Homeಮುಖಪುಟಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

- Advertisement -
- Advertisement -

2016ರಲ್ಲಿ ಓರ್ವ ವ್ಯಕ್ತಿ ದಾವಣಗೆರೆಯ ಉನ್ನತ ಪೊಲೀಸ್ ಅಧಿಕಾರಿಯ ಮೇಲೆ ಒಂದು ಗಂಭೀರ ಆರೋಪ ಮಾಡುತ್ತಾರೆ. ತನ್ನ ಪತ್ನಿಯೊಂದಿಗೆ ಆ ಪೊಲೀಸ್ ಅಧಿಕಾರಿ ಬಲವಂತದ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದಾರೆಂದೂ, ತಮ್ಮ ಲೈಂಗಿಕ ಕ್ರಿಯೆಗಳ ಫೋಟೋ, ವಿಡಿಯೋ ಮಾಡಿ ಅವುಗಳನ್ನು ಬಳಸಿ ಲೈಂಗಿಕ ಸಂಬಂಧ ಮುಂದುವರೆಸುವಂತೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸ್ವತಃ ಸಂತ್ರಸ್ತೆಯೇ ದೂರು ನೀಡಿಲ್ಲವಾದುದರಿಂದ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಹೇಳಲಾಯಿತು.

ಅದಾದ ನಂತರ ಕನ್ನಡದ ಕೆಲವು ಟಿವಿ ವಾಹಿನಿಗಳಲ್ಲಿ ಆ ಅಧಿಕಾರಿ ಮತ್ತು ಓರ್ವ ಮಹಿಳೆಯು ಲೈಂಗಿಕ ಕ್ರಿಯೆಗಳಲ್ಲಿ ತೊಡಗಿದ ಫೋಟೊ ಮತ್ತು ವಿಡಿಯೋಗಳು ಬಿತ್ತರಿಸಲಾದವು. ಆ ಅಧಿಕಾರಿಯ ಮೇಲೆ ಇಲಾಖೆ ವಿಚಾರಣೆ ಒಳಪಡಿಸಲಾಯಿತು. ವಿಚಾರಣೆ ಪ್ರಾರಂಭವಾಗಿ ಒಂದೂವರೆ ವರ್ಷಗಳಿಗಿಂತ ಹೆಚ್ಚು ಕಾಲ ಕಳೆದಿದ್ದರೂ ಇನ್ನೂ ವಿಚಾರಣೆ ಪೂರ್ಣಗೊಂಡಿಲ್ಲ ಮತ್ತು ಈ ಮಧ್ಯೆ ಅದೇ ಅಧಿಕಾರಿಗೆ ಮತ್ತೆ ಬೆಂಗಳೂರಿನಲ್ಲಿಯೇ ಆಯಕಟ್ಟಿನ ಜಾಗದಲ್ಲಿ ತಂದು ಕೂರಿಸಲಾಗಿದೆ.

ಎಲ್ಲರೂ ಮರೆತರೆ? ಸಂತ್ರಸ್ತೆಗೆ ನ್ಯಾಯ ಸಿಕ್ಕಿತೆ? ಸಿಗುವುದೇ?
ಸುದ್ದಿ ವಾಹಿನಿಗಳಲ್ಲಿ ತನ್ನ ವಿಡಿಯೋಗಳು ಬಿತ್ತರಿಸಲಾದ ನಂತರ ಆರೋಪಿ ಪೊಲೀಸ್ ಅಧಿಕಾರಿಯು ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಟಿವಿ ಮತ್ತು ಮುದ್ರಣ ಮಾಧ್ಯಮಗಳನ್ನು ಒಳಗೊಂಡ ಸುಮಾರು 32 ವಾಹಿನಿ ಮತ್ತು ಪತ್ರಿಕೆಗಳು ಆ ವಿಷಯದ ಬಗ್ಗೆ ಬರೆಯದಂತೆ ತಡೆಯಾಜ್ಞೆ ತಂದರು. ಹಾಗಾಗಿ ಅದರ ಬಗ್ಗೆ ಸುದ್ದಿಗಳು ಜನಸಾಮಾನ್ಯರಿಗೆ ಮುಟ್ಟಲಿಲ್ಲ.

