Homeಮುಖಪುಟಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

- Advertisement -
- Advertisement -

2016ರಲ್ಲಿ ಓರ್ವ ವ್ಯಕ್ತಿ ದಾವಣಗೆರೆಯ ಉನ್ನತ ಪೊಲೀಸ್ ಅಧಿಕಾರಿಯ ಮೇಲೆ ಒಂದು ಗಂಭೀರ ಆರೋಪ ಮಾಡುತ್ತಾರೆ. ತನ್ನ ಪತ್ನಿಯೊಂದಿಗೆ ಆ ಪೊಲೀಸ್ ಅಧಿಕಾರಿ ಬಲವಂತದ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದಾರೆಂದೂ, ತಮ್ಮ ಲೈಂಗಿಕ ಕ್ರಿಯೆಗಳ ಫೋಟೋ, ವಿಡಿಯೋ ಮಾಡಿ ಅವುಗಳನ್ನು ಬಳಸಿ ಲೈಂಗಿಕ ಸಂಬಂಧ ಮುಂದುವರೆಸುವಂತೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸ್ವತಃ ಸಂತ್ರಸ್ತೆಯೇ ದೂರು ನೀಡಿಲ್ಲವಾದುದರಿಂದ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಹೇಳಲಾಯಿತು.

ಅದಾದ ನಂತರ ಕನ್ನಡದ ಕೆಲವು ಟಿವಿ ವಾಹಿನಿಗಳಲ್ಲಿ ಆ ಅಧಿಕಾರಿ ಮತ್ತು ಓರ್ವ ಮಹಿಳೆಯು ಲೈಂಗಿಕ ಕ್ರಿಯೆಗಳಲ್ಲಿ ತೊಡಗಿದ ಫೋಟೊ ಮತ್ತು ವಿಡಿಯೋಗಳು ಬಿತ್ತರಿಸಲಾದವು. ಆ ಅಧಿಕಾರಿಯ ಮೇಲೆ ಇಲಾಖೆ ವಿಚಾರಣೆ ಒಳಪಡಿಸಲಾಯಿತು. ವಿಚಾರಣೆ ಪ್ರಾರಂಭವಾಗಿ ಒಂದೂವರೆ ವರ್ಷಗಳಿಗಿಂತ ಹೆಚ್ಚು ಕಾಲ ಕಳೆದಿದ್ದರೂ ಇನ್ನೂ ವಿಚಾರಣೆ ಪೂರ್ಣಗೊಂಡಿಲ್ಲ ಮತ್ತು ಈ ಮಧ್ಯೆ ಅದೇ ಅಧಿಕಾರಿಗೆ ಮತ್ತೆ ಬೆಂಗಳೂರಿನಲ್ಲಿಯೇ ಆಯಕಟ್ಟಿನ ಜಾಗದಲ್ಲಿ ತಂದು ಕೂರಿಸಲಾಗಿದೆ.

ಎಲ್ಲರೂ ಮರೆತರೆ? ಸಂತ್ರಸ್ತೆಗೆ ನ್ಯಾಯ ಸಿಕ್ಕಿತೆ? ಸಿಗುವುದೇ?
ಸುದ್ದಿ ವಾಹಿನಿಗಳಲ್ಲಿ ತನ್ನ ವಿಡಿಯೋಗಳು ಬಿತ್ತರಿಸಲಾದ ನಂತರ ಆರೋಪಿ ಪೊಲೀಸ್ ಅಧಿಕಾರಿಯು ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಟಿವಿ ಮತ್ತು ಮುದ್ರಣ ಮಾಧ್ಯಮಗಳನ್ನು ಒಳಗೊಂಡ ಸುಮಾರು 32 ವಾಹಿನಿ ಮತ್ತು ಪತ್ರಿಕೆಗಳು ಆ ವಿಷಯದ ಬಗ್ಗೆ ಬರೆಯದಂತೆ ತಡೆಯಾಜ್ಞೆ ತಂದರು. ಹಾಗಾಗಿ ಅದರ ಬಗ್ಗೆ ಸುದ್ದಿಗಳು ಜನಸಾಮಾನ್ಯರಿಗೆ ಮುಟ್ಟಲಿಲ್ಲ.

