Homeಮುಖಪುಟಶಾಲೆಗಳ ವೈಚಾರಿಕ ಜಾನಪದಕ್ಕೊಂದು ಮಾದರಿ ರವಿರಾಜ್ ಸಾಗರ್

ಶಾಲೆಗಳ ವೈಚಾರಿಕ ಜಾನಪದಕ್ಕೊಂದು ಮಾದರಿ ರವಿರಾಜ್ ಸಾಗರ್

ಇರುವ ಜಾನಪದವನ್ನೆಲ್ಲಾ ಮೋಹಿಸಬೇಕಿಲ್ಲ. ಜಾನಪದದಲ್ಲಿ ನಾಶಮಾಡಬೇಕಾದ್ದು, ಸಂಗ್ರಹಕ್ಕೆ ಯೋಗ್ಯವಲ್ಲದ್ದು ಹೆಚ್ಚಿದೆ. ಜಾತಿ, ಲಿಂಗ, ಬಣ್ಣ, ಪ್ರದೇಶ, ಒಡೆಯ, ಆಳು ಇಂತಹ ಬೇಧಗಳ ಗಟ್ಟಿಗೊಳಿಸಿ ಯಥಾಸ್ಥಿತಿಯನ್ನು ಉಳಿಸುವ ರಚನೆಗಳ ಸಂಖ್ಯೆ ದೊಡ್ಡದಿದೆ.

- Advertisement -
- Advertisement -

ಎಲೆ ಮರೆ – 3

| ಅರುಣ್ ಜೋಳದಕೂಡ್ಲಿಗಿ |

ಮಸ್ಕಿ ತಾಲೂಕಿನ ಮಲ್ಕಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಷ್ಟ್ರು ರವಿಚಂದ್ರ.ಡಿ (ರವಿರಾಜ್ ಸಾಗರ್) ಅವರು `ನಮ್ಮೂರ ಜಾನಪದ ಅನುಸಂಧಾನ’ ಎನ್ನುವ ವಿಶಿಷ್ಠ ಕೃತಿ ರಚಿಸಿದ್ದಾರೆ. ಇಲ್ಲಿ ಊರಿನ ಜನಪದರು, ಅವರ ಮೌಖಿಕ ಸಾಹಿತ್ಯವನ್ನು ಸಂಗ್ರಹಿಸಿದ ಶಾಲಾ ಮಕ್ಕಳು ಮತ್ತು ಶಿಕ್ಷಕರು, ಇದೇ ಮೌಖಿಕ ಲಯ ಬಳಸಿ ಮಕ್ಕಳ ಕಲಿಕೆಗೆ ನೆರವಾಗುವಂತೆ ರವಿಚಂದ್ರ ಅವರು ರಚಿಸಿದ ಪದ್ಯಗಳಿವೆ. ಇಲ್ಲಿ ಈ ಮೂರೂ ಸಂಗತಿಗಳ ಮುಖಾಮುಖಿಯಾಗಿದೆ. ವಿಶೇಷವೆಂದರೆ ಜಾನಪದದ ಸಂಗ್ರಹ ಮತ್ತು ಅದರ ಅನ್ವಯಿಕತೆ ಎರಡೂ ಜೊತೆಜೊತೆಗೆ ನಡೆದಿದೆ. ಇದು ಈ ಕೃತಿಯ ವಿಶಿಷ್ಟ ಸಂಗತಿ.

