Homeಕರ್ನಾಟಕಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ಆರೋಪ ಮಾಡಿದವರ ವಿರುದ್ಧ ಮೂರು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರವಿ ಡಿ.ಚನ್ನಣ್ಣನವರ್‌ ತಿಳಿಸಿದ್ದಾರೆ.

- Advertisement -
- Advertisement -

“ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರ ರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಆಧಾರ ರಹಿತ ಆರೋಪ ಮಾಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದೇನೆ” ಎಂದು ಐಪಿಎಸ್‌ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದಾಗಿವೆ. ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸಲಾಗುತ್ತಿದೆ. ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ. ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಕ್ರಮ ಜರುಗಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ. ನಾನು ಈ ಕುರಿತು ಸಂಬಂಧಪಟ್ಟ ನ್ಯಾಯಾಲಯದಲ್ಲಿ, ರೂಪಾಯಿ 3 ಕೋಟಿಗೆ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಿದ್ದೇನೆ ಎಂದು ಅವರು ಎಚ್ಚರಿಸಿದ್ದಾರೆ.

ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ. ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಾಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಾಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ ಎಂದು ಹೇಳಿದ್ದಾರೆ.

ಹಾಗೆಯೇ ನನಗೆ ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು ಎಂದು ಕೋರಿದ್ದಾರೆ.


ಇದನ್ನೂ ಓದಿರಿ: ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ರವಿ ಚೆನ್ನಣ್ಣನವರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...