Homeಮುಖಪುಟಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) 6%ದಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ

ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) 6%ದಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಸಚಿವ ಸಂಪುಟವು ಬುಧವಾರದಂದು 2025-26ರ ಮಾರುಕಟ್ಟೆ ಋತುವಿನಲ್ಲಿ ಕಚ್ಚಾ ಸೆಣಬಿಗೆ ಕ್ವಿಂಟಲ್‌ಗೆ 5,650 ರೂ.ಗಳ ಕನಿಷ್ಠ ಬೆಂಬಲ ಬೆಲೆಯನ್ನು ಅನುಮೋದಿಸಿದೆ. ಇದು ಈ ಹಿಂದಿನ ಕನಿಷ್ಠ ಬೆಂಬಲ ಬೆಲೆಗಿಂತ 6% ದಷ್ಟು ಅಥವಾ 315 ರೂ.ಗಳ ಹೆಚ್ಚಳವಾಗಿದೆ ಎಂದು ವರದಿ ಹೇಳಿವೆ. ಕಚ್ಚಾ ಸೆಣಬು

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ (CCEA)ಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮಾಹಿತಿ ನೀಡಿದ್ದಾರೆ. ಹೊಸ ಕನಿಷ್ಠ ಬೆಂಬಲ ಬೆಲೆಗಳು (MSP) ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚಕ್ಕಿಂತ 66.8%ದಷ್ಟು ಆದಾಯವನ್ನು ಖಚಿತಪಡಿಸುತ್ತವೆ ಮತ್ತು ಬೆಳೆಗಾರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಸಚಿವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು 2014-15ರಲ್ಲಿ ಕ್ವಿಂಟಲ್‌ಗೆ ರೂ. 2,400 ರಿಂದ 2025-26ರ ಮಾರುಕಟ್ಟೆ ಋತುವಿನಲ್ಲಿ ಕ್ವಿಂಟಲ್‌ಗೆ ರೂ. 5,650 ಕ್ಕೆ ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ, ಇದು 2.35 ಪಟ್ಟು ಹೆಚ್ಚಾಗಿದೆ. ಸೆಣಬಿನ ರೈತರಲ್ಲಿ 82% ರಷ್ಟು ಜನರು ಪಶ್ಚಿಮ ಬಂಗಾಳಕ್ಕೆ ಸೇರಿದವರಾಗಿದ್ದರೆ, ಅಸ್ಸಾಂ ಮತ್ತು ಬಿಹಾರಗಳು ಸೆಣಬು ಉತ್ಪಾದನೆಯಲ್ಲಿ ತಲಾ 9% ರಷ್ಟು ಪಾಲನ್ನು ಹೊಂದಿವೆ. ಕಚ್ಚಾ ಸೆಣಬು

2025-26 ರ ಮಾರುಕಟ್ಟೆ ಋತುವಿಗಾಗಿ ಕಚ್ಚಾ ಸೆಣಬಿನ ಅನುಮೋದಿತ ಕನಿಷ್ಠ ಬೆಂಬಲ ಬೆಲೆ (MSP) ಸರ್ಕಾರವು 2018-19 ರ ಬಜೆಟ್‌ನಲ್ಲಿ ಘೋಷಿಸಿದಂತೆ ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು MSP ಅನ್ನು ನಿಗದಿಪಡಿಸುವ ತತ್ವಕ್ಕೆ ಅನುಗುಣವಾಗಿದೆ ಎಂದು ಸರ್ಕಾರಿ ಪ್ರಕಟಣೆ ತಿಳಿಸಿದೆ.

40 ಲಕ್ಷ ಕೃಷಿ ಕುಟುಂಬಗಳ ಜೀವನೋಪಾಯವು ನೇರವಾಗಿ ಅಥವಾ ಪರೋಕ್ಷವಾಗಿ ಸೆಣಬು ಉದ್ಯಮವನ್ನು ಅವಲಂಬಿಸಿದೆದ್ದು, ಸುಮಾರು 4 ಲಕ್ಷ ಕಾರ್ಮಿಕರು ಸೆಣಬು ಗಿರಣಿಗಳಲ್ಲಿ ನೇರ ಉದ್ಯೋಗವನ್ನು ಪಡೆಯುತ್ತಾರೆ ಮತ್ತು ಸೆಣಬಿನ ವ್ಯಾಪಾರ ಮಾಡುತ್ತಾರೆ. ಕಳೆದ ವರ್ಷ 1.7 ಲಕ್ಷ ರೈತರಿಂದ ಸೆಣಬನ್ನು ಖರೀದಿಸಲಾಗಿದೆ.

ಬೆಲೆ ಬೆಂಬಲ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಭಾರತೀಯ ಸೆಣಬು ನಿಗಮ (ಜೆಸಿಐ) ಕೇಂದ್ರ ಸರ್ಕಾರದ ನೋಡಲ್ ಏಜೆನ್ಸಿಯಾಗಿ ಮುಂದುವರಿಯುತ್ತದೆ ಮತ್ತು ಅಂತಹ ಕಾರ್ಯಾಚರಣೆಗಳಲ್ಲಿ ಉಂಟಾದ ನಷ್ಟಗಳು, ಯಾವುದಾದರೂ ಇದ್ದರೆ, ಕೇಂದ್ರ ಸರ್ಕಾರದಿಂದ ಸಂಪೂರ್ಣವಾಗಿ ಮರುಪಾವತಿಸಲ್ಪಡುತ್ತವೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂಓದಿ:  ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...