ಇರುವ ಜಾನಪದವನ್ನೆಲ್ಲಾ ಮೋಹಿಸಬೇಕಿಲ್ಲ. ಜಾನಪದದಲ್ಲಿ ನಾಶಮಾಡಬೇಕಾದ್ದು, ಸಂಗ್ರಹಕ್ಕೆ ಯೋಗ್ಯವಲ್ಲದ್ದು ಹೆಚ್ಚಿದೆ. ಜಾತಿ, ಲಿಂಗ, ಬಣ್ಣ, ಪ್ರದೇಶ, ಒಡೆಯ, ಆಳು ಇಂತಹ ಬೇಧಗಳ ಗಟ್ಟಿಗೊಳಿಸಿ ಯಥಾಸ್ಥಿತಿಯನ್ನು ಉಳಿಸುವ ರಚನೆಗಳ ಸಂಖ್ಯೆ ದೊಡ್ಡದಿದೆ. ಅಂತಹ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ರಚನೆಗಳನ್ನು ಮುಂದಿನ ತಲೆಮಾರಿಗೆ ಕಾಪಿಡುವ ಅಗತ್ಯವಿಲ್ಲ. ಪ್ರತಿ ಜಾನಪದ ಸಂಗ್ರಾಹಕರು ಇದನ್ನು ಗಮನಿಸಬೇಕಿದೆ. ರವಿರಾಜ್ ಅವರು ಈ ಸಂಗ್ರಹದಲ್ಲಿ ಅಂತಹ ಸೂಕ್ಷ್ಮತೆಯನ್ನು ಕಾಯ್ದುಕೊಂಡಿದ್ದಾರೆ. ಈ ಕೃತಿಯಲ್ಲಿ ಶಿಕ್ಷಕರಾದ ರವಿಚಂದ್ರ ಅವರು ಜಾನಪದ ಲಯ ಬಳಸಿ ಬರೆದ ಹಾಡುಗಳಲ್ಲಿ ಜೀವಪರವಾದ ಆಯಾಮವಿದೆ. ಇಲ್ಲಿ ಸಂವಿಧಾನಿಕ ಆಶಯಗಳನ್ನು ಬಲಪಡಿಸುವ ಜಾಗೃತಿ ಮೂಡಿಸುವ ಸದಾಶಯವಿದೆ.

ಸೂವ್ವೀ ಸೂವಮ್ಮಾ ಶಾಲಿಗೆ ಹೋಗಮ್ಮಾ

ಸೂವ್ವೀ ಸೂವ್ವೀ ಸೂವಮ್ಮಾ ||
ಓಣ್ಯಾಗ ಅಡಬ್ಯಾಡ ಶಾಲೀಗೇ ಹೋಗಮ್ಮಾ.
ಶಾಲೀಗಾ ಹೋಗಿ ನೀನಾರು ಕಲಿಯಮ್ಮಾ |
ಸುವ್ವೀ ಸುವ್ವೀ|
ಮಾಸ್ತಾರು ಬಡಿತಾರಂತ ಅಂಜಿಕೆ ಬ್ಯಾಡಮ್ಮಾ
ಮಾಸ್ತಾರು ಹೇಳಿದ್ದಾ ಕೇಳಿ ಶಾಣ್ಯಾಕಿ ಆಗಮ್ಮಾ
ಕಲಿತ ನಾರಿ ಸುಖಿ ಕುಟುಂಬಕ ದಾರಿ |ಸುವ್ವೀ ಸುವ್ವೀ|

ನಿಮ್ಮಪ್ಪಗಾ ಹೆದರಾಬ್ಯಾಡ ಹೊಲಕಾ ನೀ ಬರಬ್ಯಾಡ
ಎಲ್ಲಾ ದಗುದಾವಾ ನಾನೇ ಮಾಡುವೇ
ನೀ ಬೇಸು ಓದಮ್ಮಾ |ಸುವ್ವೀ ಸುವ್ವೀ|
ನಂಗೂನು ಕಲೀಬೇಕಂತಾ ತುಂಬಾ ಆಸೆಯಿತ್ತಮ್ಮಾ
ನೀನಾರು ನಾಕಕ್ಷರ ಕಲಿತು ಆಪೀಸರ್ ಆಗಮ್ಮಾ
ನಮ್ಮೂರಿಗ ಹೆಸರಾ ತಾರಮ್ಮಾ |ಸುವ್ವೀ ಸುವ್ವೀ| (ಪುಟ:6)