ಆದರೆ ಈ ತಡೆಯಾಜ್ಞೆ ಕೇವಲ ಆಯಾ ಮಾಧ್ಯಮ ಸಂಸ್ಥೆಗಳ ಮೇಲೆ ಮಾತ್ರ ಇದ್ದು ಇತರರು ಅದರ ಬಗ್ಗೆ ಮಾತನಾಡಬಹುದಾಗಿತ್ತು. ಹಾಗಾಗಿ ಆ ವಿಷಯವನ್ನು ಕೆಲವು ಸಾಮಾಜಿಕ ಹೋರಾಟಗಾರರು ಕೈಗೆತ್ತಿಕೊಂಡರು. ಪ್ರಮುಖವಾಗಿ ರವಿ ಕೃಷ್ಣಾರೆಡ್ಡಿ ಮತ್ತು ಅವರ ಸಂಗಾತಿಗಳು. ಓರ್ವ ವ್ಯಕ್ತಿಯೊಬ್ಬ ರವಿ ಕೃಷ್ಣಾರೆಡ್ಡಿ ಅವರ ಬಳಿ ಎಲ್ಲಾ ದಾಖಲೆಗಳನ್ನು, ವಿಡಿಯೋ, ಫೋಟೋಗಳನ್ನು ತಂದು, ಆ ಸಂತ್ರಸ್ತರ ಮೇಲೆ ಆಗುತ್ತಿರುವ ಅನ್ಯಾಯದ ಬಗ್ಗೆ ಹೇಳಿದಾಗ, ಓರ್ವ ಉನ್ನತ ಐಪಿಎಸ್ ಅಧಿಕಾರಿಯ ಮೇಲೆ ಗುರುತರ ಆಪಾದನೆಗಳಿದ್ದರೂ ಇನ್ನೂ ಉನ್ನತ ಹುದ್ದೆಯಲ್ಲಿ ಮುಂದುವರೆಯುವುದು ಆಡಳಿತದ ದೃಷ್ಟಿಯಿಂದ ತಪ್ಪು ಎಂದು ವಿಷಯವನ್ನು ಕೈಗೆತ್ತಿಕೊಂಡರು.

ಮುಂದಿನ ಕ್ರಮವಾಗಿ ರವಿ ಕೃಷ್ಣಾರೆಡ್ಡಿ ಮತ್ತು ಅವರ ಸಂಗಡಿಗರು ಫೆಬ್ರುವರಿ 11ನೇ ತಾರೀಕಿನಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ಭೇಟಿ ಮಾಡಿ, ವಿಚಾರಣೆ ಪೂರ್ಣವಾಗುವ ತನಕ ಆ ಅಧಿಕಾರಿಯನ್ನು ಸೇವೆಯಲ್ಲಿ ಮುಂದುವರೆಸಬಾರದು ಎಂದು ವಿನಂತಿಸಿದ್ದಾರೆ. ಆಗ ಪೊಲೀಸ್ ಆಯುಕ್ತರು, ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಅಧಿಕಾರ ಮುಖ್ಯಮಂತ್ರಿಗಳ ಬಳಿ ಮಾತ್ರ ಇದೆ, ಹಾಗಾಗಿ ಮನವಿಯನ್ನು ಸರಕಾರಕ್ಕೆ ಕಳುಹಿಸುತ್ತೇನೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.

ಆಗ ಈ ಹೋರಾಟಗಾರರು, ಸರಕಾರವು ತುರ್ತಾಗಿ ಕ್ರಮ ಕೈಗೊಳ್ಳುವಂತೆ ಮಾಡಬೇಕು. ಶೀಘ್ರದಲ್ಲಿ ನ್ಯಾಯ ಸಿಗದಿದ್ದರೆ ಅನಿವಾರ್ಯವಾಗಿ ತಮ್ಮಲ್ಲಿರುವ ದಾಖಲೆಗಳನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಅದರಿಂದ ಕುಪಿತಗೊಂಡ ಪೊಲೀಸ್ ಆಯುಕ್ತರು ಅವರನ್ನು ಮತ್ತು ಅವರ ಸಂಗಡಿಗರನ್ನು ದೈಹಿಕ ಬಲ ಬಳಸಿ ಹೊರದಬ್ಬಿಸಿದರು ಎಂದು ರವಿ ಕೃಷ್ಣಾರೆಡ್ಡಿ ಅವರು ಆಪಾದಿಸಿದ್ದಾರೆ.