ಆದರೆ ಈ ತಡೆಯಾಜ್ಞೆ ಕೇವಲ ಆಯಾ ಮಾಧ್ಯಮ ಸಂಸ್ಥೆಗಳ ಮೇಲೆ ಮಾತ್ರ ಇದ್ದು ಇತರರು ಅದರ ಬಗ್ಗೆ ಮಾತನಾಡಬಹುದಾಗಿತ್ತು. ಹಾಗಾಗಿ ಆ ವಿಷಯವನ್ನು ಕೆಲವು ಸಾಮಾಜಿಕ ಹೋರಾಟಗಾರರು ಕೈಗೆತ್ತಿಕೊಂಡರು. ಪ್ರಮುಖವಾಗಿ ರವಿ ಕೃಷ್ಣಾರೆಡ್ಡಿ ಮತ್ತು ಅವರ ಸಂಗಾತಿಗಳು. ಓರ್ವ ವ್ಯಕ್ತಿಯೊಬ್ಬ ರವಿ ಕೃಷ್ಣಾರೆಡ್ಡಿ ಅವರ ಬಳಿ ಎಲ್ಲಾ ದಾಖಲೆಗಳನ್ನು, ವಿಡಿಯೋ, ಫೋಟೋಗಳನ್ನು ತಂದು, ಆ ಸಂತ್ರಸ್ತರ ಮೇಲೆ ಆಗುತ್ತಿರುವ ಅನ್ಯಾಯದ ಬಗ್ಗೆ ಹೇಳಿದಾಗ, ಓರ್ವ ಉನ್ನತ ಐಪಿಎಸ್ ಅಧಿಕಾರಿಯ ಮೇಲೆ ಗುರುತರ ಆಪಾದನೆಗಳಿದ್ದರೂ ಇನ್ನೂ ಉನ್ನತ ಹುದ್ದೆಯಲ್ಲಿ ಮುಂದುವರೆಯುವುದು ಆಡಳಿತದ ದೃಷ್ಟಿಯಿಂದ ತಪ್ಪು ಎಂದು ವಿಷಯವನ್ನು ಕೈಗೆತ್ತಿಕೊಂಡರು.

ಮುಂದಿನ ಕ್ರಮವಾಗಿ ರವಿ ಕೃಷ್ಣಾರೆಡ್ಡಿ ಮತ್ತು ಅವರ ಸಂಗಡಿಗರು ಫೆಬ್ರುವರಿ 11ನೇ ತಾರೀಕಿನಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ಭೇಟಿ ಮಾಡಿ, ವಿಚಾರಣೆ ಪೂರ್ಣವಾಗುವ ತನಕ ಆ ಅಧಿಕಾರಿಯನ್ನು ಸೇವೆಯಲ್ಲಿ ಮುಂದುವರೆಸಬಾರದು ಎಂದು ವಿನಂತಿಸಿದ್ದಾರೆ. ಆಗ ಪೊಲೀಸ್ ಆಯುಕ್ತರು, ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಅಧಿಕಾರ ಮುಖ್ಯಮಂತ್ರಿಗಳ ಬಳಿ ಮಾತ್ರ ಇದೆ, ಹಾಗಾಗಿ ಮನವಿಯನ್ನು ಸರಕಾರಕ್ಕೆ ಕಳುಹಿಸುತ್ತೇನೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.

ಆಗ ಈ ಹೋರಾಟಗಾರರು, ಸರಕಾರವು ತುರ್ತಾಗಿ ಕ್ರಮ ಕೈಗೊಳ್ಳುವಂತೆ ಮಾಡಬೇಕು. ಶೀಘ್ರದಲ್ಲಿ ನ್ಯಾಯ ಸಿಗದಿದ್ದರೆ ಅನಿವಾರ್ಯವಾಗಿ ತಮ್ಮಲ್ಲಿರುವ ದಾಖಲೆಗಳನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಅದರಿಂದ ಕುಪಿತಗೊಂಡ ಪೊಲೀಸ್ ಆಯುಕ್ತರು ಅವರನ್ನು ಮತ್ತು ಅವರ ಸಂಗಡಿಗರನ್ನು ದೈಹಿಕ ಬಲ ಬಳಸಿ ಹೊರದಬ್ಬಿಸಿದರು ಎಂದು ರವಿ ಕೃಷ್ಣಾರೆಡ್ಡಿ ಅವರು ಆಪಾದಿಸಿದ್ದಾರೆ.