ಈ ರಚನೆಯಲ್ಲಿ ಹೆಣ್ಣು ಶಾಲೆಗೆ ಹೋಗಿ ಕಲಿಯುವ ಆಶಯವಿದೆ. ಜಾನಪದ ಸಾಹಿತ್ಯದ ತಾಯಿ ಗಂಡ ಬೈದರೂ ಎದುರಾಡದೆ ಬಾಳು ಎಂದರೆ ಆಧುನಿಕ ತಾಯಿ `ನಿಮ್ಮಪ್ಪಗಾ ಹೆದರಬೇಡ ಹೊಲಕ ನೀ ಬರಬ್ಯಾಡ, ಸಾಲಿ ಓದಿ ಆಫಿಸರ್ ಆಗಮ್ಮಾ’ ಎಂದು ಹಾರೈಸುತ್ತಾಳೆ. ಬಹುಶಃ ಜಾನಪದ ಲಯ ಬಳಸಿ ಆಧುನಿಕ ವೈಚಾರಿಕತೆಯನ್ನು ಮೂಡಿಸುವ ಪ್ರಯತ್ನವೆಂದರೆ ಇದು. ರವಿಚಂದ್ರರ ರಚನೆಯ ಮತ್ತೊಂದು ಹಾಡು `ಜಾಗೃತಿ ಜನಪದ’ ಹೀಗಿದೆ:

ಕುಂತಂತ ಮೇಲ್ಜಾತಿ ನಿಂತಂತ ಕೆಳಜಾತಿ
ಅಣ್ಣಾ ಅಕ್ಕಂದಿರೆ ಕೇಳಿರಿ
ಮನುಷ ಕುಲವೆಲ್ಲ ಒಂದೇ
ಎನ್ನುವ ನಿಸರ್ಗ ಸತ್ಯವಾ ತಿಳಿಯಿರಿ ||

ಈ ಪದದಲ್ಲಿ ಜಾತಿಪದ್ಧತಿಯ ಲೋಪದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಆಯಾಮವಿದೆ. ಮತ್ತೊಂದು ಜಲಪದ ಹಾಡಿನಲ್ಲಿ ನೀರಿನ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶವಿದೆ. ಬಹುಶಃ ರವಿಚಂದ್ರ ಅವರ ಎಲ್ಲಾ ರಚನೆಗಳಲ್ಲಿಯೂ ಈ ಆಯಾಮವಿರುವುದು ಆಶಾದಾಯಕ ಬೆಳವಣಿಗೆ. ಜೀವಪ್ರಪಂಚ, ನಿಸರ್ಗ ಸೋಜಿಗ, ಶಾಲೆ ಹಬ್ಬ, ನೀರಿಗೋಗೋನು ಬಾ, ಮಳೆಹಾಡು, ಬನ್ನಿಮಕ್ಕಳೆ ನಮ್ಮೂರ ಶಾಲೆಗೆ, ಮುಂತಾದ ಹಾಡುಗಳಲ್ಲಿ ಸಮತೆಯ ನಿಸರ್ಗ ವಿವೇಕವನ್ನು ವಿಸ್ತರಿಸಲು ಪ್ರಯತ್ನಿಸಿದ್ದಾರೆ. ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್, ಮೈಲಾರ ಮಹಾದೇವ, ಕುವೆಂಪು, ನಾ.ಡಿಸೋಜ, ರಾಜಕುಮಾರ್ ತರಹದವರ ಗುಣಲಕ್ಷಣಗಳನ್ನೇ ಒಗಟಾಗಿಸಿ ಉತ್ತರವಾಗಿ ಇವರುಗಳ ಹೆಸರು ತಂದಿರುವುದು ಪ್ರಯೋಗಶೀಲವಾಗಿದೆ.

