Homeಮುಖಪುಟತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

ತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

- Advertisement -
- Advertisement -

ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ರಾಯರ ಜೀವನ-ಪವಾಡಗಳ ಕುರಿತ ಸಿನಿಮಾಗಳು ತಯಾರಾಗಿವೆ. ಖ್ಯಾತನಾಮ ಸಿನಿಮಾ ತಾರೆಯರು ಹಾಗೂ ತಂತ್ರಜ್ಞರು ಈ ಮೂಲಕ ರಾಯರಿಗೆ ಭಕ್ತಿ ಅರ್ಪಿಸಿದ್ದಾರೆ. ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ತೆರೆಯ ಮೇಲೆ ರಾಯರ ಕತೆ ಹಾಗೂ ಪಾತ್ರಗಳ ಕುರಿತ ಲೇಖನವಿದು.

ಕನ್ನಡ ಮತ್ತು ತಮಿಳು ಚಿತ್ರರಂಗಗಳಲ್ಲಿ ರಾಯರ ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ತೆರೆಯ ಮೇಲೆ ರಾಯರ ಜೀವನಗಾಥೆ, ಪವಾಡಗಳು ಅನಾವರಣಗೊಂಡಿವೆ. ಸಾಮಾಜಿಕ, ಕೌಟುಂಬಿಕ ಚಿತ್ರಗಳಲ್ಲೂ ರಾಯರ ಭಕ್ತಿಗೀತೆಗಳು ಜನಪ್ರಿಯವಾಗಿವೆ. ಜಾತಿ, ಮತ, ಧರ್ಮಗಳನ್ನು ಮೀರಿದ ರಾಯರ ಪ್ರಭಾವಳಿಯೇ ಇದಕ್ಕೆ ಕಾರಣವಾಗಿರಬಹುದು.

ಕನ್ನಡ ಚಿತ್ರರಂಗದ ಚಟುವಟಿಕೆಗಳು ಚೆನ್ನೈನಲ್ಲಿ ನಡೆಯುತ್ತಿದ್ದ ದಿನಗಳಲ್ಲೇ ರಾಯರ ಆರಾಧನೆ ಆರಂಭವಾಗಿತ್ತು. ಹಿರಿಯ ತಂತ್ರಜ್ಞರಾದ ಬಿ. ಆರ್. ಪಂತುಲು, ಸಿಂಗ್ ಠಾಕೂರ್ ಚಿತ್ರ ನಿರ್ಮಾಣಕ್ಕೆ ಮುನ್ನ ಮಂತ್ರಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಬಿಡುಗಡೆ ಮಾಡುವ ಮುನ್ನ ಇವರು ತಮ್ಮ ಚಿತ್ರದ ಪ್ರಥಮ ಪ್ರತಿಯನ್ನು ಬೃಂದಾವನದಲ್ಲಿಟ್ಟು ಪೂಜಿಸುತ್ತಿದ್ದರಂತೆ.

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್, ತಮಿಳು ಸ್ಟಾರ್ ರಜನೀಕಾಂತ್, ನಿರ್ದೇಶಕರಾದ ಹುಣಸೂರು ಕೃಷ್ಣಮೂರ್ತಿ, ದ್ವಾರಕೀಶ್, ನಟ ಶಿವರಾಂ ಹಾಗೂ ಇವರ ಸಮಕಾಲೀನರೇನಕರು ಶುಭ ಕಾರ್ಯಕ್ಕೆ ಮುನ್ನ ರಾಯರ ಅನುಗ್ರಹ ಪಡೆಯುವುದು ಕಡ್ಡಾಯವಾಗಿತ್ತು.

