Homeಮುಖಪುಟಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

- Advertisement -
- Advertisement -

2016ರಲ್ಲಿ ಓರ್ವ ವ್ಯಕ್ತಿ ದಾವಣಗೆರೆಯ ಉನ್ನತ ಪೊಲೀಸ್ ಅಧಿಕಾರಿಯ ಮೇಲೆ ಒಂದು ಗಂಭೀರ ಆರೋಪ ಮಾಡುತ್ತಾರೆ. ತನ್ನ ಪತ್ನಿಯೊಂದಿಗೆ ಆ ಪೊಲೀಸ್ ಅಧಿಕಾರಿ ಬಲವಂತದ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದಾರೆಂದೂ, ತಮ್ಮ ಲೈಂಗಿಕ ಕ್ರಿಯೆಗಳ ಫೋಟೋ, ವಿಡಿಯೋ ಮಾಡಿ ಅವುಗಳನ್ನು ಬಳಸಿ ಲೈಂಗಿಕ ಸಂಬಂಧ ಮುಂದುವರೆಸುವಂತೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸ್ವತಃ ಸಂತ್ರಸ್ತೆಯೇ ದೂರು ನೀಡಿಲ್ಲವಾದುದರಿಂದ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಹೇಳಲಾಯಿತು.

ಅದಾದ ನಂತರ ಕನ್ನಡದ ಕೆಲವು ಟಿವಿ ವಾಹಿನಿಗಳಲ್ಲಿ ಆ ಅಧಿಕಾರಿ ಮತ್ತು ಓರ್ವ ಮಹಿಳೆಯು ಲೈಂಗಿಕ ಕ್ರಿಯೆಗಳಲ್ಲಿ ತೊಡಗಿದ ಫೋಟೊ ಮತ್ತು ವಿಡಿಯೋಗಳು ಬಿತ್ತರಿಸಲಾದವು. ಆ ಅಧಿಕಾರಿಯ ಮೇಲೆ ಇಲಾಖೆ ವಿಚಾರಣೆ ಒಳಪಡಿಸಲಾಯಿತು. ವಿಚಾರಣೆ ಪ್ರಾರಂಭವಾಗಿ ಒಂದೂವರೆ ವರ್ಷಗಳಿಗಿಂತ ಹೆಚ್ಚು ಕಾಲ ಕಳೆದಿದ್ದರೂ ಇನ್ನೂ ವಿಚಾರಣೆ ಪೂರ್ಣಗೊಂಡಿಲ್ಲ ಮತ್ತು ಈ ಮಧ್ಯೆ ಅದೇ ಅಧಿಕಾರಿಗೆ ಮತ್ತೆ ಬೆಂಗಳೂರಿನಲ್ಲಿಯೇ ಆಯಕಟ್ಟಿನ ಜಾಗದಲ್ಲಿ ತಂದು ಕೂರಿಸಲಾಗಿದೆ.

ಎಲ್ಲರೂ ಮರೆತರೆ? ಸಂತ್ರಸ್ತೆಗೆ ನ್ಯಾಯ ಸಿಕ್ಕಿತೆ? ಸಿಗುವುದೇ?
ಸುದ್ದಿ ವಾಹಿನಿಗಳಲ್ಲಿ ತನ್ನ ವಿಡಿಯೋಗಳು ಬಿತ್ತರಿಸಲಾದ ನಂತರ ಆರೋಪಿ ಪೊಲೀಸ್ ಅಧಿಕಾರಿಯು ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಟಿವಿ ಮತ್ತು ಮುದ್ರಣ ಮಾಧ್ಯಮಗಳನ್ನು ಒಳಗೊಂಡ ಸುಮಾರು 32 ವಾಹಿನಿ ಮತ್ತು ಪತ್ರಿಕೆಗಳು ಆ ವಿಷಯದ ಬಗ್ಗೆ ಬರೆಯದಂತೆ ತಡೆಯಾಜ್ಞೆ ತಂದರು. ಹಾಗಾಗಿ ಅದರ ಬಗ್ಗೆ ಸುದ್ದಿಗಳು ಜನಸಾಮಾನ್ಯರಿಗೆ ಮುಟ್ಟಲಿಲ್ಲ.