ರವಿರಾಜ್ ಅವರು ಶಿವಮೊಗ್ಗದ ಸಾಗರ ತಾಲೂಕಿನ ಮಂಡಗಳಲೆಯವರು. ಕಳೆದ ಹತ್ತು ವರ್ಷದಿಂದ ರಾಯಚೂರಿನ ಮಸ್ಕಿ ತಾಲೂಕಿನ ಮಲ್ಕಾಪುರದಲ್ಲಿ ಶಿಕ್ಷಕರಾಗಿದ್ದಾರೆ. `ಮಂದಾರ ಕನ್ನಡ’ ಎನ್ನುವ ಶಾಲಾಮಕ್ಕಳ ಪತ್ರಿಕೆಯನ್ನು ಕಳೆದ ಏಳೆಂಟು ವರ್ಷದಿಂದ ತರುತ್ತಿದ್ದಾರೆ. ಈ ತನಕ `ನರಲೀಲೆ’ `ನಮ್ಮೂರ ಜಾನಪದ ಸಿರಿ’ `ಮಂದಾರಮಾಲೆ-1’ `ಮಂದಾರ ಮಾಲೆ-2’ ಮಕ್ಕಳ ಬರಹಗಳನ್ನು ಸಂಪಾದಿಸಿದ್ದಾರೆ. `ಕಲಿತವರು’ `ಮೇ-10’ `ವಿಶ್ವಾಪುರದ ವೀರಮಕ್ಕಳು’ ಮಕ್ಕಳ ನಾಟಕಗಳು ಪ್ರದರ್ಶನ ಕಂಡಿವೆ. ಮಕ್ಕಳು ಮತ್ತು ಸಾಹಿತ್ಯಿಕ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ರವಿರಾಜ್ ಅವರ ಕ್ರಿಯಾಶೀಲ ತೊಡಗುವಿಕೆಯ ಕಾರಣ ಮಲ್ಕಾಪುರದ ಸರಕಾರಿ ಶಾಲೆ ನಿಜಕ್ಕೂ ಸೃಜನಶೀಲತೆಯಲ್ಲಿ ಜೀವಂತಿಕೆಯ ತಾಣವಾಗಿದೆ.

ಕರ್ನಾಟಕದ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ ಕೆಲವರು ವಿಶ್ವವಿದ್ಯಾಲಯಗಳ ಬಹುಪಾಲು ಅಧ್ಯಾಪಕರಿಗಿಂತ ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ಈಗ ಬರೆಯುತ್ತಿರುವ ಅತ್ಯುತ್ತಮ ಕವಿಗಳು ಶಾಲಾ ಮಾಸ್ತರರು. ಉಳಿದಂತೆ ಸರಕಾರಿ ಶಾಲೆ ಉಳಿಸುವ ಪ್ರಯೋಗದಲ್ಲಿಯೂ ಗಮನ ಸೆಳೆಯುತ್ತಿದ್ದಾರೆ. ಇದೊಂದು ಆಶಾದಾಯಕ ಬೆಳವಣಿಗೆ. ಹಿಂದೆ ಲಕ್ಷ್ಮಣ ಬದಾಮಿ ಅವರು ಮಕ್ಕಳಿಂದ ಜಾನಪದ ಸಂಗ್ರಹಿಸಿ ಪುಸ್ತಕ ಮಾಡಿದ್ದಾರೆ. ಇದೊಂದು ಜಾನಪದ ಸಂಗ್ರಹಕ್ಕೆ ಬಳಸುವ ವಿಶಿಷ್ಟ ದಾರಿ. ಆದರೆ ಜಾನಪದ ಮೌಲ್ಯಗಳನ್ನು ಮುರಿದುಕಟ್ಟುವ ರವಿಚಂದ್ರ ಅವರಂತಹ ಗೀತೆಗಳ ರಚನೆಯನ್ನು ಎಲ್ಲಾ ಶಿಕ್ಷಕರು ಮಾಡಬೇಕಿದೆ. ಇದನ್ನು ಉಪಪಠ್ಯವಾಗಿ ಮಕ್ಕಳಿಗೆ ಕಲಿಸಬೇಕಿದೆ. ಬಹುಶಃ ಈ ಪುಸ್ತಕದ ಮೂಲಕ ರವಾನೆಯಾಗಬೇಕಿರುವ ಸಂದೇಶವೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...