Homeಮುಖಪುಟಶಾಲೆಗಳ ವೈಚಾರಿಕ ಜಾನಪದಕ್ಕೊಂದು ಮಾದರಿ ರವಿರಾಜ್ ಸಾಗರ್

ಶಾಲೆಗಳ ವೈಚಾರಿಕ ಜಾನಪದಕ್ಕೊಂದು ಮಾದರಿ ರವಿರಾಜ್ ಸಾಗರ್

ಇರುವ ಜಾನಪದವನ್ನೆಲ್ಲಾ ಮೋಹಿಸಬೇಕಿಲ್ಲ. ಜಾನಪದದಲ್ಲಿ ನಾಶಮಾಡಬೇಕಾದ್ದು, ಸಂಗ್ರಹಕ್ಕೆ ಯೋಗ್ಯವಲ್ಲದ್ದು ಹೆಚ್ಚಿದೆ. ಜಾತಿ, ಲಿಂಗ, ಬಣ್ಣ, ಪ್ರದೇಶ, ಒಡೆಯ, ಆಳು ಇಂತಹ ಬೇಧಗಳ ಗಟ್ಟಿಗೊಳಿಸಿ ಯಥಾಸ್ಥಿತಿಯನ್ನು ಉಳಿಸುವ ರಚನೆಗಳ ಸಂಖ್ಯೆ ದೊಡ್ಡದಿದೆ.

- Advertisement -
- Advertisement -

ಎಲೆ ಮರೆ – 3

| ಅರುಣ್ ಜೋಳದಕೂಡ್ಲಿಗಿ |

ಮಸ್ಕಿ ತಾಲೂಕಿನ ಮಲ್ಕಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಷ್ಟ್ರು ರವಿಚಂದ್ರ.ಡಿ (ರವಿರಾಜ್ ಸಾಗರ್) ಅವರು `ನಮ್ಮೂರ ಜಾನಪದ ಅನುಸಂಧಾನ’ ಎನ್ನುವ ವಿಶಿಷ್ಠ ಕೃತಿ ರಚಿಸಿದ್ದಾರೆ. ಇಲ್ಲಿ ಊರಿನ ಜನಪದರು, ಅವರ ಮೌಖಿಕ ಸಾಹಿತ್ಯವನ್ನು ಸಂಗ್ರಹಿಸಿದ ಶಾಲಾ ಮಕ್ಕಳು ಮತ್ತು ಶಿಕ್ಷಕರು, ಇದೇ ಮೌಖಿಕ ಲಯ ಬಳಸಿ ಮಕ್ಕಳ ಕಲಿಕೆಗೆ ನೆರವಾಗುವಂತೆ ರವಿಚಂದ್ರ ಅವರು ರಚಿಸಿದ ಪದ್ಯಗಳಿವೆ. ಇಲ್ಲಿ ಈ ಮೂರೂ ಸಂಗತಿಗಳ ಮುಖಾಮುಖಿಯಾಗಿದೆ. ವಿಶೇಷವೆಂದರೆ ಜಾನಪದದ ಸಂಗ್ರಹ ಮತ್ತು ಅದರ ಅನ್ವಯಿಕತೆ ಎರಡೂ ಜೊತೆಜೊತೆಗೆ ನಡೆದಿದೆ. ಇದು ಈ ಕೃತಿಯ ವಿಶಿಷ್ಟ ಸಂಗತಿ.

