Homeಮುಖಪುಟಶಾಲೆಗಳ ವೈಚಾರಿಕ ಜಾನಪದಕ್ಕೊಂದು ಮಾದರಿ ರವಿರಾಜ್ ಸಾಗರ್

ಶಾಲೆಗಳ ವೈಚಾರಿಕ ಜಾನಪದಕ್ಕೊಂದು ಮಾದರಿ ರವಿರಾಜ್ ಸಾಗರ್

ಇರುವ ಜಾನಪದವನ್ನೆಲ್ಲಾ ಮೋಹಿಸಬೇಕಿಲ್ಲ. ಜಾನಪದದಲ್ಲಿ ನಾಶಮಾಡಬೇಕಾದ್ದು, ಸಂಗ್ರಹಕ್ಕೆ ಯೋಗ್ಯವಲ್ಲದ್ದು ಹೆಚ್ಚಿದೆ. ಜಾತಿ, ಲಿಂಗ, ಬಣ್ಣ, ಪ್ರದೇಶ, ಒಡೆಯ, ಆಳು ಇಂತಹ ಬೇಧಗಳ ಗಟ್ಟಿಗೊಳಿಸಿ ಯಥಾಸ್ಥಿತಿಯನ್ನು ಉಳಿಸುವ ರಚನೆಗಳ ಸಂಖ್ಯೆ ದೊಡ್ಡದಿದೆ.

- Advertisement -
- Advertisement -

ಎಲೆ ಮರೆ – 3

| ಅರುಣ್ ಜೋಳದಕೂಡ್ಲಿಗಿ |

ಮಸ್ಕಿ ತಾಲೂಕಿನ ಮಲ್ಕಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಷ್ಟ್ರು ರವಿಚಂದ್ರ.ಡಿ (ರವಿರಾಜ್ ಸಾಗರ್) ಅವರು `ನಮ್ಮೂರ ಜಾನಪದ ಅನುಸಂಧಾನ’ ಎನ್ನುವ ವಿಶಿಷ್ಠ ಕೃತಿ ರಚಿಸಿದ್ದಾರೆ. ಇಲ್ಲಿ ಊರಿನ ಜನಪದರು, ಅವರ ಮೌಖಿಕ ಸಾಹಿತ್ಯವನ್ನು ಸಂಗ್ರಹಿಸಿದ ಶಾಲಾ ಮಕ್ಕಳು ಮತ್ತು ಶಿಕ್ಷಕರು, ಇದೇ ಮೌಖಿಕ ಲಯ ಬಳಸಿ ಮಕ್ಕಳ ಕಲಿಕೆಗೆ ನೆರವಾಗುವಂತೆ ರವಿಚಂದ್ರ ಅವರು ರಚಿಸಿದ ಪದ್ಯಗಳಿವೆ. ಇಲ್ಲಿ ಈ ಮೂರೂ ಸಂಗತಿಗಳ ಮುಖಾಮುಖಿಯಾಗಿದೆ. ವಿಶೇಷವೆಂದರೆ ಜಾನಪದದ ಸಂಗ್ರಹ ಮತ್ತು ಅದರ ಅನ್ವಯಿಕತೆ ಎರಡೂ ಜೊತೆಜೊತೆಗೆ ನಡೆದಿದೆ. ಇದು ಈ ಕೃತಿಯ ವಿಶಿಷ್ಟ ಸಂಗತಿ.

