HomeಮುಖಪುಟNDTV ರಾಜೀನಾಮೆ ಬೆನ್ನಲ್ಲೆ ಯೂಟ್ಯೂಬ್ ಚಾನೆಲ್ ತೆರೆದ ರವೀಶ್ ಕುಮಾರ್: ಈಗಾಗಲೇ 10 ಲಕ್ಷದಷ್ಟು ಚಂದಾದಾರರು!

NDTV ರಾಜೀನಾಮೆ ಬೆನ್ನಲ್ಲೆ ಯೂಟ್ಯೂಬ್ ಚಾನೆಲ್ ತೆರೆದ ರವೀಶ್ ಕುಮಾರ್: ಈಗಾಗಲೇ 10 ಲಕ್ಷದಷ್ಟು ಚಂದಾದಾರರು!

- Advertisement -
- Advertisement -

NDTV ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ರವೀಶ್ ಕುಮಾರ್ ರಾಜೀನಾಮೆ ಪ್ರಕಟಿಸಿದ ಬೆನ್ನಲ್ಲೆ ‘ರವೀಶ್ ಕುಮಾರ್ ಅಫಿಶಿಯಲ್’ ಹೆಸರಿನ ಯೂಟ್ಯೂಬ್ ಚಾನೆಲ್‌ ಅನ್ನು ಆರಂಭಿಸಿದ್ದಾರೆ. ತಮ್ಮ ಮೊದಲ ವಿಡಿಯೋದಲ್ಲಿ “ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಿರುವ ಸಮಯದಲ್ಲಿ ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಪತ್ರಕರ್ತರನ್ನು ಬೆಂಬಲಿಸುವುದನ್ನು ಮುಂದುವರಿಸಬೇಕೆಂದು” ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

“ದೇಶದ ನ್ಯಾಯಾಂಗವು ತತ್ತರಿಸಿದ ಸಮಯದಲ್ಲಿ, ಅಧಿಕಾರದಲ್ಲಿರುವ ಜನರು ಅನೇಕರ ಧ್ವನಿಯನ್ನು ಅಡಗಿಸಲು ಪ್ರಯತ್ನಿಸಿದಾಗ, ದೇಶದ ಜನರು ನನ್ನ ಮೇಲೆ ಅಪಾರ ಪ್ರೀತಿಯನ್ನು ತೋರಿಸಿದರು. ನನ್ನ ಪ್ರೇಕ್ಷಕರಿಲ್ಲದೆ ನಾನು ಏನನ್ನೂ ಮಾಡಲು ಸಾಧ್ಯವಾಗುತ್ತಿರಲಿಲ್ಲ. ನನ್ನ ಕೆಲಸವನ್ನು ಹೊಸ ಯೂಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಪುಟದ ಮೂಲಕ ಮುಂದುವರೆಸುತ್ತಿದ್ದು, ಅದನ್ನು ಬೆಂಬಲಿಸುತ್ತೀರೆಂದು ನಂಬಿದ್ದೇನೆ” ಎಂದು ರವೀಶ್ ತಮ್ಮ ಯುಟ್ಯೂಬ್ ವೀಡಿಯೊದಲ್ಲಿ ಹೇಳಿದ್ದಾರೆ.

ನನ್ನ ಅಸ್ತಿತ್ವದಲ್ಲಿ ನೀವೆಲ್ಲರೂ ಸೇರಿದ್ದೀರಿ. ನಿಮ್ಮ ಪ್ರೀತಿಯೇ ನನ್ನ ಸಂಪತ್ತು. ಇದು ನಿಮ್ಮ youtube ಚಾನಲ್‌ನಲ್ಲಿನ ನನ್ನ ಹೊಸ ವಿಳಾಸವಾಗಿದೆ. ಗೋದಿ ಮೀಡಿಯಾದ ದಾಸ್ಯದ ವಿರುದ್ಧ ಎಲ್ಲರೂ ಹೋರಾಡಬೇಕಿದೆ ಎಂದು ರವೀಶ್ ಕುಮಾರ್ ಹೇಳಿದ್ದಾರೆ.

ನಾನು ರಾಜೀನಾಮೆ ನೀಡಿದ್ದೇನೆ. ಈ ರಾಜೀನಾಮೆ ನಿಮ್ಮ ಗೌರವಾರ್ಥವಾಗಿದೆ. ಕೋಟ್ಯಾಂತರ ವೀಕ್ಷಕರ ಆತ್ಮಗೌರವ ಒಬ್ಬರ ಕೆಲಸ ಮತ್ತು ಅಸಹಾಯಕತೆಗಿಂತ ಬಹಳ ದೊಡ್ಡದು. ನಿನ್ನ ಪ್ರೀತಿಯ ಮುಂದೆ ತಲೆಬಾಗುತ್ತೇನೆ ಎಂದು ಅವರು ಹೇಳಿದ್ದಾರೆ.

ರವೀಶ್ ಕುಮಾರ್ ಅಫಿಶಿಯಲ್ ಯೂಟ್ಯೂಬ್ ಚಾನೆಲ್‌ಗೆ ಈಗಾಗಲೇ 10 ಲಕ್ಷದಷ್ಟು ಚಂದಾದಾರರಾಗಿದ್ದಾರೆ. ಕೆಲವೇ ದಿನಗಳಲ್ಲಿ ಈ ಸಂಖ್ಯೆ ಭಾರೀ ಹೆಚ್ಚಾಗುವ ಸಾಧ್ಯತೆಯಿದೆ.

ರವೀಶ್ ಕುಮಾರ್ 1996 ರಲ್ಲಿ NDTV ಸೇರಿದ್ದರು. NDTV ಇಂಡಿಯಾ (ಹಿಂದಿ ಆವೃತ್ತಿ)ಯಲ್ಲಿ ಹಮ್ ಲೋಗ್, ರವೀಶ್ ಕಿ ರಿಪೋರ್ಟ್, ದೇಶ್ ಕಿ ಬಾತ್ ಮತ್ತು ಪ್ರೈಮ್ ಟೈಮ್‌ನಂತಹ ಹಲವಾರು ಸುದ್ದಿ ಆಧಾರಿತ ಕಾರ್ಯಕ್ರಮಗಳ ನಿರೂಪಕರಾಗಿದ್ದರು. ಅವರು 2019 ರಲ್ಲಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಜೊತೆಗೆ ಎರಡು ಬಾರಿ ಪತ್ರಿಕೋದ್ಯಮದಲ್ಲಿ ರಾಮನಾಥ್ ಗೋಯೆಂಕಾ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಗೌರಿ ಲಂಕೇಶ್ ಸ್ಮಾರಕ ಪ್ರಶಸ್ತಿಗೂ ಆಯ್ಕೆಯಾಗಿದ್ದರು.

ಇದನ್ನೂ ಓದಿ: ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಉಳಿದುಕೊಳ್ಳುವ ಹೆಸರು ರವೀಶ್ ಕುಮಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...