ಅಲ್ಲಿಂದ ಹೊರಬಂದ ರೆಡ್ಡಿ ಮತ್ತು ಸಂಗಡಿಗರು ತಮ್ಮ ಬಳಿಯಿದ್ದ ಮನವಿಪತ್ರದ ಪ್ರತಿಗಳನ್ನು ಸುತ್ತಲ ಜನರಿಗೆ ಹಂಚಿದ್ದಾರೆ. ಆಗ ಪೊಲೀಸ್ ಸಿಬ್ಬಂದಿ ಅಡ್ಡಿಪಡಿಸಿದ್ದರಿಂದ ಅಲ್ಲಿಂದ ತೆರಳಿ ಹೈಕೋರ್ಟ್‍ನ ಪಾರ್ಕಿಂಗ್ ಕಡೆ ಬಂದಿದ್ದಾರೆ. ಆಗ ಪೊಲೀಸರು ಅಲ್ಲಿ ಬಂದು ರವಿ ಕೃಷ್ಣಾರೆಡ್ಡಿ ಮತ್ತು ವತ್ಸಲ ಎಂಬ ಒಬ್ಬ ಮಹಿಳಾ ಕಾರ್ಯಕರ್ತೆಯನ್ನೂ ಬಲವಂತವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವಾಹನದಲ್ಲಿ ಕೆಲಕಾಲ ಸುತ್ತಿಸಿ, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೆಲಗಂಟೆ ಇರಿಸಿ ಬಿಡುಗಡೆ ಮಾಡಿದ್ದಾರೆ. ಈ ವಿಷಯಕ್ಕೆ ತಲೆಹಾಕಬರಾದು ಎಂದು ‘ಉಪದೇಶ’ ನೀಡಿದ್ದಾರೆ. ಸದ್ಯಕ್ಕೆ ರವಿ ಕೃಷ್ಣಾರೆಡ್ಡಿಯವರು ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಉತ್ತರವಿಲ್ಲದ ಪ್ರಶ್ನೆಗಳು
2018ರ ಜುಲೈ ತಿಂಗಳಲ್ಲೇ ಅಧಿಕಾರಿಯ ಮೇಲೆ ಸಂತ್ರಸ್ತೆಯ ಪತಿಯು ತನ್ನ ಪತ್ನಿಯ ಮೇಲೆ ಅತ್ಯಾಚಾರ, ಹಲ್ಲೆ ಮತ್ತು ವ್ಯಭಿಚಾರ ಎಸಗಿದ್ದಾರೆ ಎಂದು ಖಾಸಗಿ ದೂರು ಸಲ್ಲಿಸಿದ್ದಾರೆ. ದೂರು ಸಲ್ಲಿಸಿದ ಕೆಲವು ದಿನಗಳಲ್ಲೇ ಕನ್ನಡದ ಖಾಸಗಿ ವಾಹಿನಿಗಳಲ್ಲಿ ಆ ಅಧಿಕಾರಿಯ ಮತ್ತು ಸಂತ್ರಸ್ತೆಯ ವಿಡಿಯೋಗಳನ್ನು ಬಿತ್ತರಿಸಲಾಗಿದೆ. ಅಧಿಕಾರಿಯ ಮೇಲೆ ಇಲಾಖಾ ವಿಚಾರಣೆ ಶುರುಮಾಡಲಾಗಿದೆ. ವಿಚಾರಣೆ ಶುರುವಾಗಿ ಒಂದೂವರೆ ವರ್ಷ ಕಳೆದರೂ ಇನ್ನೂ ಏಕೆ ಪುರ್ಣಗೊಂಡಿಲ್ಲ? ಆರೋಪಿ ಅಧಿಕಾರಿಯನ್ನು ರಕ್ಷಿಸುವ ಕಾರಣಕ್ಕಾಗಿಯೇ ಸರಕಾರಿ ಕೆಂಪುಪಟ್ಟಿಯ ವಿಧಾನವನ್ನು ಬಳಸಲಾಗುತ್ತಿದೆಯೇ?