ಇರುವ ಜಾನಪದವನ್ನೆಲ್ಲಾ ಮೋಹಿಸಬೇಕಿಲ್ಲ. ಜಾನಪದದಲ್ಲಿ ನಾಶಮಾಡಬೇಕಾದ್ದು, ಸಂಗ್ರಹಕ್ಕೆ ಯೋಗ್ಯವಲ್ಲದ್ದು ಹೆಚ್ಚಿದೆ. ಜಾತಿ, ಲಿಂಗ, ಬಣ್ಣ, ಪ್ರದೇಶ, ಒಡೆಯ, ಆಳು ಇಂತಹ ಬೇಧಗಳ ಗಟ್ಟಿಗೊಳಿಸಿ ಯಥಾಸ್ಥಿತಿಯನ್ನು ಉಳಿಸುವ ರಚನೆಗಳ ಸಂಖ್ಯೆ ದೊಡ್ಡದಿದೆ. ಅಂತಹ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ರಚನೆಗಳನ್ನು ಮುಂದಿನ ತಲೆಮಾರಿಗೆ ಕಾಪಿಡುವ ಅಗತ್ಯವಿಲ್ಲ. ಪ್ರತಿ ಜಾನಪದ ಸಂಗ್ರಾಹಕರು ಇದನ್ನು ಗಮನಿಸಬೇಕಿದೆ. ರವಿರಾಜ್ ಅವರು ಈ ಸಂಗ್ರಹದಲ್ಲಿ ಅಂತಹ ಸೂಕ್ಷ್ಮತೆಯನ್ನು ಕಾಯ್ದುಕೊಂಡಿದ್ದಾರೆ. ಈ ಕೃತಿಯಲ್ಲಿ ಶಿಕ್ಷಕರಾದ ರವಿಚಂದ್ರ ಅವರು ಜಾನಪದ ಲಯ ಬಳಸಿ ಬರೆದ ಹಾಡುಗಳಲ್ಲಿ ಜೀವಪರವಾದ ಆಯಾಮವಿದೆ. ಇಲ್ಲಿ ಸಂವಿಧಾನಿಕ ಆಶಯಗಳನ್ನು ಬಲಪಡಿಸುವ ಜಾಗೃತಿ ಮೂಡಿಸುವ ಸದಾಶಯವಿದೆ.

ಸೂವ್ವೀ ಸೂವಮ್ಮಾ ಶಾಲಿಗೆ ಹೋಗಮ್ಮಾ

ಸೂವ್ವೀ ಸೂವ್ವೀ ಸೂವಮ್ಮಾ ||
ಓಣ್ಯಾಗ ಅಡಬ್ಯಾಡ ಶಾಲೀಗೇ ಹೋಗಮ್ಮಾ.
ಶಾಲೀಗಾ ಹೋಗಿ ನೀನಾರು ಕಲಿಯಮ್ಮಾ |
ಸುವ್ವೀ ಸುವ್ವೀ|
ಮಾಸ್ತಾರು ಬಡಿತಾರಂತ ಅಂಜಿಕೆ ಬ್ಯಾಡಮ್ಮಾ
ಮಾಸ್ತಾರು ಹೇಳಿದ್ದಾ ಕೇಳಿ ಶಾಣ್ಯಾಕಿ ಆಗಮ್ಮಾ
ಕಲಿತ ನಾರಿ ಸುಖಿ ಕುಟುಂಬಕ ದಾರಿ |ಸುವ್ವೀ ಸುವ್ವೀ|

ನಿಮ್ಮಪ್ಪಗಾ ಹೆದರಾಬ್ಯಾಡ ಹೊಲಕಾ ನೀ ಬರಬ್ಯಾಡ
ಎಲ್ಲಾ ದಗುದಾವಾ ನಾನೇ ಮಾಡುವೇ
ನೀ ಬೇಸು ಓದಮ್ಮಾ |ಸುವ್ವೀ ಸುವ್ವೀ|
ನಂಗೂನು ಕಲೀಬೇಕಂತಾ ತುಂಬಾ ಆಸೆಯಿತ್ತಮ್ಮಾ
ನೀನಾರು ನಾಕಕ್ಷರ ಕಲಿತು ಆಪೀಸರ್ ಆಗಮ್ಮಾ
ನಮ್ಮೂರಿಗ ಹೆಸರಾ ತಾರಮ್ಮಾ |ಸುವ್ವೀ ಸುವ್ವೀ| (ಪುಟ:6)

