HomeಮುಖಪುಟNDTV ರಾಜೀನಾಮೆ ಬೆನ್ನಲ್ಲೆ ಯೂಟ್ಯೂಬ್ ಚಾನೆಲ್ ತೆರೆದ ರವೀಶ್ ಕುಮಾರ್: ಈಗಾಗಲೇ 10 ಲಕ್ಷದಷ್ಟು ಚಂದಾದಾರರು!

NDTV ರಾಜೀನಾಮೆ ಬೆನ್ನಲ್ಲೆ ಯೂಟ್ಯೂಬ್ ಚಾನೆಲ್ ತೆರೆದ ರವೀಶ್ ಕುಮಾರ್: ಈಗಾಗಲೇ 10 ಲಕ್ಷದಷ್ಟು ಚಂದಾದಾರರು!

- Advertisement -
- Advertisement -

NDTV ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ರವೀಶ್ ಕುಮಾರ್ ರಾಜೀನಾಮೆ ಪ್ರಕಟಿಸಿದ ಬೆನ್ನಲ್ಲೆ ‘ರವೀಶ್ ಕುಮಾರ್ ಅಫಿಶಿಯಲ್’ ಹೆಸರಿನ ಯೂಟ್ಯೂಬ್ ಚಾನೆಲ್‌ ಅನ್ನು ಆರಂಭಿಸಿದ್ದಾರೆ. ತಮ್ಮ ಮೊದಲ ವಿಡಿಯೋದಲ್ಲಿ “ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಿರುವ ಸಮಯದಲ್ಲಿ ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಪತ್ರಕರ್ತರನ್ನು ಬೆಂಬಲಿಸುವುದನ್ನು ಮುಂದುವರಿಸಬೇಕೆಂದು” ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

“ದೇಶದ ನ್ಯಾಯಾಂಗವು ತತ್ತರಿಸಿದ ಸಮಯದಲ್ಲಿ, ಅಧಿಕಾರದಲ್ಲಿರುವ ಜನರು ಅನೇಕರ ಧ್ವನಿಯನ್ನು ಅಡಗಿಸಲು ಪ್ರಯತ್ನಿಸಿದಾಗ, ದೇಶದ ಜನರು ನನ್ನ ಮೇಲೆ ಅಪಾರ ಪ್ರೀತಿಯನ್ನು ತೋರಿಸಿದರು. ನನ್ನ ಪ್ರೇಕ್ಷಕರಿಲ್ಲದೆ ನಾನು ಏನನ್ನೂ ಮಾಡಲು ಸಾಧ್ಯವಾಗುತ್ತಿರಲಿಲ್ಲ. ನನ್ನ ಕೆಲಸವನ್ನು ಹೊಸ ಯೂಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಪುಟದ ಮೂಲಕ ಮುಂದುವರೆಸುತ್ತಿದ್ದು, ಅದನ್ನು ಬೆಂಬಲಿಸುತ್ತೀರೆಂದು ನಂಬಿದ್ದೇನೆ” ಎಂದು ರವೀಶ್ ತಮ್ಮ ಯುಟ್ಯೂಬ್ ವೀಡಿಯೊದಲ್ಲಿ ಹೇಳಿದ್ದಾರೆ.

ನನ್ನ ಅಸ್ತಿತ್ವದಲ್ಲಿ ನೀವೆಲ್ಲರೂ ಸೇರಿದ್ದೀರಿ. ನಿಮ್ಮ ಪ್ರೀತಿಯೇ ನನ್ನ ಸಂಪತ್ತು. ಇದು ನಿಮ್ಮ youtube ಚಾನಲ್‌ನಲ್ಲಿನ ನನ್ನ ಹೊಸ ವಿಳಾಸವಾಗಿದೆ. ಗೋದಿ ಮೀಡಿಯಾದ ದಾಸ್ಯದ ವಿರುದ್ಧ ಎಲ್ಲರೂ ಹೋರಾಡಬೇಕಿದೆ ಎಂದು ರವೀಶ್ ಕುಮಾರ್ ಹೇಳಿದ್ದಾರೆ.

ನಾನು ರಾಜೀನಾಮೆ ನೀಡಿದ್ದೇನೆ. ಈ ರಾಜೀನಾಮೆ ನಿಮ್ಮ ಗೌರವಾರ್ಥವಾಗಿದೆ. ಕೋಟ್ಯಾಂತರ ವೀಕ್ಷಕರ ಆತ್ಮಗೌರವ ಒಬ್ಬರ ಕೆಲಸ ಮತ್ತು ಅಸಹಾಯಕತೆಗಿಂತ ಬಹಳ ದೊಡ್ಡದು. ನಿನ್ನ ಪ್ರೀತಿಯ ಮುಂದೆ ತಲೆಬಾಗುತ್ತೇನೆ ಎಂದು ಅವರು ಹೇಳಿದ್ದಾರೆ.

ರವೀಶ್ ಕುಮಾರ್ ಅಫಿಶಿಯಲ್ ಯೂಟ್ಯೂಬ್ ಚಾನೆಲ್‌ಗೆ ಈಗಾಗಲೇ 10 ಲಕ್ಷದಷ್ಟು ಚಂದಾದಾರರಾಗಿದ್ದಾರೆ. ಕೆಲವೇ ದಿನಗಳಲ್ಲಿ ಈ ಸಂಖ್ಯೆ ಭಾರೀ ಹೆಚ್ಚಾಗುವ ಸಾಧ್ಯತೆಯಿದೆ.

ರವೀಶ್ ಕುಮಾರ್ 1996 ರಲ್ಲಿ NDTV ಸೇರಿದ್ದರು. NDTV ಇಂಡಿಯಾ (ಹಿಂದಿ ಆವೃತ್ತಿ)ಯಲ್ಲಿ ಹಮ್ ಲೋಗ್, ರವೀಶ್ ಕಿ ರಿಪೋರ್ಟ್, ದೇಶ್ ಕಿ ಬಾತ್ ಮತ್ತು ಪ್ರೈಮ್ ಟೈಮ್‌ನಂತಹ ಹಲವಾರು ಸುದ್ದಿ ಆಧಾರಿತ ಕಾರ್ಯಕ್ರಮಗಳ ನಿರೂಪಕರಾಗಿದ್ದರು. ಅವರು 2019 ರಲ್ಲಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಜೊತೆಗೆ ಎರಡು ಬಾರಿ ಪತ್ರಿಕೋದ್ಯಮದಲ್ಲಿ ರಾಮನಾಥ್ ಗೋಯೆಂಕಾ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಗೌರಿ ಲಂಕೇಶ್ ಸ್ಮಾರಕ ಪ್ರಶಸ್ತಿಗೂ ಆಯ್ಕೆಯಾಗಿದ್ದರು.

ಇದನ್ನೂ ಓದಿ: ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಉಳಿದುಕೊಳ್ಳುವ ಹೆಸರು ರವೀಶ್ ಕುಮಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...