ಆದರೆ ಈ ತಡೆಯಾಜ್ಞೆ ಕೇವಲ ಆಯಾ ಮಾಧ್ಯಮ ಸಂಸ್ಥೆಗಳ ಮೇಲೆ ಮಾತ್ರ ಇದ್ದು ಇತರರು ಅದರ ಬಗ್ಗೆ ಮಾತನಾಡಬಹುದಾಗಿತ್ತು. ಹಾಗಾಗಿ ಆ ವಿಷಯವನ್ನು ಕೆಲವು ಸಾಮಾಜಿಕ ಹೋರಾಟಗಾರರು ಕೈಗೆತ್ತಿಕೊಂಡರು. ಪ್ರಮುಖವಾಗಿ ರವಿ ಕೃಷ್ಣಾರೆಡ್ಡಿ ಮತ್ತು ಅವರ ಸಂಗಾತಿಗಳು. ಓರ್ವ ವ್ಯಕ್ತಿಯೊಬ್ಬ ರವಿ ಕೃಷ್ಣಾರೆಡ್ಡಿ ಅವರ ಬಳಿ ಎಲ್ಲಾ ದಾಖಲೆಗಳನ್ನು, ವಿಡಿಯೋ, ಫೋಟೋಗಳನ್ನು ತಂದು, ಆ ಸಂತ್ರಸ್ತರ ಮೇಲೆ ಆಗುತ್ತಿರುವ ಅನ್ಯಾಯದ ಬಗ್ಗೆ ಹೇಳಿದಾಗ, ಓರ್ವ ಉನ್ನತ ಐಪಿಎಸ್ ಅಧಿಕಾರಿಯ ಮೇಲೆ ಗುರುತರ ಆಪಾದನೆಗಳಿದ್ದರೂ ಇನ್ನೂ ಉನ್ನತ ಹುದ್ದೆಯಲ್ಲಿ ಮುಂದುವರೆಯುವುದು ಆಡಳಿತದ ದೃಷ್ಟಿಯಿಂದ ತಪ್ಪು ಎಂದು ವಿಷಯವನ್ನು ಕೈಗೆತ್ತಿಕೊಂಡರು.

ಮುಂದಿನ ಕ್ರಮವಾಗಿ ರವಿ ಕೃಷ್ಣಾರೆಡ್ಡಿ ಮತ್ತು ಅವರ ಸಂಗಡಿಗರು ಫೆಬ್ರುವರಿ 11ನೇ ತಾರೀಕಿನಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ಭೇಟಿ ಮಾಡಿ, ವಿಚಾರಣೆ ಪೂರ್ಣವಾಗುವ ತನಕ ಆ ಅಧಿಕಾರಿಯನ್ನು ಸೇವೆಯಲ್ಲಿ ಮುಂದುವರೆಸಬಾರದು ಎಂದು ವಿನಂತಿಸಿದ್ದಾರೆ. ಆಗ ಪೊಲೀಸ್ ಆಯುಕ್ತರು, ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಅಧಿಕಾರ ಮುಖ್ಯಮಂತ್ರಿಗಳ ಬಳಿ ಮಾತ್ರ ಇದೆ, ಹಾಗಾಗಿ ಮನವಿಯನ್ನು ಸರಕಾರಕ್ಕೆ ಕಳುಹಿಸುತ್ತೇನೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.

ಆಗ ಈ ಹೋರಾಟಗಾರರು, ಸರಕಾರವು ತುರ್ತಾಗಿ ಕ್ರಮ ಕೈಗೊಳ್ಳುವಂತೆ ಮಾಡಬೇಕು. ಶೀಘ್ರದಲ್ಲಿ ನ್ಯಾಯ ಸಿಗದಿದ್ದರೆ ಅನಿವಾರ್ಯವಾಗಿ ತಮ್ಮಲ್ಲಿರುವ ದಾಖಲೆಗಳನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಅದರಿಂದ ಕುಪಿತಗೊಂಡ ಪೊಲೀಸ್ ಆಯುಕ್ತರು ಅವರನ್ನು ಮತ್ತು ಅವರ ಸಂಗಡಿಗರನ್ನು ದೈಹಿಕ ಬಲ ಬಳಸಿ ಹೊರದಬ್ಬಿಸಿದರು ಎಂದು ರವಿ ಕೃಷ್ಣಾರೆಡ್ಡಿ ಅವರು ಆಪಾದಿಸಿದ್ದಾರೆ.