ಪ್ರಕರಣ ಬಯಲಿಗೆ ಬಂದ ಆರಂಭದಲ್ಲಿ ಸಂತ್ರಸ್ತ ಮಹಿಳೆಯು ಎಲ್ಲವನ್ನು ಅಲ್ಲಗೆಳೆದಿದ್ದರೂ 2019ರ ಜನವರಿ ತಿಂಗಳಲ್ಲಿ ತನಗೆ ಈ ಪೊಲೀಸ್ ಅಧಿಕಾರಿಯಿಂದ ಜೀವ ಬೆದರಿಕೆ ಇದೆ ಮತ್ತು ತನ್ನ ಪತಿ ಹೇಳಿರುವುದು ಸತ್ಯ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ. ಓರ್ವ ಪೊಲೀಸ್ ಅಧಿಕಾರಿ, ಅತ್ಯಾಚಾರ, ಹಲ್ಲೆ, ಬ್ಲ್ಯಾಕ್‍ಮೇಲ್‍ನಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವಾಗ, ಆ ಅಧಿಕಾರಿಯ ಮೇಲೆ ವಿಚಾರಣೆ ನಡೆಯುತ್ತಿರುವಾಗಲೇ ಅವರಿಗೆ ಮತ್ತೇ ಎಕ್ಸೆಕ್ಯೂಟಿವ್ ಪೋಸ್ಟಿಂಗ್ ನೀಡುವುದು ಎಷ್ಟು ಸರಿ?

ಮೊದಲೇ ಪೊಲೀಸ್ ಠಾಣೆ ಎಂದರೆ ಹೆದರಿ, ತಮ್ಮ ಮೇಲಾದ ಅತ್ಯಾಚಾರ, ಶೋಷಣೆಗಳನ್ನು ಬಹಿರಂಗಪಡಿಸಲು, ದೂರು ನೀಡಲು ಹೆದರುವ ಪರಿಸ್ಥಿತಿಯಲ್ಲಿ ಒಬ್ಬ ಉನ್ನತ ಅಧಿಕಾರಿಯೇ ಆರೋಪಿಯಾಗಿರುವ ಪೊಲೀಸ್ ಠಾಣೆಗೆ ಮಹಿಳೆಯರು, ಸಂತ್ರಸ್ತರು ದೂರು ನೀಡಲು ಯಾವ ಧೈರ್ಯದಿಂದ ಬರಬೇಕು? ಈ ಪ್ರಕರಣ ಇಡೀ ಪೊಲೀಸ್ ಇಲಾಖೆಯ ಮೇಲೆ ಕಪ್ಪುಚುಕ್ಕೆಯಾಗಿ ಪರಿಣಮಿಸುತ್ತದಲ್ಲವೇ? ಪೊಲೀಸ್ ಇಲಾಖೆಯಲ್ಲಿಯ ದಕ್ಷ ಅಧಿಕಾರಿಗಳು ಏಕೆ ಸುಮ್ಮನಿದ್ದಾರೆ?

ಎಲ್ಲಕ್ಕಿಂತ ಮುಖ್ಯವಾಗಿ ಪೊಲೀಸರಿಂದ ಸಂತ್ರಸ್ತೆಗೆ ನ್ಯಾಯ ಸಿಗಬಹುದು ಎಂಬ ನಂಬಿಕೆಯನ್ನು ಕಳೆದುಕೊಳ್ಳಲು ಇಲಾಖೆ ಬಿಡಬಾರದು. ಶೀಘ್ರವಾಗಿ ನ್ಯಾಯ ದೊರಕಿಸುವಂತೆ ಇಲಾಖೆ ಮತ್ತು ಸರಕಾರ ತುರ್ತು ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಇಡೀ ಇಲಾಖೆಯೇ ಈ ಹಗರಣದಲ್ಲಿ ಭಾಗಿಯಾಗಿದೆ ಎನ್ನುವ ನಿಷ್ಕರ್ಷಕ್ಕೆ ಬಂದುಬಿಡುವಂತೆ ಆಗುತ್ತದೆ. ಆಗಬೇಕಾದ್ದು ಇಷ್ಟೇ. ತನಿಖೆ ಪೂರ್ಣಗೊಳ್ಳಬೇಕು; ತಪ್ಪಿದ್ದರೆ ಶಿಕ್ಷೆಯಾಗಬೇಕು. ಆ ನಂತರವೇ ಸದರಿ ಅಧಿಕಾರಿಯ ಸ್ಥಾನ ನಿರ್ಧಾರ ಆಗಬೇಕು.

ಇಷ್ಟನ್ನು ಹೇಳಿದ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು ಬೀದಿಯಲ್ಲಿ ಎಳೆದು ಬಂಧಿಸುವುದೆಂದರೆ ಇದರ ಹಿಂದೆ ಪೊಲೀಸರ ಈಗೋಗಳು ಮತ್ತು ತಪ್ಪನ್ನು ಮುಚ್ಚಿ ಹಾಕುವ ಪ್ರಯತ್ನ ಇದೆಯೆಂಬ ಭಾವನೆ ಬಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...