Homeಕರ್ನಾಟಕಮಕ್ಕಳು ದೊಡ್ಡವರಾದ `ಗಿರ್ಮಿಟ್​' ಸಿನಿಮಾಕ್ಕೆ ಅಂಕವೆಷ್ಟು..?

ಮಕ್ಕಳು ದೊಡ್ಡವರಾದ `ಗಿರ್ಮಿಟ್​’ ಸಿನಿಮಾಕ್ಕೆ ಅಂಕವೆಷ್ಟು..?

- Advertisement -
- Advertisement -

ಮೊಟ್ಟ ಮೊದಲ ಪ್ರಯೋಗಾತ್ಮಕ ಮಕ್ಕಳ ಕಮರ್ಷಿಯಲ್ ಗಿರ್ಮಿಟ್ ಚಿತ್ರ ತೆರೆಗೆ ಅಪ್ಪಳಿಸಿದೆ. ದೊಡ್ಡವರ ಪಾತ್ರಗಳಿಗೆ ಮಕ್ಕಳು ಬಣ್ಣ ಹಚ್ಚುವ ಮೂಲಕ ಪಾತ್ರಗಳಿಗೆ ಜೀವ ತುಂಬಿದ್ದಾರೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪರಿಶ್ರಮ ಪ್ರೇಕ್ಷಕರ ಮನ ಗೆದ್ದಿದೆ.

ಗಿರ್ಮಿಟ್ ಚಿತ್ರ ಅಪ್ಪಟ ಮನರಂಜನಾತ್ಮಕ ಚಿತ್ರ. ದೊಡ್ಡವರ ಪಾತ್ರಗಳಲ್ಲಿ ನಟಿಸುವ ಮೂಲಕ ಮಕ್ಕಳು ಕಮಾಲ್ ಮಾಡಿದ್ದಾರೆ. ಪ್ರಯೋಗಾತ್ಮಕ ಚಿತ್ರಗಳಲ್ಲಿ ಮನರಂಜನೆ ಹೆಚ್ಚು ಪಾತ್ರವಹಿಸುವುದಿಲ್ಲ. ಆದರೆ ರವಿ ಬಸ್ರೂರು ಮಕ್ಕಳ ಮೂಲಕ ಮನರಂಜಿಸಿದ್ದಾರೆ.

ನಾಯಕ, ನಾಯಕಿ, ಅಪ್ಪ-ಅಮ್ಮ, ಸ್ನೇಹಿತ ಹೀಗೆ ವಿವಿಧ ಪಾತ್ರಗಳನ್ನು ಮಕ್ಕಳೇ ಮಾಡಿದ್ದಾರೆ. ಮೀಸೆ, ಸೀರೆಯುಟ್ಟಿರುವ ಮಕ್ಕಳ ಪಾತ್ರ ನೈಜವಾಗಿ ಮೂಡಿ ಬಂದಿದೆ. ಸಾಮಾನ್ಯ ಕಥೆಯನ್ನಿಟ್ಟುಕೊಂಡು ಉತ್ತಮವಾಗಿ ಕಟ್ಟಿ ಕೊಟ್ಟಿದ್ದಾರೆ ರವಿ ಬಸ್ರೂರು. ನಾಯಕ ರಾಜನಿಗೆ (ಆಶ್ಲೇಷ್​ ರಾಜ್​) ಮದುವೆಗೆ ಹುಡುಗಿ ಹುಡುಕುತ್ತಿರುತ್ತಾರೆ. ಇನ್ನೊಂದು ಕಡೆ ನಾಯಕಿ ರಶ್ಮಿ (ಶ್ಲಾಘಾ ಸಾಲಿಗ್ರಾಮಾ) ಅವರ ಇಬ್ಬರು ಅಕ್ಕಂದಿರಿಗೆ ಮದುವೆ ಮಾಡಬೇಕೆಂಬ ಹುಡುಕಾಟ ನಡೆಸಿರುತ್ತಾಳೆ. ತನ್ನನ್ನು ಇಷ್ಟಪಡುವ ನಾಯಕನಿಗೆ, ನಾಯಕಿ ತನ್ನ ಇಬ್ಬರು ಅಕ್ಕಂದಿರಿಗೆ ಮದುವೆ ಮಾಡಿಸಬೇಕು ಎಂದು ಷರತ್ತು ವಿಧಿಸುತ್ತಾಳೆ. ನಂತರದಲ್ಲಿ ನಾಯಕ ನಡೆಸುವ ಪ್ರಯತ್ನಗಳು, ನಾಯಕಿಯ ಅಕ್ಕಂದಿರ ಮದುವೆ ಮಾಡಿಸಿ, ತನ್ನ ಮದುವೆ ಹೇಗೆ ಮಾಡಿಕೊಳ್ಳುತ್ತಾನೆ ಎಂಬುದೇ ಚಿತ್ರದ ಕಥೆ.

ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆದಿದ್ದು, ಪ್ರಕೃತಿ ಸೌಂದರ್ಯವನ್ನು ಸೊಗಸಾಗಿ ಸೆರೆ ಹಿಡಿಯಲಾಗಿದೆ. ಚಿತ್ರದಲ್ಲಿ ಮಕ್ಕಳ ಸಂಭಾಷಣೆ ಗಮನ ಸೆಳೆಯುತ್ತದೆ. ಕುಂದಾಪುರ ಮತ್ತು ಉತ್ತರ ಕರ್ನಾಟಕ ಕನ್ನಡ ಭಾಷೆ ಮುದ ನೀಡುತ್ತದೆ. ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಸೇರಿದಂತೆ ಹಿರಿಯ ಕಲಾವಿದರು ಧ್ವನಿ ನೀಡಿದ್ದಾರೆ. ಚಿತ್ರದ ಗೀತೆಗಳು ಕೇಳಲು ಇಂಪಾಗಿವೆ. ಚಿತ್ರದಲ್ಲಿ ಸುಮಾರು 280 ಮಕ್ಕಳು ನಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...