ಇರುವ ಜಾನಪದವನ್ನೆಲ್ಲಾ ಮೋಹಿಸಬೇಕಿಲ್ಲ. ಜಾನಪದದಲ್ಲಿ ನಾಶಮಾಡಬೇಕಾದ್ದು, ಸಂಗ್ರಹಕ್ಕೆ ಯೋಗ್ಯವಲ್ಲದ್ದು ಹೆಚ್ಚಿದೆ. ಜಾತಿ, ಲಿಂಗ, ಬಣ್ಣ, ಪ್ರದೇಶ, ಒಡೆಯ, ಆಳು ಇಂತಹ ಬೇಧಗಳ ಗಟ್ಟಿಗೊಳಿಸಿ ಯಥಾಸ್ಥಿತಿಯನ್ನು ಉಳಿಸುವ ರಚನೆಗಳ ಸಂಖ್ಯೆ ದೊಡ್ಡದಿದೆ. ಅಂತಹ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ರಚನೆಗಳನ್ನು ಮುಂದಿನ ತಲೆಮಾರಿಗೆ ಕಾಪಿಡುವ ಅಗತ್ಯವಿಲ್ಲ. ಪ್ರತಿ ಜಾನಪದ ಸಂಗ್ರಾಹಕರು ಇದನ್ನು ಗಮನಿಸಬೇಕಿದೆ. ರವಿರಾಜ್ ಅವರು ಈ ಸಂಗ್ರಹದಲ್ಲಿ ಅಂತಹ ಸೂಕ್ಷ್ಮತೆಯನ್ನು ಕಾಯ್ದುಕೊಂಡಿದ್ದಾರೆ. ಈ ಕೃತಿಯಲ್ಲಿ ಶಿಕ್ಷಕರಾದ ರವಿಚಂದ್ರ ಅವರು ಜಾನಪದ ಲಯ ಬಳಸಿ ಬರೆದ ಹಾಡುಗಳಲ್ಲಿ ಜೀವಪರವಾದ ಆಯಾಮವಿದೆ. ಇಲ್ಲಿ ಸಂವಿಧಾನಿಕ ಆಶಯಗಳನ್ನು ಬಲಪಡಿಸುವ ಜಾಗೃತಿ ಮೂಡಿಸುವ ಸದಾಶಯವಿದೆ.

ಸೂವ್ವೀ ಸೂವಮ್ಮಾ ಶಾಲಿಗೆ ಹೋಗಮ್ಮಾ

ಸೂವ್ವೀ ಸೂವ್ವೀ ಸೂವಮ್ಮಾ ||
ಓಣ್ಯಾಗ ಅಡಬ್ಯಾಡ ಶಾಲೀಗೇ ಹೋಗಮ್ಮಾ.
ಶಾಲೀಗಾ ಹೋಗಿ ನೀನಾರು ಕಲಿಯಮ್ಮಾ |
ಸುವ್ವೀ ಸುವ್ವೀ|
ಮಾಸ್ತಾರು ಬಡಿತಾರಂತ ಅಂಜಿಕೆ ಬ್ಯಾಡಮ್ಮಾ
ಮಾಸ್ತಾರು ಹೇಳಿದ್ದಾ ಕೇಳಿ ಶಾಣ್ಯಾಕಿ ಆಗಮ್ಮಾ
ಕಲಿತ ನಾರಿ ಸುಖಿ ಕುಟುಂಬಕ ದಾರಿ |ಸುವ್ವೀ ಸುವ್ವೀ|

ನಿಮ್ಮಪ್ಪಗಾ ಹೆದರಾಬ್ಯಾಡ ಹೊಲಕಾ ನೀ ಬರಬ್ಯಾಡ
ಎಲ್ಲಾ ದಗುದಾವಾ ನಾನೇ ಮಾಡುವೇ
ನೀ ಬೇಸು ಓದಮ್ಮಾ |ಸುವ್ವೀ ಸುವ್ವೀ|
ನಂಗೂನು ಕಲೀಬೇಕಂತಾ ತುಂಬಾ ಆಸೆಯಿತ್ತಮ್ಮಾ
ನೀನಾರು ನಾಕಕ್ಷರ ಕಲಿತು ಆಪೀಸರ್ ಆಗಮ್ಮಾ
ನಮ್ಮೂರಿಗ ಹೆಸರಾ ತಾರಮ್ಮಾ |ಸುವ್ವೀ ಸುವ್ವೀ| (ಪುಟ:6)