ಈ ರಚನೆಯಲ್ಲಿ ಹೆಣ್ಣು ಶಾಲೆಗೆ ಹೋಗಿ ಕಲಿಯುವ ಆಶಯವಿದೆ. ಜಾನಪದ ಸಾಹಿತ್ಯದ ತಾಯಿ ಗಂಡ ಬೈದರೂ ಎದುರಾಡದೆ ಬಾಳು ಎಂದರೆ ಆಧುನಿಕ ತಾಯಿ `ನಿಮ್ಮಪ್ಪಗಾ ಹೆದರಬೇಡ ಹೊಲಕ ನೀ ಬರಬ್ಯಾಡ, ಸಾಲಿ ಓದಿ ಆಫಿಸರ್ ಆಗಮ್ಮಾ’ ಎಂದು ಹಾರೈಸುತ್ತಾಳೆ. ಬಹುಶಃ ಜಾನಪದ ಲಯ ಬಳಸಿ ಆಧುನಿಕ ವೈಚಾರಿಕತೆಯನ್ನು ಮೂಡಿಸುವ ಪ್ರಯತ್ನವೆಂದರೆ ಇದು. ರವಿಚಂದ್ರರ ರಚನೆಯ ಮತ್ತೊಂದು ಹಾಡು `ಜಾಗೃತಿ ಜನಪದ’ ಹೀಗಿದೆ:

ಕುಂತಂತ ಮೇಲ್ಜಾತಿ ನಿಂತಂತ ಕೆಳಜಾತಿ
ಅಣ್ಣಾ ಅಕ್ಕಂದಿರೆ ಕೇಳಿರಿ
ಮನುಷ ಕುಲವೆಲ್ಲ ಒಂದೇ
ಎನ್ನುವ ನಿಸರ್ಗ ಸತ್ಯವಾ ತಿಳಿಯಿರಿ ||

ಈ ಪದದಲ್ಲಿ ಜಾತಿಪದ್ಧತಿಯ ಲೋಪದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಆಯಾಮವಿದೆ. ಮತ್ತೊಂದು ಜಲಪದ ಹಾಡಿನಲ್ಲಿ ನೀರಿನ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶವಿದೆ. ಬಹುಶಃ ರವಿಚಂದ್ರ ಅವರ ಎಲ್ಲಾ ರಚನೆಗಳಲ್ಲಿಯೂ ಈ ಆಯಾಮವಿರುವುದು ಆಶಾದಾಯಕ ಬೆಳವಣಿಗೆ. ಜೀವಪ್ರಪಂಚ, ನಿಸರ್ಗ ಸೋಜಿಗ, ಶಾಲೆ ಹಬ್ಬ, ನೀರಿಗೋಗೋನು ಬಾ, ಮಳೆಹಾಡು, ಬನ್ನಿಮಕ್ಕಳೆ ನಮ್ಮೂರ ಶಾಲೆಗೆ, ಮುಂತಾದ ಹಾಡುಗಳಲ್ಲಿ ಸಮತೆಯ ನಿಸರ್ಗ ವಿವೇಕವನ್ನು ವಿಸ್ತರಿಸಲು ಪ್ರಯತ್ನಿಸಿದ್ದಾರೆ. ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್, ಮೈಲಾರ ಮಹಾದೇವ, ಕುವೆಂಪು, ನಾ.ಡಿಸೋಜ, ರಾಜಕುಮಾರ್ ತರಹದವರ ಗುಣಲಕ್ಷಣಗಳನ್ನೇ ಒಗಟಾಗಿಸಿ ಉತ್ತರವಾಗಿ ಇವರುಗಳ ಹೆಸರು ತಂದಿರುವುದು ಪ್ರಯೋಗಶೀಲವಾಗಿದೆ.