ರಾಯರ ಪಾತ್ರದಲ್ಲಿ ರಾಜ್

ಚಿತ್ರ ನಿರ್ಮಾಪಕರಲ್ಲಿದ್ದ ರಾಯರೆಡೆಗಿನ ಭಕ್ತಿ – ಭಾವ ತೆರೆ ಮೇಲೆ ಮೂಡಲು ಹೆಚ್ಚು ಸಮಯ ಬೇಕಾಗಲಿಲ್ಲ. ಸಿಂಗ್ ಠಾಕೂರ್ `ಮಂತ್ರಾಲಯ ಮಹಾತ್ಮೆ’ (1966) ನಿರ್ದೇಶಿಸಿದರು. ಡಾ. ರಾಜ್ ರಾಯರ ಪಾತ್ರಕ್ಕೆ ಜೀವ ತುಂಬಿದ್ದರು. ಚಿತ್ರದಲ್ಲಿ ರಾಯರೇ ರಚಿಸಿದ್ದ `ಇಂದು ಎನಗೆ ಗೋವಿಂದ…’ ಗೀತೆ ಬಳಕೆಯಾಗಿತ್ತು. 1980ರಲ್ಲಿ ಹುಣಸೂರು ಕೃಷ್ಣಮೂರ್ತಿ `ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಕರುಣೆ’ ನಿರ್ದೇಶಿಸಿದ್ದರು.

ಸರಿಸುಮಾರು ಇದೇ ಸಮಯದಲ್ಲಿ `ರಾಘವೇಂದ್ರ ವೈಭವ’ ಚಿತ್ರವೂ ತಯಾರಾಗಿತ್ತು. ಈ ಸಿನಿಮಾದಲ್ಲಿ ನಟ ಶ್ರೀನಾಥ್ ರಾಯರ ಪಾತ್ರದಲ್ಲಿ ನಟಿಸಿದ್ದರು. ಮುಂದೆ 2011ರಲ್ಲಿ `ಶ್ರೀ ರಾಘವೇಂದ್ರ ಸ್ವಾಮಿ’ ಕನ್ನಡ ಚಿತ್ರ ತೆರೆಕಂಡಿತ್ತು. ಕೃಷ್ಣಚಂದ್ರ ನಿರ್ದೇಶನದಲ್ಲಿ ತಯಾರಾದ ಚಿತ್ರದ ಶಿರ್ಷಿಕೆ ಪಾತ್ರವನ್ನು ರವೀಂದ್ರ ಗೋಪಾಲ ನಿರ್ವಹಿಸಿದ್ದರು.

ರಜನೀ ಸಿನಿಮಾ

ತಮಿಳು ಚಿತ್ರರಂಗದ ಜನಪ್ರಿಯ ನಟ ರಜನೀಕಾಂತ್ ರಾಯರ ಪರಮ ಭಕ್ತ. 1985 ರಲ್ಲಿ ಅವರು ಶಿರ್ಷಿಕೆ ಪಾತ್ರದಲ್ಲಿ ನಟಿಸಿದ್ದ `ಶ್ರೀ ರಾಘವೇಂದ್ರ’ ತಮಿಳು ಚಿತ್ರ ಮೂಡಿಬಂದಿತ್ತು. ರಜನಿಗೆ ಇದು ವೃತ್ತಿ ಜೀವನದ 100 ನೇ ಸಿನಿಮಾ. ಎಸ್. ಪಿ. ಮುತ್ತುರಾಮನ್ ನಿರ್ದೇಶನದಲ್ಲಿ ತಯಾರಾದ ಚಿತ್ರ `ಶ್ರೀ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಹಾತ್ಯಂ’ ಶಿರ್ಷಿಕೆಯಡಿ ತೆಲುಗಿಗೂ ಡಬ್ ಆಗಿತ್ತು. ತಾವು ರಾಯರ ಪಾತ್ರದಲ್ಲಿ ನಟಿಸಲು ಡಾ. ರಾಜ್ ಪ್ರೇರಣೆ ಎಂದು ಹಿಂದೊಮ್ಮೆ ರಜನಿ ಹೇಳಿಕೊಂಡಿದ್ದರು.