ಅಲ್ಲಿಂದ ಹೊರಬಂದ ರೆಡ್ಡಿ ಮತ್ತು ಸಂಗಡಿಗರು ತಮ್ಮ ಬಳಿಯಿದ್ದ ಮನವಿಪತ್ರದ ಪ್ರತಿಗಳನ್ನು ಸುತ್ತಲ ಜನರಿಗೆ ಹಂಚಿದ್ದಾರೆ. ಆಗ ಪೊಲೀಸ್ ಸಿಬ್ಬಂದಿ ಅಡ್ಡಿಪಡಿಸಿದ್ದರಿಂದ ಅಲ್ಲಿಂದ ತೆರಳಿ ಹೈಕೋರ್ಟ್‍ನ ಪಾರ್ಕಿಂಗ್ ಕಡೆ ಬಂದಿದ್ದಾರೆ. ಆಗ ಪೊಲೀಸರು ಅಲ್ಲಿ ಬಂದು ರವಿ ಕೃಷ್ಣಾರೆಡ್ಡಿ ಮತ್ತು ವತ್ಸಲ ಎಂಬ ಒಬ್ಬ ಮಹಿಳಾ ಕಾರ್ಯಕರ್ತೆಯನ್ನೂ ಬಲವಂತವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವಾಹನದಲ್ಲಿ ಕೆಲಕಾಲ ಸುತ್ತಿಸಿ, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೆಲಗಂಟೆ ಇರಿಸಿ ಬಿಡುಗಡೆ ಮಾಡಿದ್ದಾರೆ. ಈ ವಿಷಯಕ್ಕೆ ತಲೆಹಾಕಬರಾದು ಎಂದು ‘ಉಪದೇಶ’ ನೀಡಿದ್ದಾರೆ. ಸದ್ಯಕ್ಕೆ ರವಿ ಕೃಷ್ಣಾರೆಡ್ಡಿಯವರು ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಉತ್ತರವಿಲ್ಲದ ಪ್ರಶ್ನೆಗಳು
2018ರ ಜುಲೈ ತಿಂಗಳಲ್ಲೇ ಅಧಿಕಾರಿಯ ಮೇಲೆ ಸಂತ್ರಸ್ತೆಯ ಪತಿಯು ತನ್ನ ಪತ್ನಿಯ ಮೇಲೆ ಅತ್ಯಾಚಾರ, ಹಲ್ಲೆ ಮತ್ತು ವ್ಯಭಿಚಾರ ಎಸಗಿದ್ದಾರೆ ಎಂದು ಖಾಸಗಿ ದೂರು ಸಲ್ಲಿಸಿದ್ದಾರೆ. ದೂರು ಸಲ್ಲಿಸಿದ ಕೆಲವು ದಿನಗಳಲ್ಲೇ ಕನ್ನಡದ ಖಾಸಗಿ ವಾಹಿನಿಗಳಲ್ಲಿ ಆ ಅಧಿಕಾರಿಯ ಮತ್ತು ಸಂತ್ರಸ್ತೆಯ ವಿಡಿಯೋಗಳನ್ನು ಬಿತ್ತರಿಸಲಾಗಿದೆ. ಅಧಿಕಾರಿಯ ಮೇಲೆ ಇಲಾಖಾ ವಿಚಾರಣೆ ಶುರುಮಾಡಲಾಗಿದೆ. ವಿಚಾರಣೆ ಶುರುವಾಗಿ ಒಂದೂವರೆ ವರ್ಷ ಕಳೆದರೂ ಇನ್ನೂ ಏಕೆ ಪುರ್ಣಗೊಂಡಿಲ್ಲ? ಆರೋಪಿ ಅಧಿಕಾರಿಯನ್ನು ರಕ್ಷಿಸುವ ಕಾರಣಕ್ಕಾಗಿಯೇ ಸರಕಾರಿ ಕೆಂಪುಪಟ್ಟಿಯ ವಿಧಾನವನ್ನು ಬಳಸಲಾಗುತ್ತಿದೆಯೇ?