ಅಲ್ಲಿಂದ ಹೊರಬಂದ ರೆಡ್ಡಿ ಮತ್ತು ಸಂಗಡಿಗರು ತಮ್ಮ ಬಳಿಯಿದ್ದ ಮನವಿಪತ್ರದ ಪ್ರತಿಗಳನ್ನು ಸುತ್ತಲ ಜನರಿಗೆ ಹಂಚಿದ್ದಾರೆ. ಆಗ ಪೊಲೀಸ್ ಸಿಬ್ಬಂದಿ ಅಡ್ಡಿಪಡಿಸಿದ್ದರಿಂದ ಅಲ್ಲಿಂದ ತೆರಳಿ ಹೈಕೋರ್ಟ್‍ನ ಪಾರ್ಕಿಂಗ್ ಕಡೆ ಬಂದಿದ್ದಾರೆ. ಆಗ ಪೊಲೀಸರು ಅಲ್ಲಿ ಬಂದು ರವಿ ಕೃಷ್ಣಾರೆಡ್ಡಿ ಮತ್ತು ವತ್ಸಲ ಎಂಬ ಒಬ್ಬ ಮಹಿಳಾ ಕಾರ್ಯಕರ್ತೆಯನ್ನೂ ಬಲವಂತವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವಾಹನದಲ್ಲಿ ಕೆಲಕಾಲ ಸುತ್ತಿಸಿ, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೆಲಗಂಟೆ ಇರಿಸಿ ಬಿಡುಗಡೆ ಮಾಡಿದ್ದಾರೆ. ಈ ವಿಷಯಕ್ಕೆ ತಲೆಹಾಕಬರಾದು ಎಂದು ‘ಉಪದೇಶ’ ನೀಡಿದ್ದಾರೆ. ಸದ್ಯಕ್ಕೆ ರವಿ ಕೃಷ್ಣಾರೆಡ್ಡಿಯವರು ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಉತ್ತರವಿಲ್ಲದ ಪ್ರಶ್ನೆಗಳು
2018ರ ಜುಲೈ ತಿಂಗಳಲ್ಲೇ ಅಧಿಕಾರಿಯ ಮೇಲೆ ಸಂತ್ರಸ್ತೆಯ ಪತಿಯು ತನ್ನ ಪತ್ನಿಯ ಮೇಲೆ ಅತ್ಯಾಚಾರ, ಹಲ್ಲೆ ಮತ್ತು ವ್ಯಭಿಚಾರ ಎಸಗಿದ್ದಾರೆ ಎಂದು ಖಾಸಗಿ ದೂರು ಸಲ್ಲಿಸಿದ್ದಾರೆ. ದೂರು ಸಲ್ಲಿಸಿದ ಕೆಲವು ದಿನಗಳಲ್ಲೇ ಕನ್ನಡದ ಖಾಸಗಿ ವಾಹಿನಿಗಳಲ್ಲಿ ಆ ಅಧಿಕಾರಿಯ ಮತ್ತು ಸಂತ್ರಸ್ತೆಯ ವಿಡಿಯೋಗಳನ್ನು ಬಿತ್ತರಿಸಲಾಗಿದೆ. ಅಧಿಕಾರಿಯ ಮೇಲೆ ಇಲಾಖಾ ವಿಚಾರಣೆ ಶುರುಮಾಡಲಾಗಿದೆ. ವಿಚಾರಣೆ ಶುರುವಾಗಿ ಒಂದೂವರೆ ವರ್ಷ ಕಳೆದರೂ ಇನ್ನೂ ಏಕೆ ಪುರ್ಣಗೊಂಡಿಲ್ಲ? ಆರೋಪಿ ಅಧಿಕಾರಿಯನ್ನು ರಕ್ಷಿಸುವ ಕಾರಣಕ್ಕಾಗಿಯೇ ಸರಕಾರಿ ಕೆಂಪುಪಟ್ಟಿಯ ವಿಧಾನವನ್ನು ಬಳಸಲಾಗುತ್ತಿದೆಯೇ?

