Homeಮುಖಪುಟಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) 6%ದಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ

ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) 6%ದಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಸಚಿವ ಸಂಪುಟವು ಬುಧವಾರದಂದು 2025-26ರ ಮಾರುಕಟ್ಟೆ ಋತುವಿನಲ್ಲಿ ಕಚ್ಚಾ ಸೆಣಬಿಗೆ ಕ್ವಿಂಟಲ್‌ಗೆ 5,650 ರೂ.ಗಳ ಕನಿಷ್ಠ ಬೆಂಬಲ ಬೆಲೆಯನ್ನು ಅನುಮೋದಿಸಿದೆ. ಇದು ಈ ಹಿಂದಿನ ಕನಿಷ್ಠ ಬೆಂಬಲ ಬೆಲೆಗಿಂತ 6% ದಷ್ಟು ಅಥವಾ 315 ರೂ.ಗಳ ಹೆಚ್ಚಳವಾಗಿದೆ ಎಂದು ವರದಿ ಹೇಳಿವೆ. ಕಚ್ಚಾ ಸೆಣಬು

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ (CCEA)ಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮಾಹಿತಿ ನೀಡಿದ್ದಾರೆ. ಹೊಸ ಕನಿಷ್ಠ ಬೆಂಬಲ ಬೆಲೆಗಳು (MSP) ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚಕ್ಕಿಂತ 66.8%ದಷ್ಟು ಆದಾಯವನ್ನು ಖಚಿತಪಡಿಸುತ್ತವೆ ಮತ್ತು ಬೆಳೆಗಾರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಸಚಿವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು 2014-15ರಲ್ಲಿ ಕ್ವಿಂಟಲ್‌ಗೆ ರೂ. 2,400 ರಿಂದ 2025-26ರ ಮಾರುಕಟ್ಟೆ ಋತುವಿನಲ್ಲಿ ಕ್ವಿಂಟಲ್‌ಗೆ ರೂ. 5,650 ಕ್ಕೆ ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ, ಇದು 2.35 ಪಟ್ಟು ಹೆಚ್ಚಾಗಿದೆ. ಸೆಣಬಿನ ರೈತರಲ್ಲಿ 82% ರಷ್ಟು ಜನರು ಪಶ್ಚಿಮ ಬಂಗಾಳಕ್ಕೆ ಸೇರಿದವರಾಗಿದ್ದರೆ, ಅಸ್ಸಾಂ ಮತ್ತು ಬಿಹಾರಗಳು ಸೆಣಬು ಉತ್ಪಾದನೆಯಲ್ಲಿ ತಲಾ 9% ರಷ್ಟು ಪಾಲನ್ನು ಹೊಂದಿವೆ. ಕಚ್ಚಾ ಸೆಣಬು

2025-26 ರ ಮಾರುಕಟ್ಟೆ ಋತುವಿಗಾಗಿ ಕಚ್ಚಾ ಸೆಣಬಿನ ಅನುಮೋದಿತ ಕನಿಷ್ಠ ಬೆಂಬಲ ಬೆಲೆ (MSP) ಸರ್ಕಾರವು 2018-19 ರ ಬಜೆಟ್‌ನಲ್ಲಿ ಘೋಷಿಸಿದಂತೆ ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು MSP ಅನ್ನು ನಿಗದಿಪಡಿಸುವ ತತ್ವಕ್ಕೆ ಅನುಗುಣವಾಗಿದೆ ಎಂದು ಸರ್ಕಾರಿ ಪ್ರಕಟಣೆ ತಿಳಿಸಿದೆ.

40 ಲಕ್ಷ ಕೃಷಿ ಕುಟುಂಬಗಳ ಜೀವನೋಪಾಯವು ನೇರವಾಗಿ ಅಥವಾ ಪರೋಕ್ಷವಾಗಿ ಸೆಣಬು ಉದ್ಯಮವನ್ನು ಅವಲಂಬಿಸಿದೆದ್ದು, ಸುಮಾರು 4 ಲಕ್ಷ ಕಾರ್ಮಿಕರು ಸೆಣಬು ಗಿರಣಿಗಳಲ್ಲಿ ನೇರ ಉದ್ಯೋಗವನ್ನು ಪಡೆಯುತ್ತಾರೆ ಮತ್ತು ಸೆಣಬಿನ ವ್ಯಾಪಾರ ಮಾಡುತ್ತಾರೆ. ಕಳೆದ ವರ್ಷ 1.7 ಲಕ್ಷ ರೈತರಿಂದ ಸೆಣಬನ್ನು ಖರೀದಿಸಲಾಗಿದೆ.

ಬೆಲೆ ಬೆಂಬಲ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಭಾರತೀಯ ಸೆಣಬು ನಿಗಮ (ಜೆಸಿಐ) ಕೇಂದ್ರ ಸರ್ಕಾರದ ನೋಡಲ್ ಏಜೆನ್ಸಿಯಾಗಿ ಮುಂದುವರಿಯುತ್ತದೆ ಮತ್ತು ಅಂತಹ ಕಾರ್ಯಾಚರಣೆಗಳಲ್ಲಿ ಉಂಟಾದ ನಷ್ಟಗಳು, ಯಾವುದಾದರೂ ಇದ್ದರೆ, ಕೇಂದ್ರ ಸರ್ಕಾರದಿಂದ ಸಂಪೂರ್ಣವಾಗಿ ಮರುಪಾವತಿಸಲ್ಪಡುತ್ತವೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂಓದಿ:  ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...