ಪ್ರಕರಣ ಬಯಲಿಗೆ ಬಂದ ಆರಂಭದಲ್ಲಿ ಸಂತ್ರಸ್ತ ಮಹಿಳೆಯು ಎಲ್ಲವನ್ನು ಅಲ್ಲಗೆಳೆದಿದ್ದರೂ 2019ರ ಜನವರಿ ತಿಂಗಳಲ್ಲಿ ತನಗೆ ಈ ಪೊಲೀಸ್ ಅಧಿಕಾರಿಯಿಂದ ಜೀವ ಬೆದರಿಕೆ ಇದೆ ಮತ್ತು ತನ್ನ ಪತಿ ಹೇಳಿರುವುದು ಸತ್ಯ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ. ಓರ್ವ ಪೊಲೀಸ್ ಅಧಿಕಾರಿ, ಅತ್ಯಾಚಾರ, ಹಲ್ಲೆ, ಬ್ಲ್ಯಾಕ್‍ಮೇಲ್‍ನಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವಾಗ, ಆ ಅಧಿಕಾರಿಯ ಮೇಲೆ ವಿಚಾರಣೆ ನಡೆಯುತ್ತಿರುವಾಗಲೇ ಅವರಿಗೆ ಮತ್ತೇ ಎಕ್ಸೆಕ್ಯೂಟಿವ್ ಪೋಸ್ಟಿಂಗ್ ನೀಡುವುದು ಎಷ್ಟು ಸರಿ?

ಮೊದಲೇ ಪೊಲೀಸ್ ಠಾಣೆ ಎಂದರೆ ಹೆದರಿ, ತಮ್ಮ ಮೇಲಾದ ಅತ್ಯಾಚಾರ, ಶೋಷಣೆಗಳನ್ನು ಬಹಿರಂಗಪಡಿಸಲು, ದೂರು ನೀಡಲು ಹೆದರುವ ಪರಿಸ್ಥಿತಿಯಲ್ಲಿ ಒಬ್ಬ ಉನ್ನತ ಅಧಿಕಾರಿಯೇ ಆರೋಪಿಯಾಗಿರುವ ಪೊಲೀಸ್ ಠಾಣೆಗೆ ಮಹಿಳೆಯರು, ಸಂತ್ರಸ್ತರು ದೂರು ನೀಡಲು ಯಾವ ಧೈರ್ಯದಿಂದ ಬರಬೇಕು? ಈ ಪ್ರಕರಣ ಇಡೀ ಪೊಲೀಸ್ ಇಲಾಖೆಯ ಮೇಲೆ ಕಪ್ಪುಚುಕ್ಕೆಯಾಗಿ ಪರಿಣಮಿಸುತ್ತದಲ್ಲವೇ? ಪೊಲೀಸ್ ಇಲಾಖೆಯಲ್ಲಿಯ ದಕ್ಷ ಅಧಿಕಾರಿಗಳು ಏಕೆ ಸುಮ್ಮನಿದ್ದಾರೆ?

ಎಲ್ಲಕ್ಕಿಂತ ಮುಖ್ಯವಾಗಿ ಪೊಲೀಸರಿಂದ ಸಂತ್ರಸ್ತೆಗೆ ನ್ಯಾಯ ಸಿಗಬಹುದು ಎಂಬ ನಂಬಿಕೆಯನ್ನು ಕಳೆದುಕೊಳ್ಳಲು ಇಲಾಖೆ ಬಿಡಬಾರದು. ಶೀಘ್ರವಾಗಿ ನ್ಯಾಯ ದೊರಕಿಸುವಂತೆ ಇಲಾಖೆ ಮತ್ತು ಸರಕಾರ ತುರ್ತು ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಇಡೀ ಇಲಾಖೆಯೇ ಈ ಹಗರಣದಲ್ಲಿ ಭಾಗಿಯಾಗಿದೆ ಎನ್ನುವ ನಿಷ್ಕರ್ಷಕ್ಕೆ ಬಂದುಬಿಡುವಂತೆ ಆಗುತ್ತದೆ. ಆಗಬೇಕಾದ್ದು ಇಷ್ಟೇ. ತನಿಖೆ ಪೂರ್ಣಗೊಳ್ಳಬೇಕು; ತಪ್ಪಿದ್ದರೆ ಶಿಕ್ಷೆಯಾಗಬೇಕು. ಆ ನಂತರವೇ ಸದರಿ ಅಧಿಕಾರಿಯ ಸ್ಥಾನ ನಿರ್ಧಾರ ಆಗಬೇಕು.

ಇಷ್ಟನ್ನು ಹೇಳಿದ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು ಬೀದಿಯಲ್ಲಿ ಎಳೆದು ಬಂಧಿಸುವುದೆಂದರೆ ಇದರ ಹಿಂದೆ ಪೊಲೀಸರ ಈಗೋಗಳು ಮತ್ತು ತಪ್ಪನ್ನು ಮುಚ್ಚಿ ಹಾಕುವ ಪ್ರಯತ್ನ ಇದೆಯೆಂಬ ಭಾವನೆ ಬಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...