ಪ್ರಕರಣ ಬಯಲಿಗೆ ಬಂದ ಆರಂಭದಲ್ಲಿ ಸಂತ್ರಸ್ತ ಮಹಿಳೆಯು ಎಲ್ಲವನ್ನು ಅಲ್ಲಗೆಳೆದಿದ್ದರೂ 2019ರ ಜನವರಿ ತಿಂಗಳಲ್ಲಿ ತನಗೆ ಈ ಪೊಲೀಸ್ ಅಧಿಕಾರಿಯಿಂದ ಜೀವ ಬೆದರಿಕೆ ಇದೆ ಮತ್ತು ತನ್ನ ಪತಿ ಹೇಳಿರುವುದು ಸತ್ಯ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ. ಓರ್ವ ಪೊಲೀಸ್ ಅಧಿಕಾರಿ, ಅತ್ಯಾಚಾರ, ಹಲ್ಲೆ, ಬ್ಲ್ಯಾಕ್‍ಮೇಲ್‍ನಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವಾಗ, ಆ ಅಧಿಕಾರಿಯ ಮೇಲೆ ವಿಚಾರಣೆ ನಡೆಯುತ್ತಿರುವಾಗಲೇ ಅವರಿಗೆ ಮತ್ತೇ ಎಕ್ಸೆಕ್ಯೂಟಿವ್ ಪೋಸ್ಟಿಂಗ್ ನೀಡುವುದು ಎಷ್ಟು ಸರಿ?

ಮೊದಲೇ ಪೊಲೀಸ್ ಠಾಣೆ ಎಂದರೆ ಹೆದರಿ, ತಮ್ಮ ಮೇಲಾದ ಅತ್ಯಾಚಾರ, ಶೋಷಣೆಗಳನ್ನು ಬಹಿರಂಗಪಡಿಸಲು, ದೂರು ನೀಡಲು ಹೆದರುವ ಪರಿಸ್ಥಿತಿಯಲ್ಲಿ ಒಬ್ಬ ಉನ್ನತ ಅಧಿಕಾರಿಯೇ ಆರೋಪಿಯಾಗಿರುವ ಪೊಲೀಸ್ ಠಾಣೆಗೆ ಮಹಿಳೆಯರು, ಸಂತ್ರಸ್ತರು ದೂರು ನೀಡಲು ಯಾವ ಧೈರ್ಯದಿಂದ ಬರಬೇಕು? ಈ ಪ್ರಕರಣ ಇಡೀ ಪೊಲೀಸ್ ಇಲಾಖೆಯ ಮೇಲೆ ಕಪ್ಪುಚುಕ್ಕೆಯಾಗಿ ಪರಿಣಮಿಸುತ್ತದಲ್ಲವೇ? ಪೊಲೀಸ್ ಇಲಾಖೆಯಲ್ಲಿಯ ದಕ್ಷ ಅಧಿಕಾರಿಗಳು ಏಕೆ ಸುಮ್ಮನಿದ್ದಾರೆ?

ಎಲ್ಲಕ್ಕಿಂತ ಮುಖ್ಯವಾಗಿ ಪೊಲೀಸರಿಂದ ಸಂತ್ರಸ್ತೆಗೆ ನ್ಯಾಯ ಸಿಗಬಹುದು ಎಂಬ ನಂಬಿಕೆಯನ್ನು ಕಳೆದುಕೊಳ್ಳಲು ಇಲಾಖೆ ಬಿಡಬಾರದು. ಶೀಘ್ರವಾಗಿ ನ್ಯಾಯ ದೊರಕಿಸುವಂತೆ ಇಲಾಖೆ ಮತ್ತು ಸರಕಾರ ತುರ್ತು ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಇಡೀ ಇಲಾಖೆಯೇ ಈ ಹಗರಣದಲ್ಲಿ ಭಾಗಿಯಾಗಿದೆ ಎನ್ನುವ ನಿಷ್ಕರ್ಷಕ್ಕೆ ಬಂದುಬಿಡುವಂತೆ ಆಗುತ್ತದೆ. ಆಗಬೇಕಾದ್ದು ಇಷ್ಟೇ. ತನಿಖೆ ಪೂರ್ಣಗೊಳ್ಳಬೇಕು; ತಪ್ಪಿದ್ದರೆ ಶಿಕ್ಷೆಯಾಗಬೇಕು. ಆ ನಂತರವೇ ಸದರಿ ಅಧಿಕಾರಿಯ ಸ್ಥಾನ ನಿರ್ಧಾರ ಆಗಬೇಕು.

ಇಷ್ಟನ್ನು ಹೇಳಿದ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು ಬೀದಿಯಲ್ಲಿ ಎಳೆದು ಬಂಧಿಸುವುದೆಂದರೆ ಇದರ ಹಿಂದೆ ಪೊಲೀಸರ ಈಗೋಗಳು ಮತ್ತು ತಪ್ಪನ್ನು ಮುಚ್ಚಿ ಹಾಕುವ ಪ್ರಯತ್ನ ಇದೆಯೆಂಬ ಭಾವನೆ ಬಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...