ಈ ರಚನೆಯಲ್ಲಿ ಹೆಣ್ಣು ಶಾಲೆಗೆ ಹೋಗಿ ಕಲಿಯುವ ಆಶಯವಿದೆ. ಜಾನಪದ ಸಾಹಿತ್ಯದ ತಾಯಿ ಗಂಡ ಬೈದರೂ ಎದುರಾಡದೆ ಬಾಳು ಎಂದರೆ ಆಧುನಿಕ ತಾಯಿ `ನಿಮ್ಮಪ್ಪಗಾ ಹೆದರಬೇಡ ಹೊಲಕ ನೀ ಬರಬ್ಯಾಡ, ಸಾಲಿ ಓದಿ ಆಫಿಸರ್ ಆಗಮ್ಮಾ’ ಎಂದು ಹಾರೈಸುತ್ತಾಳೆ. ಬಹುಶಃ ಜಾನಪದ ಲಯ ಬಳಸಿ ಆಧುನಿಕ ವೈಚಾರಿಕತೆಯನ್ನು ಮೂಡಿಸುವ ಪ್ರಯತ್ನವೆಂದರೆ ಇದು. ರವಿಚಂದ್ರರ ರಚನೆಯ ಮತ್ತೊಂದು ಹಾಡು `ಜಾಗೃತಿ ಜನಪದ’ ಹೀಗಿದೆ:

ಕುಂತಂತ ಮೇಲ್ಜಾತಿ ನಿಂತಂತ ಕೆಳಜಾತಿ
ಅಣ್ಣಾ ಅಕ್ಕಂದಿರೆ ಕೇಳಿರಿ
ಮನುಷ ಕುಲವೆಲ್ಲ ಒಂದೇ
ಎನ್ನುವ ನಿಸರ್ಗ ಸತ್ಯವಾ ತಿಳಿಯಿರಿ ||

ಈ ಪದದಲ್ಲಿ ಜಾತಿಪದ್ಧತಿಯ ಲೋಪದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಆಯಾಮವಿದೆ. ಮತ್ತೊಂದು ಜಲಪದ ಹಾಡಿನಲ್ಲಿ ನೀರಿನ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶವಿದೆ. ಬಹುಶಃ ರವಿಚಂದ್ರ ಅವರ ಎಲ್ಲಾ ರಚನೆಗಳಲ್ಲಿಯೂ ಈ ಆಯಾಮವಿರುವುದು ಆಶಾದಾಯಕ ಬೆಳವಣಿಗೆ. ಜೀವಪ್ರಪಂಚ, ನಿಸರ್ಗ ಸೋಜಿಗ, ಶಾಲೆ ಹಬ್ಬ, ನೀರಿಗೋಗೋನು ಬಾ, ಮಳೆಹಾಡು, ಬನ್ನಿಮಕ್ಕಳೆ ನಮ್ಮೂರ ಶಾಲೆಗೆ, ಮುಂತಾದ ಹಾಡುಗಳಲ್ಲಿ ಸಮತೆಯ ನಿಸರ್ಗ ವಿವೇಕವನ್ನು ವಿಸ್ತರಿಸಲು ಪ್ರಯತ್ನಿಸಿದ್ದಾರೆ. ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್, ಮೈಲಾರ ಮಹಾದೇವ, ಕುವೆಂಪು, ನಾ.ಡಿಸೋಜ, ರಾಜಕುಮಾರ್ ತರಹದವರ ಗುಣಲಕ್ಷಣಗಳನ್ನೇ ಒಗಟಾಗಿಸಿ ಉತ್ತರವಾಗಿ ಇವರುಗಳ ಹೆಸರು ತಂದಿರುವುದು ಪ್ರಯೋಗಶೀಲವಾಗಿದೆ.