ಬಿಡೆನು ನಿನ್ನ ಪಾದ…

ಭಕ್ತಿಪ್ರಧಾನ ಚಿತ್ರಗಳ ಹೊರತಾಗಿ ಇತರೆ ಪ್ರಯೋಗಗಳಲ್ಲೂ ರಾಯರ ಗೀತೆಗಳನ್ನು ನಾವು ನೋಡಬಹುದು. ಡಾ.ರಾಜ್‌ರ `ಪೂಜಿಸಲೆಂದೇ ಹೂಗಳ ತಂದೆ…’ (ಎರಡು ಕನಸು), `ಹಾಲಲ್ಲಾದರು ಹಾಕು…’ (ದೇವತಾ ಮನುಷ್ಯ) ಹಾಡುಗಳು ಜನಪ್ರಿಯವಾಗಿವೆ. ಸಂಕಷ್ಟದಲ್ಲಿ ರಾಯರನ್ನು ನೆನೆಯುವ `ಬಿಡೆನು ನಿನ್ನ ಪಾದ…’ (ನಾ ನಿನ್ನ ಬಿಡಲಾರೆ), `ದಾರಿ ಕಾಣದಾಗಿದೆ ರಾಘವೇಂದ್ರನೆ…’ (ದೀಪ) ಮತ್ತೆರಡು ಶ್ರೇಷ್ಠ ಉದಾಹರಣೆ. `ಭಾಗ್ಯವಂತ’ ಚಿತ್ರದ `ಗುರುವಾರ ಬಂತಮ್ಮ…’ ಸೇರಿದಂತೆ ಹಲವು ರಾಯರ ಭಕ್ತಿಗೀತೆಗಳು ರಚಿಸಲ್ಪಿಟ್ಟಿವೆ.

ಕಿರುತೆರೆಯಲ್ಲಿ…

ಕನ್ನಡ ಕಿರುತೆರೆಯಲ್ಲಿ ಮೂಡಿಬಂದ `ಶ್ರೀ ಗುರುರಾಘವೇಂದ್ರ ವೈಭವ’ ಸೀರಿಯಲ್ ಜನಮನ್ನಣೆಗೆ ಪಾತ್ರವಾಗಿತ್ತು. ಯುವನಟ ಪರೀಕ್ಷಿತ್ ಶಿರ್ಷಿಕೆ ಪಾತ್ರದಲ್ಲಿ ಅಭಿನಯಿಸಿದ್ದರು. ಸುವರ್ಣ ವಾಹಿನಿಯಲ್ಲಿ ನಿರ್ದೇಶಕ ಬ.ಲ.ಸುರೇಶ್ 565 ಸಂಚಿಕೆಗಳಲ್ಲಿ ಸಮಗ್ರವಾಗಿ ರಾಯರ ಕಥೆ, ಇತಿಹಾಸ ಕಟ್ಟಿಕೊಟ್ಟಿದ್ದರು. `ಕಲಿಯುಗದ ಕಲ್ಪತರು’, `ರಾಘವೇಂದ್ರ ವಿಜಯ’, `ಸಮಕಾಲೀನ ಇತಿಹಾಸ’ ಗ್ರಂಥಗಳನ್ನು ಆಧರಿಸಿ ಧಾರಾವಾಹಿಗೆ ಕಥೆ ಹೆಣೆಯಲಾಗಿತ್ತು.

ಈ ಟೀವಿ ವಾಹಿನಿಯಲ್ಲಿ `ಶ್ರೀ ರಾಘವೇಂದ್ರ ಮಹಿಮೆ’ ಶಿರ್ಷಿಕೆಯಡಿ ರಾಯರ ಕಥೆ ಮೂಡಿಬಂದಿತ್ತು. ಚಿತ್ರನಟ, ನೃತ್ಯ ತಾರೆ ಶ್ರೀಧರ್ ರಾಯರ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿದ್ದರು. ತೆಲುಗು ಮತ್ತು ತಮಿಳು ಕಿರುತೆರೆಯಲ್ಲಿಯೂ ರಾಯರ ಕಥೆಗಳು ಮೂಡಿಬಂದಿವೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋಗಳು: ಡಿ.ಸಿ.ನಾಗೇಶ್


ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...