ರವಿರಾಜ್ ಅವರು ಶಿವಮೊಗ್ಗದ ಸಾಗರ ತಾಲೂಕಿನ ಮಂಡಗಳಲೆಯವರು. ಕಳೆದ ಹತ್ತು ವರ್ಷದಿಂದ ರಾಯಚೂರಿನ ಮಸ್ಕಿ ತಾಲೂಕಿನ ಮಲ್ಕಾಪುರದಲ್ಲಿ ಶಿಕ್ಷಕರಾಗಿದ್ದಾರೆ. `ಮಂದಾರ ಕನ್ನಡ’ ಎನ್ನುವ ಶಾಲಾಮಕ್ಕಳ ಪತ್ರಿಕೆಯನ್ನು ಕಳೆದ ಏಳೆಂಟು ವರ್ಷದಿಂದ ತರುತ್ತಿದ್ದಾರೆ. ಈ ತನಕ `ನರಲೀಲೆ’ `ನಮ್ಮೂರ ಜಾನಪದ ಸಿರಿ’ `ಮಂದಾರಮಾಲೆ-1’ `ಮಂದಾರ ಮಾಲೆ-2’ ಮಕ್ಕಳ ಬರಹಗಳನ್ನು ಸಂಪಾದಿಸಿದ್ದಾರೆ. `ಕಲಿತವರು’ `ಮೇ-10’ `ವಿಶ್ವಾಪುರದ ವೀರಮಕ್ಕಳು’ ಮಕ್ಕಳ ನಾಟಕಗಳು ಪ್ರದರ್ಶನ ಕಂಡಿವೆ. ಮಕ್ಕಳು ಮತ್ತು ಸಾಹಿತ್ಯಿಕ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ರವಿರಾಜ್ ಅವರ ಕ್ರಿಯಾಶೀಲ ತೊಡಗುವಿಕೆಯ ಕಾರಣ ಮಲ್ಕಾಪುರದ ಸರಕಾರಿ ಶಾಲೆ ನಿಜಕ್ಕೂ ಸೃಜನಶೀಲತೆಯಲ್ಲಿ ಜೀವಂತಿಕೆಯ ತಾಣವಾಗಿದೆ.

ಕರ್ನಾಟಕದ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ ಕೆಲವರು ವಿಶ್ವವಿದ್ಯಾಲಯಗಳ ಬಹುಪಾಲು ಅಧ್ಯಾಪಕರಿಗಿಂತ ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ಈಗ ಬರೆಯುತ್ತಿರುವ ಅತ್ಯುತ್ತಮ ಕವಿಗಳು ಶಾಲಾ ಮಾಸ್ತರರು. ಉಳಿದಂತೆ ಸರಕಾರಿ ಶಾಲೆ ಉಳಿಸುವ ಪ್ರಯೋಗದಲ್ಲಿಯೂ ಗಮನ ಸೆಳೆಯುತ್ತಿದ್ದಾರೆ. ಇದೊಂದು ಆಶಾದಾಯಕ ಬೆಳವಣಿಗೆ. ಹಿಂದೆ ಲಕ್ಷ್ಮಣ ಬದಾಮಿ ಅವರು ಮಕ್ಕಳಿಂದ ಜಾನಪದ ಸಂಗ್ರಹಿಸಿ ಪುಸ್ತಕ ಮಾಡಿದ್ದಾರೆ. ಇದೊಂದು ಜಾನಪದ ಸಂಗ್ರಹಕ್ಕೆ ಬಳಸುವ ವಿಶಿಷ್ಟ ದಾರಿ. ಆದರೆ ಜಾನಪದ ಮೌಲ್ಯಗಳನ್ನು ಮುರಿದುಕಟ್ಟುವ ರವಿಚಂದ್ರ ಅವರಂತಹ ಗೀತೆಗಳ ರಚನೆಯನ್ನು ಎಲ್ಲಾ ಶಿಕ್ಷಕರು ಮಾಡಬೇಕಿದೆ. ಇದನ್ನು ಉಪಪಠ್ಯವಾಗಿ ಮಕ್ಕಳಿಗೆ ಕಲಿಸಬೇಕಿದೆ. ಬಹುಶಃ ಈ ಪುಸ್ತಕದ ಮೂಲಕ ರವಾನೆಯಾಗಬೇಕಿರುವ ಸಂದೇಶವೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...