ರವಿರಾಜ್ ಅವರು ಶಿವಮೊಗ್ಗದ ಸಾಗರ ತಾಲೂಕಿನ ಮಂಡಗಳಲೆಯವರು. ಕಳೆದ ಹತ್ತು ವರ್ಷದಿಂದ ರಾಯಚೂರಿನ ಮಸ್ಕಿ ತಾಲೂಕಿನ ಮಲ್ಕಾಪುರದಲ್ಲಿ ಶಿಕ್ಷಕರಾಗಿದ್ದಾರೆ. `ಮಂದಾರ ಕನ್ನಡ’ ಎನ್ನುವ ಶಾಲಾಮಕ್ಕಳ ಪತ್ರಿಕೆಯನ್ನು ಕಳೆದ ಏಳೆಂಟು ವರ್ಷದಿಂದ ತರುತ್ತಿದ್ದಾರೆ. ಈ ತನಕ `ನರಲೀಲೆ’ `ನಮ್ಮೂರ ಜಾನಪದ ಸಿರಿ’ `ಮಂದಾರಮಾಲೆ-1’ `ಮಂದಾರ ಮಾಲೆ-2’ ಮಕ್ಕಳ ಬರಹಗಳನ್ನು ಸಂಪಾದಿಸಿದ್ದಾರೆ. `ಕಲಿತವರು’ `ಮೇ-10’ `ವಿಶ್ವಾಪುರದ ವೀರಮಕ್ಕಳು’ ಮಕ್ಕಳ ನಾಟಕಗಳು ಪ್ರದರ್ಶನ ಕಂಡಿವೆ. ಮಕ್ಕಳು ಮತ್ತು ಸಾಹಿತ್ಯಿಕ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ರವಿರಾಜ್ ಅವರ ಕ್ರಿಯಾಶೀಲ ತೊಡಗುವಿಕೆಯ ಕಾರಣ ಮಲ್ಕಾಪುರದ ಸರಕಾರಿ ಶಾಲೆ ನಿಜಕ್ಕೂ ಸೃಜನಶೀಲತೆಯಲ್ಲಿ ಜೀವಂತಿಕೆಯ ತಾಣವಾಗಿದೆ.

ಕರ್ನಾಟಕದ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ ಕೆಲವರು ವಿಶ್ವವಿದ್ಯಾಲಯಗಳ ಬಹುಪಾಲು ಅಧ್ಯಾಪಕರಿಗಿಂತ ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ಈಗ ಬರೆಯುತ್ತಿರುವ ಅತ್ಯುತ್ತಮ ಕವಿಗಳು ಶಾಲಾ ಮಾಸ್ತರರು. ಉಳಿದಂತೆ ಸರಕಾರಿ ಶಾಲೆ ಉಳಿಸುವ ಪ್ರಯೋಗದಲ್ಲಿಯೂ ಗಮನ ಸೆಳೆಯುತ್ತಿದ್ದಾರೆ. ಇದೊಂದು ಆಶಾದಾಯಕ ಬೆಳವಣಿಗೆ. ಹಿಂದೆ ಲಕ್ಷ್ಮಣ ಬದಾಮಿ ಅವರು ಮಕ್ಕಳಿಂದ ಜಾನಪದ ಸಂಗ್ರಹಿಸಿ ಪುಸ್ತಕ ಮಾಡಿದ್ದಾರೆ. ಇದೊಂದು ಜಾನಪದ ಸಂಗ್ರಹಕ್ಕೆ ಬಳಸುವ ವಿಶಿಷ್ಟ ದಾರಿ. ಆದರೆ ಜಾನಪದ ಮೌಲ್ಯಗಳನ್ನು ಮುರಿದುಕಟ್ಟುವ ರವಿಚಂದ್ರ ಅವರಂತಹ ಗೀತೆಗಳ ರಚನೆಯನ್ನು ಎಲ್ಲಾ ಶಿಕ್ಷಕರು ಮಾಡಬೇಕಿದೆ. ಇದನ್ನು ಉಪಪಠ್ಯವಾಗಿ ಮಕ್ಕಳಿಗೆ ಕಲಿಸಬೇಕಿದೆ. ಬಹುಶಃ ಈ ಪುಸ್ತಕದ ಮೂಲಕ ರವಾನೆಯಾಗಬೇಕಿರುವ ಸಂದೇಶವೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...