುರ ಮತ್ತು ಉತ್ತರ ಕರ್ನಾಟಕ ಕನ್ನಡ ಭಾಷೆ ಮುದ ನೀಡುತ್ತದೆ. ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಸೇರಿದಂತೆ ಹಿರಿಯ ಕಲಾವಿದರು ಧ್ವನಿ ನೀಡಿದ್ದಾರೆ. ಚಿತ್ರದ ಗೀತೆಗಳು ಕೇಳಲು ಇಂಪಾಗಿವೆ. ಚಿತ್ರದಲ್ಲಿ ಸುಮಾರು 280 ಮಕ್ಕಳು ನಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...